ಕಾನೂನು ಸಡಿಲಗೊಳಿಸಿದರೆ ಹೋರಾಟ ತೀವ್ರ, ಸರ್ಕಾರಕ್ಕೆ ವಿಹೆಚ್‌ಪಿ, ಬಜರಂಗದಳ ವಾರ್ನಿಂಗ್‌

VHP-bajarangadal-Protest-in-Shimoga.

ಶಿವಮೊಗ್ಗ: ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾಗಿದೆ. ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಲು ಯೋಜಿಸಿದೆ. ಇದು ಸಂವಿಧಾನ ವಿರೋಧಿ ಕೃತ್ಯ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ (Bajrang Dal) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿಹೆಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು, ಗೋ ಹತ್ಯೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರ್ಕಾರವು ಗೋವುಗಳ ಕಳ್ಳ ಸಾಗಣೆದಾರರ ಅನುಕೂಲ ಮಾಡಿಕೊಡಲು ಮುಂದಾಗಿದೆ … Read more

ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು?

BJP-Mahila-Morcha-protest-against-CM-Siddaramaiah

ಶಿವಮೊಗ್ಗ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಏಕವಚನ ಮತ್ತು ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು, ಸಿದ್ದರಾಮಯ್ಯ ಅವರು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ. ತಕ್ಷಣ ಅವರು ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್‌ ಅವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್ … Read more

ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?

BY-Vijayendra-Protest-in-Shikaripura

ಶಿಕಾರಿಪುರ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭ 50,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ (Gherao) ಹಾಕಲಾಗುವುದು. ಆ ಮೂಲಕ ರೈತ (Farmers) ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿಕಾರಿಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ (Protest) ಪಾಲ್ಗೊಂಡಿದ್ದ ಬಿ.ವೈ.ವಿಜಯೇಂದ್ರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತಿನಗಾಡಿಯಲ್ಲಿ ಪಾಲ್ಗೊಂಡು ಗಮನಸೆಳೆದರು. ವಿಜಯೇಂದ್ರ ಏನೇನು ಹೇಳಿದರು? ಪಾಯಿಂಟ್‌ 1: ರೈತರ ಹಿತಕಾಯುವುದಾಗಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಕಾಯ್ದೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ

CITU-Protest-against-Labour-Act

ಶಿವಮೊಗ್ಗ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಮಿಕ ಕಾಯ್ದೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಏಕಪಕ್ಷೀಯವಾಗಿ ಜಾರಿಗೊಳಿಸಲು ಮುಂದಾಗಿದೆ ಎಂದು ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು  ಏಕಪಕ್ಷೀಯವಾಗಿ ಜಾರಿಗೆ ಮುಂದಾಗಿದೆ. ಇವುಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಹೀಗಿದ್ದೂ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿವೆ … Read more

ಅಮಿತ್‌ ಷಾಗೆ ಶಿವಮೊಗ್ಗದಿಂದ ಬಳೆ ಪೋಸ್ಟ್‌ ಮಾಡಿದ ಮಹಿಳೆಯರು, ಆಕ್ರೋಶ ವ್ಯಕ್ತಪಡಿಸಿದ ಯುವಕರು

Youth-Congress-workers-post-bangles-to-Home-Minister-Amith-Shah

ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರು ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. (Bangle) 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು. ಈಗ ದಹೆಲಿಯ ಅತ್ಯಂತ ಬಿಗಿ ಭದ್ರತಾ ಪ್ರದೇಶವಾದ ಕೆಂಪು … Read more

ಡಿಸಿ ಕಚೇರಿ ಮುಂದೆ PUC ಉಪನ್ಯಾಸಕ ಹೋರಾಟ, ಸಾಲು ಸಾಲು ಬೇಡಿಕೆ ಈಡೇರಿಕೆಗೆ ಆಗ್ರಹ

PUC-Lecturers-protest-in-Front-of-DC-Office

ಶಿವಮೊಗ್ಗ: ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಲ್ಲದ ಆದೇಶಗಳು ಸರ್ಕಾರದಿಂದ ಬರುತ್ತಿವೆ. ಇದರಿಂದ ಉಪನ್ಯಾಸಕರ ದೈನಂದಿನ ಕೆಲಸದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಜೊತೆಗೆ ಅವರ ಆತ್ಮಸ್ಥೆರ್ಯ ಕುಗ್ಗಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ (Lecturers) ಸಂಘದಿಂದ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ಈಗ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧವೇ ಇಲ್ಲದ ಡಯೆಟ್‌ನ ಪ್ರಶಿಕ್ಷಣಾರ್ಥಿಗಳನ್ನು ಪದವಿಪೂರ್ವ ಕಾಲೇಜುಗಳ ಸ್ಥಿತಿಗತಿಯ ದತ್ತಾಂಶ ಕ್ರೋಢೀಕರಿಸಲು ಕಳುಹಿಸಲಾಗುತ್ತಿದೆ. … Read more

ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಮುಂದೆ ಆಕ್ರೋಶ, ಅಧಿಕಾರಿಗಳ ವಿರುದ್ಧ ಘೋಷಣೆ

