ಕೇಸರಿ ಶಾಲು ಧರಿಸಿ ಕಾಂಗ್ರೆಸ್‌ ಮುಖಂಡರ ಮಧ್ಯೆ ಕುಳಿತ ಬಿಜೆಪಿ ನಾಯಕರು

bjp-leaders-in-saffron-shawl-at-yuvanidhi-programme-shimoga

SHIVAMOGGA LIVE NEWS | 12 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಕೇಸರಿ ಶಾಲು ಧರಿಸಿ ಬಂದು ಗಮನ ಸಳೆದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ಅವರು ಕೇಸರಿ ಶಾಲು ಧರಿಸಿ ಬಂದಿದ್ದರು. ಸಿಎಂ ಮತ್ತು ಸಚಿವರು ವೇದಿಕೆಗೆ ಆಗಮಿಸುವ ಮೊದಲೆ ಮೂವರು ವೇದಿಕೆಯಲ್ಲಿ ಆಸೀನರಾಗಿದ್ದರು. ಇದನ್ನೂ ಓದಿ – ಡಿಕೆಶಿ ಪರ ಮೊಳಗಿದ ಘೋಷಣೆ, ಸಂಸದ ರಾಘವೇಂದ್ರ ಹೆಸರಿಗೆ ಜೋರಾಯ್ತು ಚಪ್ಪಾಳೆ ಮುಖ್ಯಮಂತ್ರಿ, … Read more

ಶಿವಮೊಗ್ಗದ ಹಲವು ಕುಟುಂಬಗಳ ಅನ್ನ ಕಸಿದ ಹಿಜಾಬ್, ಕೇಸರಿ ಶಾಲು ವಿವಾದ

Road Blocked during hijab row

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022 ಹಿಜಾಬ್ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕೆಲವರಿಗೆ ಪ್ರತಿಷ್ಠೆಯಾಗಿದೆ ಮಾರ್ಪಾಡಾಗಿದೆ. ಇದರ ಪರಿಣಾಮ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೋರಾಟ, ಗಲಭೆ ಶುರುವಾದಾಗಿನಿಂದ ಈ ಕುಟುಂಬಗಳಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆಯೆ ಗತಿಯಾಗಿದೆ. ಶಿವಮೊಗ್ಗದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿತ್ತು. ವಿದ್ಯಾರ್ಥಿಗಳು ಪರಸ್ಪರ ಜಗಳಕ್ಕಿಳಿದು, ಕಲ್ಲು ತೂರಾಟವಾಗಿತ್ತು. ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿವಾದ ಶುರುವಾದಾಗಿನಿಂದ ಶಿವಮೊಗ್ಗದ ಕೆಲವು … Read more

ಹಿಜಾಬ್, ಕೇಸರಿ ಶಾಲು ವಿವಾದ, ಮಂಗಳವಾರ ಜಿಲ್ಲೆಯ ಯಾವ್ಯಾವ ಕಾಲೇಜಿನಲ್ಲಿ ಏನೇನಾಯ್ತು?

saffron flag hoisted at bapuji nagara college in shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಹಲವು ಕಾಲೇಜಿಗೆ ವ್ಯಾಪಿಸಿತು. ವಿವಿಧೆಡೆ ಪ್ರತಿಭಟನೆಗಳನ್ನು ನಡೆಸಲಾಯಿತು. ಕೆಲವು ಕಡೆಯಂತೂ ಪ್ರತಿಭಟನೆ ತೀವ್ರ ಸ್ವರೂಪ ಪಡೆದು, ವಿಕೋಪಕ್ಕೆ ತಿರುಗಿತು. ಜಿಲ್ಲೆಯಾದ್ಯಂತ ಏನೆಲ್ಲ ಆಯ್ತು? ಸಹ್ಯಾದ್ರಿ ಕಾಲೇಜು | ಮಂಗಳವಾರವು ಹಿಜಾಬ್, ಬುರ್ಖಾ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೇಸರಿ ಶಾಲು ಧರಿಸುವ ಬದಲು, ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಕಾಲೇಜು ಆವರಣದಲ್ಲಿ ಮೆರವಣಿಗೆ ನಡೆಸಿದರು. … Read more

