ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾದ ಸಂಸದ ರಾಘವೇಂದ್ರ, ವಿಐಎಸ್ಎಲ್, ಉದ್ಯೋಗ ಸೃಷ್ಟಿ ಬಗ್ಗೆ ಚರ್ಚೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021 ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರುಜ್ಜೀವನಗೊಳಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದರು. ಸಂಸದರ ಮನವಯಲ್ಲಿ ಏನಿದೆ? ಭದ್ರಾವತಿಯಲ್ಲಿ ಸ್ಥಗಿತಗೊಂಡಿರುವ ಕಾರ್ಖಾನೆಯು ಹೆಚ್ಚಿನ ಮೌಲ್ಯವುಳ್ಳ ಆತ್ಯಾಧುನಿಕ ಉಕ್ಕು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಕೈಗಾರಿಕೆಯನ್ನು ಲಾಭದಾಯಕವಾಗಿ ನಡೆಸಲು … Read more