BREAKING NEWS – ಕುವೆಂಪು ವಿವಿ, ಪ್ರಶ್ನೆ ಪತ್ರಿಕೆಯಲ್ಲಿ ಯಡವಟ್ಟು, ಕನ್ನಡ ಪರೀಕ್ಷೆ ದಿಢೀರ್‌ ರದ್ದು, ಏನಿದು ಪ್ರಕರಣ?

Kuvempu-University-File-Image

ಶಿವಮೊಗ್ಗ: ಪ್ರಶ್ನೆ ಪತ್ರಿಕೆಯಲ್ಲಿನ ಗೊಂದಲದಿಂದಾಗಿ ಕುವೆಂಪು ವಿಶ್ವವಿದ್ಯಾಲಯದ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ (Examination) ದಿಢೀರ್‌ ರದ್ದಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ಹಿಂಪಡೆದು ಕಳುಹಿಸಲಾಗಿದೆ.   ಬಿ.ಎ. 6ನೇ ಸೆಮಿಸ್ಟರ್‌ ಐಚ್ಛಿಕ ಕನ್ನಡ ಪರೀಕ್ಷೆ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ಇವತ್ತು ನಿಗದಿಯಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಬದಲಾದ ಹಿನ್ನೆಲೆ ಗೊಂದಲ ಉಂಟಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಲಕೋಟೆ ತೆರೆದಾಗ ಪ್ರಶ್ನೆ ಪತ್ರಿಕೆಯಲ್ಲಿನ ಸಮಸ್ಯೆ ಗೊತ್ತಾಗಿದೆ. ಆತಂಕ, ಗೊಂದಲದಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯಿಂದ … Read more

ಕುವೆಂಪು ವಿವಿ ಘಟಿಕೋತ್ಸವ, ಅಭ್ಯರ್ಥಿಗಳಿಂದ ಪದವಿ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

kuvempu-University-

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವ (Convocation) ಜೂನ್ ತಿಂಗಳಲ್ಲಿ ಜರುಗಲಿದೆ. ಈ ವೇಳೆ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಆಗಸ್ಟ್/ಸೆಪ್ಟೆಂಬರ್-2024 ರ ಸ್ನಾತಕ, ಅಕ್ಟೋಬರ್/ನವೆಂಬರ್-2024 ರ ಬಿ.ಪಿ ಇಡಿ, ಸ್ನಾತಕೋತ್ತರ, ಪಿಜಿ ಡಿಪ್ಲೊಮಾ, ಜನವರಿ/ಫೆಬ್ರುವರಿ-2025ರ ಬಿ.ಇಡಿ ಹಾಗೂ 2025 ಜನವರಿ 31 ಮತ್ತು ನಂತರದಲ್ಲಿ ಪಿಎಚ್.ಡಿ ಪದವಿಗೆ ಪ್ರಕಟಣೆ ಹೊರಡಿಸಲಾದ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಘಟಿಕೋತ್ಸವದಲ್ಲಿ ರ‍್ಯಾಂಕ್/ ಸ್ವರ್ಣ ಪದಕ/ನಗದು ಬಹುಮಾನ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಿದ್ದು, ಮೇಲ್ಕಂಡ ವರ್ಷದಲ್ಲಿ … Read more

ಪದವಿ ಪರೀಕ್ಷೆ ಪಾಸಾದರು ನಾಲ್ಕು ವರ್ಷದಿಂದ ಅಂಕಪಟ್ಟಿ ನೀಡದ ಕುವೆಂಪು ವಿವಿ, ಸತ್ಯಾಗ್ರಹದ ಎಚ್ಚರಿಕೆ

B.Ed-students-protest-against-Kuvempu-University

ಶಿವಮೊಗ್ಗ : ಕುವೆಂಪು ವಿವಿಯಲ್ಲಿ ಬಿ.ಇಡಿ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ (students) ಕಳೆದ 4 ವರ್ಷಗಳಿಂದ ಅಂಕಪಟ್ಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಇಡಿ ಪದವೀಧರರು ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌? ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಸುಮಾರು 19ಕ್ಕೂ ಹೆಚ್ಚು ಬಿಇಡಿ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ 2021ರಿಂದ 2024ರವರೆಗೆ … Read more

ವಿಧಾನಸೌಧದಲ್ಲಿ ಕುವೆಂಪು ವಿ.ವಿ ಕುರಿತು ಚರ್ಚೆ, ಡಾ. ಸರ್ಜಿ ಏನೆಲ್ಲ ವಿಷಯ ಪ್ರಸ್ತಾಪಿಸಿದರು?

Dr-Dhananjaya-Sarji-in-session.

ಬೆಂಗಳೂರು : ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದಿರುವ ಭ್ರಷ್ಟಾಚಾರ (Corruption) ಮತ್ತು ಅಸಮರ್ಪಕ ಆಡಳಿತದ ಕುರಿತು ಸರ್ಕಾರ, ಉನ್ನತ ಮಟ್ಟದ ತನಿಖೆ ನಡೆಸಿ ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿಯ ಡಾ.ಧನಂಜಯ ಸರ್ಜಿ ಆಗ್ರಹಿಸಿದರು.  ವಿಧಾನಪರಿಷತ್‌ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ ಡಾ. ಧನಂಜಯ ಸರ್ಜಿ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರೂಪಿಸುವ ಮಹತ್ತರ ಜವಾಬ್ದಾರಿ ನಿರ್ವಹಿಸಬೇಕಾದ ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಏಕರೂಪದ ವೇಳಾಪಟ್ಟಿ ಅನುಸರಿಸುವಲ್ಲಿ ಲೋಪ, ವಿ.ವಿ.ಯ ಪ್ರಸಾರಾಂಗದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ … Read more

ಕುವೆಂಪು ವಿವಿಯಲ್ಲಿ ಮೂರು ದಿನ ಸಮಾಜದಲ್ಲಿ ಜ್ಞಾನ ಸಮಾವೇಶ, ಯಾರೆಲ್ಲ ಭಾಗವಹಿಸ್ತಿದ್ದಾರೆ?