ಕೇಸರಿ ಧ್ವಜ ಹಾರಿಸಿದ್ದ ಧ್ವಜಸ್ತಂಭದಲ್ಲಿ ಇವತ್ತು ರಾಷ್ಟ್ರಧ್ವಜ ಹಾರಾಟ

Tri-Color-hoisted-in-GFGC-Bapuji-nagara.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಫೆಬ್ರವರಿ 2022 ಶಿವಮೊಗ್ಗ ಬಾಪೂಜಿ ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. NSUI ವಿದ್ಯಾರ್ಥಿ ಸಂಘಟನೆ ವತಿಯಿಂದ ಬೆಳಗ್ಗೆ ತ್ರಿವರ್ಣ ಧ್ವಜಾರೋಹಣ ಮಾಡಿ, ಗೌರವ ಸಲ್ಲಿಸಲಾಯಿತು. NSUI ಸಂಘಟನೆ ಕಾರ್ಯಕರ್ತರು ಬೆಳಗ್ಗೆ ಧ್ವಜ ಹಾರಿಸಿ, ರಾಷ್ಟ್ರಗೀತೆಯನ್ನು ಹಾಡಿದರು. ಕೇಸರಿ ಧ್ವಜ ಹಾರಿಸಲಾಗಿತ್ತು ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಂಗಳವಾರ ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿತ್ತು. ಕಲ್ಲು ತೂರಟವಾಗಿತ್ತು. … Read more

ಹಿಜಾಬ್, ಕೇಸರಿ ಶಾಲು ಸಂಘರ್ಷ, ಶಿವಮೊಗ್ಗ ಜಿಲ್ಲೆಯಲ್ಲಿ 5 ಎಫ್ಐಆರ್ ದಾಖಲು

Shimoga-City-Police-bandobasth

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ಶಿವಮೊಗ್ಗದಲ್ಲಿ ಇವತ್ತು ತಾರಕಕ್ಕೇರಿತ್ತು. ಕಲ್ಲು ತೂರಾಟ ನಡೆದು ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇವತ್ತಿನ ಅಹಿತರ ಘಟನೆಗಳು ಸಂಬಂಧ ವಿವಿಧ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತಿಳಿಸಿದ್ದಾರೆ. ಯಾವೆಲ್ಲ ಠಾಣೆಯಲ್ಲಿ ಏನೆಲ್ಲ ಕೇಸ್ ದಾಖಲಾಗಿದೆ? › ಕೇಸ್ 1 – ಬಾಪೂಜಿನಗರ … Read more

ಶಿವಮೊಗ್ಗದ ವ್ಯಾಪಾರಿಗಳಿಗೆ ಗಾಯದ ಮೇಲೆ ಬರೆ ಎಳೆದ ಹಿಜಾಬ್, ಕೇಸರಿ ಶಾಲು ಸಂಘರ್ಷ

080222 Shops Closed due to 144 Section

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ಶಿವಮೊಗ್ಗದ ವ್ಯಾಪಾರಿಗಳಿಗೆ ಬರೆ ಎಳೆದಿದೆ. ನಿಷೇಧಾಜ್ಞೆ ಜಾರಿಗೊಳಿಸಿದ ಬೆನ್ನಿಗೆ ನಗರದ ಬಹುತೇಕ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ. ಈಗಾಗಲೇ ಲಾಕ್ ಡೌನ್’ನಿಂದಾಗಿ ಕಂಗೆಟ್ಟಿದ್ದ ವ್ಯಾಪಾರಿಗಳು, ಈ ವಿವಾದದಿಂದಾಗಿ ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಫೆಬ್ರವರಿ 8 ಮತ್ತು 9ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಈ ನಡುವೆ ಇವತ್ತು ಬಹುತೇಕ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಯಿತು. ಮಧ್ಯಾಹ್ನದ … Read more

ವೈರಲ್ ಹಿಂದಿನ ಸತ್ಯ, ರಾಷ್ಟ್ರಧ್ವಜ ತೆರವು ಮಾಡಿ ಕೇಸರಿ ಧ್ವಜ ಹಾರಿಸಿದ್ದು ನಿಜಾನಾ?

