ಕಾರು ಅಪಘಾತ, ಚಾಲಕ ಸ್ಥಳದಲ್ಲೇ ಸಾವು, ಹತ್ತು ಮಹಿಳೆಯರಿಗೆ ಗಾಯ

Photopea 24 Oct 2021 1 32 44 pm

ಶಿವಮೊಗ್ಗ ಲೈವ್.ಕಾಂ | SAGARA NEWS | 24 OCT 2021 ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ‌ ನಿಂತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಹತ್ತು ಮಹಿಳೆಯರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಸುಳಗೋಡಿನಲ್ಲಿ ಘಟನೆ ಸಂಭವಿಸಿದೆ. ಗಾರ್ಮೆಂಟ್ಸ್ ಒಂದಕ್ಕೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದಾಗ ಅಪಘಾತವಾಗಿದೆ. ಹೇಗಾಯ್ತು ಅಪಘಾತ? ಕೆಳದಿಪುರ ಗ್ರಾಮದಿಂದ ಮಹಿಳೆಯರನ್ನು ಗಾರ್ಮೆಂಟ್ಸ್‌ಗೆ ಬಿಡಲು ಕಾರು ತೆರಳುತ್ತಿತ್ತು‌‌. ಸುಳಗೋಡು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಬದಿ ಬಸ್ಸಿಗಾಗಿ ಕಾದು … Read more

ದೇಗುಲದ ಮುಂದೆ ಅನುಚಿತ ವರ್ತನೆ, ಧಾರ್ಮಿಕ ಭಾವನೆಗೆ ಧಕ್ಕೆ, ಎರಡು ಆಟೋ, ನಾಲ್ವರು ಯುವಕರ ವಿರುದ್ಧ ಕೇಸ್

211021 Auto Drivers at Sagara Aghoreshwara Temple

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಅಕ್ಟೋಬರ್ 2021 ಈದ್ ಮಿಲಾದ್ ಸಂದರ್ಭ ಮುಸ್ಲಿಂ ಯುವಕರ ಅನುಚಿತ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಗರ ತಾಲೂಕು ಇಕ್ಕೇರಿ ಅಘೋರೇಶ್ವರ ದೇವಸ್ಥಾನದ ಮುಂದೆ, ಎರಡು ಆಟೋದಲ್ಲಿ ಬಂದ ಯುವಕರ ಗುಂಪು, ಭಕ್ತರಿಗೆ ಅಡ್ಡಿಪಡಿಸಿದ್ದಾರೆ. ಆಟೋಗಳ ಮೇಲೆ ಧ್ವಜಗಳನ್ನು ಕಟ್ಟಿಕೊಂಡು, ಘೋಷಣೆಗಳನ್ನು ಕೂಗುತ್ತ ಅಡ್ಡಾದಿಡ್ಡಿ ಚಲಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೇವಸ್ಥಾನದ ಪಕ್ಕದ ಖಾಲಿ ಜಾಗದಲ್ಲಿ ಆಟೋಗಳನ್ನು ಅಜಾಗರೂಕವಾಗಿ … Read more

ವಿಷ ಕುಡಿದು ಯುವಕ ಸಾವು ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್, 5 ತಿಂಗಳ ಬಳಿಕ ಬಯಲಾಯ್ತು ರಹಸ್ಯ, ಮನೆಯಲ್ಲೇ ಇದ್ದ ಹಂತಕ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021 ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದಕ್ಕೆ ಐದು ತಿಂಗಳ ಬಳಿಕ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ ಮೃತ ಯುವಕನ ಅಣ್ಣನನ್ನೇ ಪೊಲೀಸರು ಬಂಧಿಸಿದ್ದಾರೆ. ಸಾಗರ ತಾಲೂಕು ಅಂದಾಸುರ ಗ್ರಾಮದ ಹರೀಶ್ (29) ವಿಷ ಸೇವಿಸಿ ಮೃತಪಟ್ಟಿದ್ದ ಎಂದು ಹೇಳಲಾಗಿತ್ತು. ಆದರೆ ಸಾವಿನ ಕುರಿತು ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಅಣ್ಣನಿಂದಲೇ ತಮ್ಮ ಹತ್ಯೆಯಾಗಿರುವುದು ತಿಳಿದು ಬಂದಿದೆ. ಏನಿದು ಪ್ರಕರಣ? ಹೇಗಾಯ್ತು … Read more

