ಶಿವಮೊಗ್ಗದ ಪುರಾಣ ಪ್ರಸಿದ್ಧ ಹರೋಹರ ಜಾತ್ರೆ ಈ ಭಾರಿಯೂ ರದ್ದು, ಯಾವತ್ತು ನಡೆಯಬೇಕಿತ್ತು ಜಾತ್ರೆ?

Guddekallu-Temple

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021 ಕೊರೊನಾದಿಂದಾಗಿ ಗುಡ್ಡೆಕಲ್ ಬಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಆಡಿಕೃತ್ತಿಕೆ ಹರೋಹರ ಜಾತ್ರೆ ರದ್ದು ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಪಿ.ರಘುಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಂಡಳಿ, ಜಾತ್ರೆಗೆ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಾರೆ. ಹರಕೆ ತೀರಿಸಲು ಕಾವಡಿ ಹೊತ್ತು ಬರುತ್ತಾರೆ. ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜಾತ್ರೆ ಸೇರುವುದು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ಜಾತ್ರೆ ರದ್ದುಗೊಳಿಸಲಾಗಿದೆ. … Read more

ಪುಷ್ಯಾ ಮಳೆ ಅಬ್ಬರಕ್ಕೆ ಕತ್ತಲಲ್ಲಿ ಗ್ರಾಮಗಳು, ಇದ್ದ ಒಂದು ಪಾಯಿಂಟ್ ನೆಟ್​​ವರ್ಕ್​​ ಕೂಡ ಮಾಯ

200920 Agumbe Heavy Rain 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2021 ಭಾರಿ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ರಸ್ತೆಗಳು ಕೊಚ್ಚಿ ಹೋಗಿವೆ. ಬೆಳೆಹಾನಿ ಸಂಭವಿಸಿದೆ. ಆಸ್ತಿಪಾಸ್ತಿಗೂ ಹಾನಿಯಾಗಿದೆ. ಈ ನಡುವೆ ಹಲವು ಗ್ರಾಮಗಳು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡು, ಕತ್ತಲಲ್ಲಿ ಕೂರುವಂತಾಗಿದೆ. ಪುಷ್ಯಾ ಮಳೆಯ ಅಬ್ಬರಕ್ಕೆ ಶಿವಮೊಗ್ಗ ಜಿಲ್ಲೆ ತತ್ತರಿಸಿ ಹೋಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ಮರಗಳು ಉರುಳಿವೆ. ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳೆ ಕಣ್ಮರೆಯಾಗಿವೆ. ಈ ನಡುವೆ ಜನರು ಕತ್ತಲಲ್ಲಿ ಕೂರುವಂತಾಗಿದೆ. ಕತ್ತಲಲ್ಲೇ ಕಾಲ … Read more

ಶಿವಮೊಗ್ಗ ಜಿಲ್ಲಾಡಳಿತದಿಂದ ತಾಲೂಕುವಾರು ಕಂಟ್ರೋಲ್ ರೂಂ, ಹೆಲ್ಪ್​ಲೈನ್​ ನಂಬರ್ ಬಿಡುಗಡೆ

230721 Hosanagara Rain Level Increases 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲಾಡಳಿತ ತಾಲೂಕುವಾರು ಕಂಟ್ರೊಲ್ ರೂಂಗಳನ್ನು ಸ್ಥಾಪಿಸಿದೆ. ಹೆಲ್ಪ್‍ಲೈನ್ ನಂಬರ್‍ಗಳನ್ನು ಬಿಡುಗಡೆ ಮಾಡಿದೆ. ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಈ ನಂಬರ್‍ಗಳಿಗೆ ಕರೆ ಮಾಡಬಹುದಾಗಿದೆ. ಶಿವಮೊಗ್ಗ ಡಿಸಿ ಕಚೇರಿ 08182221010, ಶಿವಮೊಗ್ಗ ತಹಶೀಲ್ದಾರ್ ಕಚೇರಿ 08182279312, ಭದ್ರಾವತಿ ತಹಶೀಲ್ದಾರ್ ಕಚೇರಿ 08282267283, ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ 08181228239 ಸಂಪರ್ಕಿಸಬಹುದು. ಸಾಗರ ತಹಶೀಲ್ದಾರ್ ಕಚೇರಿ 08183226074, ಸೊರಬ ತಹಶೀಲ್ದಾರ್ ಕಚೇರಿ 08184272241, ಹೊಸನಗರ … Read more

ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು, ಶಿವಮೊಗ್ಗದಲ್ಲಿ ಕಡಿಮೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

