ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಜೋರು, ಹೊಸನಗರದಲ್ಲಿ ಅತ್ಯಧಿಕ, ತೀರ್ಥಹಳ್ಳಿ, ಸಾಗರದಲ್ಲೂ ವರ್ಷಧಾರೆ ಅಬ್ಬರ

170621 Rain At Agumbe Thirthahalli 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರಾಗಿದೆ. ಹೊಸನಗರ ತಾಲೂಕಿನಲ್ಲಿ ದಾಖಲೆ ಪ್ರಮಾಣದ ಮಳೆ ಸುರಿಯುತ್ತಿದೆ. ಇದರಿಂದಾಗಿ ಜಿಲ್ಲೆಯ ಹಳ್ಳ ಕೊಳ್ಳಗಳಿಗೆ ನೀರಿನ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 59.31 ಮಿ.ಮೀ ಮಳೆಯಾಗಿದೆ. ಈ ತಿಂಗಳಲ್ಲಿ ಇದು ಅತ್ಯಧಿಕ ಪ್ರಮಾಣದ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 18 ಮಿ.ಮೀ, ಭದ್ರಾವತಿಯಲ್ಲಿ 48.20 ಮಿ.ಮೀ, ತೀರ್ಥಹಳ್ಳಿ 79.60 ಮಿ.ಮೀ, ಸಾಗರದಲ್ಲಿ 70.80 ಮಿ.ಮೀ, … Read more

‘ಕಾಗೋಡು ತಿಮ್ಮಪ್ಪ ಮನೆಯಲ್ಲಿ ಏಳು ವೈದ್ಯರಿದಾರೆ, ಆದರೂ ಲಸಿಕೆಗೆ ತಡವಾಗಿ ಬಂದಿದ್ದೇಕೆ?’

MLA-Haratalu-Halappa

ಶಿವಮೊಗ್ಗ ಲೈವ್.ಕಾಂ | SAGARA NEWS | 14 ಜುಲೈ 2021 ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಎರಡನೆ ಡೋಸ್ ಲಸಿಕೆ ಸಿಗದಿರುವ ಕುರಿತು ಸಾಗರ ಶಾಸಕ ಹರತಾಳು ಹಾಲಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ಕಾಗೋಡು ತಿಮ್ಮಪ್ಪ ಅವರಿಗೆ ಲಸಿಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಶಾಸಕ ಹಾಲಪ್ಪ ಹೇಳಿದ್ದೇನು? ನಿನ್ನೆ ನೂರು ಡೋಸ್ ಲಸಿಕೆ ಇತ್ತು. ಆದರೆ ಕಾಗೋಡು ತಿಮ್ಮಪ್ಪ ಅವರು ಕೇಂದ್ರಕ್ಕೆ ಹೋದಾಗ ಲಸಿಕೆ ಖಾಲಿಯಾಗಿದೆ. ಸಾಮಾನ್ಯವಾಗಿ ಅವರು ಫೋನ್ ಮಾಡಿ ಹೋಗುತ್ತಿದ್ದರು. … Read more

ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು

130721 Car Accident At Channakoppa near anandapura 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 ಜುಲೈ 2021 ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಉರುಳಿದೆ. ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸಾಗರದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಚಾಲಕ ರಾಘು ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ಜೆಸಿಬಿ ಮೂಲಕ ಗದ್ದೆಯಿಂದ ಹೊರತೆಗೆಯಲಾಯಿತು. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ … Read more

ಸಿಗಂದೂರಿಗೆ ಇವತ್ತು ಜನವೋ ಜನ, ಕೋವಿಡ್ ನಿಯಮ ಕೇಳೋರಿಲ್ಲ, ದ್ವೀಪದ ಜನರಲ್ಲಿ ಢವಢವ

090721 No Covid Rules During in Sigandur Launch 1

ಶಿವಮೊಗ್ಗ ಲೈವ್.ಕಾಂ | TUMARI NEWS | 9 ಜುಲೈ 2021 ಅಮವಾಸ್ಯೆ ಹಿನ್ನೆಲೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಬಹುತೇಕರು ಕೋವಿಡ್ ನಿಯಮಕ್ಕೆ ಕ್ಯಾರೆ ಅನ್ನದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಅಮವಾಸ್ಯೆ ಮತ್ತು ಶುಕ್ರವಾರ ಆದ್ದರಿಂದ ಶ್ರೀ ಚೌಡೇಶ್ವರಿ ದೇವಿ ದರ್ಶನಕ್ಕೆ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಬರುತ್ತಿದ್ದಾರೆ. ದೂರದ ಊರುಗಳಿಂದ ವಾಹನಗಳಲ್ಲಿ ಬರುತ್ತಿರುವ ಭಕ್ತರು ಲಾಂಚ್‍ನಲ್ಲಿ ಹೊಳೆ ದಾಟುತ್ತಿದ್ದಾರೆ. ಕೋವಿಡ್ ನಿಯಮ ಮಾಯ ಲಾಕ್ ಡೌನ್ ಇದ್ದ … Read more

