ಅಡಿಕೆ ಧಾರಣೆ | 16 ಡಿಸೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ಭದ್ರಾವತಿ, ಶಿಕಾರಿಪುರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಭದ್ರಾವತಿ ಮಾರುಕಟ್ಟೆ ಚೂರು 15000 18000 ಸಿಪ್ಪೆಗೋಟು 10000 10000 ಸಾಗರ ಮಾರುಕಟ್ಟೆ ಕೋಕ 26989 26989 ಚಾಲಿ 36299 41399 ಬಿಳೆ ಗೋಟು 24599 25006 ರಾಶಿ 54029 54029 ಸಿಪ್ಪೆಗೋಟು 23699 23699 ಶಿಕಾರಿಪುರ ಮಾರುಕಟ್ಟೆ ರಾಶಿ 50511 56383 ಶಿವಮೊಗ್ಗ ಮಾರುಕಟ್ಟೆ ಸರಕು 58009 97510 ಬೆಟ್ಟೆ 54019 65669 ರಾಶಿ 48666 57199 ಗೊರಬಲು … Read more

ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?

BY-Vijayendra-Protest-in-Shikaripura

ಶಿಕಾರಿಪುರ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭ 50,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ (Gherao) ಹಾಕಲಾಗುವುದು. ಆ ಮೂಲಕ ರೈತ (Farmers) ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿಕಾರಿಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ (Protest) ಪಾಲ್ಗೊಂಡಿದ್ದ ಬಿ.ವೈ.ವಿಜಯೇಂದ್ರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತಿನಗಾಡಿಯಲ್ಲಿ ಪಾಲ್ಗೊಂಡು ಗಮನಸೆಳೆದರು. ವಿಜಯೇಂದ್ರ ಏನೇನು ಹೇಳಿದರು? ಪಾಯಿಂಟ್‌ 1: ರೈತರ ಹಿತಕಾಯುವುದಾಗಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು … Read more

ಶಿಕ್ಷಣ ಸಂಸ್ಥೆ ಬಸ್‌ಗೆ ಬೈಕ್‌ ಡಿಕ್ಕಿ, 36 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಅಪಘಾತ?

ACCIDENT-NEWS-GENERAL-IMAGE.

ಶಿಕಾರಿಪುರ: ಶಿಕ್ಷಣ ಸಂಸ್ಥೆಯ ವಾಹನಕ್ಕೆ ಹಿಂಬದಿಯಿಂದ ಬೈಕ್‌ನಲ್ಲಿ ಬಂದು ಗುದ್ದಿದ ಯುವಕ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆ ವಾಸಿ ವಿನಾಯಕ (36) ಮೃತಪಟ್ಟವರು. ಬೈಕಿನ ಹಿಂಬದಿ ಸವಾರ ಮೋಹನ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ರಸ್ತೆಯ ಶಾಹಿ ಗಾರ್ಮೆಂಟ್ಸ್‌ನಲ್ಲಿ ನಿತ್ಯದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಮೃತ ವಿನಾಯಕಗೆ ಗರ್ಭಿಣಿ ಪತ್ನಿ, ತಂದೆ, ತಾಯಿ ಇದ್ದಾರೆ. ಶಿಕಾರಿಪುರ ಪಟ್ಟಣ … Read more

ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ

shikaripura-anjanapura-village-board

ಶಿಕಾರಿಪುರ: ಸಾಲದ ಹೊರೆ ತಾಳಲಾರದೆ ಶಿಕಾರಿಪುರ (Shikaripura) ತಾಲೂಕು ಹಿರೇಕೊರಲಹಳ್ಳಿ (Hirekoralahalli) ಗ್ರಾಮದ ವೃದ್ಧ ರೈತ ಪೀಕ್ಲಾ ನಾಯ್ಕ (70) ಅಂಜನಾಪುರ ಜಲಾಶಯದ (Anjanapura Dam) ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಜಮೀನಿಗೆ ಹೋದಾಗ ಸಮೀಪದ ಅಂಜನಾಪುರ ಜಲಾಶಯ ಹಿನ್ನೀರಿಗೆ ಹಾರಿದ್ದಾರೆ ಎಂದು ಆರೋಪಿಸಲಾಗಿದೆ. ಹಾರೋಗೊಪ್ಪ (Harogoppa) ಗ್ರಾಮೀಣ ಬ್ಯಾಂಕ್‌, ಫೈನಾನ್ಸ್‌ನಲ್ಲಿ (Finance) ಸಾಲ ಹಾಗೂ ಕೈಸಾಲವನ್ನು ಮಾಡಿಕೊಂಡಿದ್ದರು ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಚಳಿ ಜೋರು, ಎಲ್ಲೆಲ್ಲು ತಂಪು ತಂಪು ವಾತಾವರಣ, ತಾಲೂಕುಗಳಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಥಂಡಿ ಜೋರಾಗಿದೆ. ದಟ್ಟ ಮಂಜು, ಮೈ ಕೊರೆಯುವ ಚಳಿ ಆವರಿಸಿದೆ. ಇದರ ಜೊತೆಗೆ ಬಿಸಿಲಿನ ಅಬ್ಬರವು ಜೋರಾಗಿದೆ. ಜಿಲ್ಲೆಯಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ಸಂಜೆಯಿಂದಲೆ ವಾತಾವರಣ ತಂಪೇರುತ್ತಿದ್ದು ಬೆಳಗ್ಗೆ ಬಹು ಹೊತ್ತಿನವರೆಗೆ ಇದೇ ವಾತಾವರಣ ಇರುತ್ತದೆ. ಇನ್ನ, ಬಿಸಿಲು ಕೂಡ ಜೊರಾಗಿದೆ. ಇದರಿಂದ ಮಧ್ಯಾಹ್ನದ ವೇಳೆ ಶಿವಮೊಗ್ಗ ನಗರದಲ್ಲಿ ಜನ ಸಂಚಾರವೇ ಕಡಿಮೆಯಾಗುತ್ತಿದೆ. ಇದನ್ನು ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌ ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? … Read more

ಶಿಕಾರಿಪುರ ಪುರಸಭೆಯ ಮಹತ್ವದ ಆದೇಶ, ತಪ್ಪಿದಲ್ಲಿ ದಂಡ ಕಟ್ಟಿಸಿಕೊಳ್ಳುವ ಎಚ್ಚರಿಕೆ

291124 Shikaripura Purasabhe general image

ಶಿಕಾರಿಪುರ: ಪುರಸಭೆ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅವುಗಳ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಶಿಕಾರಿಪುರ ಪುರಸಭೆಯ ಮುಖ್ಯಾಧಿಕಾರಿಗಳಿಗೆ ತಿಳಿಸುವಂತೆ ಸೂಚಿಸಲಾಗಿದೆ. ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಬೇಕು. ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಯ ವತಿಯಿಂದ ಒಬ್ಬ … Read more

ಹಬ್ಬದ ವೇಳೆ ಕೆರೆಗೆ ಹಾರಿ ‘ಮುಗಳಿಕೊಪ್ಪದ ಮುತ್ತು’ ಸಾವು

mugalikoppa-muttu-incident-at-hulaginakoppa-in-shikaripura.

ಶಿಕಾರಿಪುರ: ಹೋರಿ ಬೆದರಿಸುವ ಹಬ್ಬದ ವೇಳೆ ಹೋರಿಯೊಂದು ಓಡುವ ಭರದಲ್ಲಿ ಕೆರೆಗೆ ಹಾರಿ ಮೃತಪಟ್ಟಿದೆ. ಶಿಕಾರಿಪುರ ತಾಲೂಕು ಹುಲಗಿನಕೊಪ್ಪ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಹಬ್ಬದಲ್ಲಿ ಘಟನೆ ಸಂಭವಿಸಿದೆ. ಹುಲಗಿನಕೊಪ್ಪದಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಹಬ್ಬದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಅನೇಕ ಹೋರಿಗಳು ಪಾಲ್ಗೊಂಡಿದ್ದವು. ಹೋರಿಗಳಿಗೆ ಕೊಬ್ಬರಿ ಹಾಗೂ ಬಲೂನ್‌ಗಳನ್ನು ಕಟ್ಟಿ ಅಖಾಡಕ್ಕೆ ಬಿಡಲಾಗುತ್ತಿತ್ತು. ಈ ವೇಳೆ ನಾಗರಾಜ್‌ ಜಂಬೂರು ಎಂಬುವರ ಮುಗಳಿಕೊಪ್ಪದ ಮುತ್ತು ಎಂಬ ಹೆಸರಿನ ಹೋರಿ ಹುಲಗಿನಕಟ್ಟೆ ಕೆರೆಗೆ ಹಾರಿದೆ. ಕೂಡಲೆ ಕೆರೆಗೆ ಇಳಿದು ಹೋರಿಯನ್ನು … Read more

