ಕಾಲು ಸಂಕ, ಕೊಳೆರೋಗಕ್ಕೆ ಪರಿಹಾರ, ತೀರ್ಥಹಳ್ಳಿಗೆ ಸರ್ಕಾರದಿಂದ ಬಂತು ಕೋಟಿ ಕೋಟಿ ಅನುದಾನ

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ಕಾಲು ಸಂಕ ನಿರ್ಮಾಣ, ಕೊಳೆರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ, ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಯಾಗಿದೆ. ಈ ಕುರಿತು ಶಾಸಕ ಆರಗ ಜ್ಞಾನೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 34 ಕಲುಸಂಕ ಕಾಮಗಾರಿಗೆ ಅನುದಾನ ತೀರ್ಥಹಳ್ಳಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ 4.5 ಕೋಟಿ ರೂ. ಬಿಡುಗಡೆ ಮಾಡಿದೆ. 8 ರಿಂದ 25 ಲಕ್ಷ ರೂ.ವರೆಗಿನ 34 ಕಾಮಗಾರಿಗೆ ಇದನ್ನು ಬಳಸಲಾಗುತ್ತದೆ … Read more

ಭಗವಾನ್ ಗಡಿಪಾರಿಗೆ ಭದ್ರಾವತಿಯಲ್ಲಿ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಎಸ್.ಕೆ.ಭಗವಾನ್ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ, ವಿಶ್ವಹಿಂದೂ ಪರಿಷತ್, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಭಗವಾನ್ ಎಂದು ಹೆಸರಿಟ್ಟುಕೊಂಡು ಅದಕ್ಕೆ ವಿರುದ್ಧವಾಗಿ ಹಿಂದೂ ಧರ್ಮದ  ದೇವರುಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವಿರೋಧಿಸಿದರು. ಇದಕ್ಕೂ ಮೊದಲು, ರಂಗಪ್ಪ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿಸಲ್ಲಿಸಿದರು. ಪ್ರಮುಖರಾದ ಓಂಕಾರಪ್ಪ, ಧರ್ಮಪ್ರಸಾದ್, ಬಿ.ಕೆ.ಶ್ರೀನಾಥ್, ರಾಮಚಂದ್ರ, ಆರ್.ಎಸ್.ಶೋಭ, ಹೇಮಾವತಿ … Read more

ರಾಜ್ಯದಲ್ಲೇ ಮೊದಲು, ತೀರ್ಥಹಳ್ಳಿಯಲ್ಲಿ ನಿರಂತರ ಪೂರೈಕೆಯಾಗುತ್ತಿದೆ ಕುಡಿಯುವ ನೀರು

Water Tap image

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ರಾಜ್ಯದಲ್ಲೇ ಮೊದಲ ಬಾರಿಗೆ ತೀರ್ಥಹಳ್ಳಿಯಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಗೆ ಬಂದಿದೆ. ಯೋಜನೆಯನ್ನು ಇನ್ನಷ್ಟು ಸುಧಾರಣೆಗೊಳಿಸಿ ಪರಿಪೂರ್ಣವಾಗಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಂದೇಶ್ ಜವಳಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂದೇಶ್ ಜವಳಿ, ರಾಜ್ಯದಲ್ಲೇ ಮೊದಲ ಬಾರಿಗೆ ಈ ಯೋಜನೆ ಅನುಷ್ಠಾನಗೊಂಡಿದ್ದು, ಸಣ್ಣಪುಟ್ಟ ದೋಷವಿದ್ದು ಅದನ್ನು ಶೀಘ್ರವೇ ಪರಿಹರಿಸಲಾಗುತ್ತದೆ ಎಂದರು. ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೊಸ ರೂಪ ಆಧುನಿಕ ಯಂತ್ರೋಪಕರಣಗಳಿಂದ ಪಟ್ಟಣದ … Read more

ಕುಟುಂಬ ಸಹಿತ ಸಿಎಂ ಫಾರಿನ್ ಟೂರ್, ಶಿವಮೊಗ್ಗದಲ್ಲಿ ಮಾಜಿ ಸಿಎಂ ಗರಂ

Yedyurappa at Vinobhanagara General Image 1

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ, ಕುಟುಂಬದವರ ಜೊತೆಗೆ ಹೊಸ ವರ್ಷಾಚರಣೆಗೆ ವಿದೇಶಕ್ಕೆ ತೆರಳಿದ್ದಾರೆ ಅಂತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ 150 ತಾಲೂಕುಗಳಲ್ಲಿ ಬರವಿದೆ. ಬರಪೀಡಿತ ಪ್ರದೇಶಗಳಲ್ಲಿ ಬಿಜೆಪಿ ತಂಡ ತೆರಳಿ ವಸ್ತುಸ್ಥಿತಿ ಅಧ್ಯಯನ ಮಾಡಿದೆ. ಈ ತಾಲೂಕಿನ ಜನರ ಬವಣೆ ಕುರಿತು ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಲು ಶುರು ಮಾಡಿದ ನಂತರ ರಾಜ್ಯ ಸರ್ಕಾರ ಪ್ರತೀ ತಾಲೂಕಿಗೆ … Read more

