ಕಾರ್ಗಲ್‌ ಪವರ್‌ ಚಾನಲ್‌ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ, ತಳಕಳಲೆ ಡ್ಯಾಂ ಹಿನ್ನೀರಿನಲ್ಲಿ ಶವವಾಗಿ ಪತ್ತೆ

111025-Kargal-Power-Channel-Linganamakki-dam.webp

ಕಾರ್ಗಲ್: ಇಲ್ಲಿಗೆ ಸಮೀಪದ ಕಣೇಕಾರು ಮಜಿರೆ ಗ್ರಾಮದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮೃತದೇಹ ಪತ್ತೆಯಾಗಿದೆ (Succumbed). ಎ.ಚಂದ್ರಶೇಖರ (28) ಮೃತರು. ಚಾಲಕ ವೃತ್ತಿ ಮಾಡುತ್ತಿದ್ದ ಇವರು, ಮೂರು ದಿನಗಳ ಹಿಂದೆ ಕಾರ್ಗಲ್ ಕೆಪಿಸಿ ಪವರ್ ಚಾನಲ್ ಬಳಿ ಬೈಕ್ ಬಿಟ್ಟು ಕಾಣೆಯಾಗಿದ್ದರು. ತಳಕಳಲೆ ಜಲಾಶಯದ ಹಿನ್ನೀರಿನಲ್ಲಿ ಶವ ಪತ್ತೆಯಾಗಿದೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಬ್ ಇನ್‌ಸ್ಪೆಕ್ಟರ್ ನಾಗರಾಜ್, ಸಿಬ್ಬಂದಿ ಅಣ್ಣಪ್ಪ, ಜಯೇಂದ್ರ, ಪುರುಷೋತ್ತಮ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. … Read more

ಸಾಗರ, ಆನಂದಪುರ ಸುತ್ತಮುತ್ತ ಇವತ್ತು ಕರೆಂಟ್‌ ಇರಲ್ಲ, ಎಲ್ಲೆಲಿ? ಇಲ್ಲಿದೆ ಡಿಟೇಲ್ಸ್‌

Sagara-News-Update.

ಸಾಗರ: ಪಟ್ಟಣ ಸೇರಿದಂತೆ ತಾಲೂಕಿನ ಕೆಲವು ಕಡೆಗಳಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಅ.11ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಸಾಗರ ಪಟ್ಟಣ, ಅವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ (Power cut) ವ್ಯತ್ಯಯವಾಗಲಿದೆ. ಆನಂದಪುರದಲ್ಲು ವಿದ್ಯುತ್‌ ವ್ಯತ್ಯಯ ಆನಂದಪುರಂ: ಇಲ್ಲಿನ ಮೆಸ್ಕಾಂ ವಿಭಾಗ ವ್ಯಾಪ್ತಿಯ 11 ಕೆವಿ ಮಾರ್ಗ ಮುಕ್ತತೆ ಪಡೆಯಲು ವಿವಿಧ ಗ್ರಾಮಗಳಲ್ಲಿ ಅ.11ರಂದು ಬೆಳಗ್ಗೆ 10ರಿಂದ ಸಂಜೆ … Read more

ಶಿವಮೊಗ್ಗ ಜಂಬೂ ಸವಾರಿ, ಅಂಬಾರಿಯ ತೂಕವೆಷ್ಟು? ಸಾಗರ ಆನೆ ಮೇಲೆ ಎಷ್ಟು ಭಾರ ಇರುತ್ತೆ?

021025 Sagara Elephant Ambari

ದಸರಾ ಸುದ್ದಿ: ಶಿವಮೊಗ್ಗ ದಸರಾದಲ್ಲಿ ಅಂಬಾರಿ (Ambari) ಹೊರಲು ಸಾಗರ ಆನೆ ಸಜ್ಜಾಗಿದೆ. ನಾಡ ದೇವಿಯ ಬೆಳ್ಳಿ ಮಂಟಪ ಹೊತ್ತು ಸಾಗರ ಆನೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದ್ದಾನೆ. ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಮೂರ್ತಿ ಮತ್ತು ಮಂಟಪ 450 ಕೆ.ಜಿ ಇದೆ. ಇನ್ನು ಆನೆಗೆ ಹಾನಿ ಆಗದಂತೆ ಮತ್ತು ಅಂಬಾರಿ ಜಾರದಂತೆ ಇರಿಸಲು ವಿಶೇಷವಾದ ಬೆಡ್‌ ಹಾಕಲಾಗುತ್ತದೆ. ಅದರ ಒಟ್ಟು ತೂಕ ಸುಮಾರು 200 ಕೆ.ಜಿ. ಶಿವಮೊಗ್ಗದ ಜಂಬೂ ಸವಾರಿಯಲ್ಲಿ ಸಾಗರ ಆನೆ ಸುಮಾರು 650 … Read more

ಸಾಗರದಲ್ಲಿ ಅಖಾಡ ರೆಡಿ, ಇಂದಿನಿಂದ ಪಟ್ಟು ಹಾಕಲಿದ್ದಾರೆ ರಾಷ್ಟ್ರಮಟ್ಟದ ಪೈಲ್ವಾನರು

National-Level-Kusti-in-sagara.