Kuvempu-University-VC-Prof-Sharata-ananthamurthya-and-prof-meti-mallikarjun

ಶಿವಮೊಗ್ಗ : ಅಭಿವೃದ್ಧಿಯ ದಾರಿಯಲ್ಲಿ ಜ್ಞಾನದ ಬಗೆಗಿನ ಪ್ರಶ್ನೆ ಗಳನ್ನು ಮುಕ್ತವಾಗಿ ಚರ್ಚಿಸಲು ಫೆ.20ರಿಂದ ಮೂರು ದಿನ ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ‘ಸಮಾಜದಲ್ಲಿ ಜ್ಞಾನ’ ಸಮಾವೇಶ (conference) ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ .ಶರತ್ ಅನಂತಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ ಜರ್ನಲ್ಸ್ ಆಫ್ ಡೈಲಾಗ್ಸ್ ಆನ್ ನಾಲೆಜ್ ಇನ್ ಸೊಸೈಟಿ ಸಹಯೋಗದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ನಡೆಯುತ್ತಿರುವ ಈ ಮಾದರಿಯ ಮೊದಲ ಸಮಾವೇಶವಾಗಿದೆ ಎಂದರು. ವಿವಿಧ ಕ್ಷೇತ್ರಗಳ … Read more

ಕುವೆಂಪು ವಿವಿ ಮುಚ್ಚಲು ನಡೀತಿದ್ಯ ಹುನ್ನಾರ? ಡಿ.ಎಸ್.ಅರುಣ್‌ ಆತಂಕ, ಕಾರಣಗಳೇನು?

DS-Arun-Press-meet-in-Shimoga-city-about-kuvempu-university.

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಉನ್ನತ ಶಿಕ್ಷಣ ಸಚಿವರ ನಿರ್ಲಕ್ಷ್ಯ, ಕುಲಪತಿ, ಕುಲಸಚಿವರ ದರ್ಪ ಗಮನಿಸಿದರೆ ಕುವೆಂಪು ವಿಶ್ವವಿದ್ಯಾಲಯವನ್ನು (Kuvempu University) ಮುಚ್ಚುವ ಹುನ್ನಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್‌.ಅರುಣ್ ಅನುಮಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್, ಕುವೆಂಪು ವಿವಿಯ ಆಡಳಿತ ವೈಫಲ್ಯದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ, ಪ್ರಮುಖರಾದ ಮಾಲ್ತೇಶ್‌, ಅಣ್ಣಪ್ಪ, ಶ್ರೀನಾಗ್‌ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ » ಭದ್ರಾವತಿಯಲ್ಲಿ ಸಚಿವ ಸತೀಶ್‌ … Read more

ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್‌ ಕಾಗೋಡು ತಿಮ್ಮಪ್ಪ

kagodu-thimmappa-received-doctorate

SHIVAMOGGA LIVE NEWS, 22 JANUARY 2025 ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಡಿಫೆನ್ಸ್‌ ಇನ್‌ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿಯ ಪ್ರೊ. ಸಿ.ಎಸ್‌.ಉನ್ನೀಕೃಷ್ಣನ್‌, ಯೋಗ ಗುರು ಭದ್ರಾವತಿಯ ಡಿ.ನಾಗರಾಜ್‌ ಅವರಿಗೆ ಗೌರವ ಡಾಕ್ಟರೇಟ್‌ (Doctorate) ಪದವಿ ಪ್ರದಾನ ಮಾಡಲಾಯಿತು. ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿದರು. ಮಾಜಿ ಎಂಎಲ್‌ಎಯಿಂದ ಶುಭಾಶಯ ಇಂಡಸ್ಟ್ರೀಯಲ್‌ ಕೆಮಿಸ್ಟ್ರಿ ವಿಭಾಗದಲ್ಲಿ … Read more

ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?

Gold-medal-at-kuvempu-university-convocation

SHIVAMOGGA LIVE NEWS, 22 JANUARY 2025 ಶಂಕರಘಟ್ಟ : ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ ನಡೆಯಿತು. ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರಚಂದ್‌ ಗೆಹ್ಲೋಟ್‌ ಸ್ವರ್ಣ ಪದಕ (Gold Medal) ಪ್ರದಾನ ಮಾಡಿದರು. ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುಲಸಚಿವ ಎ‌.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು. ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?

ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?

200125 Kuvempu University and Vice chancellor Prof Sharat ananthamurthy

SHIVAMOGGA LIVE NEWS, 20 JANUARY 2024 ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ (Kuvempu University) 34ನೇ ಘಟಿಕೋತ್ಸವ ಜ.22ರಂದು ಶಂಕರಘಟ್ಟದಲ್ಲಿ ನಡೆಯಲಿದೆ. ಈ ಬಾರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಅವಕಾಶ ಇರಲಿದೆ. ಈ ಬಾರಿ ಮೂವರಿಗೆ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದರು. ಯಾರಿಗೆಲ್ಲ ಗೌರವ ಡಾಕ್ಟರೇಟ್? ಕುಲಸಚಿವ ಎ‌.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್, ಸಾರ್ವಜನಿಕ … Read more

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ, ದಿನಾಂಕ ಪ್ರಕಟ

kuvempu-University-

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವವು (Convocation) ಜ.22ರಂದು ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನ ಬಸವಸಭಾ ಭವನದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲರು, ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್‌ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು … Read more