ಮೈಸೂರು – ಶಿವಮೊಗ್ಗ, ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವಾಗ?

Electric-Locomotive-train-for-Shimoga

ರೈಲ್ವೆ ಸುದ್ದಿ: ಮಾವಿನಕೆರೆ ಮತ್ತು ಹೊಳೆನರಸೀಪುರ ರೈಲು ನಿಲ್ದಾಣಗಳಲ್ಲಿ ಹಳಿಗಳ ನವೀಕರಣ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಕೆಲವು ರೈಲುಗಳ (Trains) ಸಂಚಾರದಲ್ಲಿ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವೆಲ್ಲ ರೈಲು ಸಂಚಾರದಲ್ಲಿ ನಿಯಂತ್ರಣ? ಸೆಪ್ಟೆಂಬರ್ 22, 23 ಮತ್ತು 24ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮಾರ್ಗ ಮಧ್ಯದಲ್ಲಿ 60 ನಿಮಿಷ ನಿಯಂತ್ರಣವಾಗಲಿದೆ. ಅದೇ ರೀತಿ, ಸೆಪ್ಟೆಂಬರ್ 26ರಂದು ಈ ರೈಲು 65 ನಿಮಿಷಗಳ ಕಾಲ … Read more

ಶಿವಮೊಗ್ಗ – ಬೆಂಗಳೂರು ವಿಮಾನ, ಗುಡ್‌ ನ್ಯೂಸ್‌ ಕೊಟ್ಟರು ಸಂಸದ ರಾಘವೇಂದ್ರ

MP-BY-raghavendra-about-Shimoga-Airport-Flight

ಶಿವಮೊಗ್ಗ: ದಸರಾ ಹಬ್ಬದ ಸಂದರ್ಭ ಶಿವಮೊಗ್ಗದ ಪ್ರಯಾಣಿಕರಿಗೆ ಇಂಡಿಗೋ ವಿಮಾನಯಾನ (FLIGHT) ಸಂಸ್ಥೆ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ವಾರದ ಎಲ್ಲ ದಿನವು ಶಿವಮೊಗ್ಗಕ್ಕೆ ವಿಮಾನ ಹಾರಲಿದೆ ಎಂದು ತಿಳಿಸಿದೆ. ಈ ಸಂಬಂಧ ಸಂಸದ ರಾಘವೇಂದ್ರ ಮಾಹಿತಿ ನೀಡಿದ್ದು, ಈವರೆಗು ಬೆಂಗಳೂರು – ಶಿವಮೊಗ್ಗ ಮಧ್ಯೆ ಇಂಡಿಗೋ ಸಂಸ್ಥೆ ದಿನ ಬಿಟ್ಟು ದಿನ ಸೇವೆ ಒದಗಿಸುತ್ತಿತ್ತು. ಸೆ.21ರಿಂದ ಇಂಡಿಗೋ ವಿಮಾನ ಪ್ರತಿದಿನ ಹಾರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ. ಇಂಡಿಗೋ ವಿಮಾನ ಪ್ರತಿದಿನ ಬೆಳಗ್ಗೆ 9.35ಕ್ಕೆ ಬೆಂಗಳೂರಿನಿಂದ ಹೊರಡಲಿದೆ. … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದಿಂದ ₹6.50 ಕೋಟಿ

Madhu-Bangarappa-About-Shimoga-Airport

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (Airport) ನ್ಯಾವಿಗೇಷನ್‌ ಉಪಕರಣ ಡಿವಿಓರ್‌ ಅಳವಡಿಕೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದೆ. ₹6.50 ಕೋಟಿ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಲಭಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಸಂಬಂಧ ಸಚಿವ ಮಧು ಬಂಗಾರಪ್ಪ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಾಹಿತಿ ಪ್ರಕಟಿಸಿದ್ದಾರೆ. ಇದರ ವಿವರ ಇಲ್ಲಿದೆ. ನೈಟ್‌ ಲ್ಯಾಂಡಿಂಗ್‌ಗೆ ಅನುಕೂಲವಾಗುವ ನ್ಯಾವಿಗೇಷನ್‌ ಉಪಕರಣ ತರಿಸಲಾಗಿದೆ. ಆದರು ರಾಜ್ಯ ಸರ್ಕಾರ ಅಳವಡಿಕೆಗೆ ಆಸಕ್ತಿ ತೋರಿಸಿಲ್ಲ ಎಂದು ಕಳೆದ … Read more

ಬಸ್‌ ಸ್ಟಾಂಡ್‌ ಮುಂದೆ ಪದವೀಧರರಿಂದ ಬೂಟ್‌ ಪಾಲಿಷ್‌, ಟೀ, ತರಕಾರಿ ಮಾರಿ ಮೋದಿ ಜನ್ಮದಿನ, ಯಾಕೆ ಹೀಗೆ?