ಮತಾಂತರ ಆರೋಪ, ಮನೆ ಮುಂದೆ ಜಮಾಯಿಸಿದ ಜನ, ಸಾಗರದ ಬಡಾವಣೆಯೊಂದರಲ್ಲಿ ಕೆಲಕಾಲ ಗೊಂದಲ

171021 Hindu Organizations Irk Over Christian Missioneries

ಶಿವಮೊಗ್ಗ ಲೈವ್.ಕಾಂ | SAGARA NEWS | 17 ಅಕ್ಟೋಬರ್ 2021 ಮನೆಯ ಸದಸ್ಯರು ಮತಾಂತರವಾಗುತ್ತಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಮನೆ ಮುಂದೆ ಜಮಾಯಿಸಿದ್ದರು. ಇದರಿಂದ ಕೆಲ ಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾಗರ ಪಟ್ಟಣದ ಗೋಪಾಲಗೌಡ ನಗರದ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು, ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದರು. ಮನೆಯವರು ಶಿಲುಬೆ ಧರಿಸಿ, ಮರಿಯಾ ಮಾತೆಯ ಪೂಜೆ ಮಾಡುತ್ತಿದ್ದಾರೆ. ಮೆಷಿನರಿಗಳು ಹಣದಾಸೆಗೆ ಹಿಂದೂಗಳ … Read more

ನಟ ಯಶ್ ನೇತೃತ್ವದ ಸಂಸ್ಥೆಯಿಂದ ಶಿವಮೊಗ್ಗ ಜಿಲ್ಲೆಯ ಪುರಾತನ ಕಲ್ಯಾಣಿಯ ಪುನರುಜ್ಜೀವನ, ಇವತ್ತಿಂದ ಕೆಲಸ ಶುರು

171021 Yashomarga Kalyani cleaning at Anandapuram

ಶಿವಮೊಗ್ಗ ಲೈವ್.ಕಾಂ | SAGARA NEWS | 17 ಅಕ್ಟೋಬರ್ 2021 ರಾಕಿಂಗ್ ಸ್ಟಾರ್ ಯಶ್ ನೇತೃತ್ವದ ಯಶೋಮಾರ್ಗ ಸಂಸ್ಥೆ ವತಿಯಿಂದ ಶಿವಮೊಗ್ಗ ಜಿಲ್ಲೆಯ ಪುರಾತನ ಕೊಳವೊಂದರ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸಾಗರ ತಾಲೂಕು ಆನಂದಪುರದಲ್ಲಿರುವ ಕಲ್ಯಾಣಿ ಚಂಪಕ ಸರಸ್ಸುವನ್ನು ಪುನರುಜ್ಜೀವನಗೊಳಿಸಲಾಗುತ್ತಿದೆ. ಹೈದರಾಬಾದ್ ಮೂಲದ ಫ್ರೀಡಂ ಆಯಿಲ್ ಅಸೋಸಿಯೇಷನ್ ನೇತೃತ್ವದಲ್ಲಿ ಈ ಕಾರ್ಯ ಆರಂಭವಾಗಿದೆ. ಜಲ ತಜ್ಞ ಶಿವಾನಂದ ಕಳವೆ ಅವರು ಕಲ್ಯಾಣಿ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭ, ಅಖಿಲ ಭಾರತ ಯಶ್ … Read more

ಶರಾವತಿ ಹಿನ್ನೀರು ಭಾಗದ ನೆಟ್ ವರ್ಕ್ ಹೋರಾಟ ಮತ್ತಷ್ಟು ತೀವ್ರ

130721 Kudaruru Village No Protest 1

ಶಿವಮೊಗ್ಗ ಲೈವ್.ಕಾಂ | SAGARA NEWS | 01 ಅಕ್ಟೋಬರ್ 2021 ಮೊಬೈಲ್ ನೆಟ್ ವರ್ಕ್’ಗಾಗಿ ನಡೆಯುತ್ತಿರುವ ಹೋರಾಟ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಗಾಂಧಿ ಜಯಂತಿಯಂದು ಪಾದಯಾತ್ರೆ ಮತ್ತು ರಸ್ತೆ ತಡೆ ಮಾಡಲು ಜನರು ನಿರ್ಧರಿಸಿದ್ದಾರೆ ಸಾಗರ ತಾಲೂಕು ಶರಾವತಿ ಹಿನ್ನೀರು ಪ್ರದೇಶದ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿನಕಾರು, ಕಾರಣಿ, ಹಾಳಸಸಿ ಸೇರಿದಂತೆ ಸುತ್ತಮುತ್ತ ಪ್ರದೇಶದಲ್ಲಿ ಮೊಬೈಲ್ ನೆಟ್ ವರ್ಕ್ ಮರೀಚಿಕೆಯಾಗಿದೆ. ಇದನ್ನು ಓದಿ | ನೋ ನೆಟ್​​ವರ್ಕ್​, ನೋ ವೋಟಿಂಗ್, ಗ್ರಾಮಸ್ಥರಿಂದ ಜಿಲ್ಲಾ, ತಾಲೂಕು ಪಂಚಾಯಿತಿ … Read more

