ಸಕ್ರೆಬೈಲು ಬಿಡಾರದಲ್ಲಿ ರಕ್ತವಾಂತಿ ಮಾಡಿಕೊಂಡು ಮರಿ ಆನೆ ಸಾವು

ಶಿವಮೊಗ್ಗ ಲೈವ್.ಕಾಂ | 1 ಜುಲೈ 2019 ಸಕ್ರೆಬೈಲು ಆನೆ ಬಿಡಾರದಲ್ಲಿ ಮರಿಯಾನೆ ಸಾವನ್ನಪ್ಪಿದೆ. ಕೆಲ ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮರಿ ಆನೆ, ರಕ್ತವಾಂತಿ ಮಾಡಿಕೊಳ್ಳುತ್ತಿತ್ತು. ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೆ, ಆನೆ ಸಾವನ್ನಪ್ಪಿದೆ. ಶಾರದ, ಮೃತ ಮರಿ ಆನೆ. ಕಳೆದ ವರ್ಷ ಹಾಸನದಲ್ಲಿ ಸೆರೆ ಹಿಡಿಯಲಾಗಿದ್ದ ಆನೆಯನ್ನು ಸಕ್ರೆಬೈಲು ಆನೆ ಬಿಡಾರದಲ್ಲಿ ಸಾಕಲಾಗುತ್ತಿತ್ತು. ‘ಆನೆಗೆ ಬಿಡಾರದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರೂ, ಫಲಕಾರಿಯಾಗದೆ ಮೃತಪಟ್ಟಿದೆ. ಆನೆಯ ಅಂಗಾಂಗಗಳನ್ನು ಪರೀಕ್ಷೆಗೆ ಒಳಪಡಿಸಲು ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿಗೆ ಮತ್ತು ಕೇರಳದ ಪಶು … Read more

ಚೋರಡಿ ಬಳಿ ಟೆಂಪೊ ಟ್ರಾವಲರ್ ಪಲ್ಟಿ, ಪ್ರಯಾಣಿಕರ ರಕ್ಷಣೆಗೆ ನೆರವಾದ ಶಾಸಕ ಹಾಲಪ್ಪ

ಶಿವಮೊಗ್ಗ ಲೈವ್.ಕಾಂ | 19 ಜೂನ್ 2019 ಚೋರಡಿ ಬಳಿ ಪ್ರವಾಸಿ ವಾಹನ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವರಲ್ ವಾಹನ ಪಲ್ಟಿಯಾಗಿದೆ. ಇದೇ ವೇಳೆ, ಸಾಗರ ಶಾಸಕ ಹರತಾಳು ಹಾಲಪ್ಪ, ಅದೇ ಮಾರ್ಗದಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದರು. ಕೂಡಲೇ ಅಪಘಾತದ ಸ್ಥಳಕ್ಕೆ ತೆರಳಿದ ಅವರು, 108 ಆಂಬುಲೆನ್ಸ್’ಗೆ ಕರೆ ಮಾಡಿದರು. ಬಳಿಕ, ಪಲ್ಟಿಯಾದ ವಾಹನದಲ್ಲಿದ್ದವರನ್ನು ಹೊರಗೆ ತರುವಲ್ಲಿ ಶಾಸಕ ಹಾಲಪ್ಪ, ಅವರ ಅಂಗರಕ್ಷಕ ಹೇಮಕೃಷ್ಣ , ಕಾರು ಚಾಲಕ ಸಾರ್ವಜನಿಕರಿಗೆ ನೆರವಾದರು. ಟೆಂಪೊ ಟ್ರಾವಲರ್’ನಲ್ಲಿದ್ದವರಿಗೆ ಸಣ್ಣಪುಟ್ಟ … Read more

ಆನಂದಪುರದಲ್ಲಿ ಟ್ರೇನಿಂಗ್ ಪಡೆದವರು ಭಾರತೀಯ ಸೇನೆಗೆ ಆಯ್ಕೆ, ಎಷ್ಟು ಯುವಕರಿಗೆ ಅವಕಾಶ ಸಿಕ್ಕಿದೆ ಗೊತ್ತಾ?

