ಗೀತಾ ಶಿವರಾಜ್‌ಕುಮಾರ್‌ ಶಿವಮೊಗ್ಗ ಭೇಟಿಗೆ ದಿನಾಂಕ ಫಿಕ್ಸ್‌, ಹೇಗಿರುತ್ತೆ ಪ್ರಚಾರ? ಸಚಿವ ಮಧು ಹೇಳಿದ್ದೇನು?

Geetha-Shivarajkumar-and-Madhu-Bangarappa

SHIVAMOGGA LIVE NEWS | 15 MARCH 2024 SHIMOGA : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಮಾ.20ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದಿನಿಂದ ನಿರಂತರ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮಾ.20ರಂದು ಗೀತಾ ಶಿವರಾಜ್‌ ಕುಮಾರ್‌ ಮತ್ತು ಶಿವರಾಜ್‌ ಕುಮಾರ್‌ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮೊದಲು, ಮಾ.17ರಂದು ಪೂರ್ವಭಾವಿ ಸಭೆ ನಡೆಯಲಿದೆ ಎಂದರು. 400 ಸಭೆ, ತಾಲೂಕು … Read more

ಎಂಪಿಎಂಗೆ ನೀಡಿದ್ದ ಅರಣ್ಯ ಹಿಂಪಡೆಯಲು ಆಗ್ರಹ, ಅಕೇಶಿಯಾ, ನೀಲಗಿರಿ ನಿಷೇಧಕ್ಕೆ ಒತ್ತಾಯ

KP-Sripal-submits-memorandum-to-Madhu-Bangarappa

SHIVAMOGGA LIVE NEWS | 5 MARCH 2024 SHIMOGA : ಅಕೇಶಿಯಾ ಮತ್ತು ನೀಲಗಿರಿಯನ್ನು ನಿಷೇಧಿಸುವಂತೆ, ಎಂಪಿಎಂ ಕಾರ್ಖಾನೆಗೆ ನೀಡಿದ್ದ ಅರಣ್ಯ ಭೂಮಿ ಹಿಂಪಡೆಯಬೇಕು ಎಂದು ಆಗ್ರಹಿಸಿ ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು. ಮಲೆನಾಡು ಪಶ್ಚಿಮಘಟ್ಟಗಳ ಶ್ರೇಣಿ ನಿತ್ಯ ಹರಿದ್ವರ್ಣದ ಕಾಡು. ಇಲ್ಲಿ ಹಲವು ನದಿಗಳು ಜನ್ಮತಾಳಿವೆ. ಜೀವ ವೈವಿಧ್ಯ ಪ್ರದೇಶ ಇದಾಗಿದ್ದು ಇಂತಹ ಪರಿಸರ ಏರುಪೇರಾದರೆ ವನ್ಯಜೀವಿಗಳು ಮಾತ್ರವಲ್ಲ, … Read more

‘2009ರ ಸೇಡು ತೀರಿಸಿಕೊಳ್ಳುತ್ತೇವೆ, ಗ್ಯಾರಂಟಿ ಬಲ ನಮಗಿದೆʼ, ಏನಿದು ಸಚಿವರು ಹೇಳಿದ ಸೇಡಿನ ವಿಚಾರ?

Madhu-Bangarappa-and-Shivarajkumar-Press-Meet-in-Shimoga

SHIVAMOGGA LIVE NEWS | 3 MARCH 2024 SHIMOGA : ಬಿಜೆಪಿ ಈ ಬಾರಿ ಲೋಕಸಭಾ ಚುನಾವಣೆಯನ್ನು ಧರ್ಮ ಅಥವಾ ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡು ಗೆಲ್ಲಲು ಸಾಧ್ಯವೇ ಇಲ್ಲ. ಕಾಂಗ್ರೆಸ್‌ನ ಗ್ಯಾರಂಟಿ ಮುಂದೆ ಅದ್ಯಾವುದೂ ನಡೆಯಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಸಿದ್ದರಾಮಯ್ಯ ಅವರ ಗ್ಯಾರಂಟಿ ಮುಂದೆ ನರೇಂದ್ರ ಮೋದಿ ಗ್ಯಾರಂಟಿ ಕೊಚ್ಚಿ ಹೋಗಲಿದೆ. ಧರ್ಮ ಒಳಗೊಂಡಂತೆ ಯಾವುದೇ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸಿದರೆ ಜನರು ನಂಬುವುದಿಲ್ಲ. … Read more

SSLC, PUC ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ ಪರೀಕ್ಷೆ, ಯಾವಾಗ ನಡೆಯುತ್ತೆ?

60823-Minister-Madhu-Bangarappa.jpg

SHIVAMOGGA LIVE NEWS | 20 FEBRUARY 2023 EDUCATION NEWS : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವ ಎಸ್‌.ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ಮಾರ್ಚ್ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್​​ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು. ಎಷ್ಟು ವಿದ್ಯಾರ್ಥಿಗಳು? ಎಷ್ಟು ಪರೀಕ್ಷಾ ಕೇಂದ್ರ? ಈ … Read more

ಶಿವಮೊಗ್ಗಕ್ಕೆ ಉಸ್ತುವಾರಿ ಸಚಿವ, ಎರಡು ದಿನ ವಿವಿಧ ಕಾರ್ಯಕ್ರಮದಲ್ಲಿ ಭಾಗಿ

60823-Minister-Madhu-Bangarappa.jpg

SHIVAMOGGA LIVE NEWS | 25 JANUARY 2024 SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜ.25 ಮತ್ತು 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜ.25ರಂದು ಸಂಜೆ 5 ಗಂಟೆಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ನಗರದ ಬೆಕ್ಕಿನ ಕಲ್ಮಠದಲ್ಲಿ ಶ್ರೀ ಗುರುಬಸವ ಮಹಾ ಶಿವಯೋಗಿಗಳ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ರಾಗಿಗುಡ್ಡದಲ್ಲಿ ನಡೆಯುತ್ತಿರುವ ರಿಪಬ್ಲಿಕ್‌ ಡೇ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7ಕ್ಕೆ ಶಿವಮೊಗ್ಗದಿಂದ ಸೊರಬಕ್ಕೆ ತೆರಳಲಿದ್ದು ಅಲ್ಲಿಯೇ ವಾಸ್ತವ್ಯ … Read more

