‘ಕಾಂಗ್ರೆಸ್’ನಲ್ಲಿ ಈಗ ಎರಡು ಬಣಗಳಿವೆ, ಒಂದು ಸಿದ್ದರಾಮಯ್ಯ ಬಣ, ಮತ್ತೊಂದು ಬಟ್ಟೆ ಹಾವಿನ ಬಣ’

Eshwarappa General Image 1

ಶಿವಮೊಗ್ಗ ಲೈವ್.ಕಾಂ | 11 ಮೇ 2019 ತಿರುಕ ರಾತ್ರಿ ಕನಸು ಕಾಣುತ್ತಿದ್ದ. ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಪದೇ ಪದೇ ಮುಖ್ಯಮಂತ್ರಿ ಆಗುತ್ತೇನೆ ಅನ್ನುತ್ತಿರುವ ಸಿದ್ದರಾಮಯ್ಯ ಮತ್ತು ಅವರ ಚೇಲಾಗಳನ್ನು ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಸೃಷ್ಟಿಸುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ತಮ್ಮಿಂದಾಗಿಯೇ ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ಸೋಲನುಭವಿಸಿದೆ ಎಂಬುದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಹಾಗಿದ್ದೂ ಅವರ ಚೇಲಾಗಳು, ಸಿದ್ದರಾಮಯ್ಯ ಪುನಃ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ … Read more

ಶಿಕಾರಿಪುರ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ, ಸ್ಟೇಷನ್ ಎದುರಿಗೆ ಧರಣಿ

ಶಿವಮೊಗ್ಗ ಲೈವ್.ಕಾಂ | 11 ಮೇ 2019 ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಶಿಕಾರಿಪುರ ಪೊಲೀಸ್ ಠಾಣೆ ಮುಂಭಾಗ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡ ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರು, ಹಲ್ಲೆಕೋರರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತ ರಾಜು ಎಂಬುವವರ ಮೇಲೆ, ಇವತ್ತು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಅರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಿ, ಕ್ರಮ ಕೈಗೊಳ್ಳಬೇಕು ಎಂದು … Read more

ಶಿವಮೊಗ್ಗದಲ್ಲಿ ಆಟೋ, ಕಾರು ಅಪಘಾತ, ನಡು ರಸ್ತೆಯಲ್ಲೇ ಆಟೋ ಪಲ್ಟಿ

110519 Auto Accident at Mahaveera Circle 1

ಶಿವಮೊಗ್ಗ ಲೈವ್.ಕಾಂ | 11 ಮೇ 2019 ನಗರದ ಮಹಾವೀರ ಸರ್ಕಲ್’ನಲ್ಲಿ ಆಟೋ, ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಮತ್ತು ಆಟೋ ಚಾಲಕರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ಪಲ್ಟಿ ಹೊಡೆದಿದ್ದು, ಮುಂಭಾಗ ನುಜ್ಜುಗುಜ್ಜಾಗಿದೆ. ಇನ್ನು, ಕಾರಿಗೂ ಹಾನಿಯಾಗಿದ್ದು, ಚಾಲಕನ ಕಡೆಯ ಬಾಗಿಲಿಗೂ ಹಾನಿಯಾಗಿದೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿವಮೊಗ್ಗ … Read more

ಶಿವಮೊಗ್ಗ ಲೋಕಸಭೆ ಚುನಾವಣೆ ಸಮೀಕ್ಷೆ, ಗೆಲ್ಲೋದ್ಯಾರು? ಎಲ್ಲೆಲ್ಲಿ ಎಷ್ಟು ಮತ ಬರಲಿದೆ? BJP, JDS, ಕಾಂಗ್ರೆಸ್ ಸರ್ವೇಯಲ್ಲೇನಿದೆ?

ಶಿವಮೊಗ್ಗ ಲೈವ್.ಕಾಂ | 9 ಮೇ 2019 ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನುವ ಹಾಗೆ, ಚುನಾವಣೆ ಮುಗಿದರೂ, ಸೋಲು ಗೆಲುವಿನ ಲೆಕ್ಕಾಚಾರ ನಿಂತಿಲ್ಲ. ಮೇ 23ರಂದು ಮತ ಎಣಿಕೆ ನಡೆಯಲಿದೆ. ಅಲ್ಲಿಯವರೆಗೂ ಮತಗಣಿತ ನಡೆಯುತ್ತಲೇ ಇರುತ್ತದೆ. ಲೋಕಸಭೆ ಚುನಾವಣೆ ಬಳಿಕ ಮೂರು ಪ್ರಮುಖ ಪಕ್ಷಗಳು ಸಮೀಕ್ಷೆ ನಡೆಸಿವೆ. ಬೂತ್ ಮಟ್ಟದಿಂದ ಲೆಕ್ಕಾಚಾರ ನಡೆದಿದ್ದು, ಅಂತಿಮ ವರದಿಯನ್ನು ಸಿದ್ಧಪಡಿಸಿಕೊಂಡಿವೆ. ಇದರ ಆಧಾರದ ಮೇಲೆಯೇ ಅಭ್ಯರ್ಥಿಗಳು ಮತ್ತು ಪಕ್ಷದ ಮುಖಂಡರು ಗೆಲುವು ತಮ್ಮದೇ ಎಂದು ಹೇಳಿಕೆ ನೀಡುತ್ತಿದ್ದಾರೆ. … Read more

