ಶಿವಮೊಗ್ಗದಲ್ಲಿ ರಣಜಿ ಪಂದ್ಯ, ಟಾಸ್ ವಿನ್ ಆದ ಗೋವಾ ತಂಡ

BREAKING-NEWS-ENGLISH

ಶಿವಮೊಗ್ಗ: ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಣಜಿ ಪಂದ್ಯಾವಳಿಯಲ್ಲಿ ಗೋವಾ ತಂಡ ಟಾಸ್ (Toss) ಗೆದ್ದಿದೆ. ಗೋವಾ ತಂಡದ ನಾಯಕ ದೀಪರಾಜ್ ಗಾವ್ಕಂರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯ ತಡವಾಗಿ ಆರಂಭ ರಾತ್ರಿ ಸುರಿದ ಮಳೆಯಿಂದಾಗಿ ಎರಡು ಗಂಟೆ ತಡವಾಗಿ ಪಂದ್ಯ ಆರಂಭವಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ಗೋವಾ ಮತ್ತು ಕರ್ನಾಟಕ ತಂಡಗಳು ಹಣಾಹಣಿ ನಡೆಸಲಿವೆ. ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ರೀ ಪೇಯ್ಡ್‌ ಆಟೋ ಕೌಂಟರ್‌ ಹೇಗಿದೆ? ಕಾರ್ಯನಿರ್ವಾಹಣೆ ಹೇಗೆ? … Read more

ಏಪ್ರಿಲ್‌ನಲ್ಲಿ ಮದುವೆ, ಅಕ್ಟೋಬರ್‌ನಲ್ಲಿ ವಿಷ ಸೇವಿಸಿ ಗೃಹಿಣಿ ಸಾವು, ಆರು ತಿಂಗಳಲ್ಲಿ ಆಗಿದ್ದೇನು?

Married-lady-malashree-succumbed-at-suduru-in-Shimoga-taluk

ಶಿವಮೊಗ್ಗ: ಮದುವೆಯಾಗಿ (Marriage) ಆರು ತಿಂಗಳಿಗೆ ಪತಿ ಮತ್ತು ಅತ್ತೆಯ ಕಿರುಕುಳಕ್ಕೆ ಮನನೊಂದು ವಿಷ ಸೇವಿಸಿದ್ದ ಗೃಹಿಣಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಕುರಂಬಳ್ಳಿ ಬಳಿಯ ಗುಜಾನುಮಕ್ಕಿಯಲ್ಲಿ ಘಟನೆ ನಡೆದಿದೆ. ಮಾಲಾಶ್ರೀ(23) ಮೃತಪಟ್ಟ ಗೃಹಿಣಿ. ಅ.19 ರಂದು ವಿಷ ಸೇವಿಸಿದ್ದ ಮಾಲಾಶ್ರೀಯನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಮೂರು ದಿನದ ಬಳಿಕ ಆಕೆ ಮೃತಪಟ್ಟಿದ್ದಾರೆ. ಪತಿ, ಅತ್ತೆಯ ಕಿರುಕುಳದ ಆರೋಪ ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ಯಡಮನೆಯ ವಾಸಿ ಮಾಲಾಶ್ರೀ 2025ರ ಏಪ್ರಿಲ್ 23 … Read more

