ಶಿವಮೊಗ್ಗಕ್ಕೆ ನಾಳೆ ಪಾದಯಾತ್ರಿಗಳ ಪ್ರವೇಶ, ಶಿವಪೂಜೆ, ಪ್ರಸಾದ ವಿನಿಯೋಗ

Veerashaiva-Lingayatha-Mahasabha-press-meet

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ನ.27ರಂದು ಜಗದ್ಗುರು ಶಿವಾನಂದ ರಾಜೇಂದ್ರ ಶಿವಾಚಾರ್ಯರ ಪೀಠಾರೋಹಣದ ಶತಮಾನೋತ್ಸವ ಸಮಾರಂಭ ನಡೆಯಲಿದೆ. ಇದರ ಅಂಗವಾಗಿ ನಡೆಯುತ್ತಿರುವ ಪಾದಯಾತ್ರೆ ನ.24ರಂದು ಶಿವಮೊಗ್ಗ ನಗರಕ್ಕೆ ಪ್ರವೇಶ ಮಾಡಲಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರುದ್ರಮುನಿ ಸಜ್ಜನ್‌, ಶಿಕಾರಿಪುರ ತಾಲ್ಲೂಕಿನ ಕಡೇನಂದಿಹಳ್ಳಿಯಿಂದ ರಂಭಾಪುರಿ ಮಹಾಪೀಠದವರೆಗೆ 171 ಕಿ.ಮೀ ಪಾದಯಾತ್ರೆ ಈಗಾಗಲೇ ಆರಂಭವಾಗಿದೆ. ನ.23ರಂದು ಕೊಮ್ಮನಾಳು ತಲುಪಲಿದೆ.. … Read more

ಇನ್ನೆಷ್ಟು ವರ್ಷ ಬೇಕು ಶಿವಮೊಗ್ಗದ ಈ ರಸ್ತೆಯಲ್ಲಿರುವ ಲೈಟ್‌ ಆನ್‌ ಆಗಲು?

Street-Lights-never-worked-at-Shankaramutt-road-in-Shimoga-city.

ಶಿವಮೊಗ್ಗ: ಈ ಬೀದಿ ದೀಪದ ಕೆಳಗೆ ಸದಾ ಕತ್ತಲು. ಯಾಕಂದರೆ ಇವು ಆನ್‌ ಆಗಿದ್ದೇ ಇಲ್ಲ. ಅಂಗಡಿ ಮುಂಗಟ್ಟುಗಳ ಮುಂದಿನ ಲೈಟ್‌ಗಳಿಂದಲೇ ಈ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸ್ವಲ್ಪ ಬೆಳಕು ಕಾಣಿಸುತ್ತದೆ. ‌ ಇಂತಹ ದುಸ್ಥಿತಿ ಇರುವುದು ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿ. ಹೆದ್ದಾರಿಯಾದರು ಹಲವು ತಿಂಗಳಿಂದ ಈ ಬೀದಿ ದೀಪಗಳು ಕಾರ್ಯನಿರ್ವಹಿಸಿಲ್ಲ. ಶಂಕರ ಮಠ ರಸ್ತೆಯ ಸುಪ್ರೀಂ ಬಜಾಜ್‌ ಶೋ ರೂಂ ಕಾಂಪೌಂಡ್‌ಗೆ ಹೊಂದಿಕೊಂಡಂತೆ ಬೀದಿ ದೀಪ ಅಳವಡಿಸಲಾಗಿದೆ. ಅಲ್ಲಿಂದ ಶಂಕರಮಠ ಸರ್ಕಲ್‌ವರೆಗೆ 9 ಬೀದಿ ದೀಪಗಳ … Read more

ಶಿವಮೊಗ್ಗದ ಹಲವೆಡೆ ನ.24ರಂದು ಇಡೀ ದಿನ ವಿದ್ಯುತ್‌ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರಲಿದೆ. ಆದ್ದರಿಂದ ನ.24 ರಂದು ಬೆಳಗ್ಗೆ 10.30 ರಿಂದ ಸಂಜೆ 4ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹಳೇಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸಾವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, … Read more

ಶಿವಮೊಗ್ಗಕ್ಕೆ ಬರ್ತಿದ್ದಾರೆ ಮಹಿಳಾ ಆಯೋಗದ ಅಧ್ಯಕ್ಷೆ, ಸಾಲು ಸಾಲು ಸಭೆ, ಸಮಾರಂಭದಲ್ಲಿ ಭಾಗಿ

-Dr-Nagalakshmi-Choudhry-to-visit-shimoga.

