ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್, ಮತ್ತೊಬ್ಬ ಎಸ್ಕೇಪ್
ಹೊಸನಗರ: ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಶ್ರೀಗಂಧ (Sandal Wood) ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯತ್ತಿದೆ. ಕಾರ್ಯಾಚರಣೆಯಲ್ಲಿ 39 ಕೆ.ಜಿ 300 ಗ್ರಾಂ ತೂಕದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಸನಗರ ತಾಲೂಕು ಹೊಸಳ್ಳಿ ಗ್ರಾಮದ ನೆಲ್ಲಿಸರದ ವಾಸಿ ದಯಾಕುಮಾರ್ ಅಲಿಯಾಸ್ ದಯಾನಂದ ಬಂಧಿತ. ಕಾರಕ್ಕಿ ಗ್ರಾಮದ ಕೌಶಿಕ್ ನಾಪತ್ತೆಯಾಗಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ.ಕೆ, ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ … Read more