ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್’ಶಿಪ್, ಲ್ಯಾಪ್’ಟಾಪ್ ವಿತರಣೆ

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 2 ಆಗಸ್ಟ್ 2019 ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ, ಶಾಸಕ ಆರಗ ಜ್ಞಾನೇಂದ್ರ ಅವರು ಸ್ಕಾಲರ್’ಶಿಪ್ ಮತ್ತು ಲ್ಯಾಪ್’ಟಾಪ್ ವಿತರಿಸಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಇದೇ ವೇಳೆ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ವಿದ್ಯಾರ್ಥಿಗಳು ಈ ಯೋಜನೆಯ ಸದ್ಬಳಕೆ ಮಾಡಿಕೊಂಡು, ಉನ್ನತ ಸ್ಥಾನಕ್ಕೇರುವಂತೆ ಸಲಹೆ ನೀಡಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ತಹಶೀಲ್ದಾರ್ ಭಾಗ್ಯ, ಪಟ್ಟಣ ಪಂಚಾಯಿತಿ … Read more

ತೀರ್ಥಹಳ್ಳಿಯಲ್ಲಿ ಆಷಾಢ ಮಾಸದ ‘ಆಟಿಡು ಒಂಜಿ’ ದಿನ, ಏನಿದರ ವಿಶೇಷ? ಹೇಗಿತ್ತು ಗೊತ್ತಾ ಕಾರ್ಯಕ್ರಮ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 2 ಆಗಸ್ಟ್ 2019 ಬಂಟರ ಸಂಘದ ಮಹಿಳಾ ವಿಭಾಗದ ವತಿಯಿಂದ ತೀರ್ಥಹಳ್ಳಿಯಲ್ಲಿ ಆಷಾಢ ಮಾಸದ ಆಟಿಡು ಒಂಜಿ ದಿನ ಆಯೋಜಿಸಲಾಯಿತು. ಇದರ ಅಂಗವಾಗಿ, ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಒಟ್ಟಿಗೆ ಸವಿದು ಮಹಿಳೆಯರು ಸಂಭ್ರಮಿಸಿದರು. ಪಟ್ಟಣದ ಬಂಟರ ಭವನದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಂಟರ ಮಹಿಳಾ ವಿಭಾಗದ ಅಧ್ಯಕ್ಷೆ ಶಶಿಕಲಾ ಎಂ ಶೆಟ್ಟಿ, ನಮ್ಮ ಸಂಸ್ಕೃತಿಯಲ್ಲಿ ಆಷಾಢ ಮಾಸಕ್ಕೆ ವಿಶೇಷವಾದ ಮಹತ್ವವಿದೆ. ಧಾರ್ಮಿಕ, ಜಾನಪದ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಈ ಮಾಸದಲ್ಲಿ … Read more

ಮೂರು ಬಾರಿ ಶಾಸಕರಾದ ಹರತಾಳು ಹಾಲಪ್ಪ ಸಚಿವರಾಗಬೇಕು, ಆಗ್ರಹ

Haratalu-Halappa

ಶಿವಮೊಗ್ಗ ಲೈವ್.ಕಾಂ | ಸಾಗರ | 1 ಆಗಸ್ಟ್ 2019 ಶಾಸಕ ಹರತಾಳು ಹಾಲಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಾಗರದ ಆರ್ಯ ಈಡಿಗರ ಸಂಘ ಒತ್ತಾಯಿಸಿದೆ. ಹಾಲಪ್ಪ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ನ್ಯಾಯ ಒದಗಿಸಿದಂತೆ ಆಗಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಪರಶುರಾಮಪ್ಪ ತಿಳಿಸಿದ್ದಾರೆ. ಈಡಿಗ ಸಮುದಾಯ, ರಾಜ್ಯದಲ್ಲಿ ನಾಲ್ಕನೇ ಅತಿ ದೊಡ್ಡ ಸಮುದಾಯವಾಗಿದೆ. ಈ ಸಮುದಾಯದಿಂದ ಆಯ್ಕೆಯಾಗಿರುವ ಹರತಾಳು ಹಾಲಪ್ಪ, ಮುರು ಬಾರಿ … Read more

ಹೊಸನಗರದ ಅಂಗಡಿಗಳು, ಗ್ಯಾರೇಜ್, ಹೊಟೇಲ್, ಬೇಕರಿಗಳಲ್ಲಿ ಪೊಲೀಸ್, ವಿವಿಧ ಇಲಾಖೆ ಅಧಿಕಾರಿಗಳಿಂದ ತಲಾಷ್

