‘ನಾನೇ ಟಿಪ್ಪು ಎಂದು ಖಡ್ಗ ಹಿಡಿದು ನಿಂತಿದ್ದ ಯಡಿಯೂರಪ್ಪ ಅವರಿಗೇನು ಎರಡು ನಾಲಿಗೇನಾ?’

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 05 ನವೆಂಬರ್ 2019 ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ.. ಆದ್ರೆ ಈಗ ಟಿಪ್ಪುಸುಲ್ತಾನರನ್ನ ಪಠ್ಯದಿಂದ ಕೈಬಿಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಚೈತನ್ಯ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಟಿಪ್ಪು ಜಯಂತಿ ಬೇಡ ಎಂದರೆ ಮಾಡಬೇಡಿ. ಸ್ವಾತಂತ್ರ್ಯ ಪೂರ್ವ ಹೋರಾಟದಲ್ಲಿ ಟಿಪ್ಪು ಹಾಗೂ ಹೈದರಾಲಿ ಹೋರಾಟವನ್ನ ಮರೆಯಲು ಸಾಧ್ಯವಿಲ್ಲ. ಟಿಪ್ಪು ಮತ್ತು ಹೈದರಾಲಿ ಮೈಸೂರು ಯುದ್ದ ಮಾಡಿದ್ದು ಸುಳ್ಳಾ … Read more

ಯಡಿಯೂರಪ್ಪ ವಿಡಿಯೋ ಲೀಕ್ ಮಾಡಿದ್ದು ಅವರಿಬ್ಬರೆ ಇರಬೇಕು, ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಟಾಂಗ್

ಶಿವಮೊಗ್ಗ ಲೈವ್.ಕಾಂ | SHIMOGA | 5 ನವೆಂಬರ್ 2019 ಚುನಾಯಿತ ಪ್ರತಿನಿಧಿಗಳನ್ನು ಆಮಿಷ ನೀಡಿ ಖರೀದಿಸಿ ಹಿಂಬಾಗಿಲಿನಿಂದ ಅಧಿಕಾರಕ್ಕೇರಿ ಸಂವಿಧಾನಕ್ಕೆ ದ್ರೋಹ ಬಗೆದ ಬಿಜೆಪಿಯ ಅನೈತಿಕ ಸರ್ಕಾರ ಕೂಡಲೇ ತೊಲಗಬೇಕು. ಕೇಂದ್ರದ ಗೃಹಮಂತ್ರಿ ಮತ್ತು ರಾಜ್ಯದ ಮುಖ್ಯಮಂತ್ರಿ ಸಂವಿಧಾನಕ್ಕೆ ದ್ರೋಹ ಬಗೆದಿದ್ದು ಸಂವಿಧಾನದ ರಕ್ಷಣೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಗಾಯತ್ರಿ ಮಾಂಗಲ್ಯ … Read more

ಶಿವಮೊಗ್ಗದ ಮೂವರು ಬ್ಯಾಂಕ್ ಸಿಬ್ಬಂದಿಗಳ ಒಂದು ಐಡಿಯಾ ರಾಜ್ಯದ ಬ್ಯಾಂಕುಗಳನ್ನೆ ಬದಲಿಸುತ್ತಿದೆ, ಏನು ಗೊತ್ತಾ ಐಡಿಯಾ?

ಶಿವಮೊಗ್ಗ ಲೈವ್.ಕಾಂ | SHIMOGA | 5 ನವೆಂಬರ್ 2019 ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊರ ರಾಜ್ಯದವರ ಹಾವಳಿ, ಕನ್ನಡಿಗರ ಕೊರತೆ ಎಂಬ ಟೀಕೆಗಳಿಗೆ ಈಗ ಬ್ಯಾಂಕ್ ಸಿಬ್ಬಂದಿಯೇ ಪರಿಹಾರ ಹುಡುಕಲು ಮುಂದಾಗಿದ್ದಾರೆ. ಶಿವಮೊಗ್ಗದ ಮೂವರು ಬ್ಯಾಂಕ್ ಸಿಬ್ಬಂದಿ ಆರಂಭಿಸಿದ ಪರಿಹಾರ ಈಗ ರಾಜ್ಯ ವ್ಯಾಪ್ತಿ ವಿಸ್ತರಿಸಿದೆ. ಪ್ರತಿಫಲದತ್ತ ಹೆಜ್ಜೆ ಹಾಕಿದೆ. ಶಿವಮೊಗ್ಗದ ಕೆನರಾ ಬ್ಯಾಂಕ್ ಉದ್ಯೋಗಿಗಳಾದ ರಾಜೇಂದ್ರ ಪೈ, ರಘು.ಕೆ.ಆರ್, ಪ್ರಭುಗೌಡ ಅವರ ಹೊಸ ಐಡಿಯಾಗೆ ಉತ್ತಮ ಸ್ಪಂದನೆ ಸಿಕ್ಕಿದೆ. 3700 ವಿದ್ಯಾರ್ಥಿಗಳು ಈಗಾಗಲೇ ತರಬೇತಿ ಪಡೆದಿದ್ದಾರೆ. … Read more

