ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಪ್ರಮೋದ್ ಮುತಾಲಿಕ್ಗೆ ತಡೆ, ನೊಟೀಸ್ ಕೊಟ್ಟು ಗಡಿ ದಾಟಿಸಿದ ಪೊಲೀಸ್, ಯಾಕೆ?
ಶಿವಮೊಗ್ಗ : ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಶಿವಮೊಗ್ಗಕ್ಕೆ ಆಗಮಿಸಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ತಡೆದ ಪೊಲೀಸರು (Police), ಎನ್.ಆರ್.ಪುರ ತಾಲೂಕಿಗೆ ಬಿಟ್ಟು ಬಂದಿದ್ದಾರೆ. ಕಳೆದ ರಾತ್ರಿ ಶಿವಮೊಗ್ಗ – ಹೊನ್ನಾಳಿ ರಸ್ತೆಯ ಮೇಲ್ಸೇತುವೆ ಬಳಿ ಮುತಾಲಿಕ್ ಅವರ ಕಾರು ತಡೆದು ಜಿಲ್ಲಾಧಿಕಾರಿ ಆದೇಶ ನೀಡಿ, ಗಡಿ ದಾಟಿಸಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮ ಶ್ರೀರಾಮ ಸೇನೆ ವತಿಯಿಂದ ಪ್ರಕಟಿಸಲಾಗಿರುವ ಲವ್ ಜಿಹಾದ್ ಪುಸ್ತಕ ಬಿಡುಗಡೆಗೆ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸಿದ್ದರು. ನಗರದ ಪತ್ರಿಕಾ ಭವನದಲ್ಲಿ … Read more