ಮನೆ ಬಾಗಿಲ ಬೀಗ ಒಡೆದು, ಅಪ್ಪೆ ಮಾವಿನಮಿಡಿ ಉಪ್ಪಿನಕಾಯಿ ಬಾಟಲಿ ಕದ್ದ ಕಳ್ಳ..!
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 21 ಸೆಪ್ಟೆಂಬರ್ 2019 ಸಾಗರ ತಾಲೂಕಿನ ಬಚ್ಚಗಾರ ಗ್ರಾಮದ ಮನೆಯೊಂದರಲ್ಲಿ ಕಳ್ಳನಿಗೆ ಒಡವೆ, ಹಣ ಸಿಗದ ಕಾರಣ ಮಾವಿನ ಮಿಡಿ ಉಪ್ಪಿನಕಾಯಿಯನ್ನೇ ಕದ್ದೊಯ್ದ ಕುತೂಹಲಕಾರಿ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ-ಜೋಗಫಾಲ್ಸ್ ಮಾರ್ಗದಲ್ಲಿರುವ ಬಚ್ಚಗಾರು ಗ್ರಾಮದ ಶುಂಠಿ ಸತ್ಯನಾರಾಯಣಭಟ್ಟರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯೊಳಗೆ ನುಗ್ಗಿದ ಕಳ್ಳರು ಏನೂ ಸಿಕ್ಕಿಲ್ಲ. ಆದರೆ, ಸುವಾಸನೆ ಬೀರುವ ಅಪ್ಪೆ ಮಾವಿನ ಮಿಡಿಯ ಉಪ್ಪಿನಕಾಯಿ ಕಂಡಿದೆ. ಅದರ ರುಚಿಯನ್ನು ಸವಿದ ಕಳ್ಳ ಬಾಟಲಿಯನ್ನೇ … Read more