ಮೀನು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

SORABA-NEWS-UPDATE

ಸೊರಬ: ದಂಡಾವತಿ ನದಿಯಲ್ಲಿ ಮೀನು ಹಿಡಿಯಲು (Fishing) ಹೋಗಿದ್ದ ಪಟ್ಟಣದ ಕಾನುಕೇರಿ ಗ್ರಾಮದ ಕುಮಾರ್(40) ಎಂಬುವವರು ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನೀರಿನಲ್ಲಿ ಮುಳುಗಿದ ಕುಮಾರ್‌ ಅವರನ್ನು ಜನರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೇಳೆಗಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಹಾಕುವ ಎಚ್ಚರಿಕೆ one drowned while fishing

ಜಿಂಕ್‌ ಲೈನ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

BHADRAVATHI-NEWS-UPDATE

ಭದ್ರಾವತಿ: ಗೋವುಗಳ ಕಳ್ಳತನ (Cow) ಪ್ರಕರಣಗಳು ಮುಂದುವರೆದಿದ್ದು ಜಿಂಕ್‌ ಲೈನ್‌ ಬಡಾವಣೆಯ ದಿವ್ಯಾ ಎಂಬುವವರು ಸಾಕಿದ್ದ ಮೂರು ಹೆಚ್‌.ಎಫ್‌ ತಳಿಯ ಹಸುಗಳು ಕಳ್ಳತನವಾಗಿವೆ. ಸೆ.9ರ ಹಾಲು ಕರೆದು ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿತ್ತು. ಬೆಳಗ್ಗೆ 5 ಗಂಟೆಗೆ ದಿವ್ಯಾ ಅವರ ಪತಿ ಕೊಟ್ಟಿಗೆಗೆ ಹೋಗಿ ನೋಡಿದಾಗ ಮೂರು ಹಸುಗಳು ನಾಪತ್ತೆ ಆಗಿದ್ದವು. ಎಲ್ಲಡೆ ಹುಡುಕಿದರು ಹಸುಗಳು ಸಿಕ್ಕಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ. ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಭದ್ರಾವತಿಯಲ್ಲಿ ಪೊಲೀಸರನ್ನು ಕಂಡು … Read more

ಶಿವಮೊಗ್ಗದ ಹಲವು ಕಡೆ ಸೆ.16ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.16 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, … Read more

ತನಿಷ್ಕಾಳ ಮೆಸೇಜ್‌ ನಂಬಿ ₹1.06 ಕೋಟಿ ಕಳೆದುಕೊಂಡ ವ್ಯಕ್ತಿ, ಏನಿದು ಕೇಸ್‌?

Online-Fraud-Case-image

ಶಿವಮೊಗ್ಗ: ಟ್ರೇಡಿಂಗ್‌ (Trading) ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ₹1.06 ಕೋಟಿ ವಂಚಿಸಲಾಗಿದೆ. ಹೇಗಾಯ್ತು ವಂಚನೆ? ಶಿವಮೊಗ್ಗ ಜಿಲ್ಲೆಯ (ಹೆಸರು, ಊರು ಗೌಪ್ಯ) ವ್ಯಕ್ತಿಗೆ ಕರೆ ಮಾಡಿದ ಅಪರಿಚಿತನೊಬ್ಬ ಟ್ರೇಡಿಂಗ್‌ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿ ವಾಟ್ಸಪ್‌ ಗ್ರೂಪ್‌ಗೆ ಸೇರುವಂತೆ ಲಿಂಕ್‌ ಕಳುಹಿಸಿದ್ದ. ವಾಟ್ಸಪ್‌ ಗ್ರೂಪ್‌ನಲ್ಲಿ ತನಿಷ್ಕಾ ಸನ್ಯಾಮ್‌ ಎಂದು ಪರಿಚಯ ಮಾಡಿಕೊಂಡು, ಟ್ರೇಡಿಂಗ್‌ ಮಾಡುವ ಮೊಬೈಲ್ ಆಪ್‌ ಲಿಂಕ್‌ ಕಳುಹಿಸಿದ್ದರು. ಅದರಲ್ಲಿ ಪೂರ್ಣ ವಿವರ ದಾಖಲಿಸುವಂತೆ … Read more

ಶಿವಮೊಗ್ಗ ಸಿಟಿ, ಬೆಳಗಿನ ಜಾವ ನಡುರಸ್ತೆಯಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನ, ಏನಿದು ಕೇಸ್?

