ಆಲ್ಕೊಳ ಸರ್ಕಲ್’ನಲ್ಲಿ ತಪ್ಪಿತು ದುರಂತ, ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಗುವಿನ ಪ್ರಾಣ

Auto-Driver-Rescues-Baby-in-Shimoga

SHIVAMOGGA LIVE NEWS | POT HOLE | 28 ಏಪ್ರಿಲ್ 2022 ಆಟೋ ಚಾಲಕರೊಬ್ಬರ ಸಮಯ ಪಜ್ಞೆ ಮತ್ತು ಧೈರ್ಯ ಮಗುವಿನ ಪ್ರಾಣ ಕಾಪಾಡಿದೆ. ಶಿವಮೊಗ್ಗ ನಗರದ ಪ್ರಮುಖ ರಸ್ತೆಯೊಂದರ ಪಕ್ಕದಲ್ಲಿ ತೋಡಲಾಗಿದ್ದ ಗುಂಡಿಯೊಳಗೆ ಬಿದ್ದ ಮಗುವನ್ನು ಆಟೋ ಚಾಲಕ ರಕ್ಷಣ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸರ್ಕಲ್’ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಆಟೋ ಚಾಲಕ ಲೋಕೇಶ್ ಅವರ ಸಮಯ ಪ್ರಜ್ಞೆ ದುರ್ಘಟನೆ ತಪ್ಪಿಸಿದೆ. ಏನಿದು ಘಟನೆ? ಕಳೆದ ರಾತ್ರಿ ತಾಯಿ ಮತ್ತು ಮೂರು ವರ್ಷದ … Read more

ಶಿವಮೊಗ್ಗ ಹೊಸಮನೆಯಲ್ಲಿ ಸ್ಮಾರ್ಟ್ ಸಿಟಿ ಡಾಂಬರೀಕರಣಕ್ಕೆ ಚಾಲನೆ

Smart-City-Dambar-Work-at-hosamane

SHIVAMOGGA LIVE NEWS | 11 ಮಾರ್ಚ್ 2022 ಹೊಸಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳ ಡಾಂಬರೀಕರಣಕ್ಕೆ ಗುರುವಾರ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು. ಹೊಸಮನೆಯ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಡಾಂಬರೀಕರಣಕ್ಕೆ ಚಾಲನೆ ನೀಡಿ ಮಾತನಾಡಿದ ರೇಖಾ ರಂಗನಾಥ್ ಅವರು, ಈಗಾಗಲೇ ಹೊಸಮನೆ ಬಡಾವಣೆಯೂ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿಗಳು ಮುಗಿಯುವ ಹಂತದಲ್ಲಿ ಬಂದಿದೆ. ಬಾಕ್ಸ್ ಡ್ರೈನೇಜ್, ವಿದ್ಯುತ್ ಭೂಗತ ಕೇಬಲ್’ಗಳು, 24×7 ನೀರಿನ … Read more

ಕಸದ ಬುಟ್ಟಿಗಳನ್ನು ನಡುರಸ್ತೆಯಲ್ಲಿ ಇರಿಸಿ ಪ್ರತಿಭಟಿಸಿದ ಮಹಿಳೆಯರು

101121 Gopalagowda Layout Women Protest

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ವಾರಗಟ್ಟಲೆ ಕಸ ಸಂಗ್ರಹಕ್ಕೆ ವಾಹನ ಬಾರದ ಹಿನ್ನೆಲೆ ಕಸದ ಬುಟ್ಟಿಯನ್ನು ನಡುರಸ್ತೆಗೆ ತಂದಿಟ್ಟುಕೊಂಡು ಮಹಿಳೆಯರು ಪ್ರತಿಭಟನೆ ನಡೆಸಿದರು. ವಿಚಾರ ತಿಳಿಯುತ್ತಿದ್ದಂತೆ ಕಸ ಸಂಗ್ರಹ ಮಾಡುವ ಎರಡು ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಡಿ – ಬ್ಲಾಕ್’ನ 6ನೇ ಅಡ್ಡರಸ್ತೆಯಲ್ಲಿ ಇವತ್ತು ಬೆಳಗ್ಗೆ ಮಹಿಳೆಯರು ಪ್ರತಿಭಟನೆ ನಡೆಸಿದರು. ರಸ್ತೆಗೆ ಅಡ್ಡಲಾಗಿ ಕಸದು ಬುಟ್ಟಿಗಳನ್ನು ಇರಿಸಿ, ಮಹಿಳೆಯರು ಪ್ರತಿಭಟನೆ ನಡಸಿದರು. ಒಮ್ಮೆ ಕಸ ಸಂಗ್ರಹ … Read more