Degree-holders-sell-vegetable-tea-in-Shimoga-city-during-Narendra-Modi-birthday.

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದಂದು (Birthday) ಶಿವಮೊಗ್ಗದ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಿರುದ್ಯೋಗ ದಿನಾಚರಣೆ ಮಾಡಿದರು. ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಮುಂಭಾಗ ಪದವೀಧರರು ಬೋಂಡ ಬಜ್ಜಿ, ಟೀ, ಪೇಪರ್, ತರಕಾರಿ ಮಾರಾಟ ಮಾಡಿ, ಶೂ ಪಾಲಿಷ್‌ ಮಾಡಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಸ್‌ ನಿಲ್ದಾಣದ ಬಳಿ ತರಕಾರಿ ಮಾರಾಟ ಮಾಡಿದರು. ಟ್ರಾಫಿಕ್‌ನಲ್ಲಿ ನಿಂತಿದ್ದ ವಾಹನ ಸವಾರರಿಗೆ ಟೀ, ಪೇಪರ್‌, ಬೋಂಡ ಮಾರಾಟ ಮಾಡಿದರು. ಯಾರೆಲ್ಲ ಏನೆಲ್ಲ … Read more

ಶಿವಮೊಗ್ಗ ಸಿಟಿಯಲ್ಲಿ ನಾಳೆ ಉಚಿತ ಇಸಿಜಿ ತಪಾಸಣೆ ಶಿಬಿರ

Sahyadri-Narayana-Multispeciality-hospital-NH-Hospital.

ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು (Hospital) ಕುವೆಂಪು ರಸ್ತೆಯಲ್ಲಿರುವ ನಾರಾಯಣ ಸೂಪರ್‌ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಸೆ. 17ರಂದು ಬೆಳಿಗ್ಗೆ 8 ಗಂಟೆಯಿಂದ ಮಹಿಳೆಯರಿಗೆ ಉಚಿತ ಇಸಿಜಿ ತಪಾಸಣೆ ನಡೆಸಲಿದೆ. ಭಾರತದ ಪ್ರಮುಖ ಆರೋಗ್ಯ ಸೇವಾ ಸಂಸ್ಥೆಯಾದ ನಾರಾಯಣ ಹೆಲ್ತ್, ಸರ್ಕಾರದ ‘ಸ್ವಸ್ಥ ನಾರಿ, ಸಶಕ್ತ ಕುಟುಂಬ ಅಭಿಯಾನ’ಕ್ಕೆ ಬೆಂಬಲವಾಗಿ ಮಹಿಳೆಯರಿಗಾಗಿ ಉಚಿತ ಇಸಿಜಿ ತಪಾಸಣಾ ಶಿಬಿರ ಆಯೋಜಿಸಿದೆ. ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗಿಸ್‌ ಪಿ. ಜಾನ್‌ ಅವರು … Read more

ರವೀಂದ್ರನಗರ, ವೆಂಕಟೇಶನಗರದಲ್ಲಿ ಮಾಂಗಲ್ಯ ಸರ ಅಪಹರಣ, ಹೇಗಾಯ್ತು ಘಟನೆ?

Shimoga-Police-Jeep

ಶಿವಮೊಗ್ಗ: ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರ ಸರಗಳ್ಳತನ (Chain snatching) ಮಾಡಿದ್ದಾರೆ. ಒಂದು ಪ್ರಕರಣದಲ್ಲಿ ಮಾಂಗಲ್ಯ ಸರದ ಸ್ವಲ್ಪ ಭಾಗ ಮಾತ್ರ ಕಳ್ಳನ ಪಾಲಾಗಿದೆ. ಎಲ್ಲೆಲ್ಲಿ ಹೇಗಾಯ್ತು ಘಟನೆ? ಪ್ರಕರಣ 1 : ರವೀಂದ್ರ ನಗರ ಸೆ.11ರಂದು ಬೆಳಗ್ಗೆ 6.50ರ ಹೊತ್ತಿಗೆ ಶಿವಮೊಗ್ಗದ ರವೀಂದ್ರನಗರದ ರೈಲ್ವೆ ಹಳಿ ಪಕ್ಕದ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸುಶೀಲಮ್ಮ ಎಂಬುವವರ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಸರಗಳ್ಳ ಸುಶೀಲಮ್ಮ ಅವರ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರ … Read more

ಪ್ರಧಾನಿ ಮೋದಿ 75ನೇ ಜನ್ಮದಿನ, ಶಿವಮೊಗ್ಗ ಜಿಲ್ಲೆಯ ಏಳು ಕಡೆ ಆರೋಗ್ಯ ಶಿಬಿರ, ಎಲ್ಲೆಲ್ಲಿ ಯಾವಾಗ ನಡೆಯಲಿದೆ?

