ಶಿವಮೊಗ್ಗದ ಮಹಿಳೆಯರೆ ಹುಷಾರ್‌, ದಾಖಲಾಯ್ತು ಮತ್ತೊಂದು ಕೇಸ್‌

Crime-News-General-Image

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಳೆದ ಕೆಲವು ದಿನದಿಂದ ಮತ್ತೆ ಚಿನ್ನದ ಸರ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯೊಬ್ಬರು ಶಾಪಿಂಗ್‌ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮರಳುತ್ತಿದ್ದಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅರ್ಧ ಭಾಗ ಚಿನ್ನದ ಸರ ಕಸಿದು ಪರಾರಿಯಾಗಿದ್ದಾನೆ. ಸಂಗೀತಾ ಎಂಬುವವರು ಗೋಪಾಳದಲ್ಲಿ ಶಾಪಿಂಗ್‌ ಮುಗಿಸಿ ತಮ್ಮ ದ್ವಿಚಕ್ರ ವಾಹನವನ್ನು ಚಲಾಯಿಸಿಕಂಡು ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಮನೆಗೆ ಮರಳುತ್ತಿದ್ದರು. ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜು ಎದುರು ರಸ್ತೆಯಲ್ಲಿ ಮತ್ತೊಂದು ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ, ಸಂಗೀತಾ ಅವರ ಕೊರಳಿಗೆ ಕೈ … Read more

ಶಿವಮೊಗ್ಗದಲ್ಲಿ ಮತ್ತೆ ತಂಪು ತಂಪು ವಾತಾವರಣ, ತುಸು ಇಳಿಕೆಯಾಯ್ತು ತಾಪಮಾನ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ಬಹುಭಾಗದಲ್ಲಿ ಮತ್ತೆ ಚಳಿ ಶುರುವಾಗಿದೆ. ತಾಪಮಾನ ತುಸು ಇಳಿಕೆಯಾಗಿದೆ. ಆದರೆ ಬಿಸಿಲಿನ ಝಳ ಜೋರಾಗಿದೆ. ಜಿಲ್ಲೆಯಲ್ಲಿ ಮತ್ತೆ ಥಂಡಿ ವಾತಾವರಣ ಶುರುವಾಗಿದೆ. ಸಂಜೆ ನಂತರ ತಂಪೇರುತ್ತಿದೆ. ಬೆಳಗ್ಗೆಯಿಂದ ರಣ ಬಿಸಿಲಿಗೆ ಮೈ ಒಡ್ಡಿ ಹೈರಾಣಾದವರಿಗೆ ತಂಪು ವಾತಾವರಣ ಸ್ವಲ್ಪ ಹಿತ ನೀಡುತ್ತಿದೆ. ಇನ್ನು, ಜಿಲ್ಲೆಯ ಹಲವೆಡೆ ತಾಪಮಾನದಲ್ಲಿ ತುಸು ಇಳಿಕೆಯಾಗಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ … Read more

ಇವತ್ತು ಷಷ್ಠಿ, ಯಾವ್ಯಾವ ರಾಶಿಗೆ ಹೇಗಿದೆ? ಇಂದಿನ ಪಂಚಾಂಗ – ದಿನ ಭವಿಷ್ಯ

Dina-Bhavishya-and-Panchanga-Thumbnail.webp

ದಿನ ಭವಿಷ್ಯ, ಪಂಚಾಂಗ: 12 ರಾಶಿಗಳ ಇಂದಿನ ಭವಿಷ್ಯ (Horoscope), ಇವತ್ತಿನ ಪಂಚಾಂಗ ಇಲ್ಲಿದೆ. ಶಿವಮೊಗ್ಗದಲ್ಲಿ ಇವತ್ತು 6.33ಕ್ಕೆ ಸೂರ್ಯೋದಯ. 5.57ಕ್ಕೆ ಸೂರ್ಯಾಸ್ತವಾಗಲಿದೆ. ಇವತ್ತು ಷಷ್ಠಿ ಮತ್ತು ಶ್ರವಣ ನಕ್ಷತ್ರದ ದಿನ. ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.52 ರಿಂದ 5.43ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.17 ರಿಂದ 6.33ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.09 ರಿಂದ 2.55ರವರಗೆ ಗೋಧೂಳಿ ಮುಹೂರ್ತ ಸಂಜೆ 5.55 ರಿಂದ 6.20ರವರೆಗೆ ರಾಹು, ಯಮಗಂಡ, ಗುಳಿಕ ಕಾಲ ರಾಹು ಕಾಲ ಮಧ್ಯಾಹ್ನ … Read more

ಡೆತ್‌ನೋಟ್‌ ಬರೆದು ನವವಿವಾಹಿತೆ ನಾಪತ್ತೆ, ಭದ್ರಾ ನಾಲೆಯಲ್ಲಿ ಶೋಧ ಕಾರ್ಯಾಚರಣೆ

Latha-incident-at-Holehonnuru-limits.

