ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದ ಲಾರಿ, ಮುಂಭಾಗ ನುಜ್ಜುಗುಜ್ಜು

Truck-collission-to-divider-in-Sagara-Soraba-road

SHIVAMOGGA LIVE NEWS | SAGARA | 3 ಜುಲೈ 2022 ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು (TRUCK ACCIDENT) ಡಿವೈಡರ್’ಗೆ ಡಿಕ್ಕಿ ಹೊಡೆದು, ಡಿವೈಡರ್ ಮೇಲೆ ಹತ್ತಿದೆ. ಲಾರಿಗೆ ಸಂಪೂರ್ಣ ಹಾನಿಯಾಗಿದೆ. ಸಾಗರದ ಸೊರಬ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಡಿವೈಡರ್’ಗೆ ಡಿಕ್ಕಿ ಹಡೆದಿದೆ. ಲಾರಿ  (TRUCK ACCIDENT) ಮುಂಭಾಗದ ಚಕ್ರಗಳು ಕಳಚಿಕೊಂಡಿದ್ದು, ಸಂಪೂರ್ಣ ಹಾನಿಯಾಗಿದೆ. ‘ಸೂಚನಾ ಫಲಕ ಇಲ್ಲ’ ಸಾಗರದ ಸೊರಬ ರಸ್ತೆಯಲ್ಲಿ ಕೆಲವು ಮೀಟರ್’ನಷ್ಟು ಉದ್ದ ಡಿವೈಡರ್ ನಿರ್ಮಿಸಲಾಗಿದೆ. … Read more

BREAKING NEWS | ಬೆಳ್ಳಂಬೆಳಗ್ಗೆ ಬಸ್ ಡಿಕ್ಕಿ, ಪತ್ರಿಕೆ ಹಂಚಲು ತೆರಳುತ್ತಿದ್ದ ಯುವಕ ಸಾವು

Sagara-Bus-Cycle-Accident-Near-IB

SHIVAMOGGA LIVE NEWS | SAGARA | 2 ಜುಲೈ 2022 KSRTC BUS ಡಿಕ್ಕಿಯಾಗಿ ಪತ್ರಿಕೆ ವಿತರಕರೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಲಮಕ್ಕಿಯ ಗಣೇಶ್ (25) ಮೃತ ದುರ್ದೈವಿ. ಸಾಗರ ಪ್ರವಾಸಿ ಮಂದಿರದ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರಕ್ಕೆ ತೆರಳುತ್ತಿದ್ದ KSRTC BUS, ಪತ್ರಿಕೆ ವಿತರಣೆಗೆ ಹೊರಟಿದ್ದ ಸೈಕಲ್’ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೈಕಲ್ ಹಿಂಬದಿ ಸವಾರ ರಾಹುಲ್ ಗಾಯಗೊಂಡಿದ್ದು ಪ್ರಣಪಾಯದಿಂದ … Read more

ಖಾಲಿ ಜಾಗದಲ್ಲಿ ಮದ್ಯ ಸೇವನೆಗೆ ಅಕ್ಷೇಪ, ಮನೆಗೆ ನುಗ್ಗಿ ಚಾಕು ಇರಿತ

Sagara-Rural-Police-Station-General-Image

SHIVAMOGGA LIVE NEWS | SAGARA | 29 ಜೂನ್ 2022 ಖಾಲಿ ಜಾಗದಲ್ಲಿ ಮದ್ಯ ಸೇವನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಮನೆಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಚಾಕು ಇರಿಯಲಾಗಿದೆ. ಕುಟುಂಬದವರ ಮುಂದೆ ಚಾಕು ಇರಿದು, ಕೊಲೆ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಸಾಗರದ ಕುಗ್ವೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸುರೇಶ್ ಎಂಬುವವರಿಗೆ ಚಾಕು ಇರಿದಿದ್ದು, ಎಡಗೈಗೆ ಗಾಯವಾಗಿದೆ. ಏನಿದು ಪ್ರಕರಣ? ಸುರೇಶ್ ಅವರ ಮನೆ ಪಕ್ಕದ ಖಾಲಿ ಜಾಗದಲ್ಲಿ ಮೂವರು ಯುವಕರು ಮದ್ಯಾಹ್ನ ಮದ್ಯ ಸೇವನೆ ಮಾಡುತ್ತಿದ್ದರು. ಇದನ್ನು … Read more

ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಮಕ್ಕಳು ದಿಢೀರ್ ಅಸ್ವಸ್ಥ, ಕೆಲಕಾಲ ಆತಂಕ

-Children-fell-ill-MLA-Halappa-visit-Sagara-Hospital

SHIVAMOGGA LIVE NEWS | SAGARA | 27 ಜೂನ್ 2022 ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚುಚ್ಚುಮದ್ದು (INJECTION) ಪಡೆದ 14 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವು ಮಕ್ಕಳು ಪ್ರಜ್ಞೆ ತಪ್ಪುವ ಸ್ಥಿತಿಗೆ ತಲುಪಿದ್ದರು. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದರಿಂದ ನಾಲ್ಕು ಮಕ್ಕಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಶೀತ ಸಂಬಂಧಿ ಕಾಯಿಲೆಗಳಿಗಾಗಿ ಕಳೆದ ಮೂರ್ನಾಲ್ಕು ದಿನದಿಂದ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಭಾನುವಾರ ಚುಚ್ಚುಮದ್ದು … Read more

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸುಪ್ರೀಂಕೋರ್ಟ್ ನ್ಯಾಯಾಧೀಶರು

Supreme-Court-Visit-Sigandur-Temple

SHIVAMOGGA LIVE NEWS | SAGARA | 21 ಜೂನ್ 2022 ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನಾಗರತ್ನ ಅವರು ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ (SIGANDURU TEMPLE) ಕುಟುಂಬ ಸಹಿತ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಸೋಮವಾರ ಸಿಗಂದೂರು ಶ್ರೀ ಚೌಡೇಶ್ವರಿ ದೇವ್ಥಾನಕ್ಕೆ ಭೇಟಿ ನೀಡಿದ್ದ ನ್ಯಾ. ನಾಗರತ್ನ ಅವರು ದೇವಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಇನ್ನು, ಶ್ರೀ ಚೌಡೇಶ್ವರಿ ದೇವಸ್ಥಾನದ ವತಿಯಿಂದ ನ್ಯಾ.ನಗರತ್ನ ಮತ್ತು ಅವರ ಕುಟುಂಬದವರನ್ನು ಸನ್ಮಾನಿಸಲಾಯಿತು. ಕ್ಷೇತ್ರದ ಧರ್ಮದರ್ಶಿ ಡಾ. ಎಸ್.ರಾಮಪ್ಪ, ಉಪ ವಿಭಾಗಾಧಿಕಾರಿ … Read more

ಜಿಂಕೆ ಕೊಂಬು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಸಂಚಾರಿ ದಳ ದಾಳಿ

Arrest News Graphics

SHIVAMOGGA LIVE NEWS | SAGARA| 15 ಜೂನ್ 2022 ಜಿಂಕೆ ಕೊಂಬು ಸಾಗಣೆ ಮಾಡುತ್ತಿದ್ದವರ ಮೇಲೆ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. DEER ಶಿವಮೊಗ್ಗದ ಹಾರನಹಳ್ಳಿಯ ಇಸ್ಮಾಯಿಲ್ ಸಿರಿಗೆರೆ ಮತ್ತು ನಯಾಜುಲ್ಲಾ ಆರೆಮನೆ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ ಎರಡು ಜಿಂಕೆ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. ಸಿರಿಗೆರೆ ರಸ್ತೆಯ ಆಯನೂರು ಕೆರೆ ಬಳಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ … Read more

ಮಾರಿಕಾಂಬ ದೇವಸ್ಥಾನ ವ್ಯವಸ್ಥಾಪನ ಸಮಿತಿ ವಿರುದ್ಧ ಅಹೋರಾತ್ರಿ ಧರಣಿಗೆ ನಿರ್ಧಾರ, ಕಾರಣವೇನು?

