ಮಳೆಹಾನಿ ಪ್ರದೇಶಗಳಲ್ಲಿ ಸಂಸದ ರಾಘವೇಂದ್ರ ರೌಂಡ್ಸ್, ಹತ್ತು ಕೋಟಿ ಪರಿಹಾರಕ್ಕೆ ಸೂಚನೆ, ಎಲ್ಲೆಲ್ಲಿ ಭೇಟಿ ನೀಡಿದ್ದರು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIRALAKOPPA | 23 ಅಕ್ಟೋಬರ್ 2019 ಭಾರಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಕೂಡಲೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆಹಾನಿ ಪ್ರದೇಶಗಳಾದ ಶಿರಾಳಕೊಪ್ಪ, ಬೆಲವಂತನಕೊಪ್ಪ, ಬಳ್ಳಿಗಾವಿ ಮತ್ತು ಬಸವನಂದಿಹಳ್ಳಿ ಗ್ರಾಮಗಳಿಗೆ ಸಂಸದ ರಾಘವೇಂದ್ರ ಭೇಟಿ ನೀಡಿದರು. ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. 2ನೇ ಭಾರಿ ಮಳೆಯಿಂದಾಗಿ ಕೆರೆಕಟ್ಟೆ ಒಡೆದು 10 ಕೋಟಿ ರೂ.ಗಿಂತಲು ಅಧಿಕ … Read more

ಹತ್ತು ಅಕ್ರಮ ಮನೆಗಳು ನೆಲಸಮ, ತೆರವು ವೇಳೆ ನಡೆಯಿತು ಹೈಡ್ರಾಮಾ, ಪೊಲೀಸ್ ರಕ್ಷಣೆಯಲ್ಲಿ ಕಾರ್ಯಾಚರಣೆ

ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019 ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಇವತ್ತು ತೆರವು ಮಾಡಲಾಯಿತು. ಈ ವೇಳೆ ಸ್ಥಳೀಯರ ವಿರೋಧದಿಂದಾಗಿ ಕೆಲಕಾಲ ಹೈಡ್ರಾಮಾ ನಡೆಯಿತು. ವಿರೂಪಿನಕೊಪ್ಪದ ಸರ್ವೆ ನಂಬರ್ 6ರಲ್ಲಿ ಮಹಾನಗರ ಪಾಲಿಕೆ ವತಿಯಿಂದ ಹತ್ತು ಮನೆಗಳ ತೆರವು ಮಾಡಲಾಗುತ್ತಿದೆ. ಮನೆ ತೆರವು ಮಾಡಲು ಜೆಸಿಬಿ ಆಗಮಿಸುತ್ತಿದ್ದಂತೆ ನಿವಾಸಿಗಳು ವಿರೋಧ ವ್ಯಕ್ತಪಡಿಸಿದರು. ಮನೆಯಿಂದ ಹೊರಬಾರದೆ ತೆರವು ಕಾರ್ಯಾಚರಣೆಗೆ ತಡೆಯೊಡ್ಡಿದರು. ಪೊಲೀಸರು ಮಧ್ಯಪ್ರವೇಶಿಸಿ ಸ್ಥಳೀಯರನ್ನು ಮನವೊಲಿಸಿ ತೆರವು … Read more

ಶಿವಮೊಗ್ಗ, ಶಿಕಾರಿಪುರದಲ್ಲಿ ಸ್ಪೀಡ್, ಸಾಗರದಲ್ಲಿ ಬಹಳ ಸ್ಲೋ, ನೆರೆ ಪರಿಹಾರ ವಿಳಂಬಕ್ಕೆ ತಾಲೂಕು ಪಂಚಾಯಿ ಅಧ್ಯಕ್ಷರ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SAGARA | 22 ಅಕ್ಟೋಬರ್ 2019 ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಿಗೆ ಹೋಲಿಸಿದೆ ಸಾಗರದಲ್ಲಿ ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಆರೋಪಿಸಿದ್ದಾರೆ. ತ್ಯಾಗರ್ತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಜನಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ, ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ನೀಡದೆ ಇರುವುದೆ ಪರಿಹಾರ ವಿತರಣೆ ವಿಳಂಬಕ್ಕೆ ಕಾರಣ ಎಂದು ಆರೋಪಿಸಿದರು. ಕೆಲವು ಕಡೆ ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಸಮೀಕ್ಷೆಯಲ್ಲಿ … Read more

