ತರಗತಿ ಬಹಿಷ್ಕರಿಸಿ ಸಾಗರ ಇಂದಿರಾ ಗಾಂಧಿ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

221221 Indira Gandhi College Students Protest at Sagara

ಶಿವಮೊಗ್ಗದ ಲೈವ್.ಕಾಂ | SAGARA NEWS |  22 ಡಿಸೆಂಬರ್ 2021 ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದೆ. ಅತಿಥಿ ಉಪನ್ಯಾಸಕರಿಂದಲೇ ಬಹುತೇಕ ಕಾಲೇಜುಗಳು ನಡೆಯುತ್ತಿದೆ. ಆದರೆ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ. ಇದರಿಂದ … Read more

‘ಸಿಗಂದೂರು 108’ ಆಂಬುಲೆನ್ಸ್ ಸಿಗದೆ ಮತ್ತೊಂದು ಸಾವು, 24 ಗಂಟೆಯಲ್ಲಿ ಹಾರಿ ಹೋಯ್ತು ಇಬ್ಬರ ಪ್ರಾಣ ಪಕ್ಷಿ

161221 Sigandur Launch Baby girl death

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಡಿಸೆಂಬರ್ 2021 ತುರ್ತು ಸಂದರ್ಭ ಆಂಬುಲೆನ್ಸ್ ಸಿಗದೆ ಮತ್ತೊಬ್ಬರು ಕೊನೆಯುಸಿರೆಳೆದಿದ್ದಾರೆ. ತುಮರಿ ಭಾಗದಲ್ಲಿ ಆಂಬುಲೆನ್ಸ್ ಇಲ್ಲದಿರುವುದರಿಂದ ಕಳೆದ 24 ಗಂಟೆ ಅವಧಿಯಲ್ಲಿ ಇಬ್ಬರು ಜೀವ ಕಳೆದುಕೊಂಡಂತಾಗಿದೆ. ಬೈಕ್ ಅಪಘಾತಕ್ಕೀಡಾಗಿ ತಲೆಗೆ ತೀವ್ರ ಪೆಟ್ಟಾಗಿದ್ದ ನಾರಾಯಣ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚಿಕಿತ್ಸೆ ಫಲಿಸದೆ ನಾರಾಯಣ ಅವರು ಸಂಜೆ ಮೃತಪಟ್ಟಿದ್ದಾರೆ. ಆಂಬುಲೆನ್ಸ್ ಸಿಗದೆ ನರಳಾಡಿದ್ದರು ನಾರಾಯಣ ಅವರು ಬುಧವಾರ  ರಾತ್ರಿ ಬೈಕ್’ನಲ್ಲಿ ತುಮರಿಯಿಂದ ಕಳಸವಳ್ಳಿಯಲ್ಲಿರುವ ಮನೆಗೆ ತೆರಳುತ್ತಿದ್ದರು. ಈ … Read more

ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ, ಬೆದರಿಕೆ, ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ, ಎಷ್ಟು ವರ್ಷ ಜೈಲು? ದಂಡವೆಷ್ಟು?

Sagara-Court-General-Image.jpg

ಶಿವಮೊಗ್ಗ ಲೈವ್.ಕಾಂ | SAGARA NEWS | 9 ಡಿಸೆಂಬರ್ 2021 ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. 2017ರಲ್ಲಿ ನಡೆದ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ಸಾಗರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಅನಿಲ್ ಅಲಿಯಾಸ್ ಅನಿಲ್ ಡಿಸೋಜಾ ವಿರುದ್ಧ ಅತ್ಯಾಚಾರ ಆರೋಪ ಸಾಬೀತಾದ ಹಿನ್ನೆಲೆ, ಇವತ್ತು ಶಿಕ್ಷೆ ಅವಧಿಯನ್ನು ಪ್ರಕಟಿಸಲಾಯಿತು. ಏನಿದು ಪ್ರಕರಣ? 2017ರ ಏಪ್ರಿಲ್ 17ರಂದು ಸಾಗರ ರಾಮನಗರದ ಅನಿಲ್ ಅಲಿಯಾಸ್ ಅನಿಲ್ ಡಿಸೋಜಾ … Read more

ಹಾವು ಕೊಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ಎಂಜಿನಿಯರ್’ಗಳು ಸೇರಿ ಮೂವರ ವಿರುದ್ಧ ಕೇಸ್