ತಡರಾತ್ರಿ ಮನೆ ಮುಂದೆ ಕಟ್ಟಿದ್ದ ನಾಯಿ ಕೂಗಾಟ, ಹೊರ ಬಂದ ಮನೆಯವರಿಗೆ ಆಘಾತ, ಗ್ರಾಮದಲ್ಲಿ ಆತಂಕ

Leopard-found-at-mulukoppa-tanda-village-in-Shikaripura

ಶಿಕಾರಿಪುರ: ಮನೆ ಮುಂದೆ ಕಟ್ಟಿದ್ದ ನಾಯಿ ಮೇಲೆ ಚಿರತೆ (Leopard) ದಾಳಿ ನಡೆಸಿದೆ. ಮನೆಯವರು ಹೊರ ಬರುತ್ತಿದ್ದಂತೆ ಚಿರತೆ ಓಡಿ ಹೋಗಿದೆ. ಶಿಕಾರಿಪುರ ತಾಲೂಕು ಮುಳುಕೊಪ್ಪ ತಾಂಡದಲ್ಲಿ ಚಿರತೆ ಕಾಣಿಸಿಕೊಂಡಿದೆ. ಇಲ್ಲಿನ ಮನೆಯೊಂದರ ಮುಂದೆ ಕಟ್ಟಿ ಹಾಕಿದ್ದ ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ನಾಯಿ ಕೂಗಾಟ ಕೇಳಿ ಅಕ್ಕಪಕ್ಕದವರೆಲ್ಲ ಮನೆಯಿಂದ ಹೊರ ಬಂದಾಗ ಚಿರತೆ ಓಡಿ ಹೋಗಿದೆ ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಮುಳುಕೊಪ್ಪ ತಾಂಡ ವಾಸಿಗಳಲ್ಲಿ ಆತಂಕ ಮೂಡಿಸಿದೆ. ಕೂಡಲೆ … Read more

ವಿದ್ಯಾನಗರದಲ್ಲಿ ಬ್ಯಾಂಕ್‌ ಮ್ಯಾನೇಜರ್‌, ಸಿಬ್ಬಂದಿ ಮೇಲೆ ಹಲ್ಲೆ, ಕಾರಣವೇನು?

Vidyanagara-Smart-city-board

ಶಿವಮೊಗ್ಗ: ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಲು ತೆರಳಿದ್ದ ಕೆನರಾ ಬ್ಯಾಂಕ್‌ ಮ್ಯಾನೇಜರ್‌ (Manager) ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ. ಮಹಿಳೆಯೊಬ್ಬರು ವಿದ್ಯಾನಗರದ ಕೆನರಾ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದರು. ಮರುಪಾವತಿ ಮಾಡಿರಲಿಲ್ಲ. ಹಾಗಾಗಿ ಬ್ಯಾಂಕ್‌ನ ವ್ಯವಸ್ಥಾಪಕ ಮತ್ತು ಸಿಬ್ಬಂದಿ ಮಹಿಳೆಯ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಲು ತೆರಳಿದ್ದರು. ಆಗ ಮನೆ ಒಳಗಿಂದ ಬಂದ ಎರಡ್ಮೂರು ಮಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ರೀ ಪೇಯ್ಡ್‌ ಆಟೋ ಕೌಂಟರ್‌ ಹೇಗಿದೆ? ಕಾರ್ಯನಿರ್ವಾಹಣೆ ಹೇಗೆ? ಇಲ್ಲಿದೆ ಪಾಯಿಂಟ್ಸ್‌

251025 Prepaid Auto booking in Shimoga railway station

ಶಿವಮೊಗ್ಗ: ಬಹು ವರ್ಷದ ಬೇಡಿಕೆಯಾಗಿದ್ದ ಪ್ರೀ ಪೇಯ್ಡ್‌ ಆಟೋ (Pre Paid) ವ್ಯವಸ್ಥೆ ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಆರಂಭವಾಗಿದೆ. ಮೊದಲ ದಿನದಿಂದಲೇ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈಲು ಇಳಿದ ಪ್ರಯಾಣಿಕರು ಯಾವುದೇ ಕಿರಿಕಿರಿ ಇಲ್ಲದೆ ಆಟೋದಲ್ಲಿ ನಿಗದಿತ ಸ್ಥಳಕ್ಕೆ ತಲುಪುತ್ತಿದ್ದಾರೆ. ಪ್ರೀ ಪೇಯ್ಡ್‌ ಆಟೋ ವ್ಯವಸ್ಥೆ ಅಗತ್ಯತೆ ಕುರಿತು ಈ ಹಿಂದೆ ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಪ್ರೀ ಪೇಯ್ಡ್‌ ವ್ಯವಸ್ಥೆ ಜಾರಿಯಾದ ಮೇಲೆ ಪ್ರಯಾಣಿಕರ ಅಭಿಪ್ರಾಯ ಸಹಿತ ವರದಿ ಪ್ರಕಟಿಸಲಾಯಿತು. ಪ್ರೀ ಪೇಯ್ಡ್‌ ಆಟೋ … Read more

ರೈಲು ಇಳಿದು ಹಬ್ಬದ ಖುಷಿಯಲ್ಲಿ ನಿಲ್ದಾಣದಿಂದ ಹೊರ ಹೋಗುತ್ತಿದ್ದ ನಾಲ್ವರಿಗೆ ರೈಲ್ವೆ ಪೊಲೀಸರಿಂದ ಶಾಕ್, ಆಗಿದ್ದೇನು?