Indian-Army-Training-at-Anandapuram

ಶಿವಮೊಗ್ಗ ಲೈವ್.ಕಾಂ | 12 ಜೂನ್ 2019 ಸಾಗರ ತಾಲೂಕು ಆನಂದಪುರ ಮುರುಘಾಮಠದ ಆವರಣದಲ್ಲಿ, ಸೈನಿಕ ತರಬೇತಿ ಪಡೆದ ಮಲೆನಾಡಿನ 26 ಯುವಕರು ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಮಾಜಿ ಯೋಧರ ಕಠಿಣ ಪರಿಶ್ರಮ, ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರಕ್ಕೆ ಫಲ ಸಿಕ್ಕಂತಾಗಿದೆ. ಮಾಜಿ ಯೋಧರು ಸ್ಥಾಪಿಸಿದ ಮಲ್ನಾಡ್ ಸೋಲ್ಜರ್ ಅಕಾಡೆಮಿಯಲ್ಲಿ 65 ಯುವಕರು 15 ದಿನ ಕಠಿಣ ತರಬೇತಿ ಪಡೆದಿದ್ದರು. ಈ ಪೈಕಿ 26 ಯುವಕರು, ಗದಗದಲ್ಲಿ ನಡೆದ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದಾರೆ. ಮೂವರ … Read more

ತೀರ್ಥಹಳ್ಳಿ ಗುಡ್ಡೇಕೇರಿ ಶಾಲೆಯಲ್ಲಿ ವಾಸ್ತವ್ಯ ಮಾಡಿ, ಸಿಎಂಗೆ ವಿದ್ಯಾರ್ಥಿನಿ ಮನವಿ, ಏನಂದ್ರು ಗೊತ್ತಾ ಮುಖ್ಯಮಂತ್ರಿ?

ಶಿವಮೊಗ್ಗ ಲೈವ್.ಕಾಂ | 11 ಜೂನ್ 2019 ಶಾಲಾ ಸಂಪರ್ಕ ಸೇತು ಯೋಜನೆ ಕುರಿತು, ಮುಖ್ಯಮಂತ್ರಿ ಕುಮಾರಸ್ವಾಮಿ ಇವತ್ತು ವಿದ್ಯಾರ್ಥಿಗಳು, ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ವೇಳೆ, ತೀರ್ಥಹಳ್ಳಿಯ ವಿದ್ಯಾರ್ಥಿಯೊಬ್ಬಳು, ತಮ್ಮ ಶಾಲೆಗೆ ಬಂದು ವಾಸ್ತವ್ಯ ಮಾಡುವಂತೆ ಸಿಎಂಗೆ ಆಹ್ವಾನ ನೀಡಿದ್ದಾಳೆ. ಸಿಎಂ ಜೊತೆಗಿನ ವಿಡಿಯೋ ಕಾನ್ಫರೆನ್ಸ್’ನಲ್ಲಿ, ತೀರ್ಥಹಳ್ಳಿಯ ನಾಲ್ವರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಹೊಸೂರು ಗುಡ್ಡೇಕೇರಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಶ್ವೀಜಾ, ತಮ್ಮ ಶಾಲೆಗೆ ಬಂದು ಗ್ರಾಮ ವಾಸ್ತವ್ಯ … Read more

ತಾಳಗುಪ್ಪ – ಬೆಂಗಳೂರು ರೈಲು ಎಂಜಿನ್’ನಲ್ಲಿ ಬೆಂಕಿ, ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಎರಡು ಗಂಟೆ ನಿಂತ ರೈಲು

ಶಿವಮೊಗ್ಗ ಲೈವ್.ಕಾಂ | 21 ಮೇ 2019 ತಾಳಗುಪ್ಪ ಬೆಂಗಳೂರು ರೈಲಿನ ಎಂಜಿನ್’ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ರೈಲು ಪ್ರಯಾಣ ಸುಮಾರು ಎರಡೂವರೆ ಗಂಟೆ ವಿಳಂಬವಾಗಿದೆ. ಇನ್ನು ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ, ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. | VIDEO REPORT | ನಿನ್ನೆ ರಾತ್ರಿ ರೈಲು ಭದ್ರಾವತಿ ರೈಲ್ವೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ, ಎಂಜಿನ್’ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿದಿದೆ. ಕೂಡಲೇ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಎಂಜಿನ್’ನ ಒಳಗೆ ಕಾಣಿಸಿಕೊಂಡಿದ್ದ … Read more

