ಅನ್ನ ಮಾಡುವ ವಿಚಾರದಲ್ಲಿ ಜಗಳ, ಬಿಸಿ ಬಿಸಿ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದ ಸೊಸೆ

ಶಿವಮೊಗ್ಗ ಲೈವ್.ಕಾಂ | SAGARA NEWS | 24 ಆಗಸ್ಟ್ 2021 ಅನ್ನ ಮಾಡುವ ವಿಚಾರವಾಗಿ ಅತ್ತೆ, ಸೊಸೆ ಮಧ್ಯೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಸೊಸೆ ಬಿಸಿ ಬಿಸಿ ಅನ್ನದ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದಿದ್ದಾಳೆ. ಸುಟ್ಟ ಗಾಯಗಳಿಂದಾಗಿ ಅತ್ತೆ ಆಸ್ಪತ್ರೆ ಸೇರಿದ್ದು, ಸೊಸೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಾಗರ ತಾಲೂಕು ಮುಳಕೇರಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಪಾರ್ವತಮ್ಮ (58) ಅವರು ಸುಟ್ಟ ಗಾಯಗಳಿಂದಾಗಿ ಸಾಗರ … Read more

ಮೆಗ್ಗಾನ್ ಆಸ್ಪತ್ರೆ ಮುಂಭಾಗ ಬೊಲೆರೋ ಪಲ್ಟಿ, ಗಾಯಾಳುಗಳನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

210821 Bolero Accident at sagara road near mc gann hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2021 ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ತರಕಾರಿ ತುಂಬಿದ್ದ ವಾಹನ ಪಲ್ಟಿಯಾಗಿದೆ. ವಾಹನದ ಅಡಿಗೆ ಸಿಲುಕಿದ್ದ ಪಾದಚಾರಿ ಮತ್ತು ವಾಹನದಲ್ಲಿದವರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೆಗ್ಗಾನ್ ಆಸ್ಪತ್ರೆ ಮುಂಭಾಗ ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಅಗ್ನಿಶಾಮಕ ಠಾಣೆ ಬಳಿ ಅಪಘಾತವಾಗಿದ್ದು, ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ಅಪಘಾತಕ್ಕೀಡಾದವರನ್ನು ರಕ್ಷಿಸಿದ್ದಾರೆ. ಹೇಗಾಯ್ತು ಅಪಘಾತ? ಗುರುವಾರ ರಾತ್ರಿ ಬೊಲೆರೊ ಪಿಕಪ್ ವಾಹನ ತರಕಾರಿ ತುಂಬಿಕೊಂಡು ಶಿವಮೊಗ್ಗ ಎಪಿಎಂಸಿ ಕಡೆಗೆ … Read more

BREAKING NEWS | ಜೋಗ ಜಲಪಾತದಲ್ಲಿ ಅಧಿಕಾರಿಗಳ ದಾಳಿ, ಹೋಂ ಗಾರ್ಡ್’ಗಳು ಸೇರಿ ಏಳು ಮಂದಿ ವಿರುದ್ಧ ಕೇಸ್

JOG FALLS GENERAL IMAGE

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಆಗಸ್ಟ್ 2021 ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಜೋಗ ಜಲಪಾತದ ಮೇಲೆ ಪೊಲೀಸರ ವಿಶೇಷ ತಂಡ ದಾಳಿ ನಡೆಸಿದೆ. ಕರೋನ ನಿಯಮ ಉಲ್ಲಂಘಿಸಿ ಪ್ರವಾಸಿಗರನ್ನು ಜಲಪಾತ ವೀಕ್ಷಣೆಗೆ ಬಿಟ್ಟ ಆರೋಪದಡಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ಪೈಕಿ ಮೂವರು ಹೋಂ ಗಾರ್ಡ್ ಸಿಬ್ಬಂದಿಗಳಿದ್ದಾರೆ. ಜೋಗ ಜಲಪಾತ ವೀಕ್ಷಣೆಗೆ ಬರುವವರಿಗೆ RTPCR ನೆಗೆಟಿವ್ ವರದಿ ಅಥವಾ ಎರಡನೇ ಡೋಸ್ ಲಸಿಕೆ ಪಡೆದ ವರದಿ ಕಡ್ಡಾಯಗೊಳಿಸಲಾಗಿದೆ. ಈ … Read more

ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕ್’ಗೆ ಹಿಂದಿನಿಂದ ಕಾರು ಡಿಕ್ಕಿ, ಗಂಡ ಸಾವು, ಪತ್ನಿಗೆ ಗಾಯ

