ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?

Lokayukta-Raid-in-shimoga-SIMS-FDA-Lakshmipathi-House.

ಶಿವಮೊಗ್ಗ: ಆದಾಯಕ್ಕಿಂತಲು ಹೆಚ್ಚಿಗೆ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಶಿವಮೊಗ್ಗ ಮೆಡಿಕಲ್‌ ಕಾಲೇಜು ಎಫ್‌.ಡಿ.ಎ ಲಕ್ಷ್ಮೀಪತಿ.ಸಿ.ಎನ್‌ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಐದು ಕಡೆ ದಾಳಿ ನಡೆಸಿ ಒಟ್ಟು ₹2.49 ಕೋಟಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ. ಲಕ್ಷ್ಮೀಪತಿ ಬಳಿ 3 ಮನೆಗಳು, 3 ಎಕರೆ 20 ಗುಂಟೆ ಕೃಷಿ ಜಮೀನು ಪತ್ತೆಯಾಗಿದೆ. ಇವುಗಳ ಮೌಲ್ಯ ₹1,63,80,000 ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇನ್ನು ದಾಳಿ ಸಂದರ್ಭ ₹12,01,720 ನಗದು, ₹ 23,29,880 … Read more

BREAKING NEWS – ಶಿವಮೊಗ್ಗದಲ್ಲಿ ಆಪ್ತ ಸಹಾಯಕನ ಮನೆ ಮೇಲೆ ಲೋಕಾಯುಕ್ತ ದಾಳಿ

BREAKING-NEWS-ENGLISH

ಶಿವಮೊಗ್ಗ: ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗ ನಗರದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್‌) ಡೀನ್‌ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಎಂಬುವವರಿಗೆ ಸಂಬಂಧಿಸಿದ ನಾಲ್ಕು ಕಡೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸಿಮ್ಸ್‌ ಕಾಲೇಜಿನ ಡೀನ್‌ ಡಾ. ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರಿಗೆ ಸೇರಿದ ಮನೆಗಳ ಮೇಲೆ ದಾಳಿಯಾಗಿದೆ. ಮೆಡಿಕಲ್‌ ಕಾಲೇಜು ಕ್ವಾರ್ಟರ್ಸ್‌, ಜೆ.ಹೆಚ್.ಪಟೇಲ್‌ ಬಡಾವಣೆಯಲ್ಲಿರುವ ಮನೆ, ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿರುವ ಮನೆ ಸೇರಿ ಒಟ್ಟು ನಾಲ್ಕುಕಡೆ ದಾಳಿಯಾಗಿದೆ … Read more

BREAKING NEWS – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿ ಮನೆಯಲ್ಲಿ ಪರಿಶೀಲನೆ

Lokayukta-Raid-in-shimoga-near-krushi-nagara

ಶಿವಮೊಗ್ಗ: ರಾಜ್ಯದ‌ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ (lokayukta raid) ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲು ದಾಳಿಯಾಗಿದೆ. ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್‌ ನಾಯ್ಕ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ ಅವರ ಮನೆ ಮೇಲು ದಾಳಿಯಾಗಿದೆ. ದಾವಣಗೆರೆಯಿಂದ … Read more

ಶಿವಮೊಗ್ಗ ತಹಶೀಲ್ದಾರ್‌ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಡತಗಳ ಪರಿಶೀಲನೆ, ದಿಢೀರ್‌ ದಾಳಿಗೇನು ಕಾರಣ?

Shimoga-Taluk-Office-General-Image

ಶಿವಮೊಗ್ಗ: ದುರಾಡಳಿತ, ಲಂಚಕ್ಕೆ ಬೇಡಿಕೆ, ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆಸುವ ಆರೋಪಗಳ ಹಿನ್ನೆಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಶಿವಮೊಗ್ಗದ ತಹಶೀಲ್ದಾರ್ ಕಚೇರಿಗೆ ದಾಳಿ (Raid) ನಡೆಸಿ ಪರಿಶೀಲನೆ ನಡೆಸಿದರು.  ದಾವಣಗೆರೆ, ಚಿತ್ರದುರ್ಗದಿಂದ ಬಂದಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನಾಲ್ಕು ತಂಡ ಹಾಗೂ ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ಪೈಕಿ ಒಂದು ತಂಡ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿತ್ತು.  ಏನೇನೆಲ್ಲ ಪರಿಶೀಲಿಸಿದರು? ಪರಿಹಾರವಾಗದೇ ಇರುವ ಸಾರ್ವಜನಿಕರ ಅಹವಾಲು, … Read more

