ಮನೆಯ ಹಿಂಬಾಗಿಲ ಬೀಗ ಮುರಿದು ಅರ್ಧ ಗಂಟೆಯೊಳಗೆ ಹಣ, ಚಿನ್ನಾಭರಣ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಸೆಪ್ಟೆಂಬರ್ 2021 ಮನೆಯ ಹಿಂದಿನ ಬಾಗಿಲಿಗೆ ಹಾಕಿದ್ದ ಬೀಗ ಒಡೆದು, ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಸಾಗರ ತಾಲೂಕು ಗೆಣಸಿನಕುಣಿ ಗ್ರಾಮದ ಮಂಜುನಾಥ ಜೋಗಿ ಅವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಲೆಯಲ್ಲಿ ಘಟನೆ ಸಂಭವಿಸಿದೆ. ಅರ್ಧ ಗಂಟೆಯಲ್ಲಿ ಕಳ್ಳತನ ಮಂಜುನಾಥ ಜೋಗಿ ಅವರ ಮಗ ಶಿವಮೊಗ್ಗದಲ್ಲಿ ಸೈಟ್ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಗರಕ್ಕೆ ಬಂದ ಮಗನನ್ನು ಕರೆತರಲು ಮಂಜುನಾಥ … Read more

ಬಸ್ ನಿಲ್ದಾಣದ ಬಳಿ ಮಾತಿನ ಚಕಮಕಿ, ಕೈ ಕೈ ಮಿಲಾಯಿಸಿದ ಯುವಕರ ವಿರುದ್ಧ ಕೇಸ್

Talaguppa Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಸೆಪ್ಟೆಂಬರ್ 2021 ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಯುವಕರ ಗುಂಪಿನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕ್ಷುಲಕ ವಿಚಾರಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಯುವಕರು ಕೈ ಕೈ ಮಿಲಾಯಿಸಿದ್ದರು. ಸಾಗರ ತಾಲೂಕು ತಾಳಗುಪ್ಪ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಯುವಕರು ಪರಾರಿಯಾಗಿದ್ದಾರೆ. ಓಡಿ ಹೋದ ಯುವಕರ ಕುರಿತು ಮಾಹಿತಿ ಕಲೆ ಹಾಕಿದ ಪೊಲೀಸರು, ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೌಶಿಕ್ … Read more

ಕಾಯಿ ಸುಲಿಯುತ್ತಿದ್ದ ಯುವಕನತ್ತ ಫೈರಿಂಗ್, ಕಾಲ ಬಳಿ ಬಂದು ಬಿದ್ದವು ಎರಡು ಬುಲೆಟ್, ಹತ್ಯೆಗೆ ನಡೆದಿತ್ತಾ ಸಂಚು?

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಸೆಪ್ಟೆಂಬರ್ 2021 ಮನೆ ಆವರಣದಲ್ಲಿ ತೆಂಗಿನ ಕಾಯಿ ಸುಲಿಯುತ್ತಿದ್ದ ಯುವಕನನ್ನು ಗುರಿಯಾಗಿಸಿಕೊಂಡು ಏರ್ ಗನ್’ನೊಂದ ಶೂಟ್ ಮಾಡಲಾಗಿದೆ. ಎರಡು ಭಾರಿ ಫೈರಿಂಗ್ ಮಾಡಲಾಗಿದೆ. ಗಣೇಶ ಚತುರ್ಥಿಯ ಹಿಂದಿನ ದಿನ ಘಟನೆ ಸಂಭವಿಸಿದೆ. ಸಾಗರ ತಾಲೂಕು ಸುಳಗೋಡಿನ ಮುಂಬಾಳು ಗ್ರಾಮದ ಗಿರೀಶ್ ಅವರ ಪುತ್ರ ದೀಪಕ್ ಮೇಲೆ ಗುಂಡು ಹಾರಿಸಲಾಗಿದೆ. ಹೇಗಾಯ್ತು ಘಟನೆ? ಗಣೇಶ ಹಬ್ಬದ ಹಿಂದಿನ ದಿನ ಸಂಜೆ ಗಿರೀಶ್ ಅವರು ಗಣೇಶ ಮೂರ್ತಿ ತರಲು ತೆರಳಿದ್ದರು. … Read more

ಶಿವಮೊಗ್ಗದಲ್ಲಿ ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆ, ಹೆಚ್ಚುತ್ತಿದೆ ಆರೋಗ್ಯ ಸಮಸ್ಯೆ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕೆಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇನ್ನು ಕೆಲವು ಕಡೆ ಮಳೆ, ಬಿಸಿಲಿನ ಕಣ್ಣಾ ಮುಚ್ಚಾಲೆ ಮುಂದುವರೆದಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 35.03 ಮಿ.ಮೀ ಮಳೆಯಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 9.60 ಮಿ.ಮೀ, ಭದ್ರಾವತಿಯಲ್ಲಿ 7.20 ಮಿ.ಮೀ, ತೀರ್ಥಹಳ್ಳಿಯಲ್ಲಿ 25. 80 ಮಿ.ಮೀ, ಸಾಗರದಲ್ಲಿ 17.40 ಮಿ.ಮೀ, ಶಿಕಾರಿಪುರದಲ್ಲಿ 7.40 ಮಿ.ಮೀ, … Read more

