ಭದ್ರಾವತಿ ಹೊಸ ಸಿದ್ದಾಪುರದಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿ ಸಾವು, ಮೂವರು ಆಸ್ಪತ್ರೆಗೆ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 8 ಸೆಪ್ಟೆಂಬರ್ 2019 ಮನೆ ಒಳಗಿನ ಗೋಡೆ ಕುಸಿದು ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಭದ್ರಾವತಿಯ ಹೊಸ ಸಿದ್ದಾಪುರ ಗ್ರಾಮದ ನಂಜಾಪುರ ರಸ್ತೆಯಲ್ಲಿರುವ ಮನೆಯೊಂದರ ಒಳಗಿನ ಗೋಡೆ ಕುಸಿದು ಗುರು (40) ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ ಮನೆಯಲ್ಲಿದ್ದ ಎಲ್ಲರು ಮಲಗಿದ್ದ ವೇಳೆ ಗೋಡೆ ಕುಸಿದು, ಗುರು ಅವರ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಗುರು ಸ್ಥಳದಲ್ಲೆ ಅಸುನೀಗಿದ್ದಾರೆ. ಹೆಂಡತಿ, ಮಕ್ಕಳಿಗೆ ಗಾಯ ಗೋಡೆ ಕುಸಿತದಿಂದ ಗುರು ಅವರ ಪತ್ನಿ … Read more

ಭದ್ರಾವತಿ ಬೆಡಗಿ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್’ಗೆ ಹೀರೋಯಿನ್

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 6 ಸೆಪ್ಟೆಂಬರ್ 2019 ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹೈವೋಲ್ಟೇಜ್ ಚಿತ್ರ ‘ರಾಬರ್ಟ್’ಗೆ ಭದ್ರಾವತಿ ಬೆಡಗಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿ, ವೆಲ್’ಕಮ್ ಹೇಳಿದೆ. ರಾಬರ್ಟ್ ಚಿತ್ರದ ಕುರಿತು ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಇದೆ. ದರ್ಶನ್ ಅವರಿಗೆ ನಾಯಕಿಯಾಗಿ ನಟಿಸುವವರು ಯಾರು ಅನ್ನುವ ಕುರಿತು ಕುತೂಹಲವಿತ್ತು. ಈಗ ಇದಕ್ಕೆ ತೆರೆ ಬಿದ್ದಿದೆ. ಆಶಾ ಭಟ್ ಅವರು ಹಿಂದಿ ಚಿತ್ರ ‘ಜಂಗ್ಲಿ’ಯಲ್ಲಿ ಅಭಿನಯಿಸಿದ್ದಾರೆ. ಯಾರು ಈ … Read more

‘ಡಿಕೆಶಿ ಅವರ ಪಕ್ಷವನ್ನು ಲೋಕಸಭೆ ಚುನಾವಣೆಯಲ್ಲೇ ಸೋಲಿಸಿದ್ದೇವೆ, ಈಗ ಅವರನ್ನು ಎದುರಿಸುವ ಅನಿವಾರ್ಯತೆಯಿಲ್ಲ’

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 4 ಸೆಪ್ಟೆಂಬರ್ 2019 ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನಕ್ಕು, ಬಿಜೆಪಿಗು ಯಾವುದೆ ಸಂಬಂಧವಿಲ್ಲ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಡಿ.ಕೆ.ಶಿವಕುಮಾರ್ ಅವರ ಬಂಧನಕ್ಕೆ ರಾಜಕೀಯ ಪ್ರೇರಣೆ ಇಲ್ಲ. ಅವರ ವ್ಯಂಗ್ಯಕ್ಕೆ ನಾವು ಪ್ರತಿವ್ಯಂಗ್ಯ ಮಾಡುವುದಿಲ್ಲ. ಜಾರಿ ನಿರ್ದೇಶನಾಲಯ ಸ್ವತಂತ್ರ ತನಿಖಾ ಸಂಸ್ಥೆಯಾಗಿದ್ದು, ಬಿಜೆಪಿಗು ಅದಕ್ಕೂ ಸಂಬಂಧವಿಲ್ಲ ಎಂದರು. ಡಿಕೆಶಿಯನ್ನು ಎದುರಿಸುವ ಅನಿವಾರ್ಯತೆ ಇಲ್ಲ ಸಚಿವ ಡಿ.ಕೆ.ಶಿವಕುಮಾರ್ … Read more