Protest-at-Holehonnuru

ಹೊಳೆಹೊನ್ನೂರು: ಅಧಿಕಾರಿಗಳು ಹಾಗೂ ಸಿಬ್ಬಂದಿ ಜನ ವಿರೋಧಿ ಕಾರ್ಯವೈಖರಿ ಖಂಡಿಸಿ ಸ್ಥಳೀಯ ನಿವಾಸಿಗಳು ಪಟ್ಟಣ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ (Protest) ನಡೆಸಿದರು. ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿನ ಆಸ್ತಿಗಳಿಗೆ ಸಂಬಂಧಪಟ್ಟಂತೆ ಪಂಚಾಯಿತಿಯಿಂದ ಇ– ಆಸ್ತಿ (ನಮೂನೆ– 3) ದಾಖಲೆಯನ್ನು ಸಮರ್ಪಕವಾಗಿ ನೀಡುತ್ತಿಲ್ಲ. ಅದಕ್ಕೆ ಅಧಿಕಾರಿ ಹಾಗೂ ಸಿಬ್ಬಂದಿಯ ಬೇಜವಾಬ್ದಾರಿಯೇ ಕಾರಣ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ, ಸಲಹೆ, ಸೂಚನೆ ನೀಡಿದರೂ ವಿನಾ ಕಾರಣ ವಿಳಂಬ ಮಾಡುತ್ತಿದ್ದಾರೆ. ಜನ ಇದರಿಂದ ಬೇಸತ್ತು ಪ್ರತಿಭಟನೆಗೆ ಮುಂದಾಗಿದ್ದಾರೆ. … Read more

ಹೊಳೆಬೆನವಳ್ಳಿ ಗ್ರಾಮಸ್ಥರ ಆಕ್ರೋಶ, ಮುಂದೆ ತೀವ್ರ ಹೋರಾಟದ ಎಚ್ಚರಿಕೆ

villagers-protest-against-holebenavalli-grama-panchayat.

ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವನ್ನು ವಿರೋಧಿಸಿ ಗ್ರಾಮಸ್ಥರು (Villagers) ಹೊಳೆ ಬೆನವಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಠಾಣಾ ಜಾಗದ ಅಕ್ಕಪಕ್ಕ ಶ್ರೀ ಉಡಸಲಮ್ಮ ಹಾಗೂ ಶ್ರೀ ಮಾತಂಗಮ್ಮ ಮತ್ತು ಶ್ರೀ ನಂದಿ ಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭಯವಿದೆ ಗ್ರಾಮಸ್ಥರು ತಿಳಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ವಿರೋಧವಿದ್ದರೂ, ಈ ಜಾಗದಲ್ಲಿ … Read more

ಶೂ ಎಸೆದ ವಕೀಲ, ಬಂಧನಕ್ಕೆ ಶಿವಮೊಗ್ಗದಲ್ಲಿ ಕಾನೂನು ವಿದ್ಯಾರ್ಥಿಗಳ ಆಗ್ರಹ

131025 NSUI Protest in Shimoga city

ಶಿವಮೊಗ್ಗ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ (advocate) ರಾಕೇಶ್‌ ಕಿಶೋರ್‌ರನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ಸಿಬಿಆರ್‌ ರಾಷ್ಟ್ರೀಯ ಕಾನೂನು ಕಾಲೇಜಿನ ಎನ್‌ಎಸ್‌ಯುಐ ಘಟಕ ರಾಷ್ಟ್ರಪತಿ ಅವರನ್ನು ಆಗ್ರಹಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾನೂನು ವಿದ್ಯಾರ್ಥಿಗಳು, ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌ ಸಂವಿಧಾನ ಮತ್ತು ಡಾ. ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ್ದಾರೆ. ಘಟನೆ ಬೆನ್ನಿಗೆ ವಕೀಲ ಪರಿಷತ್‌ನಿಂದ ಅವರನ್ನು ಅಮಾನತು … Read more

ಶಿವಮೊಗ್ಗ ವಿಮಾನ ನಿಲ್ದಾಣದ ಗೇಟ್‌ ಮುಂದೆ ಪೆಂಡಾಲ್‌ ಹಾಕಿ ರೈತರ ಧರಣಿ, ಇಲ್ಲಿದೆ ಕಾರಣ

091025 Farmers protest in Front of Shimoga Airport

ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ ನಿವೇಶನ ಹಂಚಿಕೆ ಮಾಡದ ಸರ್ಕಾರದ ಕ್ರಮ ಖಂಡಿಸಿ ಸೋಗಾನೆ ಭೂಮಿ ಹಕ್ಕು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ವಿಮಾನ ನಿಲ್ದಾಣದ (Airport) ಗೇಟ್‌ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ರೈತರು, ಅವರ ಕುಟುಂಬದವರು ಧರಣಿಯಲ್ಲಿ ಭಾಗವಹಿಸಿದ್ದಾರೆ. ವಿಮಾನ ನಿಲ್ದಾಣದ ಗೇಟ್‌ ಮುಂಭಾಗ ಮಹಾತ್ಮ ಗಂಧೀಜಿ ಫೋಟೊ ಇರಿಸಿಕೊಂಡು ರೈತರು ಧರಣಿ ಆರಂಭಿಸಿದ್ದಾರೆ. ಹೋರಾಟಕ್ಕೆ ಕಾರಣವೇನು? ಇಲ್ಲಿದೆ ಪ್ರಮುಖಾಂಶ ಇನ್ನು, ವಿಮಾನ ನಿಲ್ದಾಣದ ಮುಂಭಾಗ … Read more