ಸಾಗರದಲ್ಲಿ ಮುಂದುವರೆದ ಮಂಗನ ಕಾಯಿಲೆ ಆತಂಕ, ಮತ್ತೊಬ್ಬ ಶಂಕಿತ ಬಲಿ, ಮಂಗಗಳ ಮೃತದೇಹ ಪತ್ತೆ

030119 Mangana Kayale Monkey Death 1

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ಸಾಗರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮಂಗಗಳ ಅಸಹಜ ಸಾವು ಮುಂದುವರೆದಿದ್ದು, ಮಂಗನ ಕಾಯಿಲೆ ಆತಂಕ ಇಮ್ಮಡಿಯಾಗಿದೆ. ಇನ್ನು, ಮಂಗನ ಕಾಯಿಲೆ ಶಂಕಿತರೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಂಚಿಕೈ ಮಂಜುನಾಥ (22) ಮೃತಪಟ್ಟಿದ್ದಾರೆ. ಮಂಜುನಾಥ ಅವರಿಗೆ ತೀವ್ರ ಜ್ವರ ಮತ್ತು ಜಾಂಡೀಸ್ ಇತ್ತು. ಮಂಗನ ಕಾಯಿಲೆ ಶಂಕೆಯಿಂದಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪುಣೆಯಲ್ಲಿರುವ ಲ್ಯಾಬ್’ಗೆ ಕಳುಹಿಸಲಾಗಿದೆ. ಮುಂದುವರೆದ ಮಂಗಗಳ ಸಾವು ಭಾರಂಗಿ ಹೋಬಳಿಯ ಅರಳಗೋಡು … Read more

ನೀರಿಗಾಗಿ ಭದ್ರಾವತಿ ಮಿಲ್ಟ್ರಿಕ್ಯಾಂಪ್ ಬಳಿ ರೈತರ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಅನ್ನದಾತರು ಗರಂ

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ಭದ್ರಾ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಮಿಲ್ಟ್ರಿಕ್ಯಾಂಪ್’ನ ನೀರಾವರಿ ಇಲಾಖೆ ಕಚೇರಿ ಮುಂದೆ ಪ್ರತಿಭಟಿಸಲಾಯಿತು. ನೀರು ಹರಿಸುವುದನ್ನು ನಿಲ್ಲಿಸಿ 46 ದಿನ ಕಳೆದಿದೆ. ನೀರು ಹರಿಸಲು ಇದು ಸಕಾಲವಾಗಿದೆ. ಆದ್ದರಿಂದ ಸರ್ಕಾರ ಮತ್ತು ನೀರಾವರಿ ಇಲಾಖೆ ತಡ ಮಾಡದೆ ನಾಲೆಗಳಲ್ಲಿ ನೀರು ಹರಿಸಬೇಕು. ಇಲ್ಲವಾದಲ್ಲಿ ರೈತರು ಸಂಕಷ್ಟಕ್ಕೀಡಾಗುತ್ತಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರೈತ ಮುಖಂಡರಾದ … Read more

ಸಾಗರ ತಾಲೂಕಿನಲ್ಲಿ ಗಾಂಜಾ, ಡ್ರಗ್ಸ್ ಹಾವಳಿ, ಕಟ್ಟುನಿಟ್ಟಿನ ಕ್ರಮಕ್ಕೆ ಮಹತ್ವದ ಮೀಟಿಂಗ್ ಫಿಕ್ಸ್

Haratalu-Halappa

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ಯುವಕರಲ್ಲಿ ಗಾಂಜಾ ಮತ್ತು ಡ್ರಗ್ಸ್ ಸೇವನೆ ವ್ಯಾಪಕವಾಗುತ್ತಿದೆ. ವ್ಯಸನದ ಕುರಿತು ಮೃದು ಧೋರಣೆಯಿಂದ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಕಠಿಣ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ಜ.10ರಂದು ಜಿಲ್ಲಾ ರಕ್ಷಣಾಧಿಕಾರಿ, ಎಸಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಗಾಂಜಾ ಸೇವನೆ ಹೆಚ್ಚುತ್ತಿರುವ ಹಿನ್ನಲೆ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಹರತಾಳು ಹಾಲಪ್ಪ, ಶಿಘ್ರದಲ್ಲೇ ನಗರ ಮತ್ತು ಗ್ರಾಮೀಣ ಭಾಗದ ಕಾಲೇಜುಗಳ … Read more