Sharavathi-Naraga-Main-Road-in-Shimoga

ಶಿವಮೊಗ್ಗ: ತಾಯಿ ಮತ್ತು ಸಹೋದರನನ್ನು ಬಸ್ಸಿಗೆ ಹತ್ತಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು (ಗುರುತು ಗೌಪ್ಯ) ಅಡ್ಡಗಟ್ಟಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ (Attempt). ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಶರಾವತಿ ನಗರ ಎ ಬ್ಲಾಕ್‌ನಲ್ಲಿ ಸೆ.8ರ ಬೆಳಗಿನ ಜಾವ 5 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಶಿವಮೊಗ್ಗ ನಗರದ ಯುವತಿಯೊಬ್ಬರು, ತನ್ನ ತಾಯಿ ಮತ್ತು ಸಹೋದರನನ್ನು ಬೆಳಗಿನ ಜಾವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಿಟ್ಟು ಮರಳುತ್ತಿದ್ದರು. ಬಸ್‌ ನಿಲ್ದಾಣದ ಬಳಿ ಇಬ್ಬರು ಯುವಕರು ನಿಂತಿದ್ದರು. … Read more

ಕೋಟೆ ರಸ್ತೆಯಲ್ಲಿ ಹೇಗಿತ್ತು ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ಮಾಹಿತಿ

Hindu-Mahasabha-Ganesh-kote-road

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (Ganesh) ಮೆರವಣಿಗೆ ಅದ್ಧೂರಿಯಾಗಿ ಸಾಗುತ್ತಿದೆ. ಕೋಟೆ ರಸ್ತೆಯಲ್ಲಿ ಅದ್ಧೂರಿಯಾಗಿ ನಡೆಯಿತು. ಕೋಟೆ ರಸ್ತೆಯಲ್ಲಿ ಹೇಗಿತ್ತು ಮೆರವಣಿಗೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಯುವಕರು, ಪ್ರಮುಖರು ವಿವಿಧ ಕಲಾತಂಡ ಸದ್ದಿಗೆ ಹೆಜ್ಜೆ ಹಾಕಿದರು. ಇದರ ಫೋಟೊ ಅಪ್‌ಡೇಟ್‌ ಇಲ್ಲಿದೆ. Ganesh procession in Kote Road

ಶಿಕಾರಿಪುರದ ಬಿಜೆಪಿ ಮುಖಂಡರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ, ಯಾರೆಲ್ಲ ಸೇರ್ಪಡೆಯಾದರು?

Shikaripura-BJP-leaders-joined-Congress-in-Shimoga

ಶಿವಮೊಗ್ಗ: ಶಿಕಾರಿಪುರದ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಎನ್.ವಿ.ಈರೇಶ್ ತಮ್ಮ ಬೆಂಬಲಿಗರ ಜೊತೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಎನ್.ವಿ. ಈರೇಶ್ ಜತೆಗೆ ಬಳ್ಳಿಗಾವಿ ಶಿವಕುಮಾ‌ರ್, ಹಾಲೇಶಪ್ಪ, ತಾಳಗುಂದ ರಾಜಪ್ಪ ಸೇರಿದಂತೆ ಪ್ರಮುಖರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರದ ಪುಷ್ಪಾ ಶಿವಕುಮಾ‌ರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆ‌ರ್. ಪ್ರಸನ್ನಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಶಿಕಾರಿಪುರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕು. ಅದಕ್ಕಾಗಿ ಈಗಿನಿಂದಲೆ ಪಕ್ಷದ … Read more