ಆಯುಧ ಪೂಜೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಮರ್ಡರ್ ಕೇಸ್’ಗೆ ಬಿಗ್ ಟ್ವಿಸ್ಟ್, ಯಾರಿಗೋ ಹಾಕಿದ್ದ ಸ್ಕೆಚ್, ಮತ್ಯಾರನ್ನೋ ಕೊಂದರು

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021 ಆಯುಧ ಪೂಜೆಯ ರಾತ್ರಿ ಶಿವಮೊಗ್ಗದಲ್ಲಿ ನಡೆದ ಭೀಕರ ಕೊಲೆ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಇವರು ಅಮಾಯಕನೊಬ್ಬನನ್ನು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಯಾರನ್ನೋ ಕೊಲ್ಲಲು ಬಂದವರು ಮತ್ಯಾರನ್ನೋ ಕೊಂದಿರುವುದಾಗಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ ಅಕ್ಟೋಬರ್ 14ರ ರಾತ್ರಿ ಸ್ವಾಮಿ ವಿವೇಕಾನಂದ ಬಡಾವಣೆಯ ನಿವಾಸಿ ಸಂತೋಷ್ (30) ಎಂಬಾತನನ್ನು ಬಾಪೂಜಿನಗರಲ್ಲಿ ಹತ್ಯೆ ಮಾಡಲಾಗಿತ್ತು. … Read more

ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಪತ್ನಿಯನ್ನು ಕೊಂದ ಪತಿ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021 ನಿರ್ಜನ ಪ್ರದೇಶದಲ್ಲಿ ಮಾರಕಾಸ್ತ್ರಗಳಿಂದ ಪತ್ನಿಯ ಹತ್ಯೆ ಮಾಡಿದ ಪತಿ, ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ವಾಸು ಸತ್ಯ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಕೌಸರ್ ಫಿಜಾ ಎಂಬುವವರ ಹತ್ಯೆಯಾಗಿದೆ. ಕೊಂದು ಶರಣಾದ ಪತಿ ಆಯನೂರಿನ ಕೌಸರ್ ಫಿಜಾ, ಟಿಪ್ಪು ನಗರದ ಶೋಯಬ್ ಎಂಬಾತನೊಂದಿಗೆ ವಿವಾಹವಾಗಿದ್ದರು. ಇಬ್ಬರಿಗೆ ಒಂದು ಮಗು ಇದೆ. … Read more

BREAKING NEWS | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021 ಆಯುಧ ಪೂಜೆಯಂದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಘಟನೆ ಸಂಭವಿಸಿದೆ. ಮೃತನನ್ನು ಸಂತೋಷ್ (30) ಎಂದು ಗುರುತಿಸಲಾಗಿದೆ. ಈತನು ಶಿವಮೊಗ್ಗದ ಗಾಡಿಕೊಪ್ಪ ಬಳಿಯ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಬಾಪೂಜಿನಗರದ ಗಂಗಾಮತ ಹಾಸ್ಟೆಲ್ ಸಮೀಪ ಸಂತೋಷ್’ನನ್ನು ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಂತೋಷ್ ತಲೆ ಭಾಗಕ್ಕೆ ತೀವ್ರವಾಗಿ ಹಲ್ಲೆ … Read more

ಇನ್ಸ್’ಪೆಕ್ಟರ್ ಮನೆಯ ಬಾಗಿಲು ಒಡೆದು ಹಣ, ಚಿನ್ನದ ನಾಣ್ಯ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ಪೊಲೀಸ್ ಅಧಿಕಾರಿಯೊಬ್ಬರ ಮನೆಯ ಬಾಗಿಲು ಒಡೆದು ಕಳ್ಳತನ ಮಾಡಲಾಗಿದೆ. ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಮನೆಗೆ ನುಗ್ಗಿರುವ ಕಳ್ಳರು, ಹಣ, ಚಿನ್ನದ ಕಾಯಿನ್ ಮತ್ತು ಸಿಸಿಟಿವಿ ಡಿವಿಆರ್ ಕದ್ದೊಯ್ದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇನ್ಸ್’ಪೆಕ್ಟರ್ ಆಗಿರುವ ಮಂಜುನಾಥ್ ಅವರ ಶಿವಮೊಗ್ಗದ ಮನೆಯಲ್ಲಿ ಕಳ್ಳತನವಾಗಿದೆ. ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಮಂಜುನಾಥ್ ಅವರ ಮನೆಯ ಬಾಗಿಲು ಒಡೆದು ಕಳವು ಮಾಡಲಾಗಿದೆ. ಉಡುಪಿಗೆ ತೆರಳಿದ್ದ ಮಂಜುನಾಥ್ ಅವರು ಕರ್ತವ್ಯ ನಿಮಿತ್ತ ಶಿವಮೊಗ್ಗಕ್ಕೆ … Read more

