‘ನಾನು ಈ ಬಗ್ಗೆ ಒಂದು ಪರ್ಸೆಂಟ್ ಕೂಡ ಯೋಚನೆ ಮಾಡಿಲ್ಲ, ನನ್ನ ಅಭಿಪ್ರಾಯ ಸ್ಪಷ್ಟ’, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ

Eshwarappa MLA 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಸೆಪ್ಟೆಂಬರ್ 2019 ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಸ್ಪರ್ಧಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಇದನ್ನು ಸಚಿವ ಕೆ.ಎಸ್.ಈಶ್ವರಪ್ಪ ತಿರಸ್ಕರಿಸಿದ್ದಾರೆ. ಪುತ್ರ ಕಾಂತೇಶ್ ಅವರನ್ನು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಕಣಕಿಳಿಸಲಾಗುತ್ತಿದೆ ಎಂದು ಸುದ್ದಿ ಹಾರಿದಾಡುತ್ತಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿವಮೊಗ್ಗದಲ್ಲಿ ಉತ್ತರ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕಾಂತೇಶ್ ಅವರನ್ನು ಅಭ್ಯರ್ಥಿಯಾಗಿಸುವ ಕುರಿತು … Read more

‘ಬಿಜೆಪಿಯನ್ನು ನಂಬಿ ಬಂದಿರುವ 18 ಅಳಿಯಂದಿರನ್ನು ಮಧ್ಯದಲ್ಲೇ ಕೈ ಬಿಡಲು ಆಗುತ್ತದಾ?’

Eshwarappa MLA 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 5 ಆಗಸ್ಟ್ 2019 ನಮ್ಮ ಪಕ್ಷಕ್ಕೆ 18 ಅಳಿಯಂದಿರು ಬೇರೆ ಬಂದಿದ್ದಾರೆ. ಅವರನ್ನು ತೃಪ್ತಿಪಡಿಸಬೇಕಿದೆ. ನಮ್ಮನ್ನು ನಂಬಿ ಬಂದವರನ್ನು ಅರ್ಧಕ್ಕೆ ಕೈ ಬಿಡಬಾರದಲ್ಲ. ಸಂಪುಟ ರಚನೆ ಕುರಿತು ಪತ್ರಕರ್ತರ ಪ್ರಶ್ನೆಗೆ ಶಾಸಕ ಕೆ.ಎಸ್.ಈಶ್ವರಪ್ಪ ನೀಡಿದ ಉತ್ತರ ಇದು. ಗೋವಿಂದಾಪುರದಲ್ಲಿ ಆಶ್ರಯ ಮನೆಗಳ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಈಶ್ವರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನೊಂದು ವಾರದಲ್ಲಿ ಸಚಿವ ಸಂಪುಟ ರಚನೆಯಾಗಲಿದೆ. 18 ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಅವರಿಗೆ … Read more

ಮಿನಿಸ್ಟರ್ ಆಗ್ತಾರ ಹಾಲಪ್ಪ, ಜ್ಞಾನೇಂದ್ರಗೆ ಒಲಿಯುತ್ತಾ ಅದೃಷ್ಟ, ಶಿವಮೊಗ್ಗದ ಯಾವೆಲ್ಲ ಶಾಸಕರು ಸಚಿವರಾಗಬಹುದು ಗೊತ್ತಾ?

210718 Yedyurappa Pressmeet 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಜುಲೈ 2019 ಸರ್ಕಾರ ರಚನೆಗೆ ಯಡಿಯೂರಪ್ಪ ಕೊನೆಯ ಹಂತದ ಕಸರತ್ತು ನಡೆಸಿರುವ ಬೆನ್ನಿಗೆ, ಶಿವಮೊಗ್ಗ ಬಿಜೆಪಿಯಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಯಾರಿಗೆಲ್ಲ ಸಚಿವ ಸ್ಥಾನ ಸಿಗಬಹುದು ಎಂಬ ಲೆಕ್ಕಾಚಾರಗಳು ಆರಂಭವಾಗಿದೆ. ಶಿವಮೊಗ್ಗದಲ್ಲಿ ಯಾರೆಲ್ಲ ಮಿನಿಸ್ಟರ್ ಆಗಬಹುದು? ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ್ ನಾಯ್ಕ ಅವರನ್ನು ಹೊರತುಪಡಿಸಿ, ಉಳಿದೆಲ್ಲರು ಸೀನಿಯರ್ ಎಂಎಲ್ಎಗಳೆ. ಹಾಗಾಗಿ ಯಾರಿಗೆಲ್ಲ ಸಚಿವ ಸ್ಥಾನ … Read more

‘ಇದನ್ನು ನೋಡಿದರೆ ಕುಮಾರಸ್ವಾಮಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸೋದು ಗ್ಯಾರಂಟಿ ಅನಿಸುತ್ತೆ’

ಶಿವಮೊಗ್ಗ ಲೈವ್.ಕಾಂ | 18 ಮೇ 2019 ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಗ್ಯಾರಂಟಿ ಅಂತಾ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಮೈತ್ರಿ ಪಕ್ಷಗಳಲ್ಲಿ ಸಿಎಂ ಸ್ಥಾನಕ್ಕಾಗಿ ಹಲವರ ಹೆಸರು ಚಾಲ್ತಿಯಲ್ಲಿದೆ. ಸಿದ್ದರಾಮಯ್ಯ, ರೇವಣ್ಣ, ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಸಿಎಂ ಸ್ಥಾನಕ್ಕೆ ಕೇಳಿ ಬರುತ್ತಿದೆ. ಇದನ್ನು ನೋಡಿದರೆ, ಲೋಕಸಭೆ ಚುನಾವಣೆ ಬಳಿಕ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಗ್ಯಾರಂಟಿ ಅನಿಸುತ್ತೆ ಎಂದರು. ಮುನ್ನೂರರ ಗಡಿ ದಾಟುತ್ತೆ … Read more

ಮಂಗನಕಾಯಿಲೆ ಆತಂಕದಲ್ಲಿರುವ ಸಾಗರದ ಗ್ರಾಮಕ್ಕೆ ಮಿನಿಸ್ಟರ್ ಭೇಟಿ, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಏನಂದ್ರು?

070119 Minister Visit Aralagodu village 1

ಶಿವಮೊಗ್ಗ ಲೈವ್.ಕಾಂ | 07 ಜನವರಿ 2019 ಮಂಗನಕಾಯಿಲೆಯಿಂದ ಆತಂಕಕ್ಕೀಡಾಗಿರುವ ಸಾಗರದ ಅರಳಗೋಡು ಗ್ರಾಮಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಇದೇ ವೇಳೆ,  ಆರೋಗ್ಯ ಇಲಾಖೆಯ ನಿರ್ಲಕ್ಷದ ಕುರಿತು ತನಿಖೆ ನಡೆಸುವುದಾಗಿಯೂ ಭರವಸೆ ನೀಡಿದ್ದಾರೆ. ಎಲ್ಲೆಲ್ಲಿಗೆ ಭೇಟಿ ಕೊಟ್ಟರು ಮಿನಿಸ್ಟರ್? ಸಚಿವ ಶಿವಾನಂದ ಪಾಟೀಲ್ ಅವರು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಮಂಗನಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಳಿಕ, ಭಾರಂಗಿ ಹೋಬಳಿಯ ಅರಳಗೋಡು ಗ್ರಾಮಕ್ಕೆ ಭೇಟಿ … Read more