ಮನೆ ಬಾಗಿಲ ಬೀಗ ಒಡೆದು, ಅಪ್ಪೆ ಮಾವಿನಮಿಡಿ ಉಪ್ಪಿನಕಾಯಿ ಬಾಟಲಿ ಕದ್ದ ಕಳ್ಳ..!

theft case general image

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 21 ಸೆಪ್ಟೆಂಬರ್ 2019 ಸಾಗರ ತಾಲೂಕಿನ ಬಚ್ಚಗಾರ ಗ್ರಾಮದ ಮನೆಯೊಂದರಲ್ಲಿ ಕಳ್ಳನಿಗೆ ಒಡವೆ, ಹಣ ಸಿಗದ ಕಾರಣ ಮಾವಿನ ಮಿಡಿ ಉಪ್ಪಿನಕಾಯಿಯನ್ನೇ ಕದ್ದೊಯ್ದ ಕುತೂಹಲಕಾರಿ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ-ಜೋಗಫಾಲ್ಸ್ ಮಾರ್ಗದಲ್ಲಿರುವ ಬಚ್ಚಗಾರು ಗ್ರಾಮದ ಶುಂಠಿ ಸತ್ಯನಾರಾಯಣಭಟ್ಟರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯೊಳಗೆ ನುಗ್ಗಿದ ಕಳ್ಳರು ಏನೂ ಸಿಕ್ಕಿಲ್ಲ. ಆದರೆ, ಸುವಾಸನೆ ಬೀರುವ ಅಪ್ಪೆ ಮಾವಿನ ಮಿಡಿಯ ಉಪ್ಪಿನಕಾಯಿ ಕಂಡಿದೆ. ಅದರ ರುಚಿಯನ್ನು ಸವಿದ ಕಳ್ಳ ಬಾಟಲಿಯನ್ನೇ … Read more

ಬಾಗಿಲಿಗೆ ಹಾಕಿದ್ದ ಬೀಗ ಹಾಗೆ ಇದೆ, ಆದರೂ ಸರ್ಕಾರಿ ಕಚೇರಿ ಸಭಾಂಗಣದಲ್ಲಿದ್ದ ಸ್ಪೀಕರ್’ಗಳು ನಾಪತ್ತೆ, ಎಲ್ಲಿ ಗೊತ್ತಾ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | ಸಾಗರ | 20 ಸೆಪ್ಟೆಂಬರ್ 2019 ಹಾಕಿದ್ದ ಬೀಗ ಹಾಗೆ ಇದೆ. ಆದರು ಸಭಾಂಗಣದ ಒಳಗಿದ್ದ ಸ್ಪೀಕರ್’ಗಳು ನಾಪತ್ತೆಯಾಗಿವೆ. ಇದು ಸಾಗರ ತಾಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ನಡೆದ ವಿಚಿತ್ರ ಕಳ್ಳತನ. ತಾಲೂಕು ಪಂಚಾಯಿತಿ ಸಭೆ ನಡೆಯುವ ಸಭಾಂಗಣದಲ್ಲಿ ಅಳವಡಿಸಿದ್ದ ಎರಡು ಸ್ಪೀಕರ್’ಗಳು ನಾಪತ್ತೆ ಆಗಿವೆ. ಸಭಾಂಗಣದ ಬಾಗಿಲಿಗೆ ಹಾಕಿದ್ದ ಬೀಗ ಹಾಗೆಯೆ ಇದೆ. ಬೀಗಿ ಒಡೆಯದೆ ಸ್ಪೀಕರ್’ಗಳು ಕಳ್ಳತನವಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ದೂರು ನೀಡಲು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಿರ್ಧರಿಸಿದ್ದಾರೆ. … Read more

ಲಾರಿ, ಬೈಕ್ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಸಾವು

ಶಿವಮೊಗ್ಗ ಲೈವ್.ಕಾಂ | ಸಾಗರ | 6 ಸೆಪ್ಟೆಂಬರ್ 2019 ಮೀನಿನ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ತಾಳಗುಪ್ಪದ ಚೂರಿಕಟ್ಟೆ ಬಳಿ ಘಟನೆ ನಡೆದಿದೆ. ಸಿದ್ದಾಪುರ ತಾಲೂಕಿನ ಹೊಸೂರು ಗ್ರಾಮದ ಹರೀಶ್ ನಾಯ್ಕ (22) ಮತ್ತು ವಿನಾಯಕ (25) ಮೃತ ಯುವಕರು. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more