ಮೋದಿ, ದರ್ಶನ್, ಯಶ್’ಗೆ ಬೆದರಿಕೆ ಹಾಕಿದವರು ಸೇಫ್, ಗೃಹ ಸಚಿವರ ಪತ್ರ ಷೇರ್ ಮಾಡಿದವರಿಗೆ ಕೇಸ್, ಬಿಜೆಪಿ ಗರಂ

ಶಿವಮೊಗ್ಗ ಲೈವ್.ಕಾಂ | 6 ಮೇ 2019 ಗೃಹ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಇವತ್ತು ಪ್ರತಿಭಟನೆ ನಡೆಸಲಾಯಿತು. ಶಾಸಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ರಾಜ್ಯದ ಸಮ್ಮಿಶ್ರ ಸರ್ಕಾರ ಸೇಡಿನ ಕ್ರಮ ಕೈಗೊಳ್ಳುತ್ತಿದೆ. ಬಿಜೆಪಿ ವಿರುದ್ಧ ನಡೆಯುತ್ತಿದ್ದ ಸೇಡಿನ ರಾಜಕಾರಣದ ವಿರುದ್ಧ ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಆದರೆ ಸಮ್ಮಿಶ್ರ ಸರ್ಕಾರದ … Read more

ಸಹ್ಯಾದ್ರಿ ಕಾಲೇಜಿನಲ್ಲಿ ಲೋಕಸಭೆ ಎಲೆಕ್ಷನ್ ಮತ ಎಣಿಕೆಗೆ ಸಿದ್ಧತೆ ಪೂರ್ಣ, ಹೇಗೆ ನಡೆಯುತ್ತೆ ಕೌಂಟಿಂಗ್? ಯಾರಿಗೆಲ್ಲ ಇದೆ ಪ್ರವೇಶ?

010519 Sahyadri College Police Security EVM Loksabha 1

ಶಿವಮೊಗ್ಗ ಲೈವ್.ಕಾಂ | 1 ಮೇ 2019 ಸಹ್ಯಾದ್ರಿ ಕಾಲೇಜಿನಲ್ಲಿ ಮೇ.23ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಪೂರ್ವಭಾವಿ ಸಿದ್ಧತೆ ಬಗ್ಗೆ ಅಭ್ಯರ್ಥಿಗಳು ಮತ್ತು ಅವರ ಏಜೆಂಟರುಗಳ ಸಭೆ ನಡೆಸಲಾಯಿತು. ಬಿ.ಹೆಚ್.ರಸ್ತೆಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, ನೆಲ ಮಹಡಿಯಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಒಂದನೇ ಮಹಡಿಯಲ್ಲಿ ಶಿವಮೊಗ್ಗ ಗ್ರಾಮಾಂತರ, ಬೈಂದೂರು, ಸಾಗರ, ಶಿಕಾರಿಪುರ, ಸೊರಬ … Read more

‘ಮಂಡ್ಯ ಜೆಡಿಎಸ್ ಅಭ್ಯರ್ಥಿಯನ್ನು ವಿದೇಶದಲ್ಲಿ ಹುಡುಕುವಂತಾಗಿದೆ, ಶಿವಮೊಗ್ಗಕ್ಕೂ ಅಂತಹ ಸ್ಥಿತಿ ದೂರವಿಲ್ಲ’

Kumar Bangarappa Photo 1

ಶಿವಮೊಗ್ಗ ಲೈವ್.ಕಾಂ | 21 ಏಪ್ರಿಲ್ 2019 ಚುನಾವಣೆ ಬಳಿಕ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ವಿದೇಶದಲ್ಲಿ ಹುಡುಕುವಂತಾಗಿದೆ. ಅಂತಹ ಸ್ಥಿತಿ ಶಿವಮೊಗ್ಗಕ್ಕೂ ದೂರವಿಲ್ಲ ಅಂತಾ ಸೊರಬ ಶಾಸಕ ಕುಮಾರ್ ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರ್ ಬಂಗಾರಪ್ಪ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣೆಗಾಗಿ ವಿದೇಶದಿಂದ ಅಭ್ಯರ್ಥಿ ಕರೆಸಿಕೊಂಡಿದ್ದಾರೆ. ಚುನಾವಣೆ ಬಳಿಕ ಮತ್ತೆ ಅಭ್ಯರ್ಥಿಯನ್ನು ವಿದೇಶದಲ್ಲಿಯೇ ಹುಡುಕಬೇಕಾಗುತ್ತದೆ ಎಂದು ಲೇವಡಿ ಮಾಡಿದರು. ಇವರದ್ದು ಚುನಾವಣಾ ಶೋಕಿ ಕೊಳೆರೋಗ, ಅತಿವೃಷ್ಟಿಯಾದಾಗ ಸಿಎಂ ಕುಮಾರಸ್ವಾಮಿ ಅವರನ್ನು ಕರೆದೆವು. ಪ್ರಗತಿ ಪರಿಶೀಲನಾ … Read more