‘ಇದಿಷ್ಟನ್ನು ಹೇಳಿದರೆ ಸಿದ್ದರಾಮಯ್ಯ ಅವರಿಗೆ ಗೋಪಿ ಸರ್ಕಲ್’ನಲ್ಲಿ ದೊಡ್ಡ ಹೂವಿನ ಹಾರ ಹಾಕ್ತೀನಿ’

041119 Ayanur Manjunath Press Meet 1

ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಹಲವು ಪ್ರಕರಣಗಳಿವೆ. ಒಂದು ವೇಳೆ ತಮ್ಮ ವಿರುದ್ಧ ಪ್ರಕರಣಗಳಿಲ್ಲ ಎಂದು ಅವರು ಹೇಳಿದರೆ ಶಿವಮೊಗ್ಗಕ್ಕೆ ಬಂದಾಗ ಗೋಪಿ ಸರ್ಕಲ್’ನಲ್ಲಿ ದೊಡ್ಡ ಹಾರ ಹಾಕುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ 62 ಕೇಸುಗಳು ಪೆಂಡಿಂಗ್ ಇದೆ. … Read more

ಶಿವಮೊಗ್ಗದಲ್ಲಿ ದಿಢೀರ್ ಪ್ರತ್ಯಕ್ಷವಾದ ‘ಅಭಿನವ ಬಸವಣ್ಣ’, ಡಿವಿಎಸ್ ಸರ್ಕಲ್’ನಿಂದ ಮೆರವಣಿಗೆ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019 ಲಂಡನ್’ನಿಂದ ಶಿವಮೊಗ್ಗಕ್ಕೆ ತಂದು ಒಂದೂವರೆ ವರ್ಷವಾದರು ಬಸವಣ್ಣನ ಪ್ರತಿಮೆ ಸ್ಥಾಪನೆಗೆ ಮಹಾನಗರ ಪಾಲಿಕೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್, ಬಸವಣ್ಣನ ವೇಷ ಧರಿಸಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಡಿವಿಎಸ್ ಕಾಲೇಜು ಸರ್ಕಲ್’ನಿಂದ ಮೆರವಣಿಗೆ ಮೂಲಕ ಬಂದು ಮಹಾನಗರ ಪಾಲಿಕೆ ಮೇಯರ್ ಲತಾ ಗಣೇಶ್ ಅವರಿಗೆ ಮನವಿ ಸಲ್ಲಿಸಿದರು. ಮಹಾಸಭಾ ಅಧ್ಯಕ್ಷ … Read more

‘ಪೋಷಕರೆ ಎಚ್ಚರ, ಜನವರಿ ಬಳಿಕ ಹುಷಾರ್, ಗಂಭೀರವಾಗುತ್ತೆ ನಮ್ಮ ಪ್ರೊಟೆಸ್ಟ್’

ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019 ಸರ್ಕಾರ ನಮ್ಮ ಹೋರಾಟವನ್ನು ಹಗುರವಾಗಿ ಪರಿಗಣಿಸಿದರೆ ಜನವರಿ ಬಳಿಕ ಗಂಭೀರ ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 1247 ಉಪನ್ಯಾಸಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಯುಜಿಸಿ ತಿಳಿಸಿದೆ. ಸೇವಾವಧಿ, ಅರ್ಹತೆ ಆಧಾರದ ಮೇಲೆ 1247 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನೆ ನೇಮಕ ಮಾಡಬೇಕು. ಅಲ್ಲದೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ವೇತನ ಹೆಚ್ಚಳ ಮಾಡಬೇಕು ಎಂದು … Read more