ಮಾಜಿ MLAಯನ್ನು ಕೆಳಗೆ ಉರುಳಿಸಿದ ಹೋರಿ, ವಿಡಿಯೋ ವೈರಲ್

251025-Hori-Hits-former-MLA-at-Shikaripura.webp

ಶಿಕಾರಿಪುರ: ಹೋರಿ ಹಬ್ಬ ವೀಕ್ಷಿಸಲು ತೆರಳಿದ್ದ ಮಾಜಿ ಶಾಸಕ (Former MLA) ಮಹಲಿಂಗಪ್ಪ ಅವರಿಗೆ ಹೋರಿ ತಿವಿದಿದೆ. ಅದೃಷ್ಟವಶಾತ್‌ ಅವರು ಪಾರಾಗಿದ್ದಾರೆ. ಇದರ ವಿಡಿಯೋ ವೈರಲ್‌ ಆಗಿದೆ. ಮಾಜಿ ಶಾಸಕ ಮಹಾಲಿಂಗಪ್ಪ ಶಿಕಾರಿಪುರದ ಬಳ್ಳಿಗಾವಿಯ ಹೋರಿ ಹಬ್ಬಕ್ಕೆ ತೆರಳಿದ್ದರು. ಹೋರಿಯೊಂದು ಜನರನ್ನು ಓಡಿಸಿಕೊಂಡು ಬಂದಿತ್ತು. ಕೂಡಲೆ ಮಹಾಲಿಂಗಪ್ಪ ಅವರು ಮನೆಯೊಂದರ ಬಾಗಿಲಿನ ಬಳಿ ತೆರಳಿ ನಿಂತಿದ್ದರು. ಅವರತ್ತ ನುಗ್ಗಿದ ಹೋರಿ ಕೊಂಬಿನಲ್ಲಿ ಮಹಾಲಿಂಗಪ್ಪ ಅವರ ಬಟ್ಟೆಗೆ ಚುಚ್ಚಿ ಮೇಲೆ ಎತ್ತಿ ಕೆಳಗೆ ಬೀಳಿಸಿತ್ತು. ಅದೃಷ್ಟವಶಾತ್‌ ಮಹಾಲಿಂಗಪ್ಪ ಪಾರಾಗಿದ್ದಾರೆ. … Read more

ಸ್ಪರ್ಧೆ ವೇಳೆ ಬಸ್‌ಗೆ ಡಿಕ್ಕಿಯಾಗಿ ಹೋರಿ ಸಾವು, ಹೇಗಾಯ್ತು ಘಟನೆ?

Bus-collides-with-Hori-at-Shikaripura.

ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ (Bus) ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದೆ. ಪಟ್ಟಣದ ದೊಡ್ಡಕೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬದ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ ಗುದ್ದಿ ಸ್ಥಳದಲ್ಲೇ ಮೃತಪಟ್ಟಿದೆ. ಪಟ್ಟಣದ ವಿನಾಯಕ ನಗರದ ಹೋರಿಯೊಂದು ಅಖಾಡದಿಂದ ತಪ್ಪಿಸಿಕೊಂಡು ಬರುವಾಗ ಶಿವಮೊಗ್ಗ ರಸ್ತೆಯ ಕಾಮಧೇನು ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆಯಿತು. ಹೋರಿಯನ್ನು ಕ್ರೇನ್ ಮೂಲಕ ಸಾಗಿಸಲಾಯಿತು. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ಸರ್ಕಾರಿ ಶಾಲೆ ಆವರಣದಲ್ಲಿ ಹೆಜ್ಜೇನು ದಾಳಿ, ವಿದ್ಯಾರ್ಥಿಗಳಿಗೆ ಗಾಯ

Baganakatte-students-at-government-hospital

ಶಿಕಾರಿಪುರ: ತಾಲೂಕಿನ ಬಗನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು (Bee) ದಾಳಿ ನಡೆಸಿವೆ. ಘಟನೆಯಲ್ಲಿ ಒಟ್ಟು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ‌ ಇಂದು ಬೆಳಗ್ಗೆ ಶಾಲೆ ಆರಂಭವಾಗುತ್ತಿದ್ದಂತೆ ಸಮೀಪದ ಮರದಲ್ಲಿ ಗೂಡು ಕಟ್ಟಿರುವ ಹೆಜ್ಜೇನುಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ. ವಿದ್ಯಾರ್ಥಿಗಳು ಮತ್ತು ಓರ್ವ ಮಹಿಳಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೆ ಗ್ರಾಮಸ್ಥರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ತೀವ್ರ ಗಾಯಗೊಂಡಿರುವ 6 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ » ಖಾಸಗಿ … Read more