ಯುವತಿ ಕೆನ್ನೆಗೆ ಚಾಕುವಿನಿಂದ ಇರಿದು ಪಾಗಲ್ ಪ್ರೇಮಿ ಎಸ್ಕೇಪ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | ಸಾಗರ | 2 ಸೆಪ್ಟೆಂಬರ್ 2019 ಪ್ರೀತಿಸಲು ನಿರಾಕರಿಸಿದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಕೆನ್ನೆ ಮೇಲೆ ಇರಿದು ಪರಾರಿಯಾಗಿದ್ದಾನೆ. ಯುವತಿಗೆ ಸಾಗರದ ಆಸ್ಪತ್ರೆಗೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಖಿ ಕಟ್ಟಿಸಿಕೊಳ್ಳಲು ಕರೆಸಿ ಕೆನ್ನೆಗೆ ಇರಿದ ರಾಕೇಶ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ನಿರಾಕರಿಸಿದ ಹಿನ್ನೆಲೆ, ಅಣ್ಣ, ತಂಗಿಯಂತೆ ಇರೋಣ ಎಂದಿದ್ದ. ಅದರಂತೆ ಯುವತಿ ಮನೆ ಬಳಿ ಬಂದು ಇವತ್ತು ರಾಖಿ ಕಟ್ಟಿಸಿಕೊಳ್ಳುವುದಾಗಿ ಹೇಳಿ ಕರೆಸಿಕೊಂಡು, … Read more

BREAKING NEWS | ಲಿಂಗನಮಕ್ಕಿ ಜಲಾಶಯದ ಗೇಟುಗಳು ಓಪನ್, ಎಷ್ಟು ಪ್ರಮಾಣದ ನೀರು ಹೊರ ಬಿಡಲಾಗ್ತಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಸಾಗರ | 2 ಸೆಪ್ಟೆಂಬರ್ 2019 ಲಿಂಗನಮಕ್ಕಿ ಜಲಾಶಯ ಭರ್ತಿಯಾದ ಹಿನ್ನೆಲೆ ಮೂರು ಕ್ರಸ್ಟ್  ಗೇಟುಗಳನ್ನು ತೆಗೆದು ನೀರು ಹೊರಬಿಡಲಾಗುತ್ತಿದೆ. ಸಂಜೆ 6.30ಕ್ಕೆ ಮೂರು ಕ್ರಸ್ಟ್ ಗೇಟುಗಳನ್ನು ಒಂದು ಅಡಿಯಷ್ಟು ಮೇಲಕ್ಕೆತ್ತಲಾಗಿದೆ. ಮೂರು ಗೇಟುಗಳ ಮೂಲಕ 4800 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಸದ್ಯ ನೀರಿನ ಮಟ್ಟ 1818.40 ಅಡಿಗೆ ತಲುಪಿದೆ. ಪೂರ್ಣ ಭರ್ತಿಗೆ ಇನ್ನು ಅರ್ಧ ಅಡಿಯಷ್ಟು ಬಾಕಿ ಇದೆ. ಒಳಹರಿವು 25 ಸಾವಿರ ಕ್ಯೂಸೆಕ್ ಇದೆ. ಮಳೆ ಹೆಚ್ಚಾದರೆ ಮತ್ತಷ್ಟು ನೀರು … Read more

ಮಹಿಳೆಗೆ ವಾಟ್ಸಪ್’ನಲ್ಲಿ ಅಶ್ಲೀಲ ವಿಡಿಯೋ ಕಳುಹಿಸಿದ ಭದ್ರಾವತಿ ಯುವಕ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 31 ಆಗಸ್ಟ್ 2019 ಮಹಿಳೆಯೊಬ್ಬರಿಗೆ ವಾಟ್ಸಾಪ್ ಮೂಲಕ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ಆರೋಪಿಯನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲ್ಲೂಕಿನ ದೊಣಭಘಟ್ಟ ಗ್ರಾಮದ ಸದ್ದಾಂ ಹುಸೇನ್ (26) ಬಂತ. ಈತ ಅಶ್ಲೀಲ ವಿಡಿಯೋ ಕಳುಹಿಸುತ್ತಿರುವ ಬಗ್ಗೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಇನ್ಸ್’ಪೆಕ್ಟರ್ ಕೆ.ಟಿ.ಗುರುರಾಜ್ ತಂಡವನ್ನು ರಚಿಸಿದ್ದರು. ಮೊಬೈಲ್ ನಂಬರ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ … Read more

ಹಳೆ ವೈಷಮ್ಯದ ಹಿನ್ನೆಲೆ ಯುವಕನ ಎದೆಗೆ ಚಾಕು ಇರಿತ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 30 ಆಗಸ್ಟ್ 2019 ಹಳೆ ವೈಷಮ್ಯದ ಹಿನ್ನೆಲೆ ಗುಂಪೊಂದು ಯುವಕನ ಮೇಲೆ ತೀವ್ರ ಹಲ್ಲೆ ನಡೆಸಿ ಎದೆಗೆ ಚಾಕುವಿನಿಂದ ಇರಿದಿದೆ. ಹೊಸನಗರ ತಾಲೂಕು ರಿಪ್ಪನ್​ಪೇಟೆ ಸಮೀಪದ ಗವಟೂರು ಗ್ರಾಮದ ಶಶಿಕುಮಾರ್​ (28) ಇರಿತಕ್ಕೆ ಒಳಗಾದವನು. ಸುಮಾರು ಎಂಟು ಯುವಕರ ಗುಂಪು ಗವಟೂರಿನ ನೆಹರು ಬಡವಾಣೆಯಲ್ಲಿ ಶಶಿಕುಮಾರ್ ಮೇಲೆ ದಾಳಿ ಮಾಡಿ, ಚಾಕು ಇರಿದಿದೆ. ಯುವತಿಯೊಬ್ಬಳ ವಿಚಾರವಾಗಿ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಿಪ್ಪನ್’ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more

