ಹೆದ್ದಾರಿ ಮಧ್ಯೆ ಅಡಿಕೆ ಸಸಿ ನೆಟ್ಟ ರೈತ, ಕಾರಣವೇನು?

Villager-plant-areca-Sappling-at-a-pot-hole-in-highway-at-hosanagara

ಹೊಸನಗರ: ರಾಷ್ಟ್ರೀಯ ಹೆದ್ದಾರಿಯ ಬೃಹತ್‌ ಗುಂಡಿಗಳನ್ನು (Pot Holes) ಮುಚ್ಚದ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಮತ್ತಿಮನೆ ಶ್ರೀಕಾಂತ್‌ ಎಂಬುವವರು ವಿಭಿನ್ನ ಪ್ರತಿಭಟಿನೆ ಆರಂಭಿಸಿದ್ದಾರೆ. ಪ್ರತಿ ಗುಂಡಿಯಲ್ಲಿ ಅಡಿಕೆ ಸಸಿಗಳನ್ನು ನೆಟ್ಟು ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಹೊಸನಗರ – ನಗರ ಮಾರ್ಗದಲ್ಲಿ ಭಾರಿ ಗಾತ್ರದ ಗುಂಡಿಗಳಾಗಿವೆ. ಇವುಗಳಿಂದ ನಿತ್ಯ ಒಂದಿಲ್ಲೊಂದು ಅಪಘಾತವಾಗುತ್ತಿವೆ. ಹಲವರು ಬಿದ್ದು ಗಾಯಗೊಂಡಿದ್ದಾರೆ. ಹಾಗಾಗಿ ಸರ್ಕಾರದ ಗಮನ ಸೆಳೆಯಲು ಮತ್ತಿಮನೆ ಶ್ರೀಕಾಂತ್‌ ಗುಂಡಿ ಮುಚ್ಚಿ, ಅಡಿಕೆ ಸಸಿ … Read more

ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಶರಾವತಿ ಹಿನ್ನೀರಿನತ್ತ ಪಲ್ಟಿಯಾದ ಕಾರು, ವ್ಯಕ್ತಿ ಸಾವು, ಹೇಗಾಯ್ತು ಘಟನೆ?

Car-and-Bus-mishap-near-madodi-in-hosanagara-taluk

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಕಾರು (Car) ಹಲವು ಬಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದು ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ಹೊಸನಗರ ತಾಲೂಕು ಮಡೋಡಿ ಎಂಬಲ್ಲಿ ಘಟನೆ ಸಂಭವಿಸಿದೆ. ಬಿ.ಕೆ.ಹರಿಭಟ್‌ (76) ಮೃತರು. ಇವರು ಪತ್ನಿ ಕಮಲಾಕ್ಷಿ, ಸುಜಾತಾ ಮತ್ತು ಲೀಲಾವತಿ ಎಂಬುವವರ ಜೊತೆಗೆ ಆಲ್ಟೋ ಕಾರಿನಲ್ಲಿ ಹೊಸನಗರದ ನಿಟ್ಟೂರಿನಿಂದ ಮತ್ತಿಕೈ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ. ನಿಟ್ಟೂರು – ನಾಗೋಡಿ ಸಮೀಪದ ಮಡೋಡಿ ಗ್ರಾಮದ ಬಳಿ ಹರಿಭಟ್‌ ಅವರು … Read more

48 ಗಂಟೆಯಲ್ಲಿ ಇಬ್ಬರು ಅಂತರ ಜಿಲ್ಲಾ ಕಳ್ಳರು ಅರೆಸ್ಟ್‌, ಲಕ್ಷ ಲಕ್ಷದ ಚಿನ್ನಾಭರಣ ಸೀಜ್‌, ಎಲ್ಲೆಲ್ಲಿ ಕದ್ದಿದ್ದರು?

