ಸಾಗರ ತಾಲೂಕಿನಲ್ಲಿ ಲಾರಿ, ಬೈಕು ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು
ಶಿವಮೊಗ್ಗ ಲೈವ್.ಕಾಂ | SAGARA NEWS | 12 ಅಕ್ಟೋಬರ್ 2020 ಲಾರಿ ಬೈಕು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಭೀಮನಕೋಣೆಯ ಹಾರುಡಿಕೆ ಬಳಿ ಭಾನುವಾರ ಘಟನೆ ಸಂಭವಿಸಿದೆ. ಸಾಗರದ ರತೀಶ್ ಶೆಟ್ಟಿ (27) ಮೃತ ಬೈಕ್ ಸವಾರ. ಬಟ್ಟೆಮಲ್ಲಪ್ಪ ಗ್ರಾಮದಲ್ಲಿರುವ ತನ್ನ ಸಂಬಂಧಿಯೊಬ್ಬರ ಮನೆಯಿಂದ ಸಾಗರಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತವಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more