ಸಾಗರ: ಸಾಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಅ.1 ಮತ್ತು 2ರಂದು ರಾಷ್ಟ್ರ ಮಟ್ಟದ ದಸರಾ ಕುಸ್ತಿ (Kushti) ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಹೇಳಿದರು. ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಬಂಗಾರದ ಬೆಡಗು ಶೀರ್ಷಿಕೆಯಡಿ ಎರಡು ದಿನಗಳ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಕಳೆದ 49 ವರ್ಷಗಳಿಂದ ಗಾಂಧಿನಗರ ಯುವಜನ ಸಂಘ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಜಾನಪದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಸಂಘವು ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕುಸ್ತಿ ಪಂದ್ಯಾವಳಿ ಹಮ್ಮಿಕೊಂಡಿದೆ … Read more

ಸಿಗಂದೂರು ರಸ್ತೆಯಲ್ಲಿ ಟಿಟಿ ಪಲ್ಟಿ, ಬೆಂಗಳೂರಿನ ಮಹಿಳೆಯರಿಗೆ ಗಾಯ, ಆಸ್ಪತ್ರೆಗೆ MLA ದೌಡು

280925-Tempo-Traveller-Incident-at-Sigandur-road-near-Kuranakoppa.webp

ಸಾಗರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಟ್ರಾವಲರ್‌ ವಾಹನ ಪಲ್ಟಿಯಾಗಿ ಸಿಗಂದೂರು (Sigandur) ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕೂರನಕೊಪ್ಪ ಸಮೀಪ ಇಂದು ಬೆಳಗ್ಗೆ ಅಪಘಾತವಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ 12 ಮಹಿಳೆಯರು ಟಿಟಿ ವಾಹನದಲ್ಲಿ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದರು. ಕೂರನಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ. ಗಾಯಾಳುಗಳನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇನ್ನು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮೂವರು ಮಹಿಳೆಯರನ್ನು ಶಿವಮೊಗ್ಗದ … Read more

ಸಾಗರದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪಿಕಪ್‌ ವಾಹನ, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ಸಾಗರ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಬೊಲೇರೋ ಪಿಕಪ್‌ ವಾಹನ ಡಿಕ್ಕಿ (Collision) ಹೊಡೆದು ಪಲ್ಟಿಯಾಗಿದೆ. ಸಾಗರ ತಾಲೂಕು ಯಳವರಸೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಪಾಯವಾಗಿಲ್ಲ. ಬರೂರಿನ ವೀರಭದ್ರಪ್ಪ ಅವರು ತಮ್ಮ ಪತ್ನಿ ಮತ್ತು ಮಗಳೊಂದಿಗೆ ಕಾರಿನಲ್ಲಿ ಕುಗ್ವೆ ಗ್ರಾಮಕ್ಕೆ ತೆರಳುತ್ತಿದ್ದರು. ಯಳವರಸೆ ಬಳಿ ಎದುರಿನಿಂದ ಬಂದ ಬೊಲೇರೋ ಪಿಕಪ್‌ ವಾಹನ ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಹಿಂದೆ ಬರುತ್ತಿದ್ದ … Read more

ಶಿವಮೊಗ್ಗ – ಸಾಗರ ಮಧ್ಯೆ 4 ಕಡೆ ರೈಲ್ವೆ ಗೇಟ್‌ ಪರಿಶೀಲನೆ, ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗ ಪ್ರಕಟ

070923-Railway-Track-with-Electric-lane-in-Shimoga-Sagara-Route.webp

ರೈಲ್ವೆ ಸುದ್ದಿ: ಶಿವಮೊಗ್ಗ – ಸಾಗರ ಮಧ್ಯೆ ಮಾರ್ಗದಲ್ಲಿ ನಾಲ್ಕು ಕಡೆ ರೈಲ್ವೆ ಲೆವೆಲ್‌ ಕ್ರಾಸಿಂಗ್‌ (Level Crossing) ಗೇಟ್‌ಗಳನ್ನು ತೆರೆದು ಪರಿಶೀಲನೆ ನಡೆಸಲಾಗುತ್ತದೆ. ಆದ್ದರಿಂದ ಆ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಯಾವ್ಯಾವ ರಸ್ತೆಯಲ್ಲಿ ಯಾವಾಗ ರಿಪೇರಿ? ಜೇಡಿಸರ ರಸ್ತೆ: ಸೆ.22ರ ಬೆಳಗ್ಗೆ 7 ಗಂಟೆಯಿಂದ ಸೆ.23ರ ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ: ಆನಂದಪುರದಿಂದ ಜೇಡಿಸರ ಹಾಗೂ ಸಿದ್ದೇಶ್ವರ … Read more

