ಜಿಲ್ಲಾ ಪ್ರಧಾನ, ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ವರ್ಗಾವಣೆ

Shimoga-judge-Majunath-Naik

ಶಿವಮೊಗ್ಗ: ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ (Judge) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನ್ಯಾ.ಮಂಜುನಾಥ್ ನಾಯಕ್ ಅವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಉಚ್ಚನ್ಯಾಯಾಲಯವು ವರ್ಗಾವಣೆ ಮಾಡಿ ಆದೇಶಿಸಿದೆ. ಮಂಜುನಾಥ್ ನಾಯಕ್ ಅವರು ತಮ್ಮ ಸೇವಾ ಅವಧಿಯಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದ ಒಟ್ಟು 1,21,499 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಲೇ … Read more

ಕರೆಂಟ್‌ ಶಾಕ್‌, ಅಡಿಕೆ ಗೊನೆಗಾರ ಸಾವು, ಹೇಗಾಯ್ತು ಘಟನೆ?

Areca-Farm-Adike-tota-in-Shimoga

ತೀರ್ಥಹಳ್ಳಿ: ಅಡಿಕೆ (Adike) ಗೊನೆ ಕೀಳುವಾಗ ದೋಟಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬಸವಾನಿ‌ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ವ್ಯಕ್ತಿ. ಇವರು ಈ ಭಾಗದಲ್ಲಿ ಹಲವು ವರ್ಷಗಳಿಂದ ಗೊನೆಗಾರರಾಗಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀಪುರದ ರೈತ ಸುಂದರೇಶ್ ಅವರ ಅಡಿಕೆ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಳೆ, ಇವತ್ತು ಹೇಗಿರುತ್ತೆ ವಾತಾವರಣ?- ಹವಾಮಾನ ವರದಿ

WEATHER-REPORT-SHIMOGA-

ಹವಾಮಾನ ವರದಿ: ರಾಜ್ಯಾದ್ಯಂತ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಲ್ಲಿ ಚದುರಿದಂತೆ ಮಳೆ ಸುರಿಯಬಹುದು ಎಂದು ನಿರೀಕ್ಷಿಸಲಾಗಿದೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿಯು ವಿವಿಧೆಡೆ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. (Weather) ಶಿವಮೊಗ್ಗದಲ್ಲಿ ಇವತ್ತು ಮೋಡ ಕವಿದ ವಾತಾವರಣ ಇರಲಿದೆ. ಇದರ ಮಧ್ಯೆ ಬಿಸಿಲಿನ ಅಬ್ಬರವು ಇರುವ ಕುರಿತು ಅಂದಾಜಿಸಲಾಗಿದೆ.   ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ … Read more

ಸಾಗರದಲ್ಲಿ ಬಸ್‌ ಹತ್ತಿದ ದಾವಣಗೆರೆ ಮಹಿಳೆ, ಐಬಿ ಸರ್ಕಲ್‌ ಬಳಿ ಕಾದಿತ್ತು ಆಘಾತ

KSRTC-Bus-General-Image-Shimoga-Bangalore

ಸಾಗರ: KSRTC ಬಸ್‌ನಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಿಂದ ಚಿನ್ನಾಭರಣವಿದ್ದ ಪರ್ಸ್‌ ಕಳ್ಳತನ ಮಾಡಲಾಗಿದೆ. ಸಾಗರ ಬಸ್‌ ನಿಲ್ದಾಣದಲ್ಲಿ ಕಳ್ಳತನ ನಡೆದಿರುವ ಕುರಿತು ಶಂಕೆ ಇದೆ. ನಯನಾ ಎಂಬುವವರು ಸಾಗರ ಕೆಎಸ್‌ಆರ್‌ಟಿಸಿ ನಿಲ್ದಾಣದಿಂದ ದಾವಣಗೆರೆಗೆ ಬಸ್‌ ಹತ್ತಿದ್ದರು. ಐಬಿ ಸರ್ಕಲ್‌ ಬಳಿ ಬಸ್‌ ತೆರಳುತ್ತಿರುವಾಗ ಟಿಕೆಟ್‌ ಮಾಡಿಸಲು ಬ್ಯಾಗ್‌ನಲ್ಲಿದ್ದ ಪರ್ಸ್‌ ತೆಗೆಯಲು ಮುಂದಾದರು. ಆಗ ಪರ್ಸ್‌ ಇಲ್ಲದಿರುವುದು ಗೊತ್ತಾಗಿದೆ. ಪರ್ಸ್‌ನಲ್ಲಿ ₹1.73 ಲಕ್ಷದ ಚಿನ್ನಾಭರಣ ಇತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಸ್‌ ಹತ್ತುವುದಕ್ಕು ಮುನ್ನ ನಯನಾ ಅವರಿಗೆ ಕರೆ ಬಂದಿತ್ತು. … Read more