ಭಾರತದ ಟಾಪ್‌ ವಿವಿಗಳಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಸ್ಥಾನ, ಇಲ್ಲಿದೆ ಡಿಟೇಲ್ಸ್‌

kuvempu-University-

ಶಿವಮೊಗ್ಗ: ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿರುವ 2025ನ ಸಾಲಿನ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್‌ನಲ್ಲಿ (ಎನ್‌ಐಆರ್‌ಎಫ್) ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ (University) ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51 ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 51ರಿಂದ 100ರೊಳಗೆ ಸ್ಥಾನ ಪಡೆದಿದೆ. ಉಳಿದಂತೆ ಮೈಸೂರು ವಿವಿ 20ನೇ ಸ್ಥಾನ, ಬೆಂಗಳೂರು ವಿವಿ 26ನೇ … Read more

ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌, ಸಾವಿರ ಸಾವಿರ ಪೊಲೀಸರ ನಿಯೋಜನೆ

Police-route-march-in-Shimoga-city

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಶಿವಮೊಗ್ಗ ನಗರದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5 ಸಾವಿರ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಹೇಗಿದೆ ಭದ್ರತಾ ವ್ಯವಸ್ಥೆ? ಮೆರವಣಿಗೆ ಹಿನ್ನಲೆ 5 ಎಸ್‌ಪಿ, 2 ಎಎಸ್‌ಪಿ, 21 ಡಿವೈಎಸ್‌ಪಿ, 58 ಇನ್ಸ್‌ಪೆಕ್ಟರ್‌, 65 ಪಿಎಸ್‌ಐ, 198 ಪ್ರೊಬೆಷನರಿ ಪಿಎಸ್‌ಐ, 114 ಎಎಸ್‌ಐ, 2259 ಹೆಡ್‌ ಕಾನ್ಸ್‌ಟೇಬಲ್‌ ಮತ್ತು ಕಾನ್ಸ್‌ಟೇಬಲ್‌ಗಳು, 692 ಹೋಮ್‌ ಗಾರ್ಡ್ಸ್‌ ಸೇರಿದಂತೆ ಕೆಎಸ್‌ಆರ್‌ಪಿ, ಎಸ್‌ಎಎಫ್‌, ಆರ್‌ಎಎಫ್‌ ಸೇರಿದಂತೆ 5 ಸಾವಿರ … Read more

ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮಾವಿನ ಮರ, ಪ್ರಯಾಣಿಕರಿಗೆ ಗಾಯ, ಎಲ್ಲಿ? ಹೇಗಾಯ್ತು ಘಟನೆ?

Mango-Tree-Falls-on-a-car-near-chinnamane-in-Shimoga-taluk.

ಶಿವಮೊಗ್ಗ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಚಿನ್ನಮನೆ ಸಮೀಪ ಮಧ್ಯಾಹ್ನ ಘಟನೆ ಸಂಭವಿಸಿದೆ. ಕಾರು ಶಿವಮೊಗ್ಗ ಕಡೆಯಿಂದ ಆಯನೂರು ಮಾರ್ಗವಾಗಿ ರಿಪ್ಪನ್‌ಪೇಟೆ ಕಡೆಗೆ ತೆರಳುತಿತ್ತು. ಹೆದ್ದಾರಿಯಲ್ಲಿ ಸಾಗುವಾಗ ಮಾವಿನ ಮರ ಉರುಳಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿವಾಗಿದೆ. ಕೂಡಲೆ ಸ್ಥಳೀಯರು, ಇತರೆ ವಾಹನ ಸವಾರರು ಕಾರಿನಲ್ಲಿದ್ದವರನ್ನು ರಕ್ಷಿಸಿ ಆಯನೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಲ್ಲಿ ಕಾರಿನ ಮೇಲ್‌ ಸಂಪೂರ್ಣ ಹಾನಿಯಾಗಿದ್ದು, ಗಾಜುಗಳು ಒಡೆದು ಹೋಗಿವೆ. tree falls on moving car