Nagara-Police-nab-two-inter-district-thieves

ಹೊಸನಗರ: ಕಳ್ಳತನವಾದ 48 ಗಂಟೆಯೊಳಗೆ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು (Thieves) ಹೊಸನಗರ ತಾಲೂಕು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ₹4 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸಮಗಾರ ಓಣಿಯ ಹನುಮಂತ ತೊಳೆಯಪ್ಪ (26) ಮತ್ತು ಮಂಜುನಾಥ ಬಿಸುಕಲ್ಲೊಡ್ಡರ (36) ಬಂಧಿತರು. ಲಕ್ಷ ಲಕ್ಷದ ಚಿನ್ನಾಭರಣ, ನಗದು ಕದ್ದಿದ್ದರು ಹೊಸನಗರದ ನಿಲ್ಸ್‌ಕಲ್‌ ಸಮೀಪದ ಕಬಳೆ ಗ್ರಾಮದ ರಿಚರ್ಡ್‌ ಡಿಸೋಜಾ ಮತ್ತು ಮಾಸ್ತಿಕಟ್ಟೆಯ ಶೇಷಾದ್ರಿ ಎಂಬುವವರ … Read more

ಹುಲಿಕಲ್‌ ಘಾಟಿಯಲ್ಲಿ ಡಿಸೇಲ್‌ ಖಾಲಿಯಾಗಿ ನಿಂತ KSRTC ಬಸ್‌, ಕೆಲಕಾಲ ಸಂಚಾರ ಅಸ್ತವ್ಯಸ್ತ

Bus-Stops-between-hulikal-ghat-traffic-jam

ಹೊಸನಗರ: ಡಿಸೇಲ್‌ (Diesel) ಖಾಲಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ ಹುಲಿಕಲ್‌ ಘಾಟಿ ತಿರುವಿನ ಸಮೀಪ ನಿಂತಿತ್ತು. ಇದರಿಂದ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಆಟೋಗಳಿಗೆ ನಿಷೇಧ, ಕಾರಣವೇನು? ಈಗ ಹೇಗಿದೆ ವ್ಯವಸ್ಥೆ? ಶಿವಮೊಗ್ಗ ಹೊಸನಗರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹುಲಿಕಲ್‌ ಘಾಟಿಯ ಮುಖ್ಯ ತಿರುವಿನಲ್ಲಿ ಡಿಸೇಲ್‌ ಖಾಲಿಯಾಗಿ ನಿಂತಿತ್ತು. ಘಾಟಿ ರಸ್ತೆ ಕಿರಿದಾಗಿದ್ದು ಇತರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕಾರು, ಸಣ್ಣ ಗೂಡ್ಸ್‌ … Read more

ಬೆಳಗ್ಗೆ ಎದ್ದು ಬಂದಾಗ ಓಪನ್‌ ಆಗಿತ್ತು ಮನೆ ಬಾಗಿಲು, ರೂಂಗೆ ಹೋದಾಗ ಕುಟುಂಬದವರಿಗೆ ಆಘಾತ, ಆಗಿದ್ದೇನು?

Tunga-Nagara-Police-Station-Shimoga

SHIMOGA, 22 AUGUST 2024 | ಕುಟುಂಬದವರೆಲ್ಲ ಹಿಂಬದಿ ಶೆಡ್‌ನಲ್ಲಿ ಮಲಗಿದ್ದಾಗ ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಯ್‌ಹೊಳೆ ಸಮೀಪದ ಭಾರತಿ ನಗರದಲ್ಲಿ ಘಟನೆ ಸಂಭವಿಸಿದೆ. ಮೀನಾಕ್ಷಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮೀನಾಕ್ಷಿ ಅವರ ಪುತ್ರಿ ಈಚೆಗೆ ತೀರಿಕೊಂಡಿದ್ದರು. ಈ ಹಿನ್ನೆಲೆ ಪೂಜೆ ಮಾಡಿಸಲಾಗಿತ್ತು. ಅದೇ ಕಾರಣಕ್ಕೆ ಮನೆಯವರೆಲ್ಲ ಹಿಂಬದಿಯಲ್ಲಿರುವ ಶೆಡ್‌ನಲ್ಲಿ ಮಲಗುತ್ತಿದ್ದರು. ಆ.17ರಂದು ರಾತ್ರಿ ಊಟ ಮುಗಿಸಿ ಶೆಡ್‌ನಲ್ಲಿ ಎಲ್ಲರು ಮಲಗಿದ್ದರು. ಬೆಳಗ್ಗೆ ಮನೆಗೆ ಬಂದಾಗ ಬಾಗಿಲು ಮೀಟಿ … Read more

