ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್ ಅಂತಿದ್ದಾರೆ ಜನ, ಏನಿದು ಅಭಿಯಾನ?
ಶಿವಮೊಗ್ಗ: ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ವಾಹನ ಬಂದರೂ ಕಸ ತಂದು ರಸ್ತೆ ಸುರಿಯುವವರಿಗೇನು ಕಡಿಮೆ ಇಲ್ಲ. ಇಂತಹವರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ರಂಗೋಲಿ (Rangoli) ಮೊರೆ ಹೋಗಿದ್ದಾರೆ. ಶಿವಮೊಗ್ಗ ನಗರದ ವಿವಿಧೆಡೆ ಖಾಲಿ ನಿವೇಶನಗಳು, ರಸ್ತೆ ಬದಿ, ಕನ್ಸರ್ವೆನ್ಸಿಗಳಲ್ಲಿ ಜನ ಕಸ ತಂದು ಸುರಿಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೌರ ಕಾರ್ಮಿಕರು ರಂಗೋಲಿ ಅಭಿಯಾನ ಆರಂಭಿಸಿದ್ದಾರೆ. ಕಸ ಸುರಿಯುವ ಜಾಗದಲ್ಲಿ ಚಂದದ ರಂಗೋಲಿ ಬಿಡಿಸಿ … Read more