ತ್ರಯೋದಶಿ ದಿನ ಅಭಿಜಿತ್‌ ಮುಹೂರ್ತ ಯಾವಾಗಿದೆ? – ದಿನ ಪಂಚಾಂಗ

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಸೋಮವಾರ, 3 ನವೆಂಬರ್‌ 2025 – ತ್ರಯೋದಶಿ ಸೂರ್ಯೋದಯ : 6.23 am ಸೂರ್ಯಾಸ್ತ : 5.59 pm ನಕ್ಷತ್ರ : ಉತ್ತರ ಭಾದ್ರಪದ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.44 ರಿಂದ 5.33ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.09 ರಿಂದ 6.23ರವರೆಗೆ ಅಭಿಜಿತ್‌ ಬೆಳಗ್ಗೆ 11.48 ರಿಂದ 12.34ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.07 ರಿಂದ 2.54ರವರಗೆ ಗೋಧೂಳಿ ಮುಹೂರ್ತ ಸಂಜೆ 5.59 ರಿಂದ 6.24ರವರೆಗೆ … Read more

ಶಿವಣ್ಣನ ಮನೆ ಅಡ್ರೆಸ್‌ ಕೇಳುತ್ತಲೆ ಮಹಿಳೆ ಕೊರಳಿಗೆ ಕೈ ಹಾಕಿ ಚಿನ್ನದ ಸರ ಕಸಿದು ಪರಾರಿ

200123 Police Jeep With Light jpg

ಶಿವಮೊಗ್ಗ: ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ವಿಳಾಸ ಕೇಳುವ ನೆಪದಲ್ಲಿ ರತ್ನಮ್ಮ ಎಂಬವವರ ಕೊರಳಲ್ಲಿದ್ದ 70 ಗ್ರಾಂ ತೂಕದ ಬಂಗಾರದ ಸರ (Gold Chain) ಕಸಿದು ಪರಾರಿಯಾಗಿದ್ದಾರೆ. ವಿನೋಬನಗರದ ಲಕ್ಷ್ಮೀಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ರತ್ನಮ್ಮ ಅವರು ದೇವಸ್ಥಾನದಿಂದ ಹಿಂತಿರುಗಿ ಮನೆಯ ಕಾಂಪೌಂಡ್‌ ಒಳಗೆ ಬಂದು ಗೇಟ್‌ ಹಾಕುತ್ತಿದ್ದಾಗ ಯುವಕನೊಬ್ಬ ವಿಳಾಸ ಕೇಳುವವನಂತೆ ಬಂದಿದ್ದ. ಶಿವಣ್ಣನ ಮನೆ ಎಲ್ಲಿ ಎಂದು ವಿಚಾರಿಸಿದ್ದ. ತಕ್ಷಣ ರತ್ನಮ್ಮ ಅವರ ಕೊರಳಿಗೆ ಕೈ ಹಾಕಿ ₹2.20 ಲಕ್ಷ ಮೌಲ್ಯದ 70 ಗ್ರಾಂ … Read more

ವಿದ್ಯಾರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shimoga-News-update

ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1ರ ಅಲೆಮಾರಿ, ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ನ.15ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಕ್ಕೆ ಇಲಾಖೆ ಸಹಾಯವಾಣಿ : 8050770005, ಈ ಮೇಲ್‌ – bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಅಥವಾ … Read more

ಆಫೀಸಿನಲ್ಲಿ ಕೆಲಸ ಮುಗಿಸಿ ಹೊರ ಬಂದ ಉದ್ಯಮಿಗೆ ಕಾದಿತ್ತು ಆಘಾತ, ಆಗಿದ್ದೇನು?