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 30 ಜುಲೈ 2019 ಹೊಸನಗರದಲ್ಲಿ ಇವತ್ತು ಆಪರೇಷನ್ ಮುಸ್ಕಾನ್ ನಡೆಸಲಾಗಿದೆ. ಅಂಗಡಿ, ಗ್ಯಾರೇಜ್, ಹೊಟೇಲ್, ಬೇಕರಿ ಸೇರಿದಂತೆ ವಿವಿಧೆಡೆ ಕಾರ್ಮಿಕ ಇಲಾಖೆ, ಪೊಲೀಸರು, ಮಕ್ಕಳ ಸಹಾಯವಾಣಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ನೇತೃತ್ವದಲ್ಲಿ ಭರ್ಜರಿ ತಪಾಸಣೆ ನಡೆಸಲಾಗಿದೆ. 14 ವರ್ಷದೊಳಗಿನ ಬಾಲ ಕಾರ್ಮಿಕರು, 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳಲಾಗಿದೆಯೆ ಎಂಬುದನ್ನು ಪರಿಶೀಲಿಸಲಾಯಿತು. ಹೊಸನಗರದ ವಿವಿಧೆಡೆ ದಾಳಿ ನಡೆಸಿದ ಅಧಿಕಾರಿಗಳು ತಪಾಸಣೆ ನಡೆಸಿ, ಬಾಲ ಕಾರ್ಮಿಕ ಪದ್ಧತಿ … Read more

ಚಿನ್ನದ ಉದ್ಯಮಿ, ಎಂಇಪಿ ಪಕ್ಷದ ರಾಷ್ಟ್ರಾಧ್ಯಕ್ಷೆ, ಕನ್ನಡ ನ್ಯೂಸ್ ಚಾನೆಲ್’ನ ಓನರ್ ಶಿವಮೊಗ್ಗ ಪೊಲೀಸ್ ವಶಕ್ಕೆ

290719 Nowhera Sheik Arrested by Shivamogga Police 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 29 ಜುಲೈ 2019 ವಂಚನೆ ಪ್ರಕರಣ ಸಂಬಂಧ ಎಐಎಂಇಪಿ ಪಕ್ಷದ ಸಂಸ್ಥಾಪಕಿ ನೌಹೇರಾ ಶೇಖ್ ಅವರನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೈದರಾಬಾದ್’ನಿಂದ ನೌಹೇರಾ ಶೇಖ್ ಅವರನ್ನು ಬಾಡಿ ವಾರೆಂಟ್ ಮೇಲೆ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವತ್ತು ಶಿವಮೊಗ್ಗ ಕೋರ್ಟ್’ಗೆ ಹಾಜರುಪಡಿಸಲಾಗಿದ್ದು, ಆರು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. 25 ಲಕ್ಷದ ವಂಚನೆ ಕೇಸ್ ನೌಹೇರಾ ಶೇಖ್, ತಮ್ಮ ಒಡೆತನದ ಹೀರಾ ಗೋಲ್ಡ್ ಕಂಪನಿ ಮೇಲೆ ಶಿವಮೊಗ್ಗದ ಮೊಹಮ್ಮದ್ … Read more

ಮಿನಿಸ್ಟರ್ ಆಗ್ತಾರ ಹಾಲಪ್ಪ, ಜ್ಞಾನೇಂದ್ರಗೆ ಒಲಿಯುತ್ತಾ ಅದೃಷ್ಟ, ಶಿವಮೊಗ್ಗದ ಯಾವೆಲ್ಲ ಶಾಸಕರು ಸಚಿವರಾಗಬಹುದು ಗೊತ್ತಾ?

210718 Yedyurappa Pressmeet 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಜುಲೈ 2019 ಸರ್ಕಾರ ರಚನೆಗೆ ಯಡಿಯೂರಪ್ಪ ಕೊನೆಯ ಹಂತದ ಕಸರತ್ತು ನಡೆಸಿರುವ ಬೆನ್ನಿಗೆ, ಶಿವಮೊಗ್ಗ ಬಿಜೆಪಿಯಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಯಾರಿಗೆಲ್ಲ ಸಚಿವ ಸ್ಥಾನ ಸಿಗಬಹುದು ಎಂಬ ಲೆಕ್ಕಾಚಾರಗಳು ಆರಂಭವಾಗಿದೆ. ಶಿವಮೊಗ್ಗದಲ್ಲಿ ಯಾರೆಲ್ಲ ಮಿನಿಸ್ಟರ್ ಆಗಬಹುದು? ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ್ ನಾಯ್ಕ ಅವರನ್ನು ಹೊರತುಪಡಿಸಿ, ಉಳಿದೆಲ್ಲರು ಸೀನಿಯರ್ ಎಂಎಲ್ಎಗಳೆ. ಹಾಗಾಗಿ ಯಾರಿಗೆಲ್ಲ ಸಚಿವ ಸ್ಥಾನ … Read more

ಮನೆಯಲ್ಲಿ ಸಂಭ್ರಮವೋ ಸಂಭ್ರಮ, ಖುಷಿ ನಡುವೆ ಬಂತು ಯಡಿಯೂರಪ್ಪ ಅವರ ಫೋನ್, ಏನಂದರು ಗೊತ್ತಾ?

