ಇವತ್ತು ಶಿವಮೊಗ್ಗಕ್ಕೆ ಹೊಸ ಮೇಯರ್, ಉಪ ಮೇಯರ್ ಆಯ್ಕೆ, ಹೇಗಿರುತ್ತೆ ಚುನಾವಣೆ ಪ್ರಕ್ರಿಯೆ?

Shimoga-Palike-Mayor-Deputy-Mayor-Seat

SHIMOGA | ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್, ಉಪ ಮೇಯರ್ ಆಯ್ಕೆ ನಡೆಯಲಿದೆ. (MAYOR ELECTION) ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಬಿಜೆಪಿಯ ಧೀರರಾಜ್ ಹೊನ್ನವಿಲೆ ಮತ್ತು ಶಿವಕುಮಾರ್ ಅವರು ಆಕಾಂಕ್ಷಿಯಾಗಿದ್ದಾರೆ. ಇನ್ನು, ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಾಗಿದೆ. ಬಿಜೆಪಿಯಲ್ಲಿ ಐವರು ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಆರ್.ಸಿ.ನಾಯ್ಕ್ ಮತ್ತು ಉಪ ಮೇಯರ್ ಸ್ಥಾನಕ್ಕೆ ರೇಖಾ ರಂಗನಾಥ್ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. (MAYOR ELECTION) … Read more

ಶಿವಮೊಗ್ಗದ ನೂತನ ಮೇಯರ್, ಉಪ ಮೇಯರ್ ಆಯ್ಕೆಗೆ ದಿನಾಂಕ ನಿಗದಿ, ಯಾವಾಗ?

Shimoga-Palike-Mayor-Deputy-Mayor-Seat

SHIMOGA | ಮಹಾನಗರ ಪಾಲಿಕೆ ನೂತನ ಮೇಯರ್, ಉಪ ಮೇಯರ್ (MAYOR – DEPUTY MAYOR) ಚುನಾವಣೆಗೆ ದಿನಾಂಕ ಘೋಷಿಸಲಾಗಿದೆ. ಅ.28ರಂದು ಚುನಾವಣೆ ನಿಗದಿಗೊಳಿಸಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಆದೇಶಿಸಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿಯ ಅಭ್ಯರ್ಥಿ ಮತ್ತು ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ಎ ವರ್ಗದ ಮಹಿಳಾ ಅಭ್ಯರ್ಥಿ ಸ್ಪರ್ಧಿಸಬಹುದಾಗಿದೆ. (MAYOR – DEPUTY MAYOR) ನಾಮಪತ್ರ ಸಲ್ಲಿಕೆ, ಪರಿಶೀಲನೆ, ಚುನಾವಣೆ ಅ.28ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಅಕಾಂಕ್ಷಿಗಳು … Read more

ನಿಗದಿಯಾಗಿದ್ದ ಶಿವಮೊಗ್ಗ ಮೇಯರ್, ಉಪ ಮೇಯರ್ ಚುನಾವಣೆ ಮುಂದೂಡಿಕೆ, ಕಾರಣವೇನು?

Mahanagara-Palike-Shimoga

SHIMOGA | ಮಹಾನಗರ ಪಾಲಿಕೆ (PALIKE) ಮೇಯರ್ (MAYOR), ಉಪ ಮೇಯರ್ ಚುನಾವಣೆಗೆ (ELECTION) ನಿಗದಿಯಾಗಿದ್ದ ದಿನಾಂಕವನ್ನು ಹೈಕೋರ್ಟ್ (HIGH COURT) ಮಧ್ಯಂತರ ಅದೇಶದ ಮೇರೆಗೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಮುಂದೂಡಿದ್ದಾರೆ. ಪೂರ್ವ ನಿಗದಿಯಂತೆ ಸೆ.13ರಂದು ಚುನಾವಣೆ ನಡೆಯಬೇಕಿತ್ತು. ಆದರೆ ಮೇಯರ್ ಸ್ಥಾನ ಎಸ್.ಟಿಗೆ ಮೀಸಲಾಗದೆ ಹಲವು ವರ್ಷಗಳಾಗಿವೆ ಎಂದು ವ್ಯಕ್ತಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದರಿಂದ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಸೆ.6ರಂದು ಪ್ರಕರಣದ ವಿಚಾರಣೆ ಮುಂದುವರಿಸುವುದಾಗಿ … Read more