bike theft reference image

ಶಿವಮೊಗ್ಗ: ಕಚೇರಿಯಲ್ಲಿ ಕೆಲಸ ಮುಗಿಸಿ ಹಿಂತಿರುಗುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ (Theft) ಎಂದು ಆರೋಪಿಸಿ ಉದ್ಯಮಿಯೊಬ್ಬರು ದೂರು ನೀಡಿದ್ದಾರೆ. ನಗರದ ದುರ್ಗಿಗುಡಿಯ ಶಿವಮೊಗ್ಗ ಆಪ್ಟಿಕಲ್ಸ್‌ ಎದುರಿನ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಓಂಪ್ರಕಾಶ್‌ ಎಂಬುವವರು ತಮ್ಮ ಬೈಕ್‌ ಅನ್ನು ನಿಲ್ಲಿಸಿ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಕಚೇರಿಗೆ ತೆರಳಿದ್ದರು. ‍ಸಂಜೆ 7 ಗಂಟೆಗೆ ಹಿಂತಿರುಗಿದಾಗ ಬೈಕ್‌ ಇರಲಿಲ್ಲ. ಟಿವಿಎಸ್‌ ಅಪಾಚೆ ಬೈಕ್‌ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದು, ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಮಹಿಳೆಗೆ … Read more

ಒಣಗಿದ ಮರ ಬಿದ್ದು ಹಸು ಸಾವು

Tree-falls-at-hosanagara-cow-succumbed

ಹೊಸನಗರ: ಮೇಯುತ್ತಿದ್ದ ಹಸುವಿನ (Cow) ಮೇಲೆ ಒಣಗಿದ ಮರ ಬಿದ್ದು ಹಸು ಮೃತಪಟ್ಟಿದೆ. ಹೊಸನಗರ ತಾಲೂಕಿನ ಸಂಕೂರಿನಲ್ಲಿ ಘಟನೆ ಸಂಭವಿಸಿದೆ. ಸಂಕೂರು ಗ್ರಾಮದ ರೈತ ಮಹಿಳೆ ಪುಷ್ಪಾ ಎಂಬವರ ಹಸು ಮೃತಪಟ್ಟಿದ್ದು, ಅಂದಾಜು ₹ 30 ಸಾವಿರ ಮೌಲ್ಯದ್ದಾಗಿದೆ. ತಾಲ್ಲೂಕು ಆಡಳಿತ ರೈತ ಮಹಿಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ‌ಆಗ್ರಹಿಸಿದ್ದಾರೆ. ಇದನ್ನೂ ಓದಿ » ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್‌

ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್‌

Crime-News-General-Image

ಶಿವಮೊಗ್ಗ: ವಶೀಕರಣದ ಮೂಲಕ ಗಂಡ – ಹೆಂಡತಿ (Wife) ಸಮಸ್ಯೆ ಪರಿಹಾರ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಚಿನ್ನಾಭರಣ ಪಡೆದು ಪರಾರಿಯಾಗಿದ್ದಾನೆ. ‘ವಶೀಕರಣಕ್ಕೆ 61 ಗ್ರಾಂ ಚಿನ್ನ ತನ್ನಿʼ ಶಿವಮೊಗ್ಗ ನಗರದ ಮಹಿಳೆಯೊಬ್ಬರು ತಮ್ಮ ಪತಿಯ ಸಮಸ್ಯೆ ಪರಿಹಾರಕ್ಕೆ ವಶೀಕರಣ ಜ್ಯೋತಿಷಿಯ ಮೊರೆ ಹೋಗಿದ್ದರು. ದುರ್ಗಿಗುಡಿಯಲ್ಲಿ ಕಚೇರಿ ಮಾಡಿಕೊಂಡಿದ್ದ ಈತ ಸಮಸ್ಯೆ ಪರಿಹಾರಕ್ಕೆ 61 ಗ್ರಾಂ ಚಿನ್ನಾಭರಣ ತರುವಂತೆ ತಿಳಿಸಿದ್ದ. ಅಂತೆಯೇ ಮಹಿಳೆ ತನ್ನ ಬಳಿ ಇದ್ದ 51 ಗ್ರಾಂ ಚಿನ್ನಾಭರಣ, ಆಕೆಯ ಸ್ನೇಹಿತೆ ಬಳಿಯಿಂದ 10 ಗ್ರಾಂ … Read more