050821 Bike Accident Near Sagara City 1

ಶಿವಮೊಗ್ಗ ಲೈವ್.ಕಾಂ | SAGARA NEWS | 5 ಆಗಸ್ಟ್ 2021 ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತ್ನಿಗೆ ಗಾಯವಾಗಿದ್ದು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿ.ಹೆಚ್.ರಸ್ತೆಯ ಬೃಂಗಿ ಮಠದ ಸಮೀಪ ಘಟನೆ ಸಂಭವಿಸಿದೆ. ಬೈಕ್ ಸವಾರ ನರೇಂದ್ರ (38) ಗಂಭೀರ ಗಾಯಗೊಂಡು ಮೃತರಾಗಿದ್ದಾರೆ. ಅವರ ಪತ್ನಿ ರಾಜೇಶ್ವರಿ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಹಿಂದಿನಿಂದ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿಯಾಗಿದೆ. … Read more

ತಾಳಗುಪ್ಪದಲ್ಲಿ ಮೂವರಿಗೆ ಕರೋನ ಸೋಂಕು, ಹೋಂ ಕ್ವಾರಂಟೈನ್

Talaguppa Graphics

ಶಿವಮೊಗ್ಗ ಲೈವ್.ಕಾಂ | TALAGUPPA NEWS | 3 ಆಗಸ್ಟ್ 2021 ತಾಳಗುಪ್ಪದಲ್ಲಿ ಮತ್ತೆ ಕರೋನ ಭೀತಿ ಎದುರಾಗಿದೆ. ಇಲ್ಲಿನ ಮೂವರಿಗೆ ಕರೋನ ಸೋಂಕು ತಗುಲಿದ್ದು, ಹೋಂ ಕ್ವಾರಂಟೈನ್ ಮಾಡಲಾಗಿದೆ. ರಂಗನಾಥ ಕಾಲೋನಿಯ ಮೂವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಹೋಂ ಕ್ವಾರಂಟ್ನಗೆ ಸೂಚಿಸಲಾಗಿದೆ. ಕಳೆದೊಂದು ತಿಂಗಳಿಂದ ತಾಳಗುಪ್ಪದಲ್ಲಿ ಸೋಂಕು ಕಣ್ಮರೆಯಾಗಿತ್ತು. ಹಾಗಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಮೂರನೆ ಅಲೆ ಕುರಿತ ಚರ್ಚೆ ನಡುವೆ ಸ್ಥಳೀಯರಿಗೆ ಸೋಂಕು ತಗುಲಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. (ಶಿವಮೊಗ್ಗ ಲೈವ್.ಕಾಂ … Read more

ಲಿಂಗನಮಕ್ಕಿ ಜಲಾಶಯದ ಒಂದು ಗೇಟ್ನಿಂದ ನೀರು ಹೊರಕ್ಕೆ, ಶರಾವತಿ ನದಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ

020821 Water Released From Linganamakki 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಆಗಸ್ಟ್ 2021 ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಇವತ್ತು ಶರಾವತಿಗೆ ನದಿಗೆ ಬಾಗಿನ ಅರ್ಪಿಸಿ, ಗೇಟ್ ಮೂಲಕ ಸಾಂಪ್ರದಾಯಿಕವಾಗಿ ನೀರು ಹೊರಗೆ ಬಿಡಲಾಯಿತು. ಇವತ್ತು ಬೆಳಗ್ಗೆ ಕೆಪಿಸಿ ಅಧಿಕಾರಿಗಳು ಶರಾವತಿ ನದಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಾಗಿನ ಅರ್ಪಣೆ ಮಾಡಿದರು. ಕೆಪಿಸಿ ಅಧಿಕಾರಿಗಳು, ಅವರ ಕುಟುಂಬದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗೇಟ್ ನಿಂದ ನೀರು ಹೊರಗೆ ಲಿಂಗನಮಕ್ಕಿ ಜಲಾಶಯದ ಗೇಟ್ನಿಂದ ಇವತ್ತು ಸಾಂಪ್ರದಾಯಿಕವಾಗಿ ಕೆಲವು … Read more

ಕುತೂಹಲ ಮೂಡಿಸಿದೆ ಆರಗ ಬೆಂಗಳೂರು ಭೇಟಿ, ಮಾಜಿ ಸಚಿವರಿಬ್ಬರ ಹೇಳಿಕೆ, ಮೂವರಲ್ಲಿ ಯಾರಿಗೆ ಸಿಗುತ್ತೆ ಮಿನಿಸ್ಟರ್ ಪಟ್ಟ?