ಮೆಗ್ಗಾನ್ ಆಸ್ಪತ್ರೆ ಮುಂದೆ ಬಸ್ ಅಪಘಾತ, ಸಾಗರ ರಸ್ತೆಯಲ್ಲಿ ಮರಕ್ಕೆ ಗುದ್ದಿದ ರಾಜಹಂಸ

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಚಾಲಕನ ನಿಯಂತ್ರಣ ತಪ್ಪಿದ KSRTC ರಾಜಹಂಸ ಬಸ್, ಮೆಗ್ಗಾನ್ ಆಸ್ಪತ್ರೆ ಮುಂಭಾಗ, ಸಾಗರ ರಸ್ತೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ಸಿನ ಮುಂಭಾಗ ಜಖಂ ಆಗಿದೆ. ಗ್ಲಾಸ್ ಪುಡಿಯಾಗಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ರಾಜಹಂಸ ಬಸ್, ಇಲ್ಲಿಂದ ಶಿರಸಿ ಕಡೆಗೆ ಪ್ರಯಾಣ ಬೆಳೆಸಿತ್ತು. ಮೆಗ್ಗಾನ್ ಆಸ್ಪತ್ರೆ ಮುಂಭಾಗ, ಪೊಲೀಸ್ ಕ್ಯಾಂಟೀನ್ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದಿದ್ದು ಮತ್ತು ಸಿಟಿ … Read more

ಸಾಗರದ ಸಮೋಸ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ, ಮಾರಾಟಗಾರರಿಗೆ ಖಡಕ್ ವಾರ್ನಿಂಗ್

ಶಿವಮೊಗ್ಗ ಲೈವ್.ಕಾಂ | 11 ಮೇ 2019 ನಗರಸಭೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಸಮೋಸ ಮಾರಾಟಗಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಸಾಗರದ ಮೀನು ಮಾರುಕಟ್ಟೆ ಬಳಿ ಇರುವ ಸಮೋಸ ಮಾರಾಟ ಮಳಿಗೆಗಳ ಮೇಲೆ ರೇಡ್ ಮಾಡಿದ್ದರು. ದಾಳಿ ವೇಳೆ, ಸಮೋಸ ಮಾರಾಟ ಮಾಡುವವರು ಸ್ವಚ್ಛತೆ ಕಾಪಾಡದೆ ಇರುವುದು, ಒಮ್ಮೆ ಬಾಣಲೆಗೆ ಎಣ್ಣೆ ಹಾಕಿದರೆ ಅದು ಬತ್ತುವವರೆಗೂ ಸಮೋಸ ಮಾಡುವುದು, ಎರಡ್ಮೂರು ದಿನದ ಹಿಂದೆ ಕತ್ತರಿಸಿದ ತರಕಾರಿ ಬಳಕೆ ಮಾಡುವುದು, ರುಚಿ ಹೆಚ್ಚಿಸಲು ಟೇಸ್ಟಿಂಗ್ ಪೌಡರ್ … Read more

ಜಿಲ್ಲೆಯಲ್ಲಿ ಮುಂದುವರೆದ ಮಂಗನ ಕಾಯಿಲೆ ಮರಣ ಮೃದಂಗ, ಮತ್ತೊಬ್ಬ ವ್ಯಕ್ತಿ ಸಾವು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 1 ಮೇ 2019 ಮಂಗನ ಕಾಯಿಲೆಗೆ ಸಾವನ್ನಪ್ಪುವವರ ಸಂಖ್ಯೆ ಮುಂದುವರೆದಿದೆ. ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಂಕಿತ ಮಂಗನ ಕಾಯಿಲೆಗೆ ಮತ್ತೊಬ್ಬರು ಕೊನೆಯುಸಿರೆಳೆದಿದ್ದಾರೆ. ನಂದೋಡಿ ಗ್ರಾಮದ ಕೆರಿಯಪ್ಪ (45) ಮೃತ ವ್ಯಕ್ತಿ. ಮಂಗನ ಕಾಯಿಲೆ ಶಂಕೆಯಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಕೆರಿಯಪ್ಪ ಮೃತಪಟ್ಟಿದ್ದಾರೆ. ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆ ಶಂಕೆಯಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ ಆಗಿದೆ.

ರಾಘವೇಂದ್ರ ಗೆಲ್ಲದಿದ್ದರೆ ರಾಜಕೀಯ ನಿವೃತ್ತಿಯ ಸವಾಲು ಹಾಕಿದ ಬಿಜೆಪಿ ಎಂಎಲ್ಎ

Haratalu-Halappa

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಗೆಲ್ಲದೆ ಇದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಅಂತಾ ಸಾಗರ ಶಾಸಕ ಹರತಾಳು ಹಾಲಪ್ಪ ಸವಾಲು ಹಾಕಿದ್ದಾರೆ. ಸಾಗರದ ಮಡಸೂರು ಲಿಂಗದಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಹಾಲಪ್ಪ, ಈ ಸವಾಲು ಹಾಕಿದ್ದಾರೆ. ಈಡಿಗ ಸಮುದಾಯಕ್ಕೆ ಬಿಜೆಪಿಯಿಂದ ಎಂದಿಗೂ ಅನ್ಯಾಯವಾಗಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾರ್ಕಳದ ಕೋಟಿ ಚನ್ನಯ್ಯ ಪೀಠ ಸ್ಥಾಪನೆಗೆ 99 ಕೋಟಿ ರೂ. ನೀಡಿದ್ದರು. ಮಂಗಳೂರಿನಲ್ಲಿ ಜಮೀನು ನೀಡಿದ್ದಾರೆ. ಶಿವಮೊಗ್ಗದಲ್ಲಿ … Read more