ಅಡಿಕೆ ಧಾರಣೆ | 19 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ಶಿಕಾರಿಪುರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price). ಶಿವಮೊಗ್ಗ ಮಾರುಕಟ್ಟೆ ಗೊರಬಲು 21000 37669 ನ್ಯೂ ವೆರೈಟಿ 55589 57399 ಬೆಟ್ಟೆ 47599 65899 ರಾಶಿ 44669 60689 ಸರಕು 56109 84440 ಸಾಗರ ಮಾರುಕಟ್ಟೆ ಇತರೆ 27900 27900 ಶಿಕಾರಿಪುರ ಮಾರುಕಟ್ಟೆ ಚಾಲಿ 5500 5500 ‌ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ ಜನ, ಏನಿದು ಅಭಿಯಾನ? Areca Price #news, #arecanut, #areca … Read more

ರೈತನ ಮೇಲೆ ಕಾಡು ಹಂದಿ ದಾಳಿ, ತೀವ್ರ ಗಾಯ, ಹೇಗಾಯ್ತು ಘಟನೆ?

SAGARA-NEWS-UPDATE

ಸಾಗರ: ತಾಲೂಕಿನ ಬಾರಂಗಿ ಹೋಬಳಿಯ ಕಾನೂರು ಗ್ರಾಮದಲ್ಲಿ ಕೃಷಿಕ ರಾಮಪ್ಪ ಜಟ್ಟನಾಯಕ (60) ಎಂಬುವವರ ಮೇಲೆ ಕಾಡು ಹಂದಿ (Wild Boar) ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ಕೊಟ್ಟಿಗೆಗೆ ದರಗು ತರಲು ಕಾಡಿಗೆ ತೆರಳಿದ್ದಾಗ ಹಂದಿಯು ನಾಯಿ ಮೇಲೆ ದಾಳಿಗೆ ಯತ್ನಿಸಿದೆ. ನಾಯಿ ಓಡಿ ಹೋಗುತ್ತಿದ್ದಂತೆ ರಾಮಪ್ಪ ಅವರ ಮೇಲೆ ಎರಗಿ, ಹೊಟ್ಟೆಗೆ ತಿವಿದು, ಕಚ್ಚಿ ಗಾಯಗೊಳಿಸಿದೆ. ಸ್ಥಳೀಯರು ಅವರನ್ನು ರಕ್ಷಿಸಿ ಸಾಗರ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ » ಜೋಗದಲ್ಲಿ … Read more

ಸಾಗರದ ಎಲ್‌.ಬಿ.ಕಾಲೇಜು ನಿವೃತ್ತ ಪ್ರಾಧ್ಯಾಪಕ ನಿಧನ, ಮೆಡಿಕಲ್‌ ಕಾಲೇಜಿಗೆ ದೇಹ ದಾನ

Sagara-LB-College-Retired-Professor-HLS-Rao-breathed-last

ಸಾಗರ: ಲಾಲ್‌ಬಹದ್ದೂರ್‌ ಶಾಸ್ತ್ರಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ (Professor) ಹೆಚ್.ಎಲ್.ಎಸ್.‌ ರಾವ್‌ (87) ನಿಧನರಾಗಿದ್ದಾರೆ. ಅವರ ಇಚ್ಛೆಯಂತೆ ಮೃತದೇಹವನ್ನು ಶಿವಮೊಗ್ಗದ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗಿದೆ. ಸಾಗರದ ನೆಹರು ನಗರದ ನಿವಾಸಿಯಾಗಿದ್ದ ಹೆಚ್‌.ಎಲ್.ಎಸ್‌.ರಾವ್‌ ಶುಕ್ರವಾರ ನಿಧನರಾದರು. ಸಾಗರದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಶನಿವಾರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಅವರ ಮೃತದೇಹವನ್ನು ಶಿವಮೊಗ್ಗದ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಯಿತು. ಹೆಚ್‌.ಎಲ್.ಎಸ್‌.ರಾವ್‌ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿ ಹಲವರು ಸಂತಾಪ … Read more