23 ತಿಂಗಳು ಹೊರಜಗತ್ತಿಗೆ ಕಾಣಿಸದ ಸ್ವಾಮೀಜಿ, ತಪೋನುಷ್ಠಾನದ ಬಳಿಕ ಮಠಕ್ಕೆ ಭಕ್ತ ಸಾಗರ, ಏನಿದು ತಪಸ್ಸು?
ಶಿವಮೊಗ್ಗ ಲೈವ್.ಕಾಂ |BHADRAVATHI NEWS | 6 ಸೆಪ್ಟೆಂಬರ್ 2021 23 ತಿಂಗಳು ಬಾಹ್ಯ ಪ್ರಪಂಚದಿಂದ ದೂರ ಉಳಿದು ತಪಸ್ಸು ನಡೆಸುತ್ತಿದ್ದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನ ಪೂರ್ಣಗೊಂಡಿದೆ. ಇದೆ ಮೊದಲ ಭಾರಿಗೆ ಭಕ್ತರಿಗೆ ದರ್ಶನ ನೀಡಿದ್ದಾರೆ. ಶ್ರೀಗಳನ್ನು ಕಣ್ತುಂಬಿಕೊಂಡು, ಪೂಜೆ ಸಲ್ಲಿಸಲು ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶೀಲ ಸಂಪಾದನಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನದ ಸಮಾರೋಪ, ದಾಸೋಹ ಮಂದಿರ ಉದ್ಘಟನಾ ಸಮಾರಂಭ ನಡೆಯಿತು. ಸಮಾಜದಲ್ಲಿ ಬಹಿರ್ಮುಖ … Read more