ಮೆಸ್ಕಾಂ ಲೈನ್’ಮ್ಯಾನ್’ಗೆ ಕರೆಂಟ್ ಶಾಕ್, BSNL ಟವರ್ ನಿರ್ವಾಹಕನ ವಿರುದ್ಧ ಕೇಸ್, ಕಾರಣವೇನು?

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಸೆಪ್ಟೆಂಬರ್ 2021 ವಿದ್ಯುತ್ ಶಾಕ್’ಗೆ ಒಳಗಾಗಿ ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು, ಗಾಯಗೊಂಡಿದ್ದಾರೆ. ಬಿಎಸ್ಎನ್ಎಲ್ ಟವರ್ ಆಪರೇಟರ್ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಲಿದೇವರಬನದ ರವಿಕಾಂತ್ (24) ಗಾಯಗೊಂಡ ಲೈನ್ ಮ್ಯಾನ್. ಸಾಗರ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಏನಿದು ಘಟನೆ? ಶಾಕ್’ಗೆ ಕಾರಣವೇನು? ಸಾಗರದ ಆವಿನಹಳ್ಳಿ ಫೀಡರ್’ನಲ್ಲಿ ನಿರ್ವಹಣೆ ಇರುವುದರಿಂದ ವಿದ್ಯುತ್ ಕಡಿತಗೊಳಿಸುವುದಾಗಿ ಮೆಸ್ಕಾಂ ಪ್ರಕಟಣೆ … Read more

33 ಲಕ್ಷ ರೂ. ಸರ್ಕಾರದ ನೆರವು ತಿರಸ್ಕರಿಸಿ ಸಾಹಸಕ್ಕೆ ಕೈ ಹಾಕಿದ ಚರಕದ ಮಹಿಳೆಯರು

050921 Charaka Women about Exhibition in Shimoga

ಶಿವಮೊಗ್ಗ ಲೈವ್.ಕಾಂ |SHIMOGA / SAGARA NEWS | 5 ಸೆಪ್ಟೆಂಬರ್ 2021 ಮೂರು ವರ್ಷವಾದರೂ ಸರ್ಕಾರ ಘೋಷಿಸಿದ ಲಕ್ಷಾಂತರ ರೂಪಾಯಿ ಅನುದಾನ ಕೈ ಸೇರಲಿಲ್ಲ. ಹಾಗಾಗಿ ಆ ದುಡ್ಡನ್ನೆ ತಿರಸ್ಕರಿಸಿದ ಮಹಿಳೆಯರು ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದ್ದಾರೆ. ತಾವು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಸಿದ್ಧಪಡಿಸಿಕೊಂಡಿದ್ದಾರೆ. ಮಹಿಳೆಯರ ಈ ನಡೆ ಅಧಿಕಾರಿಗಳ ಜಾಣ ಕುರುಡುತನಕ್ಕೆ ತಪರಾಕಿ ಕೊಟ್ಟಂತಾಗಿದೆ. ಸಾಗರ ತಾಲೂಕು ಭೀಮನಕೋಣೆಯ ಚರಕ ಮಹಿಳಾ ವಿವಿದೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ‘ಪವಿತ್ರ … Read more

ಸುರಕ್ಷಿತವಾಗಿ ದಡ ಸೇರಿಸುತ್ತಿದ್ದ ಲಾಂಚ್ ಸಿಬ್ಬಂದಿ ಬದುಕು ನಡು ನೀರಿಗೆ, ಕಾರಣವೇನು?

Sigandur-Launch-General-Image

ಶಿವಮೊಗ್ಗ ಲೈವ್.ಕಾಂ | TUMARI NEWS | 4 ಸೆಪ್ಟೆಂಬರ್ 2021 ಶರಾವತಿ ಹಿನ್ನೀರು ಭಾಗದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರನ್ನು ಸುರಕ್ಷಿತವಾಗಿ ದಡ ತಲುಪಿಸುವ ಲಾಂಚ್ ಸಿಬ್ಬಂದಿ ಬದುಕು, ನಡು ನೀರಿಗೆ ಬಂದು ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ನಿಧಾನಗತಿಯಿಂದಾಗಿ ಲಾಂಚ್ ಸಿಬ್ಬಂದಿ ಒಂಭತ್ತು ತಿಂಗಳಿಂದ ಸಂಬಳವಿಲ್ಲದೆ ಪರಿತಪಿಸುತ್ತಿದ್ದಾರೆ. ಇದಿಷ್ಟೆ ಅಲ್ಲ, ಭವಿಷ್ಯದ ಕುರಿತು ಆತಂಕ ಎದುರಾಗಿದೆ. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಬರುವ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುವುದು ಶರಾವತಿ ಹಿನ್ನೀರಿನ ಲಾಂಚ್’ಗಳು. ಅಂಬಾರಗೋಡ್ಲು – ಕಳಸವಳ್ಳಿ … Read more