saffron flag hoisted at bapuji nagara college in shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷದ ನಡುವೆ ವಿದ್ಯಾರ್ಥಿಯೊಬ್ಬ ಕೇಸರಿ ಧ್ವಜ ಹಾರಿಸಿದ ವಿಡಿಯೋ ವೈರಲ್ ಆಗಿದೆ. ಇದರಿಂದ ವಿವಾದದ ನಡುವೆ ವಿವಾದ ಶುರುವಾಗಿದೆ. ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿತ್ತು. ವಿದ್ಯಾರ್ಥಿಗಳ ಒಂದು ಗುಂಪು ಕೇಸರಿ ಶಾಲು ಧರಿಸಿ ಹೋರಾಟ ಮಾಡುತ್ತಿದ್ದರು. ಮತ್ತೊಂದು ಗುಂಪು ಹಿಜಾಬ್ ಪರವಾಗಿ ಘೋಷಣೆ ಕೂಗುತ್ತಿತ್ತು. ಧ್ವಜ ಕಂಬ ಏರಿದ ವಿದ್ಯಾರ್ಥಿ … Read more

ಶಿವಮೊಗ್ಗದಲ್ಲಿ ವಿವಾದ ಪೂರ್ವ ಯೋಜಿತ, ವಾಟ್ಸಪ್ ಚಾಟ್ ಬಿಡುಗಡೆ ಮಾಡಿದ ಬಿಜೆಪಿ

BJP-President-TD-Megharaj-Press-meet-over-hijab-row.j

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ವಿವಾದದ ಕೇಂದ್ರವಾಗಿರುವುದು ಹಿಜಾಬ್, ಕೇಸರಿ ಶಾಲು ಅಲ್ಲ. ಇದು ನಾಡಿನ ಶಾಂತಿ ಕದಡುವ ಹುನ್ನಾರವಾಗಿದೆ. ವಾಟ್ಸಪ್ ಗ್ರೂಪ್’ಗಳಲ್ಲಿ ಮೆಸೇಜ್ ಮಾಡುವ ಮೂಲಕ ಪ್ರಚೋದನೆ ನೀಡಲಾಗಿದೆ. ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್’ನಲ್ಲಿ ನಡೆದ ಚರ್ಚೆ ಇದಕ್ಕೆ ಸಾಕ್ಷಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಆರೋಪಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನದ ಧ್ವಜ … Read more

ಹಿಜಾಬ್, ಕೇಸರಿ ಶಾಲು ಸಂಘರ್ಷ, ಫೆ.8ರಂದು ATNC ಕಾಲೇಜಿನಲ್ಲಿ ತರಗತಿ ನಡೆಯಲ್ಲ

ATNC students protest against hijab

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ. ATNC ಕಾಲೇಜು ವಿದ್ಯಾರ್ಥಿಗಳು ಇವತ್ತು ಪ್ರತಿಭಟನೆ ನಡೆಸಿದರು. ಈ ವೇಳೆ … Read more

ಶಿವಮೊಗ್ಗದ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ, ಬಿಗುವಿನ ವಾತಾವರಣ

ATNC students protest against hijab

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಶಿವಮೊಗ್ಗದ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿದೆ. ಇದರಿಂದ ಕಾಲೇಜು ಮುಂಭಾಗ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ATNC ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಆರಂಭವಾಗಿದೆ. ವಿದ್ಯಾರ್ಥಿಗಳ ಒಂದು ಗುಂಪು ಬುರ್ಖಾ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರೆ, ಮತ್ತೊಂದು ಗುಂಪು ಯುನಿಫಾರಂ ಕಡ್ಡಾಯಗೊಳಿಸಬೇಕು, ಇಲ್ಲವಾದಲ್ಲಿ ಕೇಸರಿ ಶಾಲು ಧರಿಸಿ ತರಗತಿಗೆ ಬರುತ್ತೇವೆ ಎಂದು ಪಟ್ಟು ಹಿಡಿದರು. ಕ್ಯಾಂಪಸ್ಸಿನಲ್ಲಿ ಬಿಗುವಿನ … Read more