ಮೊದಲು ಈ ಬಸ್ ಸ್ಟಾಪ್’ನಲ್ಲಿ ನಿಲ್ಲೋಕೆ ಹೆದರುತ್ತಿದ್ದ ಭದ್ರಾವತಿ ಜನ, ಈಗ ಬಹು ಹೊತ್ತು ಇಲ್ಲಿ ಬಸ್ಸಿಗೆ ಕಾಯುತ್ತಾರೆ

261218 Yuva Brigade VISL Bus Stop Cleaning 1

ಶಿವಮೊಗ್ಗ ಲೈವ್.ಕಾಂ | 26 ಡಿಸೆಂಬರ್ 2018 ಎಲ್ಲೆಂದರಲ್ಲಿ ಬಿದ್ದಿದ್ದ ಕಸ. ಇಲ್ಲಿಗೆ ಬಂದವರಿಗೆ ಕಾಡುತ್ತಿತ್ತು ಸಾಂಕ್ರಾಮಿಕ ರೋಗದ ಆತಂಕ. ಆಸ್ಪತ್ರೆ ಎದುರಲ್ಲೇ ಇತ್ತು ಕಾಯಿಲೆಗಳ ಕಾರ್ಖಾನೆ..! ಇದು ಭದ್ರಾವತಿಯ ವಿಐಎಸ್ಎಲ್ ಆಸ್ಪತ್ರೆ ಮುಂಭಾಗದ ಬಸ್ ತಂಗುದಾಣದ ದುಸ್ಥಿತಿ. ಎಲ್ಲೆಂದರಲ್ಲಿ ಕಸದ ರಾಶಿ, ಸುತ್ತಲು ಬೆಳೆದಿದ್ದ ಗಿಡಗಂಟಿಯಿಂದಾಗಿ, ಹಂದಿಗಳ ವಾಸ ಸ್ಥಾನವಾಗಿತ್ತು. ಅಕ್ರಮ ಚಟುವಟಿಕೆಗೆ ಈ ತಂಗುದಾಣ ಆಶ್ರಯ ತಾಣದಂತಾಗಿತ್ತು. ಇದೇ ಕಾರಣಕ್ಕೆ, ಈ ಬಸ್ ತಂಗುದಾಣದ ಬಳಿಗೆ ಬರಲು ಜನರು ಹೆದರುತ್ತಿದ್ದರು. ಆದರೆ ಕಳೆದೆರಡು ದಿನದಿಂದ, … Read more

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗರಂ ಆಗಿದ್ದ ಭದ್ರಾವತಿ ಎಂಎಲ್ಎ ಈಗ ಕೂಲ್ ಕೂಲ್, ಮುಂದಿನ ನಡೆ ಏನು ಗೊತ್ತಾ?

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | 26 ಡಿಸೆಂಬರ್ 2018 ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ, ಬೇಸರಗೊಂಡಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ, ತಾಳ್ಮೆಯ ಹಾದಿ ತುಳಿಯಲು ನಿರ್ಧರಿಸಿದ್ದಾರೆ. ಯಾವುದೇ ಕಾರಣಕ್ಕೂ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಿಲ್ಲ ಅಂತಾ ಖಡಕ್ ಆಗಿ ಹೇಳಿದ್ದ ಅವರೀಗ, ಭೂ ಸೇನಾ ನಿಗಮದ ಅಧ್ಯಕ್ಷರಾಗಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕುತೂಹಲ ಮೂಡಿಸಿತ್ತು ಬೆಂಬಲಿಗರ ಸಭೆ ಮಿನಿಸ್ಟರ್ ಪಟ್ಟ ಸಿಗದೆ ಬೇಸರಗೊಂಡಿದ್ದ ಸಂಗಮೇಶ್ವರ್, ಬೆಂಬಲಿಗರ ಸಭೆ ನಡೆಸಿ, ಮುಂದಿನ ನಡೆಯ ಕುರಿತು ಪ್ರಕಟಿಸುವುದಾಗಿ ಹೇಳಿದ್ದರು. ಈಗ … Read more

ಶಿವಮೊಗ್ಗ ಕಾಂಗ್ರೆಸ್’ಗೆ ಹೊಸ ಅಧ್ಯಕ್ಷ, ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್

H-S-Sundaresh-Congress-President

ಶಿವಮೊಗ್ಗ ಲೈವ್.ಕಾಂ | 24 ಡಿಸೆಂಬರ್ 2018 ಜಿಲ್ಲಾ ಕಾಂಗ್ರೆಸ್’ಗೆ ಹೊಸ ಸಾರಥಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ. ಡಿ.27ರಂದು ಹೊಸ ಅಧ್ಯಕ್ಷರು ಅಧಿಕಾರ ಸ್ವೀಕರಿಸಲಿದ್ದಾರೆ. ಡಿ.27ರಂದು ಬೆಳಗ್ಗೆ 11 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ತಾಲೂಕು, ಬ್ಲಾಕ್ ಘಟಕದ ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸುವುದಾಗಿ ಸ್ಪಷ್ಟಪಡಿಸಿದರು. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ … Read more