ಕಲ್ಲೊಡ್ಡು ಹಳ್ಳ ಯೋಜನೆ ವಿರುದ್ಧ ಸಿಡಿದೆದ್ದ ಜನ, ಸಾಗರದಲ್ಲಿ ಭಾರಿ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 26 ಆಗಸ್ಟ್ 2019 ಕಲ್ಲೊಡ್ಡು ಹಳ್ಳ ಯೋಜನೆ ವಿರೋಧಿಸಿ ಸಾಗರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಾಗರದ ಗಣಪತಿ ದೇವಸ್ಥಾನದಿಂದ ಶುರುವಾದ ಮೆರವಣಿಗೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಯೋಜನೆ ವಿರುದ್ಧ ಘೋಷಣೆ ಕೂಗಿದರು. ಯೋಜನೆ ಜಾರಿಯಾದರೆ ಸಾಗರ ತಾಲೂಕಿನಲ್ಲಿ ಮತ್ತೊಮ್ಮೆ ಮುಳುಗಡೆ ಸಮಸ್ಯೆ ಎದುರಾಗಲಿದೆ ಎಂದು ಆಕ್ರೋಶ … Read more