170621 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಮಳೆ ಕಡಿಮೆಯಾಗಿದೆ. ಶುಕ್ರವಾರ ಜಿಲ್ಲೆಯಾದ್ಯಂತ ಸರಾಸರಿ 120.77 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ತುಂಗಾ ನದಿ ಉಕ್ಕಿ ಹರಿದು, ಪ್ರವಾಹ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಇದನ್ನೂ ಓದಿ | ಎರಡು ದಿನದ ಮಳೆಗೆ ನವುಲೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊಣಕಾಲುದ್ದ ನೀರು ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 27.60 ಮಿ.ಮೀ, ಭದ್ರಾವತಿಯಲ್ಲಿ 36.20 ಮಿ.ಮೀ, ತೀರ್ಥಹಳ್ಳಿಯಲ್ಲಿ 380.80 … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರತ್ಯಕ್ಷನಾದ ಸೂರ್ಯ, ದೂರಾಯ್ತು ಪ್ರವಾಹ ಭಯ, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

240721 Bypass Road No Rain 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಮೂರು ದಿನದಿಂದ ಅಬ್ಬರಿಸಿದ್ದ ಪುಷ್ಯಾ ಮಳೆ ಬಿಡುವು ನೀಡಿದೆ. ಜಿಲ್ಲೆಯಾದ್ಯಂತ ಮಳೆ ಮರೆಯಾಗಿ ಸೂರ್ಯ ಪ್ರತ್ಯಕ್ಷವಾಗಿದ್ದು, ಪ್ರವಾಹದ ಆತಂಕದಲ್ಲಿದ್ದ ಜನರು ಈಗ ನಿರಾಳರಾಗಿದ್ದಾರೆ. ಬಿಸಿಲಿನಿಂದ ಬೆಚ್ಚನೆ ವಾತಾವರಣ ಬೆಳಗ್ಗೆಯಿಂದ ಬಿಸಿಲು ಕಾಣಿಸಿಕೊಂಡಿದ್ದು ಬೆಚ್ಚನೆ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲೂಕಿನಾದ್ಯಂತ ಬಿಸಿಲು ಕಾಣಿಸಿಕೊಂಡಿದೆ. ಇದನ್ನೂ ಓದಿ | ಚಕ್ರಾ ವ್ಯಾಪ್ತಿಯಲ್ಲಿ ದಾಖಲೆ ಮಳೆ, ಮಾಸ್ತಿಕಟ್ಟೆಯಲ್ಲೂ ಜೋರು, 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ಎಷ್ಟಾಯ್ತು … Read more

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಮೂರೂವರೆ ಅಡಿ ಹೆಚ್ಚಳ, ತುಂಗಾ ಜಲಾಶಯದ ಹೊರಹರಿವು ಎಷ್ಟಿದೆ ಗೊತ್ತಾ?

230721 Tunga Dam Outflow Increases 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಜೋರು ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈಗಾಗಲೇ ಭರ್ತಿಯಾಗಿರುವುದರಿಂದ ತುಂಗಾ ಜಲಾಶಯದ ಒಳ ಹರಿವಿನ ಪ್ರಮಾಣದಷ್ಟೆ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳಹರಿವು? ಲಿಂಗನಮಕ್ಕಿ ಡ್ಯಾಂಗೆ 1,03,117 ಕ್ಯೂಸೆಕ್‍ ಒಳ ಹರಿವು ಇದೆ. ಶುಕ್ರವಾರ ಭಾರಿ ಪ್ರಮಾಣದ ನೀರು ಹರಿದು ಬಂದಿರುವುದರಿಂದ ಜಲಾಶಯದ ನೀರಿನ ಮಟ್ಟ 1802.60 ಕ್ಯೂಸೆಕ್‍ಗೆ ಏರಿಕೆಯಾಗಿದೆ. ಒಂದೇ … Read more

BREAKING NEWS | ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ, ನದಿ ಪಾತ್ರದ ಜನರಿಗೆ ಮುಳುಗಡೆ ಭಯ

230721 Tunga Dam Outflow Increases 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021 ತುಂಗಾ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಗೆ ಬಿಡಲು ತೀರ್ಮಾನಿಸಲಾಗಿದೆ. ಜಲಾಶಯದ ಕ್ರಸ್ಟ್ ಗೇಟ್‍ಗಳ ಮೂಲಕ 70 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಈ ಹೊತ್ತಿನಿಂದಲೇ ಜಲಾಶಯದಿಂದ ಈ ಪ್ರಮಾಣದ ನೀರನ್ನು ಹೊಳೆಗೆ ಬಿಡಲಾಗುತ್ತದೆ ಎಂದು ತುಂಗಾ ಮೇಲ್ದಂಡೆ ಯೋಜನೆ ಎಇಇ ತಿಳಿಸಿದ್ದಾರೆ. ಹೆಚ್ಚಿನ ಪ್ರಮಾಣದ ನೀರನ್ನು ಡ್ಯಾಂನಿಂದ ಹೊರಗೆ ಬಿಡುತ್ತಿರುವುದರಿಂದ ತುಂಗಾ … Read more

