ಐದು ವರ್ಷದ ಚಿರತೆಯ ಮೃತದೇಹ ಪತ್ತೆ, ಎಲ್ಲಿ? ಆಗಿದ್ದೇನು?

Dead-leopard-found-in-Yaduru-village-Hosanagara

ಹೊಸನಗರ: ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರ ಚಿರತೆಯ ಮೃತದೇಹ (Dead leopard) ಪತ್ತೆಯಾಗಿದೆ. ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಚಿರತೆ 5 ವರ್ಷದ ಪ್ರಾಯದ್ದು ಎಂದು ಗೊತ್ತಾಗಿದೆ. ಮೇಲ್ನೋಟಕ್ಕೆ ಸ್ವಾಭಾವಿಕ ಸಾವು ಎಂದು ತಿಳಿದುಬಂದಿದೆ. ಆರ್‌ಎಫ್‌ಒ ಸಂತೋಷ ಮಲ್ಲನಗೌಡ್ರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆದು ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮನೆಯೊಳಗೆ ನುಗ್ಗಿ … Read more

ಕಾಡಾನ ದಾಳಿಗೆ ಬೆಳೆ ಹಾನಿ, ರೈತರಿಗೆ ಆತಂಕ

HOSANAGARA-NEWS-GENERAL

ರಿಪ್ಪನ್‌ಪೇಟೆ: ಮೂಗುಡ್ತಿ ವನ್ಯಜೀವಿ ವಲಯದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗಚಿ ಗ್ರಾಮದಲ್ಲಿ ಕಾಡಾನೆಗಳು (Wild elephant) ಬೆಳೆಹಾನಿ ಮಾಡಿವೆ. ಸಿದ್ದಪ್ಪ ಅವರ ತೋಟದಲ್ಲಿ ತೆಂಗು ಮತ್ತು ಬಾಳೆ ಗಿಡಗಳನ್ನು ಹಾನಿಮಾಡಿವೆ. ಅರಣ್ಯ ವ್ಯಾಪ್ತಿಯಲ್ಲಿ ಕಂದಕ ನಿರ್ಮಾಣ ಮಾಡಿದ್ದರೂ ಒಂದೆರಡು ಕಡೆಗಳಲ್ಲಿ ಜನ, ಜಾನುವಾರುಗಳ ಓಡಾಟಕ್ಕಾಗಿ ಬಿಡಲಾಗಿದೆ. ಆ ಸ್ಥಳಗಳ ಮೂಲಕವೇ ಆನೆಗಳು ಬಂದು ಹೊಲ, ಗದ್ದೆಗಳನ್ನು ಹಾನಿಮಾಡುತ್ತಿವೆ. ಹಾಗಾಗಿ ಕಂದಕ ನಿರ್ಮಾಣ ಪೂರ್ಣಗೊಳಿಸಿ ಎಂದು ಅರಣ್ಯಾಧಿಕಾರಿಗಳನ್ನು ರೈತರು ಒತ್ತಾಯಿಸಿದರು. ಇದನ್ನೂ ಓದಿ » ಶಂಕರಘಟದಲ್ಲಿ ಬಸ್ಸಿನ ಟೈರ್‌ ಸ್ಫೋಟ, … Read more