ಬ್ಯಾಂಕ್ ಗ್ರಾಹಕರಿಗೆ ಭಾರಿ ದಂಡ, ಸರ್ವಿಸ್ ಚಾರ್ಜ್ ಹೆಚ್ಚಳ, ಬ್ಯಾಂಕುಗಳ ವಿಲೀನ, ಸಿಬ್ಬಂದಿಯಿಂದ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019 ಬ್ಯಾಂಕುಗಳ ವಿಲೀನ ಸೇರಿದಂತೆ ವಿವಿಧ ಬೇಡಿಕೆಗಳನ್ನು ವಿರೋಧಿಸಿ ಬ್ಯಾಂಕ್ ನೌಕರರು ಇವತ್ತು ಮುಷ್ಕರ ನಡೆಸಿದರು. ಜಿಲ್ಲಾ ಪಂಚಾಯಿತಿ ಬಳಿ ಇರುವ ಲೀಡ್ ಬ್ಯಾಂಕ್ ಮುಂದೆ ನೌಕರರು ಪ್ರತಿಭಟನೆ ನಡೆಸಿದರು. ಬ್ಯಾಂಕುಗಳ ವಿಲೀನ ಮಾಡಬಾರದು. ಸಾಲ ಹಿಂತಿರುಗಿಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ದಂಡ, ಸರ್ವಿಸ್ ಚಾರ್ಜ್ ಹೆಚ್ಚಳ ಮಾಡಿ ಗ್ರಾಹಕರಿಗೆ ತೊಂದರೆ ಉಂಟು ಮಾಡಬಾರದು. ಬ್ಯಾಂಕ್ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಎಲ್ಲ ಬ್ಯಾಂಕುಗಳಲ್ಲಿ ಅಗತ್ಯ ಸಿಬ್ಬಂದಿ … Read more

ನವುಲೆ ಕ್ರಿಕೆಟ್ ಸ್ಟೇಡಿಯಂ ಸಂಪೂರ್ಣ ಜಲಾವೃತ, ಒಳಗೆ ಎಲ್ಲೆಲ್ಲು ನೀರೋ ನೀರು

ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019 ಭಾರಿ ಮಳೆಗೆ ಶಿವಮೊಗ್ಗದ ನವುಲೆಯಲ್ಲಿರುವ ಕ್ರಿಕೆಟ್ ಸ್ಟೇಡಿಯಂ ಸಂಪೂರ್ಣ ಜಲಾವೃತವಾಗಿದೆ. ಸ್ಟೇಡಿಯಂ ಗೇಟ್’ನಿಂದಲೆ ನೀರು ನಿಂತಿದೆ. ಭಾನುವಾರ ಸುರಿದ ಭಾರಿ ಮಳೆಗೆ ನವುಲೆ ಕೆರೆ ತುಂಬಿದೆ. ಪಕ್ಕದಲ್ಲಿ ಇರುವ ಸ್ಟೇಡಿಯಂಗೆ ನೀರು ನುಗ್ಗಿದೆ. ಅಂಗಣ, ಪಿಚ್ ಕೂಡ ನೀರಿನಲ್ಲಿ ಮುಳುಗಿದೆ.  ಕಳೆದ ಮಳೆಗಾಲದಲ್ಲು ನವುಲೆ ಸ್ಟೇಡಿಯಂ ಜಲಾವೃತವಾಗಿತ್ತು. ಈಗ ಭಾನುವಾರ ರಾತ್ರಿ ಸುರಿದ ಒಂದು ಮಳೆಗೆ ಸ್ಟೇಡಿಯಂ ಜಲಾವೃತವಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – … Read more

ರೈತರ ಜೊತೆ ಪ್ರತಿಭಟನೆಗಿಳಿದ ಶಾಸಕ ಹಾಲಪ್ಪ, ಡಿಸಿ ಬರುವವರೆಗೂ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಧರಣಿ

ಶಿವಮೊಗ್ಗ ಲೈವ್.ಕಾಂ | SAGARA | 21 ಅಕ್ಟೋಬರ್ 2019 ಸಾಗರ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಶಾಸಕ ಹರತಾಳು ನೇತೃತ್ವದಲ್ಲಿ ರೈತರು ದಿಢೀರ್ ಪ್ರತಿಬಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಆಗಮಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ತಾಲೂಕಿನ ಇರುವಕ್ಕಿಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ನಿರ್ಮಿಸಲಾಗುತ್ತಿದೆ. ವಿವಿ ಆವರಣದ ಪಕ್ಕದಲ್ಲಿರುವ ಜಮೀನುಗಳಿಗೆ ಜಮೀನುಗಳಿಗೆ ಇತ್ತೀಚೆಗೆ ಕಳೆನಾಶಕ ಸಿಂಪಡಿಸಲಾಗಿದೆ. ವಿವಿ ಸಿಬ್ಬಂದಿಯೆ ಇದನ್ನು ಸಿಂಪಡಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ರೈತರನ್ನು ಒಕ್ಕಲೆಬ್ಬಿಸಬೇಕು ಎಂಬ ದುರುದ್ದೇಶದಿಂದಲೇ ಈ ಕೃತ್ಯ … Read more

ಮಂಡ್ಲಿಯಲ್ಲಿ ರಸ್ತೆ ಮೇಲೆ ಚರಂಡಿ ನೀರು, ಮನೆಗಳು ಜಲಾವೃತ, ಶಿವಮೊಗ್ಗ – ತೀರ್ಥಹಳ್ಳಿ ರಸ್ತೆ ಸಂಚಾರ ವ್ಯತ್ಯಯ