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಬಲೆಗೆ

Lokayuktha-Raid-General-Image

ಶಿವಮೊಗ್ಗ: ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ. ನೆಹರು ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಆ‍ಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ₹10,000 ನಗದು ಮತ್ತು ಅಧಿಕಾರಿ ಎ.ಪಿ.ಶಶಿಧರ್‌ನನ್ನು ವಶಕ್ಕೆ ಪಡೆಯಲಾಗಿದೆ. ಏನಿದು ಪ್ರಕರಣ? ಮೊಹಮ್ಮದ್‌ ಆಸಿಫ್‌ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು … Read more

ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

Lokayukta-raid-gold-found-at-Professors-house.

ಶಿವಮೊಗ್ಗ: ಆದಾಯಕ್ಕು ಮೀರಿದ ಆಸ್ತಿ ಸಂಪಾದನೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ 8 ಅಧಿಕಾರಿಗಳಿಗೆ ಸಂಬಂಧಿಸಿದ 45 ಕಡೆಗಳಲ್ಲಿ ದಾಳಿ ನಡೆಸಿದರು. ಏಕಕಾಲಕ್ಕೆ ಶೋಧ ಕಾರ್ಯ ನಡೆಸಿ ಕೋಟ್ಯಂತರ ರೂ. ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ (Asset) ಪತ್ತೆ ಹಚ್ಚಿದ್ದಾರೆ. ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಎಡಿಆರ್‌ ಕೋಆರ್ಡಿನೇಟರ್‌, ಪ್ರಾಧ್ಯಾಪಕ ಡಾ. ಪ್ರದೀಪ್‌ ಅವರಿಗೆ ಸೇರಿದ 6 ಕಡೆಗಳಲ್ಲಿ ದಾಳಿ ನಡೆಸಿ, ಶೋಧ ಕಾರ್ಯ ನಡೆಸಲಾಗಿದೆ. ಒಟ್ಟು ₹6.34 ಕೋಟಿ ಮೊತ್ತದ … Read more

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

Lokayukta-raid-at-Shimoga-hosanagara-and-shikaripura.

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಳು ಇಂದು ಬೆಳಗ್ಗೆ ದಾಳಿ (raid) ನಡೆಸಿದ್ದಾರೆ. ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂರು ಕಡೆ ದಾಳಿಯಾಗಿದ್ದು, ಪರಿಶೀಲನೆ ಕಾರ್ಯ ನಡೆಯುತ್ತಿದೆ. ಶಿವಮೊಗ್ಗದ ಸಾವಯುವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ. ಎಸ್‌.ಪ್ರದೀಪ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ನಗರದ ಪ್ರಿಯಾಂಕಾ ಲೇಔಟ್‌ನಲ್ಲಿರುವ ಮನೆ, ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿರುವ ಫಾರ್ಮ್ ಹೌಸ್, ಹೊಸನಗರದಲ್ಲಿಯು ದಾಳಿ ನಡೆದಿದೆ. ಲೋಕಾಯುಕ್ತ … Read more

ಲೋಕಾಯುಕ್ತ ದಾಳಿ, ₹30 ಸಾವಿರ ಲಂಚದೊಂದಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸೆಕ್ಷನ್‌ ಆಫೀಸರ್‌