ಸಿಸಿಟಿಯಲ್ಲಿ ಸೆರೆಯಾಯ್ತು ತಾಲೂಕು ಕಚೇರಿಯಲ್ಲಿನ ಫೈಲ್ ಕಳ್ಳತನ, ಏನದು ಫೈಲ್? ಕದ್ದಿದ್ಯಾರು? ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 30 ಆಗಸ್ಟ್ 2019 ಪರಿಶೀಲನೆ ಹಂತದಲ್ಲಿದ್ದ ಕಡತವನ್ನು ತಹಶೀಲ್ದಾರ್ ಕಚೇರಿಯಿಂದ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ರೈತರೊಬ್ಬರ ವಿರುದ್ಧ ದೂರು ತಾಲೂಕು ಕಚೇರಿ ಶಿರಸ್ತೇದಾರ್ ದೂರು ನೀಡಿದ್ದಾರೆ. ಫೈಲ್ ಕದ್ದೊಯ್ಯುತ್ತಿರುವುದು ಕಚೇರಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪರಿಶೀಲನೆ ಹಂತದಲ್ಲಿದ್ದ ಕಡತವನ್ನು, ದೇವೇಂದ್ರಪ್ಪ ಎಂಬುವವರು ಅಧಿಕಾರಿಗಳ ಗಮನಕ್ಕೆ ಬಾರದ ಹಾಗೆ, ತೆಗೆದುಕೊಂಡು ಹೋಗಿದ್ದಾರೆ. ದೇವೇಂದ್ರಪ್ಪ ಫೈಲ್ ಕೊಂಡೊಯ್ಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಪರಿಶೀಲಿಸಿದ ಬಳಿಕ, ದೇವೇಂದ್ರಪ್ಪ ವಿರುದ್ಧ ಶಿರಸ್ತೇದಾರ್ ಕೃಷ್ಣಮೂರ್ತಿ ಅವರು ಜಯನಗರ … Read more

ಭದ್ರಾವತಿಯಲ್ಲಿ 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಮೇಲೆ ಎಸಿಬಿ ರೇಡ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 29 ಆಗಸ್ಟ್ 2019 ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಿಗ ಶಿಕ್ಷೆ ಕೊಡಿಸುವ ಸಲುವಾಗಿ ಹಣ ಪಡೆಯುತ್ತಿದ್ದ ವೇಳೆ ಪಬ್ಲಿಕ್ ಪ್ರಾಸಿಕ್ಯೂಟರ್, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಭದ್ರಾವತಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ರವೀಂದ್ರ ಅವರು ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಸುನಿಲ್ ಗಾಯಕ್’ವಾಡ್ ಎಂಬುವವರಿಂದ 20 ಸಾವಿರ ರೂ. ಹಣ ಸ್ವಿಕರಿಸುತ್ತಿದ್ದಾಗ, ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರಂಜನ್ ಕದಂ ಎಂಬುವವರ ಕೊಲೆ ಪ್ರಕರಣದಲ್ಲಿ, ಆರೋಪಿಗಳಿಗೆ … Read more

ಕಲ್ಲೊಡ್ಡು ಹಳ್ಳ ಯೋಜನೆ ವಿರುದ್ಧ ಸಿಡಿದೆದ್ದ ಜನ, ಸಾಗರದಲ್ಲಿ ಭಾರಿ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 26 ಆಗಸ್ಟ್ 2019 ಕಲ್ಲೊಡ್ಡು ಹಳ್ಳ ಯೋಜನೆ ವಿರೋಧಿಸಿ ಸಾಗರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಾಗರದ ಗಣಪತಿ ದೇವಸ್ಥಾನದಿಂದ ಶುರುವಾದ ಮೆರವಣಿಗೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಯೋಜನೆ ವಿರುದ್ಧ ಘೋಷಣೆ ಕೂಗಿದರು. ಯೋಜನೆ ಜಾರಿಯಾದರೆ ಸಾಗರ ತಾಲೂಕಿನಲ್ಲಿ ಮತ್ತೊಮ್ಮೆ ಮುಳುಗಡೆ ಸಮಸ್ಯೆ ಎದುರಾಗಲಿದೆ ಎಂದು ಆಕ್ರೋಶ … Read more