ಹೊಸನಗರದಲ್ಲಿ ಬಿಡುವು ಕೊಡದ ಮಳೆ, ಮನೆ, ತೋಟ, ದೇಗುಲ ಜಲಾವೃತ, ಶಾಲಾ – ಕಾಲೇಜಿಗೆ ರಜೆ

Hosanagara-Heavy-rainfall.

HOSANAGARA, 30 JULY 2024 : ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ (Heavy Rain). ಬಿಡುವು ನೀಡದೆ ಮಳೆ ಸುರಿಯುತ್ತಿದ್ದು ಜನರಲ್ಲಿ ಆತಂಕ ಮೂಡಿದೆ. ನಗರದಲ್ಲಿ ನಿರಂತರ ಮಳೆ ನಗರ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಬೆಳಗ್ಗೆಯಿಂದ ಎಡೆಬಿಡದೆ ಮಳೆಯಾಗುತ್ತಿದೆ. ಇದರಿಂದ ತಗ್ಗು ಪ್ರದೇಶದ ಜನರಲ್ಲಿ ಭಯ ಆವರಿಸಿದೆ. ಜನರು ಮನೆಯಿಂದ ಹೊರ ಬರಲಾಗದಷ್ಟು ರಭಸವಾಗಿ ಮಳೆ ಸುರಿಯುತ್ತಿದೆ. ನಗರ ಹೋಬಳಿ ಸದ್ಯ ನೆರೆಗೆ ತುತ್ತಾಗಿದೆ. ದ್ವೀಪದಂತಾದ ಮನೆ, ದೇಗುಲ ಜಲಾವೃತ ನಗರ ಭಾಗದಲ್ಲಿ ಭಾರಿ ಮಳೆಯಿಂದಾಗಿ … Read more

15 ವರ್ಷದ ಹಿಂದೆ ಮನೆ ಬಿಟ್ಟು ಬಂದ ವ್ಯಕ್ತಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು

Tunga-Nagara-Police-Station-Shimoga

SHIVAMOGGA LIVE NEWS | 18 APRIL 2024 SHIMOGA : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಆನವಟ್ಟಿ ಸಮೀಪದ ನೆರಲಗಿ ಗ್ರಾಮದ ಬಸವರಾಜ್ (40) ಮೃತರು. ಇವರು 15 ವರ್ಷದ ಹಿಂದೆ ಮನೆ ಬಿಟ್ಟು ಬಂದಿದ್ದರು ಎನ್ನಲಾಗಿದೆ. ಮಾ.28ರಂದು ಅಸ್ವಸ್ಥಗೊಂಡಿದ್ದ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ತಮ್ಮ ಊರಿನ ವಿವರ ತಿಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಾಗಿದೆ. ವಾರಸುದಾರರು ತುಂಗಾನಗರ ಠಾಣೆ (ಮೊ. … Read more

ಶಾಲೆಗಳಿಗೆ ರಜೆ ವಿಚಾರ, ವೈರಲ್‌ ಆಯ್ತು ತಪ್ಪು ಸಂದೇಶ, ವಾಸ್ತವದಲ್ಲಿ ಶಿಕ್ಷಣ ಇಲಾಖೆ ಘೋಷಿಸಿದ್ದೇನು?