Lokayuktha-Raid-General-Image

ಶಿಕಾರಿಪುರ: ಗುತ್ತಿಗೆದಾರನಿಗೆ ಬಿಲ್‌ ಪಾವತಿಸಲು ಬಿಲ್‌ ಮೊತ್ತದ ಶೇ.3ರಷ್ಟು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗದ ಸೆಕ್ಷನ್‌ ಆಫೀಸರ್‌ ಪರಶುರಾಮ್‌.ಹೆಚ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ (Raid) ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಲಿಂಗರಾಜ್‌ ಶಿವಪ್ಪ ಉಳ್ಳಾಗಡ್ಡಿ ಎಂಬುವವರು ಸೊರಬ ತಾಲೂಕಿನ ವಿವಿಧ ರಸ್ತೆ, ಶಾಲೆ ಕಾಮಗಾರಿ ನಡೆಸಿದ್ದರು. ಇದರ ಬಿಲ್‌ ಮೊತ್ತ ₹77.59 ಲಕ್ಷ ಪಾವತಿಗೆ ಬಾಕಿ ಇತ್ತು. ಬಿಲ್‌ ಪಾವತಿಗೆ ಇಂಜಿನಿಯರಿಂಗ್‌ ವಿಭಾಗದ ಸೆಕ್ಷನ್‌ ಆಫೀಸರ್‌ ಪರಶುರಾಮ್‌.ಹೆಚ್‌ … Read more

ಶಿವಮೊಗ್ಗದ ಅಂಗನವಾಡಿಗಳಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ ವೇಳೆ ಕಾದಿತ್ತು ಆಘಾತ

Lokayukta-sudden-visit-to-anganavadis

ಶಿವಮೊಗ್ಗ: ಲೋಕಾಯುಕ್ತ ಅಧಿಕಾರಿಗಳ ಎರಡು ತಂಡ ಶಿವಮೊಗ್ಗ ತಾಲೂಕಿನ ವಿವಿಧ ಅಂಗನವಾಡಿಗಳಿಗೆ ದಿಢೀರ್‌ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಈ ವೇಳೆ ಹಲವು ನ್ಯೂನತೆ ಕಂಡು ಬಂದಿದೆ. ಒಂದು ವಾರದೊಳಗೆ ಸಮಸ್ಯೆ ಪರಿಹರಿಸಿ ವರದಿ ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಬಿ.ಪಿ.ಚಂದ್ರಶೇಖರ್‌ ಮತ್ತು ಇನ್ಸ್‌ಪೆಕ್ಟರ್‌ ವೀರಬಸಪ್ಪ ಎಲ್‌.ಕುಸಲಾಪುರ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿತ್ತು. ಆಯನೂರು ವ್ಯಾಪ್ತಿಯ 4 ಅಂಗನವಾಡಿಗಳು, ಕುಂಸಿ ವ್ಯಾಪ್ತಿಯ 4 ಅಂಗನವಾಡಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ಪ್ರತ್ಯೇಕ ತಂಡ ದಿಢೀರ್‌ ಭೇಟಿ … Read more

ಲೋಕಾಯುಕ್ತರ ದಿಢೀರ್‌ ಭೇಟಿ, ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕಡತಗಳ ಪರಿಶೀಲನೆ

Lokayukta-visit-to-shimoga-palike

ಶಿವಮೊಗ್ಗ: ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್‌ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಪಾಲಿಕೆಯ ಕಂದಾಯ ವಿಭಾಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿದರು. ಇಂದು ಸಂಜೆ ವೇಳೆಗೆ ಲೋಕಾಯುಕ್ತ ಎಸ್‌.ಪಿ. ನೇತೃತ್ವದ ನಿಯೋಗ ಪಾಲಿಕೆಯ ಕಂದಾಯ ವಿಭಾಗಕ್ಕೆ ದಿಢೀರ್‌ ಭೇಟಿ ನೀಡಿತು. ಕಂದಾಯ ವಿಭಾಗದಲ್ಲಿ ಕಡತಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಲೋಕಾಯುಕ್ತರ ಭೇಟಿ ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಕಮಿಷನರ್‌ ಕವಿತಾ ಯೋಗಪ್ಪನವರ್‌ ಕೂಡ ಕಂದಾಯ ವಿಭಾಗಕ್ಕೆ ದೌಡಾಯಿಸಿದರು. ಸಂಜೆ 5.30ರವರೆಗೆ ಕಂದಾಯ ವಿಭಾಗದಲ್ಲಿ ಪರಿಶೀಲನೆ ನಡೆಸಿದ … Read more