‘ಸೀಟ್ ಖಾಲಿ ಇಲ್ಲ, ಆದರೂ ಕಾಂಗ್ರೆಸ್’ನವರು ಟವಲ್ ಹಾಕಿಕೊಂಡು ಕುಳಿತಿದ್ದಾರೆ’

Eshwarappa MLA 1

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಮುಖ್ಯಮಂತ್ರಿ ಸೀಟು ಖಾಲಿ ಇಲ್ಲದಿದ್ದರೂ ಎಲ್ಲ ಕಾಂಗ್ರೆಸಿಗರು ಟವಲ್  ಹಾಕಿಕೊಂಡು ಕುಳಿತಿದ್ದಾರೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರೇವಣ್ಣ ಸೇರಿದಂತೆ ಎಲ್ಲ ಕಾಂಗ್ರೆಸಿಗರ ಹೆಸರು ಪ್ರಸ್ತಾಪವಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಹೆಸರಿಗಷ್ಟೇ ಮೈತ್ರಿ ಸರ್ಕಾರವಿದೆ. ಆದರೆ ಪರಸ್ಪರ ಒಬ್ಬರ ವಿರುದ್ಧ ಮತ್ತೊಬ್ಬರು ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭ ಸೀಟು ಹಂಚಿಕೆ ವಿಚಾರವಾಗಿ ಮೈತ್ರಿಯಲ್ಲಿ ಜಗಳವಾಗಿತ್ತು. ನಂತರ ಮೈತ್ರಿಯಾದರೂ, ಪರಸ್ಪರ ಬೆಂಬಲ ಕೊಡುತ್ತಿಲ್ಲ … Read more

ಜೆಎನ್ಎನ್ ಕಾಲೇಜು ಬಳಿ ಭೀಕರ ಅಪಘಾತ, ಬೈಕ್ ಪೀಸ್ ಪೀಸ್, ಸೆಕೆಂಡ್ ಪಿಯು ವಿದ್ಯಾರ್ಥಿನಿ ಸಾವು

ಶಿವಮೊಗ್ಗ ಲೈವ್.ಕಾಂ | 19 ಮೇ 2019 ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜು ಬಳಿ ಸವಳಂಗ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸುನೈನಾ (18) ಮೃತ ವಿದ್ಯಾರ್ಥಿನಿ. ಬೆಳಗ್ಗೆ ಟ್ಯೂಷನ್ ಮುಗಿಸಿಕೊಂಡು ಸ್ನೇಹಿತೆಯ ಮನೆಗೆ ಪುಸ್ತಕ ಕೊಡಲು ಬೈಕ್’ನಲ್ಲಿ ತೆರಳುವಾಗ ಘಟನೆ ನಡೆದಿದೆ. ಎದುರಿನಿಂದ ಬಂದ ಬೊಲೆರೊ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. ಸುನೈನಾ ಚಲಾಯಿಸುತ್ತಿದ್ದ ಬೈಕ್ ಎರಡು ಭಾಗವಾಗಿದೆ. ಬೊಲೆರೋದ ಮುಂದಿನ ಗಾಜು ಪುಡಿ ಪುಡಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ, ಸ್ಥಳೀಯರು ಸುನೈನಾಳನ್ನು … Read more

ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗೂ ಜೆಡಿಎಸ್, ಕಾಂಗ್ರೆಸ್ ಮೈತ್ರಿ