091221 Case Against Smart City Engineers for killing Snake

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಡಿಸೆಂಬರ್ 2021 ರಸ್ತೆ ಅಗಲೀಕರಣ ವೇಳೆ ನಾಗರಹಾವೊಂದನ್ನು ಸಾಯಿಸಿದ ಆರೋಪದಲ್ಲಿ ಶಿವಮೊಗ್ಗ ಸ್ಮಾರ್ಟ್‌ಸಿಟಿ ಇಂಜಿನಿಯರ್’ಗಳ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಶಂಕರ ವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಇಂಜಿನಿಯರ್’ಗಳು ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಮಾರ್ಟ್ ಸಿಟಿ ಇಂಜಿನಿಯರ್’ಗಳಾದ ಕೆ.ವಿ.ವಿಜಯಕುಮಾರ್, ರಾಜಕುಮಾರ್ ಮತ್ತು ಸಿಬ್ಬಂದಿ ನಾಗಪ್ಪ ಎಂಬುವವರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏನಿದು ಪ್ರಕರಣ? ಕಳೆದ ಭಾನುವಾರ ಸಾಗರ … Read more

ಸಾಗರದಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆಗೆ ಎಎಪಿ ಪ್ಲಾನ್, ಸಭೆಯಲ್ಲಿ ಮೂರು ಪ್ರಮಖ ನಿರ್ಧಾರ

081221 Aam Admi Party Meeting at Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 8 ಡಿಸೆಂಬರ್ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಾಗರ ತಾಲೂಕಿನಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಮ್ ಆದ್ಮಿ ಪಾರ್ಟಿ (ಎಎಪಿ) ನಿರ್ಧರಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಅಮೃತ್ ರಾಸ್ ತಿಳಿಸಿದ್ದಾರೆ. ಸಾಗರದ ಹೊಟೇಲ್ ಒಂದರಲ್ಲಿ ಪಕ್ಷದ ಪದಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ನಡೆಸಿದ ತಾಲೂಕು ಅಧ್ಯಕ್ಷ ಅಮೃತ್ ರಾಸ್, ನಂತರ ನಿರ್ಧಾರ ಪ್ರಟಿಸಿದರು. ಏನೆಲ್ಲ ಸಮಾಲೋಚನೆ ಮಾಡಲಾಯ್ತು? ನಿರ್ಧಾರ 1 … Read more

ಆನಂದಪುರ ಬಳಿ ಬಸ್ ಹತ್ತುವಾಗ ಕೆಳಗೆ ಬಿದ್ದು ವಿದ್ಯಾರ್ಥಿನಿಗೆ ಗಾಯ, ಸಾಗರದಲ್ಲಿ ಬಸ್ ತಡೆದು ಆಕ್ರೋಶ

071221 Students Protest Against Bus driver at sagara

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಡಿಸೆಂಬರ್ 2021 ವಿದ್ಯಾರ್ಥಿಗಳು ಹತ್ತುವಾಗ ಚಾಲಕ ಏಕಾಏಕಿ ಬಸನ್ನು ಮುಂದಕ್ಕೆ ಚಲಾಯಿಸಿದ್ದರಿಂದ ವಿದ್ಯಾರ್ಥಿನಿಯೊಬ್ಬಳು ಬಿದ್ದು ಗಾಯಗೊಂಡಿದ್ದಾಳೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ಹೇಗಾಯ್ತು ಘಟನೆ? ಶಿವಮೊಗ್ಗ – ಸಾಗರ ಕೆಎಸ್ಆರ್ ಟಿಸಿ ಬಸ್ ಹತ್ತುವಾಗ ಸ್ವಾತಿ ಎಂಬ ವಿದ್ಯಾರ್ಥಿನಿ ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ. ಆನಂದಪುರ ಸಮೀಪ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ಬಸ್ ಹತ್ತುವಾಗ ಚಾಲಕ ಬಸ್ ಮುಂದಕ್ಕೆ ಚಲಾಯಿಸಿದ್ದಾನೆ. ಆಯಾತಪ್ಪಿ ವಿದ್ಯಾರ್ಥಿನಿಯಬ್ಬಳು ಕೆಳಗೆ … Read more