ಆವಿನಹಳ್ಳಿ ಬಳಿ ಯುವಕ ವಶಕ್ಕೆ, ವಿಚಾರಣೆ ವೇಳೆ ಬಾಯಿಬಿಟ್ಟ ಲಕ್ಷ ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ಹಣದ ಕಥೆ

300921 sagara rural thief arrest

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ಹಳ್ಳಿಗಳಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ಈತನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆವಿನಹಳ್ಳಿ ಬಳಿ ಅನುಮಾನಾಸ್ಪದವಾಗಿ ಕಂಡ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮನೆಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ. ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಬಂಧಿತ ಯುವಕನಿಂದ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು, ನಗದು ಮತ್ತು ಬೈಕ್ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ವಸ್ತುಗಳ … Read more

ಸಿಗಂದೂರು, ಜೋಗ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಸಾಗರದ ಲಾಡ್ಜ್’ನಲ್ಲಿ ನೇಣಿಗೆ ಶರಣು

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021 ಜೋಗ, ಸಿಗಂದೂರು, ನೀನಾಸಂ ಪ್ರವಾಸಕ್ಕೆಂದು ಬಂದಿದ್ದ ಯುವಕರಿಬ್ಬರು ಸಾಗರದ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಯುವಕರಿಬ್ಬರು ಕೊಠಡಿ ಪಡೆದುಕೊಂಡಿದ್ದರು. ಸೆಪ್ಟೆಂಬರ್ 24ರಂದು ಯುವಕರು ರೂಂ ಬುಕ್ ಮಾಡಿಕೊಂಡಿದ್ದರು. ಬಾಗಲಕೋಟೆಯಿಂದ ಬಂದಿದ್ದರು ಯುವಕರಿಬ್ಬರು ಬಾಗಲಕೋಟೆಯ ಬನಹಟ್ಟಿ ನಗರದವರು. ಇವರನ್ನು ಸಂತೋಷ್ ಅಡವಿನ್ನವರ (23), ಹನುಮಂತ ಅಲಗೂರು (28) ನೇಣಿಗೆ ಶರಣಾದವರು. ಸೆಪ್ಟೆಂಬರ್ 24ರಂದು ಸಾಗರಕ್ಕೆ ಬಂದಿದ್ದ … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಗೆ ಬೆದರಿಕೆ, ಹಣ ಕಿತ್ತುಕೊಂಡು ಪರಾರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಬೈಕ್’ನಲ್ಲಿ ಡ್ರಾಪ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಹೆದರಿಸಿದ ಯುವಕರು 20 ಸಾವಿರ ರೂ. ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ರಾಜು ಎಂಬುವವರು ಹಣ ಕಳೆದುಕೊಂಡಿದ್ದಾರೆ. ಬೈಕ್ ಕೀ ಹುಡುಕಲು ಹೋಗಿದ್ದಾಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೇಗಾಯ್ತು ದರೋಡೆ? ಗಾಡಿಕೊಪ್ಪ ನಿವಾಸಿ ರಾಜು ಅವರು ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಅವರ ಬೈಕ್’ನ ಕೀ … Read more

ಸಾಗರದಲ್ಲಿ ಮಹಿಳೆಯ ಮತಾಂತರಕ್ಕೆ ಯತ್ನಿಸಿದ ಇಬ್ಬರ ವಿರುದ್ಧ ಕೇಸ್

Talaguppa Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 23 ಸೆಪ್ಟೆಂಬರ್ 2021 ಮತಾಂತರ ನಿಷೇಧ ಕಾಯ್ದೆ ರೂಪಿಸುವ ಕುರಿತು ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ. ಈ ನಡುವೆ ಮಹಿಳೆಯೊಬ್ಬರನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಲಾಗಿದೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಾಗರ ತಾಲೂಕು ತಾಳಗುಪ್ಪದಲ್ಲಿ ಮಹಿಳೆಯೊಬ್ಬರನ್ನು ಮತಾಂತರ ಮಾಡುವ ಪ್ರಯತ್ನವಾಗಿದೆ. ಆಕ್ರೋಶಗೊಂಡ ಮಹಿಳೆ ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಷ್ಟೆ ಅಲ್ಲ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಏನಿದು ಪ್ರಕರಣ? … Read more