ಸಂಪುಟದಿಂದ ಮಧು ಬಂಗಾರಪ್ಪ ವಜಾ ಮಾಡಿ, ಹಾಲಪ್ಪ ಆಗ್ರಹ, ಕಾರಣವೇನು?

Former-Minister-Haratalu-Halappa-BJP

SHIVAMOGGA LIVE NEWS | 19 JANUARY 2024 SHIMOGA : ಸಚಿವ ಮಧು ಬಂಗಾರಪ್ಪ ದುಂಡಾವರ್ತನೆ ಬಿಡಬೇಕು. ಶಿಷ್ಠಾಚಾರ ಗೊತ್ತಿಲ್ಲದೆ ಇದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಬಳಿ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಧು ಬಂಗಾರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲಪ್ಪ ಹೇಳಿದ 3 ಪ್ರಮುಖಾಂಶ ಕೇಂದ್ರ ಸರ್ಕಾರದ ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ  ಅವರು … Read more

ಶಿವಮೊಗ್ಗದಲ್ಲಿ ಮಿನಿಸ್ಟರ್‌ vs ಸಂಸದ, ಪರಸ್ಪರ ಟೀಕೆ, ಸವಾಲು, ಕಾರಣವೇನು?

Minister-Madhu-Bangarappa-vs-MP-BY-Raghavendra

SHIVAMOGGA LIVE NEWS | 16 JANUARY 2024 SHIMOGA : ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಮಧ್ಯೆ ಅಭಿವೃದ್ಧಿ ಕಾರ್ಯಗಳ ಕುರಿತು ವಾಕ್ಸಮರ ಶುರುವಾಗಿದೆ. ಪರಸ್ಪರ ಸವಾಲು, ಪ್ರತಿ ಸವಾಲು ಹಾಕಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ಜಟಾಪಟಿ ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ರಾಘವೇಂದ್ರ ನಡುವಿನ ಜಟಾಪಟಿಯ ವಿವರ ತಿಳಿಯಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚು ಖರ್ಚು, ಮಿನಿಸ್ಟರ್‌, ಸಂಸದರ ಮಧ್ಯೆ ಸವಾಲು, ಪ್ರತಿ ಸವಾಲು

Shimoga-Airport-work-investigation-Madhu-Bangarappa-and-BY-Raghavendra

SHIVAMOGGA LIVE NEWS | 16 JANUARY 2024 SHIMOGA : ವಿಮಾನ ನಿಲ್ದಾಣದ ಕಾಮಗಾರಿ ವೆಚ್ಚದ ಕುರಿತು ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ರಾಘವೇಂದ್ರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರತ್ಯೇಕ ಪತ್ರಿಕಾಗೋಷ್ಠಿಯಲ್ಲಿ ಇಬ್ಬರು ಆರೋಪ, ಪ್ರತ್ಯಾರೋಪ ಮತ್ತು ಸವಾಲು ಹಾಕಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಮಾತು ಕೇಳಿ ಬಂದಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ವಿಮಾನ ನಿಲ್ದಾಣದ ಕ್ರಿಯಾಯೋಜನೆ 249 ಕೋಟಿ ರೂ. ಇತ್ತು. … Read more

‘ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬಕ್ಕೆ 5 ಸಾವಿರ ರೂ., ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 75 ಲಕ್ಷ ರೂ.ʼ

Minister-Madhu-Bangarappa-and-Sharana-Prakash-Patil-press-meet

SHIVAMOGGA LIVE NEWS | 10 JANUARY 2024 SHIMOGA : ಬಿಜೆಪಿಯವರ ಟೀಕೆ, ಟಿಪ್ಪಣಿಗೆ ಕಾರ್ಯಕ್ರಮದ ಮೂಲಕವೆ ಉತ್ತರ ನೀಡುತ್ತಿದ್ದೇವೆ. ಜ.12ರಂದು ನಗರದಲ್ಲಿ ಯುವ ನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಮೂಲಕ ಚುನಾವಣೆ ಸಂದರ್ಭ ಘೋಷಿಸಿದ ಐದನೆ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ನಗರದ ಫ್ರೀಡಂ ಪಾರ್ಕ್‌ನಲ್ಲಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಸುಮಾರು ಒಂದೂವರೆ … Read more

ಸಚಿವ ಮಧು ಬಂಗಾರಪ್ಪ ಕಾರು, ಲಾರಿ ಮಧ್ಯೆ ಅಪಘಾತ

Minister-Madhu-Bangarappa-Car-Mishap-at-Tumkur

SHIVAMOGGA LIVE NEWS | 28 DECEMBER 2023 TUMKUR : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವ ಮಧು ಬಂಗಾರಪ್ಪ ಸೇರಿದಂತೆ ಕಾರಿನಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ತುಮಕೂರು ಜಿಲ್ಲೆ ಕ್ಯಾತಸಂದ್ರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಮತ್ತು ಲಾರಿ ಮಧ್ಯೆ ಅಪಘಾತವಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಸಚಿವ ಮಧು ಬಂಗಾರಪ್ಪ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. … Read more