ಶಿವಮೊಗ್ಗದ ಪುರಾಣ ಪ್ರಸಿದ್ಧ ಹರೋಹರ ಜಾತ್ರೆ ಈ ಭಾರಿಯೂ ರದ್ದು, ಯಾವತ್ತು ನಡೆಯಬೇಕಿತ್ತು ಜಾತ್ರೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021 ಕೊರೊನಾದಿಂದಾಗಿ ಗುಡ್ಡೆಕಲ್ ಬಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಆಡಿಕೃತ್ತಿಕೆ ಹರೋಹರ ಜಾತ್ರೆ ರದ್ದು ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಪಿ.ರಘುಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಂಡಳಿ, ಜಾತ್ರೆಗೆ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಾರೆ. ಹರಕೆ ತೀರಿಸಲು ಕಾವಡಿ ಹೊತ್ತು ಬರುತ್ತಾರೆ. ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜಾತ್ರೆ ಸೇರುವುದು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ಜಾತ್ರೆ ರದ್ದುಗೊಳಿಸಲಾಗಿದೆ. … Read more