ಶಿವಮೊಗ್ಗದ ನೂತನ ಮೇಯರ್, ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿ

Mahanagara-Palike-Shimoga

ಶಿವಮೊಗ್ಗ | ಮಹಾನಗರ ಪಾಲಿಕೆ ಮೇಯರ್ (MAYOR), ಉಪ ಮೇಯರ್ (DEPUTY MAYOR) ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಸೆ.13ರಂದು ಚುನಾವಣೆ ನಡೆಸುವಂತೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧಿಸೂಚನೆ ಪ್ರಕಟಿಸಿದ್ದಾರೆ. ಆ ದಿನ ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳಿಕ ನಾಮಪತ್ರ ಪರಿಶೀಲನೆ, ಹಿಂಪಡೆಯಲು ಸಮಯ ನಿಗದಿ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಸಭೆ ನಡೆಸಲಾಗುವುದು. ಇದನ್ನೂ ಓದಿ – ಶಿವಮೊಗ್ಗ ಸಿಟಿ ಸೆಂಟರ್ … Read more

ಶಿವಮೊಗ್ಗ ನಗರದಲ್ಲಿ ಒಂದು ದಿನ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Mahanagara-Palike-Shimoga

ಶಿವಮೊಗ್ಗ | ಗಣೇಶ ಚತುರ್ಥಿ (GANESH CHATURTHI) ಅಂಗವಾಗಿ ಶಿವಮೊಗ್ಗ ನಗರದಲ್ಲಿ ಒಂದು ದಿನ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ (MEAT SALE BAN) ನಿಷೇಧಿಸಲಾಗಿದೆ. ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಬೇಕು ಎಂದು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ಮನವಿ ಮಾಡಿದೆ‌. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ … Read more

ಶಿವಮೊಗ್ಗದಲ್ಲಿ ವಿವಾದದ ಬಳಿಕ ಎಚ್ಚೆತ್ತ ಪಾಲಿಕೆ, ಅಶಾಂತಿ ಬೆನ್ನಿಗೆ ನೀತಿ ರೂಪಿಸಲು ಪ್ಲಾನ್

Shimoga-Flex-Controversy-Gopi-Circle

ಶಿವಮೊಗ್ಗ | ಫ್ಲೆಕ್ಸ್ (flex) ವಿವಾದದಿಂದಾಗಿ ನಗರದಲ್ಲಿ ಶಾಂತಿ ಭಂಗ ಉಂಟಾಗಿದೆ. ಕಳೆದ ಒಂದು ವಾರದಿಂದ ಶಿವಮೊಗ್ಗ ನಗರದಲ್ಲಿ (shimoga city) ನಿಷೇಧಾಜ್ಞೆ (prohibitory order) ಜಾರಿಯಲ್ಲಿದೆ. ಇದಕ್ಕೆಲ್ಲ ಕಾರಣ ಮಹಾನಗರ ಪಾಲಿಕೆಯ (mahanagara palike) ನೀತಿ. ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್ ಅಳವಡಿಸುವ ಸಂಬಂಧ ಸರಿಯಾದ ನಿಯಮ ರೂಪಿಸದೆ ಇರುವುದೆ ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣವಾಗಿದೆ. ಯಾವುದೇ ಹುಟ್ಟುಹಬ್ಬ, ಹಬ್ಬಹರಿದಿನ, ಜಾತ್ರೆ, ಪುಣ್ಯಸ್ಮರಣೆ ಇದ್ದರೂ ಶಿವಮೊಗ್ಗದ ಗಲ್ಲಿಗಲ್ಲಿಗಳೂ, ಪ್ರಮುಖ ಸರ್ಕಲ್‌ಗಳು ಫ್ಲೆಕ್ಸ್ ಮಯವಾಗುತ್ತವೆ. ಇದರಲ್ಲೂ ರಾಜಕಾರಣಿಗಳ ಅಬ್ಬರ ಜೋರು. … Read more