ಜೋಗ ಜಲಪಾತ ವೀಕ್ಷಣೆಗೆ ಬರ್ತಿಲ್ಲ ಜನ, ವೀಕೆಂಡ್ ಲಾಕ್ಡೌನ್ ತೆರವು ಕಾರಣಾನಾ?

180621 Jog Falls Sagara 2021 1

ಶಿವಮೊಗ್ಗ ಲೈವ್.ಕಾಂ | SAGARA NEWS | 9 ಜುಲೈ 2021 ಜೋಗ ಜಲಪಾತ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ವೀಕೆಂಡ್‍ನಲ್ಲಿ ಹೆಚ್ಚಿನ ಪ್ರವಾಸಿಗರು ಜೋಗಕ್ಕೆ ಬರುವ ನಿರೀಕ್ಷೆ ಇದೆ. ಜಲಪಾತದ ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿದೆ. ಹಾಗಾಗಿ ಜೋಗ ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಜಲಪಾತಗಳು ಧುಮ್ಮಿಕ್ಕುತ್ತಿವೆ. ಇದು ನಯನ ಮನೋಹರ ದೃಶ್ಯವಾಗಿದೆ. ಲಾಕ್‍ಡೌನ್ ಬಳಿಕ ಆರಂಭಿಕ ಉತ್ಸಾಹ ಲಾಕ್‍ ಡೌನ್ ಹಿನ್ನೆಲೆ ಜೋಗ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. … Read more

ಮನೆಯಲ್ಲಿ ಅಡುಗೆ ಅನಿಲ ಸೋರಿಕೆ, ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರಿ ಅನಾಹುತ

070721 Sagara gas leakage in house resuce 1

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಜುಲೈ 2021 ಯುವಕರ ಸಮಯ ಪ್ರಜ್ಞೆಯಿಂದಾಗಿ ಸಾಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದಂತಾಗಿದೆ. ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದು, ಮನೆಯಲ್ಲಿದ್ದವರನ್ನು ರಕ್ಷಣೆ ಮಾಡಿದ ಯುವಕರು, ಅನಿಲ ಸೋರಿಕೆಯನ್ನು ತಡೆದಿದ್ದಾರೆ. ಏನಿದು ಘಟನೆ? ಸಾಗರ ಪಟ್ಟಣದ ಎಸ್‍.ಎನ್.ನಗರದ ಬಾಳೆಕಾಯಿ ನಾಗರಾಜ್ ಅವರ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ. ಇದರಿಂದ ಮನೆಯಲ್ಲಿದ್ದವರು ಆತಂಕಕ್ಕೀಡಾಗಿದ್ದರು. ಅಕ್ಕಪಕ್ಕದ ಮನೆಗಳಲ್ಲೂ ಭೀತಿ ಸೃಷ್ಟಿಯಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ನಾಗರಾಜ್, ವಿನೋದ್ ರಾಜ್, ಪ್ರಕಾಶ್, ರವಿ, ಸ್ಥಳೀಯ … Read more

ಕಂಬದಲ್ಲಿ ದುರಸ್ತಿ ವೇಳೆ ಪವರ್ ಮ್ಯಾನ್​​ಗೆ ವಿದ್ಯುತ್ ಶಾಕ್, ಸಾವು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಜುಲೈ 2021 ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ಅವಘಡ ಸಂಭವಿಸಿದ್ದು ಕಿರಿಯ ಪವರ್‍ ಮ್ಯಾನ್ ಮೃತಪಟ್ಟಿದ್ದಾರೆ. ಸುಳ್ಳಳ್ಳಿ ಬ್ಯಾಕೋಡು ಭಾಗದ ಹೊಸ್ಮನೆ ಜಯೇಂದ್ರ (30) ಮೃತ ದುರ್ದೈವಿ. ವಿದ್ಯುತ್ ಶಾಕ್‍ಗೆ ಒಳಗಾದ ಕೂಡಲೆ ಜಯೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಕಾಲೇಜು ಸಮೀಪ ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಶಾಕ್‍ಗೆ ಒಳಗಾಗಿ … Read more

ಚೇತರಿಕೆಯತ್ತ ಶಿವಮೊಗ್ಗ ಪ್ರವಾಸೋದ್ಯಮ, ಜೋಗ, ಕುಪ್ಪಳಿಗೆ ಮೊದಲ ದಿನ ಭೇಟಿ ಕೊಟ್ಟವರೆಷ್ಟು?