ಶಿವಮೊಗ್ಗಕ್ಕೆ ಮತ್ತೊಂದು ಸ್ಥಳೀಯ ನ್ಯೂಸ್ ಚಾನೆಲ್, ಲೋಕಾರ್ಪಣೆಗೆ ಡೇಟ್ ಫಿಕ್ಸ್

ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019 ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡುವ ಸಲುವಾಗಿ ಶಿವಮೊಗ್ಗದಲ್ಲಿ ಮತ್ತೊಂದು ಸುದ್ದಿ ವಾಹಿನಿ ಆರಂಭವಾಗುತ್ತಿದೆ. ನವೆಂಬರ್ 6ರಂದು ‘ನಮ್ಮ ಟಿವಿ ಶಿವಮೊಗ್ಗ’ ಚಾನೆಲ್ ಲೋಕಾರ್ಪಣೆಗೊಳ್ಳುತ್ತಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಮ್ಮ ಟಿವಿ ಶಿವಮೊಗ್ಗದ ಸಂಪಾದಕ ನಾಗರಾಜ ನೇರಿಗೆ, ಸುದ್ದಿ ಜೊತೆಗೆ ಕೃಷಿ, ವ್ಯಾಪಾರ, ವಾಣಿಜ್ಯ ಸೇರಿದಂತೆ ಹಲವು ಸ್ಥಳೀಯ ವಿಚಾರಗಳಿಗೆ ಆದ್ಯತೆ ನೀಡಲಿದೆ ಎಂದರು. ನವೆಂಬರ್ 6ರಂದು ನಮ್ಮ ಟಿವಿ ಶಿವಮೊಗ್ಗ ಲೋಕಾರ್ಪಣೆಗೊಳ್ಳಲಿದೆ. ಶ್ರೀ ಮನ್ಮಹಾರಾಜ … Read more

ಶಿವಮೊಗ್ಗದ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಎಲೆಕ್ಷನ್’ಗೆ ಡೇಟ್ ಫಿಕ್ಸ್, ಎಲ್ಲೆಲ್ಲಿ ಚುನಾವಣೆ ಘೋಷಣೆಯಾಗಿದೆ ಗೊತ್ತಾ?

Voters General Image 1

ಶಿವಮೊಗ್ಗ ಲೈವ್.ಕಾಂ | SHIMOGA | 29 ಅಕ್ಟೋಬರ್ 2019 ಶಿವಮೊಗ್ಗದ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಡಿಸಿ ಕೆ.ಬಿ.ಶಿವಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ. ಅ.31ರಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.4 ಕೊನೆಯ ದಿನ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮತದಾನದ ಅವಶ್ಯಕತೆ ಇದ್ದಲ್ಲಿ ನ.12ರ ಬೆಳಗ್ಗೆ 7 ರಿಂದ ಸಂಜೆ 5ರ ವರೆಗೆ ಚುನಾವಣೆ ನಡೆಸಲಾಗುತ್ತದೆ. … Read more

ಶಿವಮೊಗ್ಗದಲ್ಲಿ ಚೈತನ್ಯ ಸಮಾವೇಶ, ಬರ್ತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ

H-S-Sundaresh-Congress-President

ಶಿವಮೊಗ್ಗ ಲೈವ್.ಕಾಂ | SHIMOGA | 29 ಅಕ್ಟೋಬರ್ 2019 ರಾಜ್ಯ ಮತ್ತು ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ನ.5ರಂದು ಶಿವಮೊಗ್ಗದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಚೈತನ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಗ್ರಾಪಂ, ತಾಪಂ, ಜಿಪಂ, ನಗರಸಭೆ, ನಗರಪಾಲಿಕೆ ಸದಸ್ಯರು ಮತ್ತು ಸೋತವರು ಮನೆ ಮನೆಗೆ ತೆರಳಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎಂದರು. ಎಐಸಿಸಿ … Read more

ರಾಜ್ಯಕ್ಕೆ ಬಂದರು ಡಿಕೆಶಿ, MRS ಸರ್ಕಲ್’ನಲ್ಲಿ ಪಟಾಕಿ ಹೊಡೆದು, ಸ್ವೀಟ್ ಹಂಚಿದರು ಅಭಿಮಾನಿಗಳು

ಶಿವಮೊಗ್ಗ ಲೈವ್.ಕಾಂ | SHIMOGA | 26 ಅಕ್ಟೋಬರ್ 2019 ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಬಿಡುಗಡೆಯಾಗಿ ರಾಜ್ಯಕ್ಕೆ ಆಗಮಿಸಿದ ಹಿನ್ನೆಲೆ, ಅಭಿಮಾನಿಗಳು ಇವತ್ತು ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿದರು. MRS ಸರ್ಕಲ್’ನಲ್ಲಿ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗಿದ ಅಭಿಮಾನಿಗಳು, ಬಳಿ ಪಟಾಕಿ ಸಿಡಿಸಿದರು. ಬಸ್ ನಿಲ್ದಾಣದಲ್ಲಿ ನಿಂತಿರುವವರಿಗೆ, ವಾಹನ ಚಾಲಕರಿಗೆ, ಬಸ್ಸಿನ ಪ್ರಯಾಣಿಕರಿಗೆ ಸಿಹಿ ಹಂಚಿದರು. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 ಈ ಮೇಲ್ … Read more