ಸಿಎಂ ಯಡಿಯೂರಪ್ಪ ತವರು ಕ್ಷೇತ್ರದಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ, ಯಾವಾಗ ಆರಂಭ ಗೊತ್ತಾ?

Kuvempu University Examination Building 1

ಶಿವಮೊಗ್ಗ ಲೈವ್.ಕಾಂ | ಶಂಕರಘಟ್ಟ | 20 ಸೆಪ್ಟೆಂಬರ್ 2019 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ತೆರೆಯಲು ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೆ ಕೇಂದ್ರ ಆರಂಭಿಸಲು ವಿದ್ಯಾ ವಿಷಯಕ ಪರಿಷತ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಗ್ರಾಮಿಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸಾಗಿಸುವ ಉದ್ದೇಶದಿಂದ ಮತ್ತೊಂದು ಸ್ನಾತಕೋತ್ತರ ಕೇಂದ್ರ ತೆರೆಯಲಾಗುತ್ತಿದೆ. ಕೇಂದ್ರಕ್ಕೆ ಅಗತ್ಯವಾದ ಭೂಮಿ, ಕಟ್ಟಡ ಮತ್ತಿತರೆ ಮೂಲಸೌಲಭ್ಯಕ್ಕಾಗಿ … Read more

ಅಡ್ಡಾದಿಡ್ಡಿ ಚಲಿಸಿದ ಕಾರು, ಸರಣಿ ಅಪಘಾತ, ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವು, ಹೇಗಾಯ್ತು ಗೊತ್ತಾ ಘಟನೆ?

ಶಿವಮೊಗ್ಗ ಲೈವ್.ಕಾಂ | ಹೊಸನಗರ | 19 ಸೆಪ್ಟೆಂಬರ್ 2019 ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ ಮಾಡಿ, ನಾಲ್ಕು ತಿಂಗಳ ಗರ್ಭಿಣಿ ಸಾವಿಗೆ ಕಾರಣವಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಯುವಕರಿಗೆ ಶೋಧ ಕಾರ್ಯ ನಡೆಯುತ್ತಿದೆ. ಹೊಸನಗರ ತಾಲೂಕು ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ನಾಲ್ವರು ಯುವಕರಿದ್ದ ಕಾರು ಅಡ್ಡಾದಿಡ್ಡಿ ಚಲಿಸಿ, ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಗ್ರಾಮದ ಭಾರತಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಹೇಗಾಯ್ತು ಘಟನೆ? ಏನಾನು ಹಾನಿಯಾಗಿದೆ? ಮಾರುತಿಪುರ ಕಡೆಯಿಂದ ಬರುತ್ತಿದ್ದ … Read more

ತಾಲೂಕು ಕಚೇರಿ ಮುಂದೆ ಕೊಳೆರೋಗಕ್ಕೆ ತುತ್ತಾದ ಅಡಕೆ ಸುರಿದು ಬೆಳೆಗಾರರ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | ಸೊರಬ | 17 ಸೆಪ್ಟೆಂಬರ್ 2019 ಅಡಕೆ ಕೊಳೆರೋಗದಿಂದ ಸಂಕಷ್ಟಕ್ಕೀಡಾದ ಬೆಳೆಗಾರರಿಗೆ ತುರ್ತಾಗಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೊರಬದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು. ತಾಲೂಕು ಕಚೇರಿ ಮುಂದೆ ಕೊಳೆರೋಗಕ್ಕೆ ತುತ್ತಾದ ಅಡಕೆ ಸುರಿದು ಆಕ್ರೋಶ ವ್ಯಕ್ತಪಡಿಸಲಾಯಿತು. ಸಾರ್ವಜನಿಕರ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ಚಿದಾನಂದಗೌಡ, ಭಾರಿ ಬಿಸಿಲಿಗೆ ಅಡಕೆ ಉದುರಿದ್ದರು. ಆ ಬಳಿಕ ಸುರಿ ಜೋರು ಮಳೆಗೆ ಕೊಳೆ ರೋಗ ಬಂದಿದೆ. … Read more

ಭದ್ರಾವತಿಯ ಬ್ಯಾಂಕ್’ನಲ್ಲಿ ಬೆಂಕಿ, ಧಗಧಗ ಉರಿದು ಹೋದ ವಸ್ತುಗಳು

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 17 ಸೆಪ್ಟೆಂಬರ್ 2019 ಭದ್ರಾವತಿ ನಗರದ ಬ್ಯಾಂಕ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ದಾಖಲೆಗಳು, ಹಣ ಸುಟ್ಟು ಭಸ್ಮವಾಗಿರುವ ಸಂಭವವಿದೆ. ಬಿ.ಹೆಚ್.ರಸ್ತೆಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಪಟ್ಟರು. ಬ್ಯಾಂಕ್ ಶಾಖೆ ಒಳಗಿರುವ ದಾಖಲೆಗಳು, ಹಣ ಸೇರಿದಂತೆ ವಸ್ತುಗಳು ಸುಟ್ಟು ಕರಕಲಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. … Read more