ಸಾಗರದ ಶ್ರೀಗಂಧ ಕೋಠಿಯಲ್ಲಿ ವಾಚರ್ ಕೊಲೆ ಕೇಸ್’ನ ಮತ್ತಿಬ್ಬರು ಆರೋಪಿಗಳು ಮೈಸೂರಿನಲ್ಲಿ ಅರೆಸ್ಟ್

Arrest News Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 29 ಆಗಸ್ಟ್ 2021 ಸಾಗರ: ಅರಣ್ಯ ಇಲಾಖೆ ವಾಚರ್ ಕೊಲೆ ಪ್ರಕರಣದ ಉಳಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸಾಗರ ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನಲ್ಲಿ ರಿಯಾಜ್ ಪಾಷಾ, ಸೈಯದ್ ಆಬಿದ್‌ನನ್ನು ಬಂಧಿಸಿದ್ದಾರೆ. ಸಾಗರದ ಅರಣ್ಯ ಇಲಾಖೆಯ ಶ್ರೀಗಂಧ ಕೋಠಿಯ ಕಾವಲು ಕಾಯುತ್ತಿದ್ದ ವಾಚರ್ ನಾಗರಾಜ್ ಅವರನ್ನು ಶೀಗಂಧ ಚೋರರು 2020ರ ಫೆಬವರಿ 7 ರಂದು ಕೊಲೆ ಮಾಡಿ ಶ್ರೀಗಂಧ ದೋಚಿಕೊಂಡು ಪರಾರಿಯಾಗಿದ್ದರು. ಈ … Read more

ತಿರುವಿನಲ್ಲಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ

KARGAL-SAGARA-NEWS-1.jpg

ಶಿವಮೊಗ್ಗ ಲೈವ್.ಕಾಂ | KARGAL NEWS | 29 ಆಗಸ್ಟ್ 2021 ಕಾರು ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಕಾರ್ಗಲ್ ಸಮೀಪದ ನಾಗವಳ್ಳಿಯ ಹೆರೋಡಿ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು ಓರ್ವನಿಗೆ ಗಂಭೀರವಾಗಿ ಪೆಟ್ಟಾಗಿದೆ. ಹುಬ್ಬಳ್ಳಿಯ ಪವನ್ (40) ಗಾಯಗೊಂಡವ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಸ್ ಭಟ್ಕಳ ಮಾರ್ಗವಾಗಿ ಸಾಗರಕ್ಕೆ ಹಾಗೂ ಕಾರು ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತಿತ್ತು. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ … Read more

ಸಿಗಂದೂರು ಸೇತುವೆ ಕಾಮಗಾರಿ ಸ್ಥಳಕ್ಕೆ ಸಚಿವರ ಭೇಟಿ, ಯಾವಾಗ ರೆಡಿಯಾಗುತ್ತೆ? ಈಗೆಷ್ಟಾಗಿದೆ ಕೆಲಸ?

Siganduru Bridge Plan 1

ಶಿವಮೊಗ್ಗ ಲೈವ್.ಕಾಂ | SAGARA NEWS | 26 ಆಗಸ್ಟ್ 2021 ಶರಾವತಿ ಹಿನ್ನೀರಿನಲ್ಲಿ ನಿರ್ಮಿಸುತ್ತಿರುವ ಸಿಗಂದೂರು ಸೇತುವೆ 2023ಕ್ಕೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಕಳಸವಳ್ಳಿ- ಅಂಬಾರಗೊಡ್ಲುಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ ಲಾಂಚ್‌ನಲ್ಲಿ ಸಂಚರಿಸಿ ಸೇತುವೆ ಕಾಮಗಾರಿ ಪರಿಶೀಲಿಸಿದರು. ಈಗಾಗಲೇ ಶೇ.30ರಷ್ಟು ಕಾಮಗಾರಿ ಪೂರ್ಣವಾಗಿದ್ದು ಈ ಸೇತುವೆ ಮೂಲಕ ಶರಾವತಿ ಕಣಿವೆ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣ ಗೊಳಿಸುವಂತೆ ಇಂಜಿನಿಯರ್‌ಗಳಿಗೆ … Read more