020821 Eshwarappa Aaraga and Halappa in Minister Race 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021 ಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಯಾತ್ರೆಯಿಂದಾಗಿ ನಿರೀಕ್ಷೆ ಗರಿಗೆದರಿವೆ. ಕೊನೆ ಹಂತದ ಲಾಬಿ ಕೂಡ ಬಿರುಸು ಪಡೆದುಕೊಂಡಿದೆ. ಈ ನಡುವೆ ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಶಾಸಕರಿಗೆ ಸಚಿವ ಸ್ಥಾನ ಲಭಿಸಲಿದೆ ಎಂಬುದರ ಕುರಿತು ಕುತೂಹಲ ಹೆಚ್ಚಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ … Read more

ಹೈವೇ ರಸ್ತೆಯಲ್ಲಿ ಹಿಟ್ ಅಂಡ್ ರನ್, ಬೈಕ್ ಸವಾರ ಸ್ಥಳದಲ್ಲೇ ಸಾವು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜುಲೈ 2021 ಬೈಕ್‍ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನದ ಶೋಧ ಕಾರ್ಯ ನಡೆಯುತ್ತಿದೆ. ಶಿವರಾಜ್ (26) ಮೃತ ದುರ್ದೈವಿ. ಸಾಗರ ತಾಲೂಕು ಕುಗ್ವೆ ಗ್ರಾಮದ ಶಿವರಾಜ್, ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಖಂಡಿಕಾ ಕ್ರಾಸ್‍ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವರಾಜ್ ಚಲಿಸುತ್ತಿದ್ದ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಾಗರ … Read more

ಲಿಂಗನಮಕ್ಕಿಗೆ 14 ಗಂಟೆಯಲ್ಲಿ ದಾಖಲೆ ಮಟ್ಟದ ನೀರು, ಕೆಪಿಸಿಯಿಂದ ಮುನ್ನೆಚ್ಚರಿಕೆ ಪ್ರಕಟ

Linganamakki-Dam-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 24 ಜುಲೈ 2021 ಭಾರಿ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ ದೊಡ್ಡ ಪ್ರಮಾಣದಲ್ಲಿ ಒಳ ಹರಿವು ದಾಖಲಾಗಿದೆ. 14 ಗಂಟೆ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಈ ನಡುವೆ ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸಂದೇಶ ಬಿಡುಗಡೆ ಮಾಡಲಾಗಿದೆ. ಶರಾವತಿ ಕೊಳ್ಳದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಲಕ್ಷ ಕ್ಯೂಸೆಕ್‍ಗೂ ಅಧಿಕ ನೀರು ಹರಿದು ಬಂದಿದೆ. ನೀರಿನ ಸಂಗ್ರಹ ಪ್ರಮಾಣದಲ್ಲಿ ಏರಿಕೆಯಾಗಿದೆ. … Read more

ರೈಲ್ವೆ ಹಳಿ ಜಲಾವೃತ, ತಾಳಗುಪ್ಪದಿಂದ ಹೊರಡುವ ರೈಲುಗಳ ಸಂಚಾರಕ್ಕೆ ಅಡ್ಡಿ

230721 Railway Lane Drowned in Rain Water 1

ಶಿವಮೊಗ್ಗ ಲೈವ್.ಕಾಂ | TALAGUPPA NEWS | 23 ಜುಲೈ 2021 ಭಾರಿ ಮಳೆ ಹಿನ್ನೆಲೆ ಹಳಿ ಮೇಲೆ ನೀರು ನಿಂತಿರುವುದರಿಂದ ರೈಲು ಸಂಚಾರಕ್ಕೆ ಅಡ್ಡಿಯಾಗುವ ಸಂಭವವಿದೆ. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲು ಹಳಿ ಮೇಲೆ ನೀರು ನಿಂತಿದೆ. ಹಳಿ ಮೇಲೆ ನೀರು ನಿಂತಿರುವುದರಿಂದ ರೈಲು ಸಂಚಾರಕ್ಕೆ ತೊಂದರೆ ಉಂಟಾಗಲಿದೆ. ಹಾಗಾಗಿ ತಾಳಗುಪ್ಪದಿಂದ ರೈಲು ಸಂಚಾರ ಸ್ಥಗಿತಗೊಳ್ಳುವ ಸಂಭವವಿದೆ. ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಮಧ್ಯಾಹ್ನದ ರೈಲು ಸಾಗರ ಜಂಬಗಾರು ರೈಲ್ವೆ ನಿಲ್ದಾಣದಿಂದ ಸಂಚಾರ ಆರಂಭಿಸುವ ಸಾಧ್ಯತೆ … Read more