ಸಾಗರದ ಹೆದ್ದಾರಿಯಲ್ಲಿ ಹಂಪ್’ಗಾಗಿ ವಿದ್ಯಾರ್ಥಿಗಳ ಆಗ್ರಹ

071221 Student Protest For Hump at NH in Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಡಿಸೆಂಬರ್ 2021 ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಶಾಲಾ, ಕಾಲೇಜು ಎದುರು ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನದಿಂದ ದಿನಕ್ಕೆ ಅಪಘಾತದ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಾಲಾ, ಕಾಲೇಜುಗಳಿಗೆ ಹೋಗಲು ರಸ್ತೆ ದಾಟಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದು … Read more

ತಾಳಗುಪ್ಪದಲ್ಲಿ ಅಪಘಾತ, ಬೈಕ್ ಸವಾರ ದುರ್ಮರಣ, ಮತ್ತೊಬ್ಬ ವ್ಯಕ್ತಿ ಸ್ಥಿತಿ ಗಂಭೀರ

Talaguppa Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಡಿಸೆಂಬರ್ 2021 ತಾಳಗುಪ್ಪದ ಬಲೆಗಾರು ಬಳಿ ಬೈಕ್’ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಒಬ್ಬ ಸವಾರ ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಮಧು (40) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬೈಕ್’ಗೆ ಅಪರಿಚತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಡಿಕ್ಕಿ ಹೊಡೆದ ವಾಹನದ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡಿದ್ದ ಬೈಕ್ ಸವಾರರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ … Read more

ಇಪ್ಪತ್ತು ನಿಮಿಷ ತಡವಾಗಿ ಹೊರಟ ರೈಲು, ಗೇಟ್ ಮುಂದೆ ಕಾದು ಕಾದು ಹೈರಾಣಾದ ವಾಹನ ಸವಾರರು

031221 Train Stopped at talaguppa for 20 minutest

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ತಾಳಗುಪ್ಪದಿಂದ ಶಿವಮೊಗ್ಗಕ್ಕೆ ಹೊರಟಿದ್ದ ರೈಲಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ರೈಲು ಸುಮಾರು 20 ನಿಮಿಷ ತಡವಾಗಿ ಹೊರಟಿದೆ. ತಾಂತ್ರಿಕ ದೋಷದಿಂದ ತಾಳಗುಪ್ಪ ನಿಲ್ದಾಣದಲ್ಲಿಯೇ ರೈಲು ನಿಂತಿತ್ತು. ಇದರಿಂದ ಪ್ರಯಾಣಿಕರಲ್ಲಿ ಗೊಂದಲ ನಿರ್ಮಾಣವಾಗಿತ್ತು. ಬೆಳಗ್ಗೆ 11.15ಕ್ಕೆ ತಾಳಗುಪ್ಪ – ಶಿವಮೊಗ್ಗ ಪ್ಯಾಸೆಂಜರ್ ರೈಲು ಸಂಚಾರ ಆರಂಭಿಸಬೇಕಿತ್ತು. ಸುಡು ಬಿಸಿಲಲ್ಲೇ ನಿಂತ ವಾಹನಗಳು ರೈಲು ಹೊರಡುವ ಸಮಯವಾದ್ದರಿಂದ ಪಕ್ಕದ ರಸ್ತೆಯಲ್ಲಿದ್ದ ಗೇಟ್ ಬಂದ್ ಮಾಡಲಾಗಿತ್ತು. ರೈಲಿನಲ್ಲಿ … Read more

ಮರದ ದಿಮ್ಮಿಗಳು ಉರುಳಿ ಬಿದ್ದು ಬಾಲಕಿಗೆ ಗಂಭೀರ ಗಾಯ, ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಡಿಸೆಂಬರ್ 2021 ಮರದ ದಿಮ್ಮಿಗಳು ದಿಢೀರ್ ಉರುಳಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಎಂಪಿಎಂ ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಹುಲಿದೇವರಬನದ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಮರದ ದಿಮ್ಮಿಗಳು ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕಿ ಕೊನೆ ಉಸಿರೆಳೆದಿದ್ದಾಳೆ. ಶ್ರಾವಣಿ (6) ಮೃತ ಬಾಲಕಿ. ಧಾರವಾಡ ಜಿಲ್ಲೆಯ ಕಲಘಟಗಿಯ ರವಿ ಮತ್ತು … Read more