ಶಿವಮೊಗ್ಗದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿ, ಮೂವರು ಯುವಕರಿಗೆ ಗಂಭೀರ ಗಾಯ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟೆಂಬರ್ 2021 ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ತೂಕ ಮತ್ತು ಅಳತೆ ಮಾಪಕ ಇಲಾಖೆ ಬಳಿ ಘಟನೆ ಸಂಭವಿಸಿದೆ. ಮುಖ್ಯ ರಸ್ತೆಯಿಂದ ಪ್ರೊ. ಬಿ.ಕೃಷ್ಣಪ್ಪ ಸ್ಮಾರಕ ಹಾಸ್ಟೆಲ್ ಕಡೆಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ವಿದ್ಯಾರ್ಥಿಗಳು ಶಿವಮೊಗ್ಗದಿಂದ ಹಾಸ್ಟೆಲ್ ಕಡೆಗೆ ಸ್ಪೆಂಡರ್ ಬೈಕಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ … Read more

ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಸೈಲೆನ್ಸರ್ ಪೈಪ್ ರಾತ್ರೋರಾತ್ರಿ ನಾಪತ್ತೆ

Shivamogga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021 ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆಯುವುದು, ಟೈರ್ ಬಿಚ್ಚಿಕೊಂಡು ಹೋಗುವುದು, ಕಾರಿನ ಒಳಗಿದ್ದ ವಸ್ತುಗಳನ್ನು ಕದ್ದೊಯ್ಯುವ ಪ್ರಕರಣಗಳನ್ನು ಕೇಳಿದ್ದೇವೆ. ಈಗ ಕಾರಿನ ಸೈಲೆನ್ಸರ್ ಪೈಪನ್ನು ಕದ್ದೊಯ್ದಿರುವ ಪ್ರಕರಣ ವರದಿಯಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಸೈಲೆನ್ಸರ್ ಪೈಪನ್ನು ರಾತ್ರೋರಾತ್ರಿ ಕಳುವು ಮಾಡಲಾಗಿದೆ. ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿ ಘಟನೆ ವರದಿಯಾಗಿದೆ. ಹೇಗಾಯ್ತು ಘಟನೆ? ಮಂಜುನಾಥ ಬಡಾವಣೆಯ ಸತೀಶ್ ಕುಮಾರ್ ಅವರು ಪಾತ್ರೆ ವ್ಯಾಪಾರ ಮಾಡುತ್ತಾರೆ. … Read more

ಶಿವಮೊಗ್ಗ ಹೊಸಮನೆಯಲ್ಲಿ ಯುಗಾದಿ ಉತ್ಸವ, ಗಂಗೆ ಪೂಜೆ, ದೇವಿಯ ರಾಜಬೀದಿ ಮೆರವಣಿಗೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021 ಶಿವಮೊಗ್ಗದ ಹೊಸಮನೆಯಲ್ಲಿ ಶ್ರೀ ಹಾಲೇಶ್ವರಿ ಮತ್ತು ಶ್ರೀ ಕುಕ್ಕುವಾಡೇಶ್ವರಿ ದೇವಿ ಸನ್ನಿಧಿಯಲ್ಲಿ ಯುಗಾದಿ ಮಹೋತ್ಸವ ನಡೆಯಿತು. ಹಬ್ಬದ ಅಂಗವಾಗಿ ಗಂಗೆ ಪೂಜೆ ಮತ್ತು ಹೊಸಮನೆ ಬಡಾವಣೆಲ್ಲಿ ರಾಜಬೀದಿ ಉತ್ಸವ ನಡೆಯಿತು. ಕೋವಿಡ್ ಕಾರಣ ಹೆಚ್ಚು ಜನ ಸೇರದಂತೆ ಮನವಿ ಮಾಡಲಾಗಿತ್ತು. ರಾಜಬೀದಿ ಉತ್ಸವದ ವೇಳೆ ದೇವಿಯು ಮನೆ ಬಳಿಗೆ ಬಂದಾಗ ಭಕ್ತರು ಪೂಜೆ ಸಲ್ಲಿಸಿದರು. ಫೋಟೊ, ವಿಡಿಯೋ – Madan G Sadhushetty ಶಿವಮೊಗ್ಗ … Read more