ಸೂಡೂರು ಬಳಿ ಅಪಘಾತ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಸಾವು, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ (Road Accident) ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಸಮೀಪದ ಹೊಸೂರು ನಿವಾಸಿ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (65) ಮೃತರು. ತೀರ್ಥಹಳ್ಳಿ ತಾಲೂಕಿನ ಅಂಬು ತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿ ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇವರಿಗೆ ಪತ್ನಿ ಹಾಗೂ ಪುತ್ರಿ … Read more

ಮೈಮೇಲೆ ಹರಿದ ಜಂಬಿಟ್ಟಿಗೆ ಲಾರಿ, ಸ್ಥಳದಲ್ಲೇ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

man-breathed-last-near-ripponpete-in-hosanagara.

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆ ನೋಡ್ಲು ಬಸ್ ನಿಲ್ದಾಣದ ಬಳಿ ಜಂಬಿಟ್ಟಿಗೆ ತುಂಬಿದ್ದ ಲಾರಿ ಡಿಕ್ಕಿ (Road Accident) ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಂಬಳ್ಳಿಯ ಎಣ್ಣೆನೋಡ್ಲು ನಿವಾಸಿ ನಯಾಜ್ ಅಹಮದ್ (38) ಮೃತರು. ತೀರ್ಥಹಳ್ಳಿ ಕಡೆಗೆ ಹೊರಟಿದ್ದ ಖಾಸಗಿ ಬಸ್ ನಿಲ್ದಾಣದಲ್ಲಿ ನಿಂತಿತ್ತು. ನಾಟಿ ಔಷಧದ ಪಾರ್ಸಲ್ ಕಳಿಸುವ ಉದ್ದೇಶದಿಂದ ನಯಾಜ್ ಚಾಲಕನ ಜೊತೆ ಮಾತನಾಡುತ್ತಾ ನಿಂತಿದ್ದರು. ರಿಪ್ಪನ್‌ಪೇಟೆ ಕಡೆಯಿಂದ ವೇಗವಾಗಿ ಬಂದ ಲಾರಿ ನಯಾಜ್‌ ಅಹಮದ್‌ಗೆ ಡಿಕ್ಕಿ ಹೊಡೆದು ಮೈಮೇಲೆ ಹರಿದಿದೆ. … Read more