ಶಿವಮೊಗ್ಗದಲ್ಲಿ ಅಲರ್ಟ್‌, ರೈಲುಗಳಲ್ಲಿ ಶೋಧ, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

Police-checking-at-Railway-station-and-Airport-in-Shimoga

ಶಿವಮೊಗ್ಗ: ದೆಹಲಿ ಸ್ಪೋಟದ ಬೆನ್ನಿಗೆ ಶಿವಮೊಗ್ಗದಲ್ಲಿ ಕಟ್ಟೆಚ್ಚರ (Alert) ಮುಂದುವರೆದಿದೆ. ರೈಲು, ಬಸ್ಸು ನಿಲ್ದಾಣಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕರು ಹೆಚ್ಚು ಸೇರುವ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಶ್ವಾನ ದಳ ಮತ್ತು ಬಾಂಬ್‌ ಪತ್ತೆ ದಳದ ಅಧಿಕಾರಿಗಳು ಪರಿಶೀಲನೆ ಕಾರ್ಯ ಮುಂದುವರೆಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಹೇಗಿತ್ತು ಸ್ಥಿತಿ? ಶಿವಮೊಗ್ಗ ಪೊಲೀಸರು ಮತ್ತು ರೈಲ್ವೆ ಪೊಲೀಸರು ಜಂಟಿಯಾಗಿ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ಕಾರ್ಯ ನಡೆಸಿದರು. ಡಿವೈಎಸ್‌ಪಿ ಸಂಜೀವ್‌ ಕುಮಾರ್‌, ರೈಲ್ವೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಪ್ರಕಾಶ್‌ ಅವರ … Read more

ರಾಜ್ಯದಲ್ಲಿ ಮತ್ತಷ್ಟು ತೀವ್ರವಾಗಲಿದೆ ಚಳಿ, ಹವಾಮಾನ ಇಲಾಖೆ ಎಚ್ಚರಿಕೆ ಏನು?

Mist-During-Winter-Near-Mandagadde

ಬೆಂಗಳೂರು: ರಾಜ್ಯದಲ್ಲಿ ಚಳಿಯ (Cold) ತೀವ್ರತೆ ಹೆಚ್ಚಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ 4 ರಿಂದ 6 ಡಿಗ್ರಿ ಸೆಲ್ಸಿಯಸ್‌ ಕುಸಿತವಾಗಿದೆ. ಇದರಿಂದ ಮಧ್ಯರಾತ್ರಿ ಮತ್ತು ಮುಂಜಾನೆ ಥಂಡಿ ಅನುಭವವಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಮುಂಜಾನೆ ದಟ್ಟ ಮಂಜು ಆವರಿಸುತ್ತಿದೆ. ತಂಪಾದ ಗಾಳಿ ಬೀಸುತ್ತಿರುವ ಹಿನ್ನೆಲೆ ಹಗಲಿನಲ್ಲೂ ಚಳಿಯ ಅನುಭವಾಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಈ ತೀವ್ರತೆ ಚಳಿ ಶುರುವಾಗಬೇಕಿತ್ತು. ಈ ಬಾರಿ ವಾಡಿಕೆಗಿಂತ ಮೊದಲೇ ಚಳಿ ಶುರುವಾಗಿದ್ದು, ದಿನೇದಿನೆ ತೀವ್ರತೆ ಹೆಚ್ಚುತ್ತಿದೆ. … Read more

ಶಿವಮೊಗ್ಗದಲ್ಲಿ ಹೆಚ್ಚು ಹಣ ವಸೂಲಿ ಮಾಡಿದ ಆಟೋ ಚಾಲಕನಿಗೆ ಕಾದಿತ್ತು ಶಾಕ್‌, ಆಗಿದ್ದೇನು?