ನರ್ಸರಿ ಶಾಲೆ ಮಕ್ಕಳು, ರಿಂಗ ರಿಂಗ ರೋಸಸ್ ಹಾಡಿದಂತೆ ರಾಹುಲ್ ಗಾಂಧಿ ಮಾತಾಡ್ತಾರೆ

ಶಿವಮೊಗ್ಗ ಲೈವ್.ಕಾಂ | 20 ಏಪ್ರಿಲ್ 2019 ಚೌಕಿದಾರ್ ಚೋರ್ ಹೈ ಅಂತಾ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟೀಕೆಗೆ, ಮಾಜಿ ಸಿಎಂ ಎಸ್.ಎಂ.ಕೃಷ್ಣ, ತೀರ್ಥಹಳ್ಳಿಯಲ್ಲಿ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿ ಚೌಕಿದಾರ್ ಚೋರ್ ಹೈ ಅಂತಾ ಹೇಳಿಕೆ ನೀಡಿದ್ದು ಅಸಂಬದ್ಧ. ನರ್ಸರಿ ಶಾಲೆ ಮಕ್ಕಳು ರಿಂಗ ರಿಂಗ ರೋಸಸ್ ಹೇಳಿದಂತೆ ಮಾತಾಡಿದ್ದಾರೆ ಅಂತಾ ವ್ಯಂಗ್ಯವಾಡಿದರು. ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬಿಜೆಪಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಎಸ್.ಎಂ.ಕೃಷ್ಣ ಮಾತನಾಡಿದರು. ದೇಶದಲ್ಲಿ ಕಾಂಗ್ರೆಸ್ … Read more

ಭದ್ರಾವತಿಯಲ್ಲಿ ಒಂದು ಗಂಟೆಯ ರೋಡ್ ಶೋ, ಮೂರೇ ನಿಮಿಷದ ಭಾಷಣ, ಏನು ಹೇಳಿದರು ಗೊತ್ತಾ ಅಮಿತ್ ಷಾ?

ಶಿವಮೊಗ್ಗ ಲೈವ್.ಕಾಂ | 20 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಪರವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರೋಡ್ ಶೋಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅಮಿತ್ ಷಾ ಅವರು, ಸುಮಾರು ಒಂದು ಗಂಟೆ ಅವಧಿಯ ರೋಡ್ ಶೋ ಮಾಡಿದರು. ಭದ್ರಾವತಿಯ ಅಂಬೇಡ್ಕರ್ ವೃತ್ತಕ್ಕೆ ಆಗಮಿಸುತ್ತಿದ್ದಂತೆ, ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಭಾಷಣ ಮಾಡಿದರು. ಬಳಿಕ ಭಾಷಣ ಆರಂಭಿಸಿದ ಅಮಿತ್ ಷಾ, ಮೂರೇ ನಿಮಿಷದಲ್ಲಿ ಮುಗಿಸಿದರು. ಮೂರು ನಿಮಿಷದಲ್ಲಿ ಅಮಿತ್ ಷಾ ಹೇಳಿದ್ದೇನು? ರಾಘವೇಂದ್ರ … Read more

‘ಹೊರಗೆ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಅನ್ನುತ್ತಾರೆ, ಮನಸಲ್ಲಿ ಸೋಲಿಸಬೇಕು ಅಂದುಕೊಳ್ಳುತ್ತಿದ್ದಾರೆ’

ಶಿವಮೊಗ್ಗ ಲೈವ್.ಕಾಂ | 20 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತಾ ಈಶ್ವರಪ್ಪ ಅವರು ಮನಸಿನಲ್ಲೇ ಅಂದುಕೊಳ್ಳುತ್ತಿದ್ದಾರೆ. ಅದರೆ ಹೊರಗೆ ಮಾತ್ರ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಅನ್ನುತ್ತಿದ್ದಾರೆ ಅಂತಾ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಶಿವಮೊಗ್ಗದ ಉಂಬಳೆಬೈಲು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರು ಮೋದಿಗೆ ಮತ ನೀಡಿ ಎಂದು ಕೇಳುತ್ತಿದ್ದಾರೆ. ಹಾಗಿದ್ದರೆ, ಇವರು ಸಂಸದರಾಗಿದ್ದಾಗ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಿಲ್ಲವೇ ಎಂದು ಪ್ರಶ್ನಿಸಿದರು. ಶುಭಗಳಿಗೆಯಲ್ಲಿ ಬರಲು ಆಗಲಿಲ್ಲ … Read more