Congress And JDS Logo 1

ಶಿವಮೊಗ್ಗ ಲೈವ್.ಕಾಂ | 15 ಮೇ 2019 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್, ಕಾಂಗ್ರೆಸ್ ಪಕ್ಷ ನಿರ್ಧರಿಸಿವೆ. ಇದಕ್ಕೆ ವರಿಷ್ಠರಿಂದಲೂ ಒಪ್ಪಿಗೆ ಸಿಕ್ಕಿರುವುದರಿಂದ, ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಒಂದೆರಡು ಕಡೆ ಸಮಸ್ಯೆ ಆಗಬಹುದು. ಅದನ್ನು ಮುಖಂಡರು ಬಗೆಹರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮಾತನಾಡಿ, ಸ್ಥಳೀಯ ಅಗತ್ಯಕ್ಕನುಗುಣವಾಗಿ ಸೀಟು ಹಂಚಿಕೆ ಮಾಡಿಕೊಂಡು ಈಗಾಗಲೇ ಆಯಾ ಮುಖಂಡರ ಮುಂದಾಳತ್ವದಲ್ಲಿ ಪ್ರಚಾರ … Read more

ಶಿವಮೊಗ್ಗ ಸಿಟಿಯ 300ಕ್ಕೂ ಹೆಚ್ಚು ರೌಡಿಗಳಿಗೆ ಬಿಸಿ ಮುಟ್ಟಿಸಿದ್ರು ಹೊಸ ಎಸ್.ಪಿ, ಬಾಲ ಬಿಚ್ಚದಂತೆ ಖಡಕ್ ವಾರ್ನಿಂಗ್

ಶಿವಮೊಗ್ಗ ಲೈವ್.ಕಾಂ | 13 ಮೇ 2019 ನಗರದಲ್ಲಿ ಕಾರ್ಯಾಚರಿಸುತ್ತಿರುವ ರೌಡಿಗಳಿಗೆ ಶಿವಮೊಗ್ಗದ ಖಾಕಿ ಪಡೆ, ಇವತ್ತು ಸರಿಯಾಗಿ ಬಿಸಿ ಮುಟ್ಟಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ ನೇತೃತ್ವದಲ್ಲಿ ನಡೆದ ರೌಡಿ ಪರೇಡ್’ನಲ್ಲಿ, ಖಡಕ್ ವಾರ್ನಿಂಗ್ ನೀಡಲಾಗಿದೆ. ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಇವತ್ತು ರೌಡಿ ಪರೇಡ್ ನಡೆಯಿತು. ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಪರೇಡ್’ನಲ್ಲಿ ಪಾಲ್ಗೊಂಡಿದ್ದ ರೌಡಿಗಳಿಗೆ ವಾರ್ನಿಂಗ್ ನೀಡಿದರು. 300ಕ್ಕೂ ಹೆಚ್ಚು ರೌಡಿಗಳು ಭಾಗಿ ಶಿವಮೊಗ್ಗ ನಗರದಲ್ಲಿ ಕಾರ್ಯಾಚರಿಸುತ್ತಿರುವ … Read more

ಸಾಗರದ ಸಮೋಸ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ, ಮಾರಾಟಗಾರರಿಗೆ ಖಡಕ್ ವಾರ್ನಿಂಗ್

ಶಿವಮೊಗ್ಗ ಲೈವ್.ಕಾಂ | 11 ಮೇ 2019 ನಗರಸಭೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಸಮೋಸ ಮಾರಾಟಗಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಸಾಗರದ ಮೀನು ಮಾರುಕಟ್ಟೆ ಬಳಿ ಇರುವ ಸಮೋಸ ಮಾರಾಟ ಮಳಿಗೆಗಳ ಮೇಲೆ ರೇಡ್ ಮಾಡಿದ್ದರು. ದಾಳಿ ವೇಳೆ, ಸಮೋಸ ಮಾರಾಟ ಮಾಡುವವರು ಸ್ವಚ್ಛತೆ ಕಾಪಾಡದೆ ಇರುವುದು, ಒಮ್ಮೆ ಬಾಣಲೆಗೆ ಎಣ್ಣೆ ಹಾಕಿದರೆ ಅದು ಬತ್ತುವವರೆಗೂ ಸಮೋಸ ಮಾಡುವುದು, ಎರಡ್ಮೂರು ದಿನದ ಹಿಂದೆ ಕತ್ತರಿಸಿದ ತರಕಾರಿ ಬಳಕೆ ಮಾಡುವುದು, ರುಚಿ ಹೆಚ್ಚಿಸಲು ಟೇಸ್ಟಿಂಗ್ ಪೌಡರ್ … Read more