Police-Fined-auto-driver-for-collecting-extra-amount

ಶಿವಮೊಗ್ಗ: ರೈಲ್ವೆ ನಿಲ್ದಾಣದ ಆಟೋ (Auto) ಪ್ರೀ ಪೇಯ್ಡ್‌ ಟಿಕೆಟ್‌ನಲ್ಲಿ ನಿಗದಿಯಾಗಿದ್ದ ದರಕ್ಕಿಂತಲು, ಹೆಚ್ಚು ಹಣವನ್ನು ಪ್ರಯಾಣಿಕರಿಂದ ವಸೂಲಿ ಮಾಡಿದ ಆಟೋ ಚಾಲಕನಿಗೆ, ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಆಟೋ ಚಾಲಕರೊಬ್ಬರು ಪ್ರೀ ಪೇಯ್ಡ್‌ ಟಿಕೆಟ್‌ನಲ್ಲಿ ನಿಗದಿಯಾಗಿರುವ ದರಕ್ಕಿಂತಲು ಪ್ರಯಾಣಿಕರಿಂದ ₹15 ಹೆಚ್ಚು ವಸೂಲಿ ಮಾಡಿದ್ದರು. ಅಲ್ಲದೆ ಅಸಭ್ಯವಾಗಿ ವರ್ತಿಸಿದ್ದರು. ಈ ಸಂಬಂಧ ಪ್ರಯಾಣಿಕ ಕಂಟ್ರೋಲ್‌ ರೂಂಗೆ ದೂರು ನೀಡಿದ್ದರು. ಚಾಲಕನನ್ನು ಪತ್ತೆ ಹಚ್ಚಿದ ಪೂರ್ವ ಸಂಚಾರ ಠಾಣೆ ಪೊಲೀಸರು ಹೆಚ್ಚುವರಿ … Read more

ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಕುರಿತು ನೈಋತ್ಯ ರೈಲ್ವೆಯಿಂದ ಮಹತ್ವದ ಅಪ್‌ಡೇಟ್‌

shimoga-to-bangalore-jan-shatabdi-train-railway.webp

ರೈಲ್ವೆ ಸುದ್ದಿ: ಶಿವಮೊಗ್ಗ ಮತ್ತು ಹುಬ್ಬಳ್ಳಿ ಜನಶತಾಬ್ದಿ (Jan Shatabdi) ರೈಲುಗಳು ತಿಪಟೂರು ನಿಲ್ದಾಣದಲ್ಲಿ ನೀಡುತ್ತಿದ್ದ ನಿಲುಗಡೆ ಅವಧಿಯನ್ನು ಮತ್ತೆ ಮುಂದುವರೆಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ತಿಪಟೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 12079/12080 ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್‌ಪ್ರೆಸ್‌ ಮತ್ತು 12089/12090 ಕೆಎಸ್ಆರ್ ಬೆಂಗಳೂರು – ಶಿವಮೊಗ್ಗ ಟೌನ್ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲುಗಳಿಗೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ … Read more

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಕುಸಿದು ಬಿದ್ದಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು, ಪತ್ತೆಯಾಗದ ವಾರಸುದಾರರು

160125 mc gann hospital general image

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ (Hospital) ಹಳೆ ಕಟ್ಟಡದ ಹತ್ತಿರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಇವರ ವಾರಸುದಾರರ ಪತ್ತೆಗೆ ದೊಡ್ಡಪೇಟೆ ಠಾಣೆ ಪೊಲೀಸ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಅ.26 ರಂದು ಲಕ್ಷ್ಮೀ (42) ಎಂಬುವವರು ಮೆಗ್ಗಾನ್‌ ಆಸ್ಪತ್ರೆಯ ಹಳೆಯ ಕಟ್ಟಡದ ಬಳಿ ಸುಸ್ತಾಗಿ ಬಿದ್ದಿದ್ದರು. ಸಾರ್ವಜನಿಕರ ನೆರವಿನಿಂದ ಅವರನ್ನು ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನ.3 ರಂದು ಮೃತಪಟ್ಟಿದ್ದಾರೆ. ಇವರ ವಿಳಾಸ, ವಾರಸುದಾರರ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್‌ … Read more