ಹೊಳೆಹೊನ್ನೂರು: ವಾಟ್ಸಪ್‌ನಲ್ಲಿ ಡೆತ್‌ನೋಟ್‌ ಬರೆದು ನವವಿವಾಹಿತೆ ನಾಪತ್ತೆಯಾಗಿದ್ದಾರೆ. ಆಕೆಗಾಗಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಲತಾ.ಪಿ, ಡೆತ್‌ ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಭದ್ರಾವತಿ ತಾಲೂಕು ಹಂಚಿನ ಸಿದ್ಧಾಪುರ ಬಳಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ವಾಟ್ಸಪ್‌ನಲ್ಲಿ ಡೆತ್‌ನೋಟ್‌ ಪತ್ತೆ ವಾಟ್ಸಪ್‌ನಲ್ಲಿ ಲತಾ ಅವರು ಬರೆದಿದ್ದಾರೆ ಎನ್ನಲಾದ ಡೆತ್‌ ನೋಟ್‌ ಪತ್ತೆಯಾಗಿದೆ. ಇದರಲ್ಲಿ ಪತಿ ಸೇರಿ ಐವರ ವಿರುದ್ಧ ಕಿರುಕುಳದ ಆರೋಪ ಮಾಡಲಾಗಿದೆ. ‘ನಾನು ಮತ್ತೆ ನಮ್ಮ ಮನೆಯಲ್ಲೇ ಹುಟ್ಟಿ ಬರುತ್ತೇನೆ. ನನ್ನ ಬದುಕಲು ಬಿಡದ … Read more

ಸೂಳೆಬೈಲಿನ ಮನೆಯಲ್ಲಿ ಬೆಂಕಿ, ಸ್ಥಳೀಯರಲ್ಲಿ ಆತಂಕ, ತಪ್ಪಿದ ಅನಾಹುತ

251125-incident-at-sulebailu-in-Shivamogga-city.

ಶಿವಮೊಗ್ಗ: ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಗರದ ಸೂಳೆಬೈಲು ಬಡಾವಣೆಯ ಈದ್ಗಾ ನಗರದ 5ನೇ ಅಡ್ಡರಸ್ತೆಯ ಅಮ್ರೀನ್‌ ತಾಜ್‌ ಎಂಬುವವರ ಮನೆಯಲ್ಲಿ ಸಂಜೆ ವೇಳೆಗೆ ದಟ್ಟ ಹೊಗೆ ಆವರಿಸಿತ್ತು. ಸ್ವಲ್ಪ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್‌ ದೊಡ್ಡ ಹಾನಿ ತಪ್ಪಿದಂತಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತುಂಗಾ ನಗರ ಪೊಲೀಸ್‌ … Read more

ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?

Lokayukta-Raid-in-shimoga-SIMS-FDA-Lakshmipathi-House.

ಶಿವಮೊಗ್ಗ: ಆದಾಯಕ್ಕಿಂತಲು ಹೆಚ್ಚಿಗೆ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಶಿವಮೊಗ್ಗ ಮೆಡಿಕಲ್‌ ಕಾಲೇಜು ಎಫ್‌.ಡಿ.ಎ ಲಕ್ಷ್ಮೀಪತಿ.ಸಿ.ಎನ್‌ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಐದು ಕಡೆ ದಾಳಿ ನಡೆಸಿ ಒಟ್ಟು ₹2.49 ಕೋಟಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ. ಲಕ್ಷ್ಮೀಪತಿ ಬಳಿ 3 ಮನೆಗಳು, 3 ಎಕರೆ 20 ಗುಂಟೆ ಕೃಷಿ ಜಮೀನು ಪತ್ತೆಯಾಗಿದೆ. ಇವುಗಳ ಮೌಲ್ಯ ₹1,63,80,000 ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇನ್ನು ದಾಳಿ ಸಂದರ್ಭ ₹12,01,720 ನಗದು, ₹ 23,29,880 … Read more