ಶಿವಮೊಗ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ  ಚೌಧರಿ ನ.23 ರಂದು ರಾತ್ರಿ 9.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ನ.24 ರಿಂದ ಮೂರು ದಿನ ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ.   ಎಲ್ಲೆಲ್ಲಿ ಯಾವ್ಯಾವ ಕಾರ್ಯಕ್ರಮದಲ್ಲಿ ಭಾಗಿ? ನ.24 ರಂದು ಬೆಳಗ್ಗೆ 9ಕ್ಕೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆ ಮತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. 10.30ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ … Read more

ಶಿವಮೊಗ್ಗದಲ್ಲಿ ಪೊಲೀಸರಿಗೆ ನೇವಿ ಬ್ಲೂ ಪೀಕ್‌ ಕ್ಯಾಪ್‌

Peak-Cap-for-Shivamogga-KSRP-Police.

ಶಿವಮೊಗ್ಗ: ಮಾಚೇನಹಳ್ಳಿಯ ಕೆಎಸ್‌ಆರ್‌ಪಿ 8ನೇ ಪಡೆಯ ಹೆಡ್‌ ಕಾನ್‌ಸ್ಟೇಬಲ್‌ ಮತ್ತು ಕಾನ್‌ಸ್ಟೇಬಲ್‌ಗಳಿಗೆ ನೇವಿ ಬ್ಲೂ ಪೀಕ್‌ ಕ್ಯಾಪ್‌ಗಳನ್ನು ವಿತರಿಸಲಾಯಿತು. ಘಟಕದ 500 ಆರ್‌ಹೆಚ್‌ಸಿ ಹಾಗೂ ಆರ್‌ಪಿಸಿ ರವರಿಗೆ ಕೆಎಸ್‌ಆರ್‌ಪಿ ಕಮಾಂಡೆಂಟ್ ಎಸ್. ಯುವಕುಮಾರ್‌, ಹೊಸ ನೇವಿ ಬ್ಲೂ ಪೀಕ್ ಕ್ಯಾಪ್‌ನ್ನು ವಿತರಿಸಿದರು. ಈ ಸಮಾರಂಭದಲ್ಲಿ ಡೆಪ್ಯೂಟಿ ಕಮಾಂಡೆಂಟ್ ಎಸ್. ಚಂದ್ರಶೇಖರ್, ಹಾಗೂ ಸಹಾಯಕ ಕಮಾಂಡೆಂಟ್ ರಾಚಪ್ಪ ಬಿ. ಕಾಜಗಾರ, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ಇತ್ತೀಚೆಗಷ್ಟೆ ರಾಜ್ಯ ಸರ್ಕಾರ ಪೊಲೀಸ್‌ ಸಿಬ್ಬಂದಿಗೆ ಪೀಕ್‌ ಕ್ಯಾಪ್‌ ವಿತರಿಸುವಂತೆ ಆದೇಶಿಸಿತ್ತು. … Read more

ವಿದ್ಯಾನಗರ ರಸ್ತೆ ಡೇಂಜರ್‌, ಇನ್ನಷ್ಟು ಜೀವ ಹೋಗುತ್ತೆ ಹುಷಾರ್‌, ಇಲ್ಲಿ ಏನೇನೆಲ್ಲ ಸಮಸ್ಯೆ ಇದೆ?

vidyanagara-road-traffic-issue

ಶಿವಮೊಗ್ಗ: ವಿದ್ಯಾನಗರದಲ್ಲಿ ಹಾದು ಹೋಗಿರುವ ಬಿ.ಹೆಚ್.ರಸ್ತೆ ದಿನೇದಿನೆ ಡೇಂಜರಸ್‌ ಆಗಿ ರೂಪುಗೊಳ್ಳುತ್ತಿದೆ. ಈ ಡಬಲ್‌ ರೋಡ್‌ನಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾಗಿದೆ. » ಘಟನೆ 1 ನವೆಂಬರ್‌ 11: ಬೈಕ್‌ನಲ್ಲಿ ತೆರಳುತ್ತಿದ್ದ ಮಣಿಕಂಠ (22) ಎಂಬುವವರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಣಿಕಂಠ ಸಾವನ್ನಪ್ಪಿದ್ದಾರೆ. ವಿದ್ಯಾನಗರದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆ ಎದುರಿಗೆ ಘಟನೆ ಸಂಭವಿಸಿದೆ. » ಘಟನೆ 2 ಅಕ್ಟೋಬರ್‌ 9: ಎಸ್‌ಬಿಐ ಬ್ಯಾಂಕ್‌ ಬಳಿ … Read more