ಶಿವಮೊಗ್ಗ ಲೈವ್.ಕಾಂ | SHIMOGA | 21 ಅಕ್ಟೋಬರ್ 2019 ಶಿವಮೊಗ್ಗ ನಗರದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದೆ. ಚರಂಡಿಗಳು ತುಂಬಿ ಹರಿದಿದ್ದು, ಕೆಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಂಡ್ಲಿಯಲ್ಲಿ ರಾಜಕಾಲುವೆ ನೀರು ರಸ್ತೆ ಮತ್ತು ಮನೆಗಳಿಗೆ ನುಗ್ಗಿದೆ. ರಸ್ತೆಯ ಮೇಲೆಲ್ಲ ನೀರು ನಿಂತಿದ್ದರಿಂದ ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇದರಿಂದ ಬೆಳಗ್ಗೆ ಭಾರಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಜನರು ಸಂಕಷ್ಟ ಅನುಭವಿಸಬೇಕಾಯಿತು. ಇನ್ನ, ಮಂಡ್ಲಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ … Read more

ಶಿವಮೊಗ್ಗದಲ್ಲಿ ರೌಡಿ ಪರೇಡ್, 300ಕ್ಕೂ ಹೆಚ್ಚು ರೌಡಿಗಳಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಶಿವಮೊಗ್ಗ ಲೈವ್.ಕಾಂ | SHIMOGA | 20 ಅಕ್ಟೋಬರ್ 2019 ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ರೌಡಿಗಳ ಪರೇಡೆ ನಡೆಸಲಾಯಿತು. ವಿವಿಧ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವವರು ಪರೇಡ್’ನಲ್ಲಿ ಭಾಗವಹಿಸಿದ್ದರು. ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸರು ಖಡಕ್ ವಾರ್ನಿಂಗ್ ನೀಡಿದರು. ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಶಿವಮೊಗ್ಗ ಉಪ ವಿಭಾಗದ ವಿವಿಧ ಪೊಲೀಸ್ ಠಾಣೆಗಳ 300ಕ್ಕೂ ಹೆಚ್ಚು ರೌಡಿಗಳು ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಈ … Read more

ಶಿವಮೊಗ್ಗದ ಹೊಸಮನೆ ಮಹಿಳೆಯ ಡಿಫರೆಂಟ್ ಪ್ರಯೋಗ, ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್, ಏನದು?

201019 Geetha Pandith Cloath Bag In Nehru Stadium 1

ಶಿವಮೊಗ್ಗ ಲೈವ್.ಕಾಂ | SHIMOGA | 20 ಅಕ್ಟೋಬರ್ 2019 ಮನೆಯಲ್ಲಿ ಬಳೆಕೆಯಾಗದೆ ಉಳಿದುಕೊಂಡಿರುವ ಬಟ್ಟೆಗಳಿಗೆ ಜೀವ ತುಂಬಿದರು ಈ ಮಹಿಳೆ. ನೆಹರು ಸ್ಟೇಡಿಯಂನಲ್ಲಿ ವಾಕಿಂಗ್ ಬರುವವರಿಗೆ ಇವರೆ ಈಗ ಪ್ರೇರಣೆ. ಈ ಮಹಿಳೆಯ ಕೆಲಸಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಗುತ್ತಿದೆ ಭಾರೀ ಮೆಚ್ಚುಗೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದ್ಯದಲ್ಲೆ ತಲುಪಿಸಲಿದ್ದಾರೆ ಸ್ಪೆಷಲ್ ಉಡುಗೊರೆ. ಇವರು ಗೀತಾ ನರಹರಿ ಪಂಡಿತ್. ಶಿವಮೊಗ್ಗದ ಹೊಸಮನೆ ಎರಡನೆ ಕ್ರಾಸ್ ನಿವಾಸಿ. ಪ್ರಧಾನಿ ನರೇಂದ್ರ ಮೋದಿ ಅಂದರೆ ಅಚ್ಚುಮೆಚ್ಚು. ಪ್ಲಾಸ್ಟಿಕ್ ನಿಷೇಧ … Read more

ಲಿಂಗನಮಕ್ಕಿ ಡ್ಯಾಂನ 9 ಗೇಟ್ ಓಪನ್, ಮತ್ತೆ ನಳನಳಿಸುತ್ತಿದೆ ಜೋಗ್ ಫಾಲ್ಸ್

191019 Jog Falls Full 1

ಶಿವಮೊಗ್ಗ ಲೈವ್.ಕಾಂ | SAGARA | 19 ಅಕ್ಟೋಬರ್ 2019 ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದರಿಂದ, ಒಂಭತ್ತು ಗೇಟುಗಳನ್ನು ತೆಗೆದು ನೀರು ಹೊರಬಿಡಲಾಗುತ್ತಿದೆ. ಇದರಿಂದ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ 20,869 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಒಂಭತ್ತು ಗೇಟುಗಳನ್ನು ತೆಗೆದು 15 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡುತ್ತಿರುವುದಿರಂದ ಜೋಗ ಜಲಪಾತ ಮತ್ತೆ ನಳನಳಿಸುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ವೀಕೆಂಡ್ ಆಗಿದ್ದರಿಂದ ಪ್ರವಾಸಿಗರ ಸಂಖ್ಯೆ … Read more