BY-Ragahvendra-Press-meet-at-BJP-Office-in-Shimoga - Speaks about health camp

ಶಿವಮೊಗ್ಗ: ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನ್ಮದಿನ. ಇದರ ಅಂಗವಾಗಿ ದೇಶದಲ್ಲಿ ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನ ಪ್ರಾರಂಭಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲು ಈ ಆರೋಗ್ಯ ಅಭಿಯಾನ (Health Camps) ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿಂದ ಅ.2ರಂದು ಗಾಂಧೀಜಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ‌ ಅವರ ಜನ್ಮದಿನದವರೆಗೆ ಈ ಅಭಿಯಾನ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ … Read more

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ದಿನ? ಎಲ್ಲೆಲ್ಲಿ ಇರುತ್ತೆ ಸ್ಟಾಪ್?

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ದಸರಾ ಹಬ್ಬದ ಹಿನ್ನೆಲೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು (Special Train) ಮೂರು ಟ್ರಿಪ್ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ‌. ದಸರಾ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ‌್‌‌ಗಳನ್ನು ಪೂರ್ಣಗೊಳಿಸಲಿದೆ ಎಂದು ತಿಳಿಸಲಾಗಿದೆ. ವಿಶೇಷ ರೈಲಿನ ಟೈಮಿಂಗ್ ಏನು? ರೈಲು ಸಂಖ್ಯೆ 06587 … Read more

ಶಿವಮೊಗ್ಗದಲ್ಲಿ ಈದ್‌ ಮಿಲಾದ್‌, ಪೊಲೀಸರಿಂದ ರೂಟ್‌ ಮಾರ್ಚ್‌, ಬಂದೋಬಸ್ತ್‌ಗೆ ಸಾವಿರ ಸಾವಿರ ಸಿಬ್ಬಂದಿ

Police-Route-march-in-Shimoga-city-for-Eid-Milad-procession

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇವತ್ತು ಪೊಲೀಸ್‌ ರೂಟ್‌ ಮಾರ್ಚ್‌ (Route March) ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಮೆರವಣಿಗೆ ಸಾಗುವ ಮಾರ್ಗ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಲಾಯಿತು. ರ‍್ಯಾಪಿಡ್‌ ಆಕ್ಷನ್‌ ಫೋರ್ಸ್‌, ಕೆಎಸ್‌ಆರ್‌ಪಿ, ಡಿಎಆರ್‌, ಎಎಎಫ್‌, ಗೃಹ ರಕ್ಷಕದಳ ಸಿಬ್ಬಂದಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. ಭದ್ರತೆಗೆ ಸಾವಿರ ಸಾವಿರ ಪೊಲೀಸರು ಸೆ.15ರಂದು ಶಿವಮೊಗ್ಗ ನಗರದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ನಡೆಯಲಿದೆ. ಮುಂಜಾಗ್ರತ … Read more

ಮೈಸೂರು ದಸರಾ, ಶಿವಮೊಗ್ಗದಿಂದ ಮೈಸೂರಿಗೆ ಎಷ್ಟು ರೈಲುಗಳಿವೆ? ಟೈಮಿಂಗ್‌ ಏನು? ಇಲ್ಲಿದೆ ಡಿಟೇಲ್ಸ್‌

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ಕೆಲವೇ ದಿನದಲ್ಲಿ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ. ಮೈಸೂರನಲ್ಲಿ ನವರಾತ್ರಿ ಕಣ್ತುಂಬಿಕೊಳ್ಳುವ ಸಂಭ್ರಮೆ ವಿಭಿನ್ನ ಅನುಭವ. ಶಿವಮೊಗ್ಗ ಜಿಲ್ಲೆಯಿಂದ ಮೈಸೂರಿಗೆ ಪ್ರತಿದಿನ ಓಡಾಡಲು ರೈಲುಗಳ (Trains) ವ್ಯವಸ್ಥೆ ಇದೆ. ಶಿವಮೊಗ್ಗದಿಂದ ಮೈಸೂರಿಗೆ ಎಷ್ಟು ರೈಲುಗಳಿವೆ? ಟೈಮಿಂಗ್‌ ಏನು? ಇಲ್ಲಿದೆ ಡಿಟೇಲ್ಸ್‌ ಯಾವ್ಯಾವ ರೈಲು ಯಾವಾಗ ಹೊರಡುತ್ತವೆ? ♦ ಕುವೆಂಪು ಎಕ್ಸ್‌ಪ್ರೆಸ್‌ : ತಾಳಗುಪ್ಪದಿಂದ ಬೆಳಗ್ಗೆ 6.15ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ ಬೆಳಗ್ಗೆ 8.20ಕ್ಕೆ ಹೊರಡಲಿದೆ. ಮಧ್ಯಾಹ್ನ 3.35ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಹಾಸನ ಮಾರ್ಗವಾಗಿ ಮೈಸೂರಿಗೆ … Read more