ಶಿವಮೊಗ್ಗದ ಗೋಪುರ ಗಡಿಯಾರದಲ್ಲಿ ಪೂರ್ವಕ್ಕೊಂದು ಸಮಯ, ಪಶ್ಚಿಮಕ್ಕೊಂದು ಟೈಮ್‌

clock-stopped-working-in-Front-of-Usha-Nursing-Home

ಶಿವಮೊಗ್ಗ: ನಗರದ ಸೌಂದರ್ಯ ಹೆಚ್ಚಿಸಲು ಸ್ಮಾರ್ಟ್‌ ಸಿಟಿ ಯೋಜನೆ ಅಡಿ ನಿರ್ಮಿಸಲಾಗಿರುವ ಗೋಪುರ ಗಡಿಯಾರ (Clock) ಮತ್ತೆ ದಿಕ್ಕಿಕೊಂದು ಸಮಯ ತೋರಿಸುತ್ತಿದೆ. ನಿರ್ವಾಹಣೆ ಕೊರತೆಯಿಂದಾಗಿ ಈ ಗಡಿಯಾರ ಪದೇ ಪದೆ ನಿಲ್ಲುತ್ತಿದ್ದು, ಸರಿಯಾದ ಸಮಯ ತೋರಿಸುವಲ್ಲಿಯು ವಿಫಲವಾಗಿದೆ. ಉಷಾ ನರ್ಸಿಂಗ್‌ ಹೋಂ ಎದುರು ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಗೋಪುರದ ಮೇಲೆ ಗಡಿಯಾರ ಸ್ಥಾಪಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಇದನ್ನ ಸ್ಥಾಪಿಲಾಗಿತ್ತು. ಆದರೆ ಈ ಗಡಿಯಾರ ದಿಕ್ಕಿಗೊಂದು ಸಮಯ ತೋರಿಸುತ್ತಿದೆ. ಈ ಹಿಂದೆ ಇದೇ ರೀತಿ ಸಮಸ್ಯೆಯಾಗಿದ್ದು … Read more

ಶಿವಮೊಗ್ಗದಲ್ಲಿಯು ಅಲರ್ಟ್‌, ಬಾಂಬ್‌ ಪತ್ತೆ ದಳ, ಶ್ವಾನದಳದಿಂದ ತಪಾಸಣೆ, ಎಲ್ಲೆಲ್ಲಿ ಹೇಗಿದೆ ಕಟ್ಟೆಚ್ಚರ?

dog-squad-checking-in-shimoga-railway-station-and-city-centre-mall.

ಶಿವಮೊಗ್ಗ: ಕಳೆದ ರಾತ್ರಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿದ ಬೆನ್ನಿಗೆ ರಾಜ್ಯದಲ್ಲಿಯು ಅಲರ್ಟ್‌  (Alert) ಘೋಷಿಸಲಾಗಿದೆ. ಶಿವಮೊಗ್ಗದಲ್ಲಿಯು ಕಟ್ಟೆಚ್ಚರ ವಹಿಸಲಾಗಿದೆ. ರಾತ್ರಿಯಿಂದಲೇ ಶಿವಮೊಗ್ಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾಗಿದೆ. ಶಿವಮೊಗ್ಗ ಸಿಟಿಯಲ್ಲಿ ಪರಿಶೀಲನೆ ಕಳೆದ ರಾತ್ರಿಯೇ ಶಿವಮೊಗ್ಗ ನಗರದಾದ್ಯಂತ ಬಾಂಬ್‌ ಪತ್ತೆ ದಳ ಮತ್ತು ಶ್ವಾನದಳ ವಿವಿಧೆಡೆ ಪರಿಶೀಲನೆ ನಡೆಸಿತು. ನಗರದ ಖಾಸಗಿ ಬಸ್‌ ನಿಲ್ದಾಣ, ಕೆಎಸ್‌ಅರ್‌ಟಿಸಿ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಸಿಟಿ ಸೆಂಟರ್‌ ಮಾಲ್‌, ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ದಿಢೀರ್ ತಪಾಸಣೆ ನಡೆಸಲಾಯಿತು. ವಾಹನಗಳು, ತಳ್ಳುಗಾಡಿಗಳು, … Read more