Maxx-Hospital-lady-Staff-walking-holding-umbrella-in-Rain

SHIVAMOGGA LIVE | 7 JULY 2023 SAGARA / HOSANAGARA : ವ್ಯಾಪಕ ಮಳೆಯಾಗುತ್ತಿರುವ ಪ್ರದೇಶದಲ್ಲಿ ಸ್ಥಳೀಯ ಶಾಲಾಭಿವೃದ್ಧಿ ಸಮಿತಿ ಮತ್ತು ಆಡಳಿತ ಮಂಡಳಿ ತೀರ್ಮಾನದಂತೆ ರಜೆ (Holiday) ಘೋಷಿಸಲು ಶಿಕ್ಷಣ ಇಲಾಖೆ ಮೌಖಿಕವಾಗಿ ಆದೇಶಿಸಿದೆ. ಈ ಮಧ್ಯೆ ಶಾಲೆಗಳಿಗೆ ರಜೆ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಗೊಂದಲ ಸೃಷ್ಟಿಯಾಗಿತ್ತು. ಸಾಗರದ ಕರೂರು ಹೋಬಳಿ ಸಾಗರ ತಾಲೂಕು ಕರೂರು ಹೋಬಳಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 82.4 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಧಿಕ … Read more

ಶಿವಮೊಗ್ಗದ MRS ಸರ್ಕಲ್‌ನಲ್ಲಿ ಕ್ಯಾಂಟೀನ್‌ಗೆ ಹೋಗಿ ಹೊರಬಂದಾಗ ಭದ್ರಾವತಿ ಯುವಕನಿಗೆ ಕಾದಿತ್ತು ಶಾಕ್

Shimoga-City-MRS-Drone-Shot

SHIVAMOGGA LIVE NEWS | 22 MAY 2023 SHIMOGA : ಎಂಆರ್‌ಎಸ್‌ ಸರ್ಕಲ್‌ನಲ್ಲಿ ಬೈಕ್‌ ನಿಲ್ಲಿಸಿ ಕ್ಯಾಂಟೀನ್‌ಗೆ (Canteen) ಹೋಗಿ ಬರುವಷ್ಟರಲ್ಲಿ ಆರ್.ಎಕ್ಸ್‌ 135 ಬೈಕ್‌ ಕಳ್ಳತನವಾಗಿದೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ನೀವು ಇನ್ನೂ ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿಲ್ಲವಾ? ಈಗಲೆ ಇಲ್ಲಿ ಕ್ಲಿಕ್‌ ಮಾಡಿ ಭದ್ರಾವತಿ ಹೊಸ ಸಿದ್ದಾಪುರದ ಮನೋಜ್‌ ಎಂಬುವವರಿಗೆ ಸೇರಿದ ಬೈಕ್‌ ಕಳ್ಳತನವಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಮನೋಜ್‌ ಅವರು ಶಿವಮೊಗ್ಗದ … Read more

ಅಬ್ಬಿ ಫಾಲ್ಸ್ ನಲ್ಲಿ ಯುವಕ ನೀರು ಪಾಲು, ಮೃತದೇಹ ಪತ್ತೆ

Youth-Drowned-in-Abbe-Falls-in-Hosanagara.

SHIVAMOGGA LIVE NEWS |4 JANUARY 2023 HOSANGARA : ಅಬ್ಬಿ ಫಾಲ್ಸ್ ನಲ್ಲಿ (falls) ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರು, ಪೊಲೀಸರು ಶೋಧ ಕಾರ್ಯ ನಡೆಸಿ ಮೃತದೇಹ ಪತ್ತೆ ಹಚ್ಚಿದ್ದಾರೆ. ತೀರ್ಥಹಳ್ಳಿಯ ಡಿಪ್ಲೋಮಾ ವಿದ್ಯಾರ್ಥಿ ರಿಷಬ್ ಮೃತ ಯುವಕ ಎಂದು ಹೇಳಲಾಗುತ್ತಿದೆ. ಮೂವರು ಸ್ನೇಹಿತರು ಇವತ್ತು ಮಧ್ಯಾಹ್ನ ಅಬ್ಬಿ ಫಾಲ್ಸ್ ಗೆ (falls) ಬಂದಿದ್ದರು. ಕೆಳಗಿಳಿದು ಈಜಲು ಹೋಗಿದ್ದರು. ನೀರಿಗಿಳಿದಿದ್ದ ರಿಷಬ್ ನಾಪತ್ತೆಯಾಗಿದ್ದ. ಇದನ್ನೂ ಓದಿ – ಸಂಸದ ರಾಘವೇಂದ್ರ ಅವರ ಫೋಟೊಗ್ರಾಫರ್ … Read more