251025-case-filed-against-4-members-for-taking-crackers-in-train.webp

ಶಿವಮೊಗ್ಗ: ನಿಷೇಧವಿದ್ದರು ರೈಲಿನಲ್ಲಿ ಪಟಾಕಿ ಸಾಗಿಸಿದ ಆರೋಪದ ಹಿನ್ನೆಲೆ ನಾಲ್ವರ ವಿರುದ್ಧ ಶಿವಮೊಗ್ಗ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟಾಕಿ (Crackers) ಬಾಕ್ಸ್‌ಗಳನ್ನು ವಶಕ್ಕೆ ಪಡೆದು ನಾಲ್ವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆಪರೇಷನ್‌ ಸಂರಕ್ಷ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ರೈಲ್ವೆ ಪೊಲೀಸರು, ಶಿವಮೊಗ್ಗ ನಿಲ್ದಾಣದಲ್ಲಿ ಪಟಾಕಿ ಬಾಕ್ಸ್‌ ಸಹಿತ ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ರೈಲಿನಲ್ಲಿ ಪಟಾಕಿ ಸಾಗಣೆ ನಿಷೇಧವಿದೆ. ಹಾಗಿದ್ದು ಪಟಾಕಿ ತಂದಿದ್ದಕ್ಕೆ ನೊಟೀಸ್‌ ನೀಡಿ, ಪಟಾಕಿಗಳನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು ಆರೋಪಿಗಳು ನ್ಯಾಯಾಲಯಕ್ಕೆ … Read more

ಇವತ್ತು ಮಳೆಯಾಗುತ್ತಾ? ಹವಾಮಾನ ಇಲಾಖೆಯ ಅಲರ್ಟ್‌ ಏನು? – ಶಿವಮೊಗ್ಗ ಜಿಲ್ಲೆಯ ಇವತ್ತು ಹವಾಮಾನ ವರದಿ

WEATHER-REPORT-SHIMOGA-

ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಪ್ರಮಾಣ ತುಸು ಕಡಿಮೆಯಾಗಿದೆ. ಆದರೂ ಹವಾಮಾನ ಇಲಾಖೆ ಇವತ್ತು ಇಡೀ ರಾಜ್ಯಕ್ಕೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಇವತ್ತು ಯಾವುದೆ ಅಲರ್ಟ್‌ ಇಲ್ಲ. (weather) ಶಿವಮೊಗ್ಗ ಜಿಲ್ಲೆಯಲ್ಲಿಯು ರಾತ್ರಿ ವೇಳೆ ಮಳೆ ಅಬ್ಬರಿಸುತ್ತಿದೆ. ಇವತ್ತು ಅಲ್ಲಲ್ಲಿ ಸಾಧಾರಣದಿಂದ ಜೋರು ವರ್ಷಧಾರೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ … Read more

ಶಿವಮೊಗ್ಗ ರೈಲ್ವೆ ನಿಲ್ದಾಣ, ಅನುಮಾನದ ಮೇಲೆ ಮಹಿಳೆ ವಿಚಾರಣೆ, ಸಖಿ ಕೇಂದ್ರಕ್ಕೆ ರವಾನೆ, ಏನಿದು ಕೇಸ್‌?

251025-Woman-rescued-at-Shimoga-Railway-Station.webp

ಶಿವಮೊಗ್ಗ: ಪತಿಯ ಕಿರುಕುಳ ತಾಳದೆ ರಾಜ್ಯ ಬಿಟ್ಟು ಬಂದಿದ್ದ 28 ವರ್ಷದ ಮಹಿಳೆಯೊಬ್ಬರನ್ನು ಶಿವಮೊಗ್ಗದ ರೈಲ್ವೆ (Railway) ಪೊಲೀಸರು ರಕ್ಷಣೆ ಮಾಡಿದ್ದಾರೆ. ಆಂಧ್ರದ ಕಡಪ ಜಿಲ್ಲೆಯ 28 ವರ್ಷದ ಮಹಿಳೆ, ರೈಲಿನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ್ದರು. ಅನುಮಾನದ ಮೇರೆಗೆ ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಆಕೆಯ ವಿಚಾರಣೆ ಮಾಡಿದಾಗ ಪತಿಯ ಕಿರುಕುಳದ ಕುರಿತು ಮಾಹಿತಿ ನೀಡಿದ್ದರು. ಮದ್ಯ ಸೇವಿಸಿ ಬಂದು ಪತಿ ತನ್ನ ಮೇಲೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದ. ಇದರಿಂದ ಮನನೊಂದು ಊರು ಬಿಟ್ಟು ಬಂದಿರುವುದಾಗಿ ಆಕೆ … Read more