ಸಿಗಂದೂರಿಗೆ ತೆರಳುತ್ತಿದ್ದ ಲಾಂಚುಗಳ ಮುಖಾಮುಖಿ ಡಿಕ್ಕಿ, ಶರಾವತಿ ಹೊಳೆ ಮಧ್ಯೆ ತಪ್ಪಿದ ಭಾರಿ ದುರಂತ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 11 ಸೆಪ್ಟೆಂಬರ್ 2019 ಸಿಗಂದೂರಿಗೆ ತೆರಳುತ್ತಿದ್ದ ಎರಡು ಲಾಂಚ್‌ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಶರಾವತಿ ಹೊಳೆ ಮಧ್ಯದಲ್ಲಿ ಘಟನೆ ಸಂಭವಿಸಿದ್ದು, ಸ್ವಲ್ಪದರಲ್ಲೆ ಭಾರಿ ಅನಾಹುತ ತಪ್ಪಿದೆ. ಶರಾವತಿ – 1 ಮತ್ತು ಶರಾವತಿ – 2 ಲಾಂಚ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ‌. ಒಂದು ಲಾಂಚ್ ಹೊಳೆಬಾಗಿಲಿನಿಂದ ಕಳಸವಳ್ಳಿಗೆ ತೆರಳುತ್ತಿತ್ತು. ಮತ್ತೊಂದು ಲಾಂಚ್ ಕಳಸವಳ್ಳಿಯಿಂದ ಹೊಳೆಬಾಗಿಲು ಕಡೆಗೆ ಬರುತ್ತಿತ್ತು. ಈ ವೇಳೆ ಚಾಲಕರ ಅಜಾಗರುಕತೆಯಿಂದಾಗಿ ಘಟನೆ ಸಂಭವಿಸಿದೆ. ಎರಡು ಲಾಂಚ್’ನಲ್ಲಿ ಸುಮಾರು … Read more

ಕ್ಷುಲಕ ಕಾರಣಕ್ಕೆ ರಿಪ್ಪನ್’ಪೇಟೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತ, ಗಂಭೀರ ಗಾಯ

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 10 ಸೆಪ್ಟೆಂಬರ್ 2019 ಗಣಪತಿ ಮೆರವಣಿಗೆಯಲ್ಲಿ ಕ್ಷುಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆಯಾಗಿ, ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಯುವಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂರ್ಯ ಮತ್ತು ಕುಮಾರ್ ಎಂಬುವವರಿಗೆ ಚಾಕು ಇರಿತಕ್ಕೆ ಒಳಗಾದವರು. ರಿಪ್ಪನ್’ಪೇಟೆಯಲ್ಲಿ ಇಂದು ಸಂಜೆ ಗಣಪತಿ ವಿಸರ್ಜನೆ ವೇಳೆ ಹೆಣ್ಣು ಮಕ್ಕಳು ನೃತ್ಯ ಮಾಡುತ್ತಿದ್ದರು. ಈ ವೇಳೆ ಕೆಲವು ಯುವಕರು ಅವರ ನಡುವೆ ಡಾನ್ಸ್ ಮಾಡಲು ಮುಂದಾಗಿದ್ದಾರೆ. ಸೂರ್ಯ ಮತ್ತು ಕುಮಾರ್ ಅವರು … Read more

ನಾಳೆ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ, ಭಾರಿ ಬಂದೋಬಸ್ತ್, ಪೊಲೀಸರಿಂದ ಪಥಸಂಚಲನ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 9 ಸೆಪ್ಟೆಂಬರ್ 2019 ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಭದ್ರಾವತಿ ನಗರದ ಕನಕ ಮಂಟಪದಿಂದ ರಂಗಪ್ಪ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ಶಿವಾಜಿ ಸರ್ಕಲ್, ಸಿ.ಎನ್. ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಪಥಸಂಚಲನ ನಡೆಯಿತು. ಭದ್ರಾವತಿ ಡಿವೈಎಸ್ಪಿ ನೇತೃತ್ವದಲ್ಲಿ ಕೆ.ಎಸ್.ಆರ್.ಪಿ., ಆರ್.ಎ.ಎಪ್., ಡಿ.ಎ.ಆರ್. ಮತ್ತು ಸಿವಿಲ್ ಪೊಲೀಸ್ ಮತ್ತು ಅಧಿಕಾರಿಗಳಿಂದ ಪಥಸಂಚಲನ ನಡೆಸಲಾಯಿತು. ಗಣಪತಿ ವಿಸರ್ಜನಾ ಮೆರವಣಿಗೆಯ ಪ್ರಯುಕ್ತ ಭದ್ರಾವತಿ … Read more