180621 Jog Falls Sagara 2021 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021 ಲಾಕ್‍ ಡೌನ್, ವಾರಾಂತ್ಯದ ಕರ್ಫ್ಯೂ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚೇತರಿಕೆಯತ್ತ ಹೆಜ್ಜೆ ಇಟ್ಟಿದೆ. ಪ್ರವಾಸಿ ತಾಣಗಳತ್ತ ಪ್ರವಾಸಿಗರ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದೆ. ಜೋಗ ಜಲಪಾತ ಪ್ರವಾಸಿಗರಿಗೆ ಮುಕ್ತವಾಗಿದೆ. ಮೊದಲ ದಿನ ರಾಜ್ಯದ ವಿವಿಧೆಡೆಯ ಪ್ರವಾಸಿಗರು ಜೋಗಕ್ಕೆ ಬಂದಿದ್ದರು. ರಾಜ, ರಾಣಿ, ರೊರರ್, ರಾಕೆಟ್‍ ಜಲಪಾತಗಳ ರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡರು. ಜೋಗಕ್ಕೆ ದೂರದೂರುಗಳಿಂದ ಪ್ರವಾಸಿಗರು ಮೊದಲ ದಿನ 991 ಪ್ರವಾಸಿಗರು ಜೋಗಕ್ಕೆ ಬಂದಿದ್ದರು. 150 … Read more

ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಮತ್ತೆ ಜೀವ ಕಳೆ, ಮೊದಲ ದಿನ ಹೇಗಿತ್ತು ಗೊತ್ತಾ ರೆಸ್ಪಾನ್ಸ್?

180621 Jog Falls Sagara 2021 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 JUNE 2021 ಕರೋನ ಲಾಕ್​ ಡೌನ್​ನಿಂದಾಗಿ ಬಂದ್ ಆಗಿದ್ದ ಜೋಗ ಜಲಪಾತಕ್ಕೆ ಇವತ್ತಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೆ ನೂರಾರು ಪ್ರವಾಸಿರು ಜಲಪಾತದ ರಮಣೀಯತೆಯನ್ನು ಕಣ್ತುಂಬಿಕೊಂಡರು. ಕಳೆದ ಎರಡು ತಿಂಗಳಿಂದ ಜೋಗ ಜಲಪಾತ ವೀಕ್ಷಣೆಯನ್ನು ಬಂದ್ ಮಾಡಲಾಗಿತ್ತು. ಜಲಪಾತದ ವಿವ್ ಪಾಯಿಂಟ್​ ಕಡೆಯ ಗೇಟ್​ಗೆ ಬೀಗ ಹಾಕಲಾಗಿತ್ತು. ಸರ್ಕಾರ ಪ್ರವಾಸಿ ತಾಣಗಳಿಗೆ ಅವಕಾಶ ನೀಡಿದ ಬೆನ್ನಿಗೆ ಜೋಗ ಜಲಪಾತದ ವೀಕ್ಷಣೆಗೂ ಅವಕಾಶ ನೀಡಲಾಗಿದೆ. ಮೊದಲ … Read more

ಸಿಗಂದೂರು ಲಾಂಚ್​​ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಮೈ ಜುಮ್ ಅನಿಸುತ್ತೆ ರಕ್ಷಣಾ ಕಾರ್ಯಾಚರಣೆ

270621 Woman Attempt Suicide From Sigandur Launch 1

ಶಿವಮೊಗ್ಗ ಲೈವ್.ಕಾಂ | SAGARA NEWS | 27 JUNE 2021 ಸಿಗಂದೂರು ಲಾಂಚ್‍ನಿಂದ ಶರಾವತಿ ನದಿಗೆ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲಾಂಚ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾರೆ. ಕೂಡಲೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರಿನ ರೇಣುಕಾ (46) ಎಂಬ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದು ಪಡೆದು ಮರಳುತ್ತಿದ್ದರು. ಹೊಳೆಬಾಗಿಲು ಕಡೆಯಿಂದ ಕಳಸವಳ್ಳಿ ಕಡೆಗೆ ಲಾಂಚ್ ಹತ್ತಿದ್ದರು. ಹೊಳೆಯ ಮಧ್ಯೆ ಭಾಗಕ್ಕೆ ಬರುತ್ತಿದ್ದಂತೆ … Read more