ಸ್ಮಾರ್ಟ್ ಸಿಟಿ ಅವಾಂತರ, ಪಿಎಂಸಿಗೆ ಕೋಟಿ ಕೋಟಿ ಹಣ ಕೊಡುವುದು ವ್ಯರ್ಥ

Rekha-Ranganath-Memorandum-to-DC

ಶಿವಮೊಗ್ಗ | ಸ್ಮಾಟ್ ಸಿಟಿ  (SMART CITY) ಕಾಮಗಾರಿ ಸಂಪೂರ್ಣ ಸರಿ ಆಗುವವರೆಗೆ ಪಿ.ಎಂ.ಸಿ.(ಪ್ರಾಜೆಕ್ಟ್ ಮ್ಯಾನೇಜ್ ಮೆಂಟ್ ಕನ್ಸಲ್ಟೆನ್ಸಿ) ಯವರಿಗೆ ಹಣ ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ನೇತೃತ್ವದಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪಿಎಂಸಿಗೆ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ 26 ಕೋಟಿ 95 ಲಕ್ಷ ರೂ. ಮಂಜೂರಾಗಿದೆ. ಈಗಾಗಲೇ 17 ಕೋಟಿ 92 ಲಕ್ಷ ರೂ ಹಣವನ್ನು ನೀಡಲಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಯು ಪೂರ್ಣಗೊಳ್ಳುವ ತನಕ ಮುಂದಿನ ಹಣ … Read more

ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಪ್ರತಿಪಕ್ಷ ನಾಯಕಿ

Coroprator-Rekha-Ranganath-General-Image

SHIVAMOGGA LIVE NEWS | SHIMOGA | 24 ಜುಲೈ 2022 ಶಿವಮೊಗ್ಗ ಮಹಾನಗರ ಪಾಲಿಕೆ (MAHA NAGARA PALIKE) ಪ್ರತಿಪಕ್ಷ ನಾಯಕಿಯಾಗಿ (OPPOSITION LEADER) ರೇಖಾ ರಂಗನಾಥ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ (CONGRESS PARTY) ಎಲ್ಲಾ ಸದಸ್ಯರು ರೇಖಾ ರಂಗನಾಥ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಈವರೆಗೂ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಯಮುನಾ ರಂಗೇಗೌಡ (YAMUNA RANGEGOWDA) ಅವರು ಪ್ರತಿಪಕ್ಷ ನಾಯಕಿಯಾಗಿ ಜವಾಬ್ದಾರಿ ನಿಭಾಯಿಸಿದ್ದರು. ಈಗ ಹೊಸಮನೆ ವಾರ್ಡ್’ನ ಕಾರ್ಪೊರೇಟರ್ ರೇಖಾ ರಂಗನಾಥ್ (REKHA RANGANATH) ಅವರು … Read more

ಖಾಲಿ ಬಿಂದಿಗೆ ಹಿಡಿದು ಮಹಾನಗರ ಪಾಲಿಕೆ ಮುಂದೆ ಸದಸ್ಯರ ಪ್ರತಿಭಟನೆ

Congress-Protest-for-Drinking-Water-in-Shimoga

SHIVAMOGGA LIVE NEWS | 11 ಮಾರ್ಚ್ 2022 ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಲು ವಿಫಲವಾದ ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಮೇಯರ್, ಉಪಮೇಯರ್ ಕೊಠಡಿ ಮುಂದೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಇವತ್ತು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು. ತುಂಗಾ ನದಿ ತೀರದಲ್ಲಿದ್ದರೂ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದನ್ನು ಪರಿಹರಿಸಬೇಕಿದ್ದ ಮಹಾನಗರ ಪಾಲಿಕೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ತ್ರಿಬಲ್ ಎಂಜಿನ್ ಇದ್ದರೂ … Read more

ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ, ಯಾವ್ಯಾವುದಕ್ಕೆ ಎಷ್ಟು ಮೀಸಲು, ಯಾವ ವಾರ್ಡ್’ಗೆ ಏನೇನು ಸಿಕ್ತು?

mahanagara palike budget anitha ravishankar

SHIVAMOGGA LIVE NEWS | 3 ಮಾರ್ಚ್ 2022 ಶಿವಮೊಗ್ಗ ಮಹಾನಗರ ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಿದೆ. ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಇವತ್ತು ಬಜೆಟ್ ಮಂಡಿಸಿದರು. ಹಿಂದಿನ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆ ಹಲವು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಮೇಯರ್ ಸುನೀತಾ ಅಣ್ಣಪ್ಪ ಅಧ್ಯಕ್ಷತೆಯಲ್ಲಿ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ಮಾಡಲಾಯಿತು. ಬಜೆಟ್ ವಿಶೇಷತೆಗಳೇನು? ಪ್ರಣಿಗಳ ಚಿತಾಗಾರ : ನಗರದಲ್ಲಿ ಅಪಘಾತಕ್ಕೀಡಾಗಿ, ಅನಾರೋಗ್ಯಕ್ಕೆ ತುತ್ತಾಗುವ ಪ್ರಾಣಿಗಳ ಔಷಧೋಪಚಾರ ನೀಡಲು ಪ್ರಾಣಿಗಳ ತಂಗುದಾಣ. … Read more