sagara graphics

SHIVAMOGGA LIVE NEWS | SAGARA| 15 ಜೂನ್ 2022 ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಸ್ಥಾನ ವ್ಯವಸ್ಥಾಪಕ ಸಮಿತಿ ವಿರುದ್ಧ ಆಹೋರಾತ್ರಿ ಧರಣಿ ನಡೆಸಲು ಮಾರಿಕಾಂಬಾ ಹಿತರಕ್ಷಣಾ ಸಮಿತಿ ನಿರ್ಧರಿಸಲಾಗಿದೆ. TEMPLE ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ.ಡಿ.ಆನಂದ್ ಅವರು, ಜೂ 20ರಂದು ಮಾರಿಕಾಂಬ ವ್ಯವಸ್ಥಾಪಕ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ ಅವರ ಮನೆ ಮುಂದೆ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ. ಜೂ.21ರಂದು ದೇವಸ್ಥಾನದ ಮುಂಭಾಗ ಧರಣಿ ನಡೆಯಲಿದೆ ಎಂದು ತಿಳಿಸಿದರು. ಸಮಿತಿಯ ಆಗ್ರಹ ಏನು? ಹಾಲಿ … Read more

‘ಇಲ್ಲಿ 33 ರೂ. ಊಟಕ್ಕೆ 190 ರೂ. ಬಿಲ್, ಸರ್ಕಾರಕ್ಕೆ ದೊಡ್ಡ ಲಾಸ್’

Sagara Government Hospital

SHIVAMOGGA LIVE NEWS | SAGARA| 15 ಜೂನ್ 2022 ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದೆ. ಇದರ ವಿರುದ್ಧ ಕೂಡಲೆ ತನಿಖೆ ನಡೆಸಬೇಕು ಎಂದು ಸಾಗರ ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು ಒತ್ತಾಯಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಬಾಬು ಅವರು, ಆಸ್ಪತ್ರೆಯಲ್ಲಿ 33 ರೂ.ಗೆ ಒದಗಿಸುತ್ತಿದ್ದ ಆಹಾರವನ್ನು ಈಗ 190 ರೂ.ಗೆ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ದೊಡ್ಡಮಟ್ಟದ ನಷ್ಟ ಉಂಟಾಗುತ್ತಿದೆ ಎಂದು ಆರೋಪಿಸಿದರು. FOOD ಅಡುಗೆ ಕೋಣೆ ಇದ್ದರೂ … Read more

ಸಾಗರದ ಸೈದೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ

Talaguppa Graphics

SHIVAMOGGA LIVE NEWS | SHIMOGA | 11 ಜೂನ್ 2022 ಸೈದೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಭೈರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ಭೈರಪ್ಪ ಅವರ ಹೊರತು ಉಳಿದ ಸದಸ್ಯರಾರು ನಾಮಪತ್ರ ಸಲ್ಲಿಸಲಿಲ್ಲ. ಹಾಗಾಗಿ ಭೈರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ತಡಗಳಲೆ ವಿನಯ ಗೌಡ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಇದನ್ನೂ ಓದಿ – ‘ಹೀಗೆ ಮಾಡಿದರಷ್ಟೆ ಮಾಜಿ … Read more

ಸಾಗರದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಶಾಸಕರ ಮೌನಕ್ಕೆ ಬೇಳೂರು ಆಕ್ರೋಶ

Beluru-Gopalakrishna-General-Image

SHIVAMOGGA LIVE NEWS | SAGARA | 9 ಜೂನ್ 2022 ಶಿಕ್ಷಕರ ಕೊರತೆಯಿಂದಾಗಿ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ಲಭಿಸುತ್ತಿಲ್ಲ. ಶಾಲೆಗಳಿಗೆ ಮೂಲ ಸೌಕರ್ಯವನ್ನು ಒದಗಿಸದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಶಾಲೆಗಳಲ್ಲಿ ತರಗತಿ ಆರಂಭವಾಗಿ ಒಂದು ತಿಂಗಳು ಕಳೆದರೂ ಶಿಕ್ಷಕರಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಆಪಾದಿಸಿದರು. ಕ್ಷೇತ್ರದ ಶಾಸಕರು ಮೌನವಾಗಿದ್ದಾರೆ ಇತ್ತೀಚೆಗೆ ಸುರಿದ … Read more