ಇವತ್ತು ಅನುರಾಧ ನಕ್ಷತ್ರ, ಶುಭ ಸಮಯ ಯಾವಾಗಿದೆ? – ದಿನ ಪಂಚಾಂಗ

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶನಿವಾರ, 25 ಅಕ್ಟೋಬರ್‌ 2025 – ಚತುರ್ಥಿ ಸೂರ್ಯೋದಯ : 6.20 am ಸೂರ್ಯಾಸ್ತ : 6.03 pm ನಕ್ಷತ್ರ : ಅನುರಾಧ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.42 ರಿಂದ 5.31ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.07 ರಿಂದ 6.20ರವರೆಗೆ ಅಭಿಜಿತ್‌ ಬೆಳಗ್ಗೆ 11.48 ರಿಂದ 12.35ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.09 ರಿಂದ 2.56ರವರಗೆ ಗೋಧೂಳಿ ಮುಹೂರ್ತ ಸಂಜೆ 6.03 ರಿಂದ 6.28ರವರೆಗೆ ರಾಹು, … Read more

ಶಿವಮೊಗ್ಗದಲ್ಲಿ ಕ್ರಿಕೆಟರ್‌ ಮಯಾಂಕ್‌, ಕರುಣ್‌ ನಾಯರ್‌, ಶ್ರೇಯಸ್‌ ಗೋಪಾಲ್‌, ಅರ್ಜುನ್‌ ತೆಂಡೂಲ್ಕರ್‌ ಪ್ರಾಕ್ಟೀಸ್‌

241025-Mayank-Agarwal-Karun-Nair-and-Arjun-Tendulkar-practise-in-Shimoga-KSCA-Stadium-1.webp

ಶಿವಮೊಗ್ಗ: ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ರಣಜಿ ಪಂದ್ಯಕ್ಕೆ ಶಿವಮೊಗ್ಗ ಕೆಎಸ್‌ಸಿಎ ಮೈದಾನ ಸಜ್ಜಾಗಿದೆ. ಉಭಯ ತಂಡದ ಆಟಗಾರರು (Cricketers) ಈಗಾಗಲೇ ಶಿವಮೊಗ್ಗಕ್ಕೆ ಆಗಮಿಸಿದ್ದು ಕಳೆದ ಎರಡು ದಿನದಿಂದ ನೆಟ್‌ ಪ್ರಾಕ್ಟಿಸ್‌ ಮಾಡುತ್ತಿದ್ದಾರೆ. ತಂಡದಲ್ಲಿ ಯಾರೆಲ್ಲ ಇದ್ದಾರೆ? ಕರ್ನಾಟಕ ತಂಡ ಮಯಾಂಕ್‌ ಅಗರ್‌ವಾಲ್‌ (ನಾಯಕ), ಕರುಣ್‌ ನಾಯರ್‌ (ಉಪ ನಾಯಕ), ಸ್ಮರಣ್‌.ಆರ್‌, ಶ್ರೀಜಿತ್‌ (ವಿಕೆಟ್‌ ಕೀಪರ್‌), ಶ್ರೇಯಸ್‌ ಗೋಪಾಲ್‌, ವಿದ್ವತ್‌ ಕಾವೇರಪ್ಪ, ಯಶೋವರ್ಧನ್‌, ಅಭಿಲಾಷ್‌ ಶೆಟ್ಟಿ, ವಂಕಟೇಶ್‌.ಎಂ, ನಿಕಿನ್‌ ಜೋಸ್‌.ಎಸ್.ಜೆ, ಅಭಿನವ್‌ ಮನೋಹರ್‌, ಕೃತಿಕ್‌ ಕೃಷ್ಣ … Read more