ಭದ್ರಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಮೇಲೆ ಗಂಭೀರ ಹಲ್ಲೆ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 9 ಸೆಪ್ಟೆಂಬರ್ 2019 ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಭದ್ರಾ ಕಾಲೋನಿಯಲ್ಲಿ ಸಂಜೆ ಘಟನೆ ನಡೆದಿದೆ. ಮಣೆ ಮತ್ತು ವಿದ್ಯಾರಾಜ್ ಎಂಬುವವರು ಹಲ್ಲೆಗೊಳಗಾದವರು. ಕುತ್ತಿಗೆ ಭಾಗದಲ್ಲಿ ಮಾರಕಾಸ್ತ್ರಗಳಿಂದ ಗಂಭೀರ ಸ್ವರೂಪದ ಹಲ್ಲೆ ನಡೆಸಲಾಗಿದೆ. ಕೂಡಲೆ ಇಬ್ಬರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಕೂಡಲೆ ಇಬ್ಬರನ್ನು ಮಣಿಪಾಲದ … Read more

GOOD NEWS | ರವೀಂದ್ರನಗರ ನಿವಾಸಿಗಳ ಸಂಘದಿಂದ ಡಿಫರೆಂಟ್ ಪ್ರಯತ್ನ, ಇದು ಶಿವಮೊಗ್ಗದಲ್ಲೆ ಮೊದಲು ಗೊತ್ತಾ?

090919 Bag Distribution at Ravindra Nagara 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 9 ಸೆಪ್ಟೆಂಬರ್ 2019 ನಿಷೇಧಗೊಂಡಿದ್ದರು ಪ್ಲಾಸ್ಟಿಕ್ ಬಳಕೆ ನಿಂತಿಲ್ಲ. ಸರ್ಕಾರ ಜಾಗೃತಿ ಮೂಡಿಸುತ್ತಿದ್ದರು ಬಳಕೆ ತಪ್ಪುತ್ತಿಲ್ಲ. ಇದೆ ಕಾರಣಕ್ಕೆ ಶಿವಮೊಗ್ಗದ ಪ್ರಮುಖ ಏರಿಯಾ ಒಂದರ ನಿವಾಸಿಗಳ ಸಂಘ, ಹೊಸ ಮಾದರಿಯಲ್ಲಿ ಜಾಗೃತಿ ಅಭಿಯಾನ ಶುರು ಮಾಡಿದೆ. ಶಿವಮೊಗ್ಗದಲ್ಲಿ ಇಂತಹ ಪ್ರಯತ್ನ ಇದೆ ಮೊದಲು. ‘ಪ್ಲಾಸ್ಟಿಕ್ ಮುಕ್ತ ಬಡಾವಣೆ’ ನಿರ್ಮಿಸುವ ಕನಸಿನೊಂದಿಗೆ ರವೀಂದ್ರನಗರ ನಿವಾಸಿಗಳ ಸಂಘ, ವಿಭಿನ್ನ ಪ್ರಯತ್ನ ಆರಂಭಿಸಿದೆ. ಭಾನುವಾರ ಮೊದಲ ಹೆಜ್ಜೆ ಇಡಲಾಗಿದೆ. ಏನಿದು ವಿಭಿನ್ನ ಪ್ರಯತ್ನ? ರವೀಂದ್ರನಗರ … Read more

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ KSRTC ಬಸ್

ಶಿವಮೊಗ್ಗ ಲೈವ್.ಕಾಂ | ಹೊಸನಗರ | 8 ಸೆಪ್ಟೆಂಬರ್ 2019 ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಗದ್ದೆ ಉರುಳಿ ಬಿದ್ದಿದೆ. ಹೊಸನಗರದ ಮುಂಬಾರು ಗ್ರಾಮ ಬಳಿ ಘಟನೆ ನಡೆದಿದೆ. ಭಟ್ಕಳದಿಂದ ತಿರುಪತಿಗೆ ತೆರಳುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿಗೆ ಗೆದ್ದೆಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಒಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more