ಅಡಿಕೆ ಧಾರಣೆ | 25 ನವೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಸಾಗರ, ಶಿವಮೊಗ್ಗ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಸಾಗರ ಮಾರುಕಟ್ಟೆ ಕೆಂಪುಗೋಟು 34499 34499 ಕೋಕ 33989 33989 ಚಾಲಿ 40269 42109 ಬಿಳೆ ಗೋಟು 24569 35666 ರಾಶಿ 56029 56029 ಶಿವಮೊಗ್ಗ ಮಾರುಕಟ್ಟೆ ಗೊರಬಲು 19010 42899 ನ್ಯೂ ವೆರೈಟಿ 41999 59119 ಬೆಟ್ಟೆ 54100 70519 ರಾಶಿ 45360 60089 ಸರಕು 67100 93896 ಇದನ್ನೂ ಓದಿ » ಲಾರಿ ಚಕ್ರದಡಿ ಸಿಲುಕಿದ ಬೈಕ್‌, ಇಬ್ಬರು ಸವಾರರು ಸ್ಥಳದಲ್ಲೆ ಸಾವು

ಶಿವಮೊಗ್ಗದಲ್ಲಿ ರಾತ್ರೋರಾತ್ರಿ ಆಟೋ ನಾಪತ್ತೆ, ಆಗಿದ್ದೇನು?

Doddapete-Police-Station.

ಶಿವಮೊಗ್ಗ: ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾ ಕಳ್ಳತನವಾಗಿದೆ. ನಗರದ ಬಿ.ಬಿ.ರಸ್ತೆಯ ಅಂಚೆ ಕಚೇರಿ ಸಮೀಪ ಘಟನೆ ಸಂಭವಿಸಿದೆ. ನಾಗರಾಜ್‌ ಎಂಬುವವರು ಎಂದಿನಂತೆ ಬಾಡಿಗೆ ಮುಗಿಸಿ ಬಂದು ರಾತ್ರಿ 9 ಗಂಟೆ ಹೊತ್ತಿಗೆ ಮನೆ ಮುಂದೆ ಆಟೋ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಮನೆಯಿಂದ ಹೊರ ಬಂದಾಗ ಆಟೋ ರಿಕ್ಷಾ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಎಲ್ಲೆಡೆ ಹುಡುಕಿದ ನಾಗರಾಜ್‌ ಅವರು ಬಳಿಕ ದೂರು‌ ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಲಾರಿ ಚಕ್ರದಡಿ ಸಿಲುಕಿದ ಬೈಕ್‌, … Read more

ಲಾರಿ ಚಕ್ರದಡಿ ಸಿಲುಕಿದ ಬೈಕ್‌, ಇಬ್ಬರು ಸವಾರರು ಸ್ಥಳದಲ್ಲೆ ಸಾವು

Bike-and-Lorry-mishap-at-thirthahalli

ತೀರ್ಥಹಳ್ಳಿ: ಲಾರಿ ಮತ್ತು ಬೈಕ್‌ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಆರ್‌.ಎಂ.ಸಿ ಯಾರ್ಡ್‌ ಬಳಿ ತಡರಾತ್ರಿ ಅಪಘಾತವಾಗಿದೆ. ಬೈಕ್‌ ಸವಾರರಾದ ಸುದೀಪ್‌ (25), ಸುಧೀಶ್‌ (30) ಮೃತರು. ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್‌ ನಜ್ಜುಗುಜ್ಜಾಗಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಮೃತರು ತೀರ್ಥಹಳ್ಳಿಯ ಯಡೇಹಳ್ಳಿ ಮತ್ತು ಇಂದಿರಾನಗರಕ್ಕೆ ಸೇರಿದವರು. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಅಗರದಹಳ್ಳಿ ಕ್ಯಾಂಪ್‌ನ ವ್ಯಕ್ತಿಗೆ … Read more

ಅಗರದಹಳ್ಳಿ ಕ್ಯಾಂಪ್‌ನ ವ್ಯಕ್ತಿಗೆ 10 ವರ್ಷ ಕಠಿಣ ಜೈಲು, ₹1,00,000 ದಂಡ ವಿಧಿಸಿದ ಕೋರ್ಟ್‌

-jail-for-Agaradahalli-Chandrappa.

ಭದ್ರಾವತಿ: ಕ್ರಿಮಿನಾಶಕ ಸೇವಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಅದಕ್ಕೆ ಕಾರಣನಾದ ವ್ಯಕ್ತಿಗೆ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ, ₹1,00,000 ದಂಡ ವಿಧಿಸಿದೆ. ಭದ್ರಾವತಿಯಲ್ಲಿರುವ 4ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾ. ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್‌ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭದ್ರಾವತಿ ತಾಲೂಕು ಅಗರದಹಳ್ಳಿ ಕ್ಯಾಂಪ್‌ನ ಚಂದ್ರಪ್ಪಗೆ (50) ಜೈಲು ಶಿಕ್ಷೆಯಾಗಿದೆ. ಶ್ರೀಧರ (21) 2019ರ ಜನವರಿ 12ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಏನಿದು ಪ್ರಕರಣ? ‘ಶ್ರೀಧರ್‌ಗೆ … Read more