ಸಾಗರದ ಸಿಗಂದೂರು ರಸ್ತೆಯಲ್ಲಿ ಕಾಡುಕೋಣಗಳು ಪ್ರತ್ಯಕ್ಷ, ವಿಡಿಯೋ ವೈರಲ್

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019 ಸಾಗರ ಪಟ್ಟಣದಲ್ಲಿ ಕಾಡುಕೋಣಗಳು ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಎರಡು ಕಾಡುಕೋಣಗಳು ರಾಜಾರೋಷವಾಗಿ ರಸ್ತೆಯಲ್ಲಿ ಸಾಗುತ್ತಿರುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಗುರುವಾರ ಮಧ್ಯರಾತ್ರಿ ಸಾಗರದ ಎಸ್.ಎನ್.ನಗರದಲ್ಲಿ ಎರಡು ಕಾಡು ಕೋಣಗಳು ಪ್ರತ್ಯಕ್ಷವಾಗಿವೆ. ಸಾಗರ ಸಿಗಂದೂರು ರಸ್ತೆಯಲ್ಲಿ ಹೋಗುತ್ತಿದ್ದ ಕಾಡುಕೋಣಗಳನ್ನು, ರಸ್ತೆಯಲ್ಲಿ ಸಾಗುತ್ತಿದ್ದ ಲಾರಿ, ಕಾರಿನಲ್ಲಿ ತೆರಳುತ್ತಿದ್ದವರು ಗಮನಿಸಿ, ವಾಹನಗಳನ್ನು ಸೈಡಿಗೆ ನಿಲ್ಲಿಸಿದ್ದಾರೆ. ಕಾಡುಕೋಣಗಳ ವಿಚಾರ ತಿಳಿಯದ ಪೊಲೀಸರು, ಬೈಕಿನಲ್ಲಿ ಅವುಗಳ ಬಳಿಗೆ ಹೋಗಿ, ಬೆದರಿ ಹಿಂತಿರುಗುವ ದೃಶ್ಯ, … Read more

ಸಾಗರದಲ್ಲಿ ಬೆಳಂಬೆಳಗ್ಗೆ ಭೀಕರ ಅಪಘಾತ, ಲಾರಿಗಳ ಮುಖಾಮುಖಿ ಡಿಕ್ಕಿ, ಸ್ವಲ್ಪದರಲ್ಲಿ ತಪ್ಪಿತು ಭಾರೀ ಅನಾಹುತ

ಶಿವಮೊಗ್ಗ ಲೈವ್.ಕಾಂ | 23 ಮಾರ್ಚ್ 2019 ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಐಗಿನಬೈಲು ಬಳಿ ಘಟನೆ ನಡೆದಿದೆ. ಅಡುಗೆ ಅನಿಲ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಡಾಂಬರ್ ಸಾಗಿಸುತ್ತಿದ್ದ ಲಾರಿಗಳು ಡಿಕ್ಕಿಯಾಗಿವೆ. ಅಡುಗೆ ಅನಿಲ ಸಿಲಿಂಡರ್ ಲಾರಿ ಚಾಲಕ ಲೋಕೇಶ್, ಡಾಂಬರ್ ಲಾರಿ ಚಾಲಕ ಸಚಿನ್, ಕ್ಲೀನರ್ ಮಾಲಕಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಲಿಂಡರ್ ಲಾರಿ ಕ್ಲೀನರ್ ಉಮೇಶ್, ಗಂಭೀರ ಗಾಯಗೊಂಡಿದ್ದು, ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಿಂದಾಗಿ ಬೆಂಗಳೂರು ಹೊನ್ನಾವರ … Read more

‘ಸೋಲಿಗೆ ಹೆದರೋದಿಲ್ಲ, ಚುನಾವಣೆ ಬಳಿಕ ರಾಘವೇಂದ್ರ ಅವರೇ ಶಿವಮೊಗ್ಗದಿಂದ ಎಕ್ಸ್’ಪೋರ್ಟ್ ಆಗ್ತಾರೆ’

ಶಿವಮೊಗ್ಗ ಲೈವ್.ಕಾಂ | 19 ಮಾರ್ಚ್ 2019 ನಾನು ಸೋಲಿಗೆ ಹೆದರೋದಿಲ್ಲ. ಈ ಬಾರಿ ರಾಘವೇಂದ್ರ ಅವರು ಶಿವಮೊಗ್ಗದಿಂದ ಎಕ್ಸ್’ಪೋರ್ಟ್ ಆಗಲಿದ್ದಾರೆ ಅಂತಾ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೊರಬದ ಕುಬಟೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಮಧು ಬಂಗಾರಪ್ಪ, ಚುನಾವಣೆಯಲ್ಲಿ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ | shivamoggalive@gmail.com