ಅಡಿಕೆ ಧಾರಣೆ | 10 ನವೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ತೀರ್ಥಹಳ್ಳಿ ಮಾರುಕಟ್ಟೆ ಇತರೆ 27211 52841 ಶಿಕಾರಿಪುರ ಮಾರುಕಟ್ಟೆ ರಾಶಿ 55795 55795 ಸಾಗರ ಮಾರುಕಟ್ಟೆ ಕೆಂಪುಗೋಟು 18399 36899 ಕೋಕ 10499 34599 ಚಾಲಿ 33333 42501 ಬಿಳೆ ಗೋಟು 22099 36541 ರಾಶಿ 36099 61299 ಸಿಪ್ಪೆಗೋಟು 15289 23189 ಶಿವಮೊಗ್ಗ ಮಾರುಕಟ್ಟೆ ಗೊರಬಲು 19009 39511 ನ್ಯೂ ವೆರೈಟಿ 45009 58581 ಬೆಟ್ಟೆ 56210 66259 … Read more

ರಸ್ತೆ ರಿಪೇರಿ ಎಫಕ್ಟ್‌, ಆರು ಗಂಟೆಯಿಂದ ಆನ್‌ಲೋಡ್‌ ಆಗದೆ ನಿಂತಲ್ಲೆ ನಿಂತ ಗೂಡ್ಸ್‌ ರೈಲು

Goods-Train-Stopped-in-Shimoga-Railway-station.

ಶಿವಮೊಗ್ಗ: ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಬಳಿ ರಿಪೇರಿ ಕಾಮಗಾರಿ ರೈಲ್ವೆ ಇಲಾಖೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆರು ಗಂಟೆಗು ಹೆಚ್ಚು ಹೊತ್ತಿನಿಂದ ಗೂಡ್ಸ್‌ ರೈಲು (Goods Train) ಅನ್‌ ಲೋಡ್‌ ಆಗದೆ ನಿಂತಲ್ಲಿಯೇ ನಿಲ್ಲುವಂತಾಗಿದೆ. ರೈಲ್ವೆ ನಿಲ್ದಾಣದಲ್ಲಿ ಕೊನೆಯ ಪ್ಲಾಟ್‌ ಫಾರಂ ಅನ್ನು ಗೂಡ್ಸ್‌ ರೈಲುಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಗೂಡ್ಸ್‌ ರೈಲುಗಳ ಬಳಿ ಲಾರಿಗಳು ತೆರಳಲು ಅನುವಾಗುವಂತೆ ಸಂರ್ಪಕ ರಸ್ತೆಯನ್ನು ನಿರ್ಮಿಸಲಾಗಿದೆ. ಶಾಂತಿನಗರ ಕ್ರಾಸ್‌ ಬಳಿ ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಪಕ್ಕದಿಂದ ಲಾರಿಗಳು ರೈಲ್ವೆ … Read more

ಶಿವಮೊಗ್ಗದ ಹೊನ್ನಾಳಿ ಫ್ಲೈ ಓವರ್‌ ಮೇಲೆ ವಾಹನ ಸಂಚಾರ ಬಂದ್‌

Vehicle-Movement-stopped-on-honnali-flyover.

ಶಿವಮೊಗ್ಗ: ರಸ್ತೆ ಕಾಮಗಾರಿ ಹಿನ್ನೆಲೆ ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿರುವ ಹೊನ್ನಾಳಿ ಫ್ಲೈ ಓವರ್‌ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸಂಗೊಳ್ಳಿ ರಾಯಣ್ಣ ಸರ್ಕಲ್‌ ಬಳಿ ಬ್ಯಾರಿಕೇಡ್‌ ಅಳವಡಿಸಿ ಮಣ್ಣು ಹಾಕಿ ಫ್ಲೈ ಓವರ್‌ (Fly over) ಪ್ರವೇಶವನ್ನು ಬಂದ್‌ ಮಾಡಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಶಿವಮೊಗ್ಗ – ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ಫ್ಲೈ ಓವರ್‌ ಇಳಿಜಾರು ಮುಕ್ತಾಯ ಜಾಗ ಮತ್ತು ಚತುಷ್ಪಥ ಕೂಡವ ರಸ್ತೆ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ವಾಹನ … Read more