240719 Celebration at Yedyurappa House 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಜುಲೈ 2019 ‘ಅಪ್ಪ ಬಹಳ ಖುಷಿಯಾಗಿದ್ದಾರೆ. ಅವರು ಈಗಷ್ಟೇ ನನಗೆ ಫೋನ್ ಮಾಡಿದ್ದರು. ಶುಭಾಷಯ ತಿಳಿಸಿದ್ದೇನೆ..’ ಹೀಗಂತ ಸಂತೋಷ ಹಂಚಿಕೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವ ಹಿನ್ನೆಲೆ, ಕಾರ್ಯಕರ್ತರು ವಿನೋಬನಗರದ ಯಡಿಯೂರಪ್ಪ ನಿವಾಸದ ಮುಂದೆ ಸಂಭ್ರಮಾಚರಣೆ ಮಾಡಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಯಡಿಯೂರಪ್ಪ ಅಭಿಮಾನಿಗಳಿಗೆ ಸಿಹಿ ಹಂಚಿದ ಅರುಣಾದೇವಿ, ಪತ್ರಕರ್ತರೊಂದಿಗೆ ಮಾತನಾಡಿದರು. ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರವೇ ನಮ್ಮ … Read more

ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ, ಎಲ್ಲೆಲ್ಲಿ ಹೇಗಿತ್ತು ಗೊತ್ತಾ ಸಂಭ್ರಮಾಚರಣೆ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಜುಲೈ 2019 ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ವಿಶ್ವಾಸಮತದಲ್ಲಿ ಸೋಲನುಭವಿಸಿದೆ. ಇದರ ಬೆನ್ನಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವ ಸಂಭ್ರಮ ಮೊಳಕೆಯೊಡೆದಿದೆ. ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ ಬಿಜೆಪಿ ಕಚೇರಿ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಬಿಜೆಪಿ ಮುಖಂಡರ ಪರವಾಗಿ ಘೋಷಣೆ ಕೂಗಿದರು. … Read more

ಕುಸಿಯಿತು ತೀರ್ಥಹಳ್ಳಿಯ ತುಂಬರಮನೆ ಸೇತುವೆ, ಜನರ ಆಕ್ರೋಶ, ಮಾಜಿ ಮಿನಿಸ್ಟರ್ ಸ್ಥಳಕ್ಕೆ ಭೇಟಿ

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 23 ಜುಲೈ 2019 ತೀರ್ಥಹಳ್ಳಿಯ ತುಂಬರಮನೆ ಸೇತುವೆ ಕುಸಿದಿದೆ. ಸೇತುವೆಯ ಒಂದು ಭಾಗದ ಸಂಪೂರ್ಣ ಕುಸಿದು, ದೊಡ್ಡ ಕಂದಕ ನಿರ್ಮಾಣವಾಗಿದೆ. ಇನ್ನು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇವತ್ತು ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಾಲ್ಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತುಂಬರಮನೆ ಸೇತುವೆ, ಕುಸಿಯುವ ಹಂತಕ್ಕೆ ತಲುಪಿತ್ತು. ಈ ಕುರಿತು ಸ್ಥಳೀಯರು ಹಲವು ಬಾರಿ ಆಡಳಿತಕ್ಕೆ ಮನವಿ ಮಾಡಿದ್ದರು. ಮಾಧ್ಯಮಗಳಲ್ಲೂ ವರದಿ ಪ್ರಕಟವಾಗಿತ್ತು. ಆದರೆ ಆಡಳಿತದ … Read more

ಹಾಸ್ಟೆಲ್’ನಲ್ಲಿ ನೇಣು ಬಿಗಿದುಕೊಂಡು ಶಿವಮೊಗ್ಗ ಕೋರ್ಟ್ ಎಫ್’ಡಿಎ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 22 ಜುಲೈ 2019 ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಎಫ್’ಡಿಎ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಂದೀಪ್ (21), ನೇಣಿಗೆ ಶರಣಾದ ಯುವಕ. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರಿನ ಸಂದೀಪ್ , ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಎಫ್’ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ. ನಗರದ ಉಪ್ಪಾರ ಹಾಸ್ಟೆಲ್’ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿವಮೊಗ್ಗ ಲೈವ್.ಕಾಂ … Read more