ಶಿವಮೊಗ್ಗ ಪೊಲೀಸ್‌ ಇಲಾಖೆಯಿಂದ 21 ವಾಹನಗಳ ಹರಾಜು, ದಿನಾಂಕ ಪ್ರಕಟ

Shimoga-News-update

ಶಿವಮೊಗ್ಗ: ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿಲ್ಲದ 21 ವಿವಿಧ ಮಾದರಿಯ ನಿರುಪಯುಕ್ತ ವಾಹನಗಳನ್ನು ಡಿ.1 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಬಹಿರಂಗ ಹರಾಜು ಹಾಕಲಾಗುತ್ತಿದೆ. ಆಸಕ್ತರು ನಿಗದಿತ ಸಮಯದಲ್ಲಿ ಭಾಗವಹಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂ.ಸಂ.: 08182-261412 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ ರೂಮಿನಲ್ಲಿ ಬೆಂಕಿ ಕೇಸ್‌, ಪುರುಷ, … Read more

ಕಳೆನಾಶಕ ಸೇವಿಸಿದ್ದ ರೈತ ಕೊನೆಯುಸಿರು

Police-jeep-in-Shimoga.

ರಿಪ್ಪನ್‌ಪೇಟೆ: ಚಂದಳ್ಳಿ ಗ್ರಾಮದ ರೈತ ರಾಜು (46) ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಚಟುವಟಿಕೆಗಾಗಿ ಬ್ಯಾಂಕ್ ಹಾಗೂ ಇನ್ನಿತರೆಡೆ ಸಾಲ ಮಾಡಿದ್ದು, ಬೆಳೆನಷ್ಟದಿಂದ ಸಾಲ ತೀರಿಸಲಾಗುವುದಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರಿಗೆ ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಮನೆಯಲ್ಲಿ ನೇಣಿಗೆ ಶರಣಾದ ಯುವಕ

ಆರು ಪೌರಾಣಿಕ ಪ್ರಸಂಗಗಳ ಯಕ್ಷಗಾನ ಪ್ರದರ್ಶನ, 50ಕ್ಕು ಹೆಚ್ಚು ಕಲಾವಿದರು ಭಾಗಿ

Sagara-News-Update.

ಸಾಗರ: ಲಾಲ್‌ ಬಹದ್ದೂ‌ರ್ ಕಾಲೇಜಿನ ದೇವರಾಜ ಅರಸು ಕಲಾಕ್ಷೇತ್ರದಲ್ಲಿ ನ.23ರಂದು ವಿದ್ವಾನ್ ದತ್ತಮೂರ್ತಿ ಭಟ್ ಅವರ ನಾಟ್ಯಶ್ರೀ ಕಲಾ ತಂಡ ಮತ್ತು ಶ್ರೀ ಗುರು ಯಕ್ಷಗಾನ ಮಂಡಳಿ ಸಾಗರ – ಶಿವಮೊಗ್ಗ ಅವರಿಂದ ಬೆಳಗ್ಗೆ 10ರಿಂದ ರಾತ್ರಿ 10ರ ವರೆಗೆ ‘ಯಕ್ಷ ಷಡಾಖ್ಯಾನಮ್’ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ದುಶ್ಯಂತ – ಶಾಕುಂತಲಾ, ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಮಹಾತ್ಮೆ, ದ್ರುಪದ ಗರ್ವಭಂಗ, ಲವಕುಶ, ರಾಜಾ ಉಗ್ರಸೇನ, ಚಕ್ರವ್ಯೂಹ ಹೀಗೆ ಆರು ಕಥಾನಕಗಳನ್ನು ಪ್ರಸಿದ್ಧ ಕಲಾವಿದರು ಪ್ರಸ್ತುತ ಪಡಿಸುವರು. ಸಾಗರದಲ್ಲಿ … Read more

ಮನೆಯಲ್ಲಿ ನೇಣಿಗೆ ಶರಣಾದ ಯುವಕ

Crime-News-General-Image

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮದ ಯುವಕ ಕಿರಣ (26) ಎಂಬುವರು ಗುರುವಾರ ವಾಸದ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರಣ ಕೆಲವು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ನೀಡಲಾಗಿದೆ. ಮೃತನು ಅವಿವಾಹಿತನಾಗಿದ್ದು, ತಂದೆ, ತಾಯಿ, ಸಹೋದರ ಇದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಭದ್ರಾವತಿಯ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