24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 146 ಮಿ.ಮೀ ಮಳೆ, ಸಾಗರದಲ್ಲಿ ಹೆಚ್ಚು, ಭದ್ರಾವತಿ ಕಡಿಮೆ, ಎಲ್ಲೆಲ್ಲಿ ಎಷ್ಟಾಗಿದೆ?

180721 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021 ಪುಷ್ಯಾ ಮಳೆ ಜೋರಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಸರಾಸರಿ 146.91 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 57 ಮಿ.ಮೀ, ಭದ್ರಾವತಿ 50.20 ಮಿಮೀ, ತೀರ್ಥಹಳ್ಳಿ 171.80 ಮಿ.ಮೀ, ಸಾಗರ 228.60 ಮಿ.ಮೀ, ಶಿಕಾರಿಪುರ 120.20 ಮಿ.ಮೀ, ಸೊರಬ 190 ಮಿ.ಮೀ, ಹೊಸನಗರ 210.60 ಮಿ.ಮೀ ಮಳೆಯಾಗಿದೆ. ಈ ತಿಂಗಳಲ್ಲಿ ಇದೆ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ … Read more

ಹೊಸನಗರದಲ್ಲಿ ಬಿಡುವು ಕೊಡದ ಮಳೆ, ಸಾವೇಹಕ್ಕಲಿನಲ್ಲಿ ಅತಿ ಹೆಚ್ಚು, ಹುಲಿಕಲ್ನಲ್ಲಿ ಕಡಿಮೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

230721 Hosanagara Rain Level Increases 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 23 ಜುಲೈ 2021 ಹೊಸನಗರ ತಾಲೂಕಿನಲ್ಲಿ ದಾಖಲೆ ಮಳೆಯಾಗುತ್ತಿದೆ. ಕ್ಷಣ ಹೊತ್ತು ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ತಾಲೂಕಿನಲ್ಲಿ 210.2 ಮಿ.ಮೀ ಮಳೆಯಾಗಿದೆ. ಭಾರಿ ಮಳೆಯಿಂದಾಗಿ ತಾಲೂಕಿನ ಹಳ್ಳ,ಕೊಳ್ಳಗಳು ಸಂಪೂರ್ಣ ಭರ್ತಿಯಾಗಿವೆ. ಹೊಳೆಯಲ್ಲಿ ನೀರು ರಭಸವಾಗಿ ಹರಿಯುತ್ತಿದೆ. ಇನ್ನು, ಹೊಲ, ಗದ್ದೆಗಳಲ್ಲಿ ನೀರು ನಿಂತಿರುವುದರಿಂದ ಬೆಳೆ ಹಾನಿ ಭೀತಿ ಎದುರಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ತಾಲೂಕಿನ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 192 ಮಿ.ಮೀ … Read more

ಸಾಗರ ಪಟ್ಟಣದ ವಿವಿಧೆಡೆ ಜಲಾವೃತ, ರಸ್ತೆ ಮೇಲೆ ಹರಿಯುತ್ತಿದೆ ನೀರು, ಶಾಸಕರಿಂದ ಸಿಟಿ ರೌಂಡ್ಸ್

230721 Keladi road in heavy rain 1

ಶಿವಮೊಗ್ಗ ಲೈವ್.ಕಾಂ | SAGARA NEWS | 23 ಜುಲೈ 2021 ಕೆಳೆದ ಎರಡು ದಿನದಿಂದ ಸಾಗರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಪಟ್ಟಣದ ವಿವಿಧ ಬಡಾವಣೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳ ಮೇಲೂ ಮಳೆ ನೀರು ಹರಿಯುತ್ತಿದೆ. ಕೆಳದಿ ರಸ್ತೆಯ ಮೇಲೆ ನೀರು ಚರಂಡಿಗಳು ಭರ್ತಿಯಾಗಿ ಕೆಳದಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಅಕ್ಕಪಕ್ಕದ ಬಡಾವಣೆಗಳಿಗೆ  ನೀರು ನುಗ್ಗಿದ್ದು, ಮನೆಗಳು ಜಲಾವೃತವಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಸ್ಥಳಕ್ಕೆ ಭೇಟಿ … Read more