ಗಾಡಿಕೊಪ್ಪದಲ್ಲಿ ತಡರಾತ್ರಿ ಕಾರ್ಯಾಚರಣೆ, 28 ಕೆ.ಜಿ ತೂಕದ ಹೆಬ್ಬಾವು ರಕ್ಷಣೆ

python-rescued-by-snake-kiran-in-shimoga-gadikoppa

SHIMOGA, 13 AUGUST 2024 : ಗಾಡಿಕೊಪ್ಪ ಬಡಾವಣೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು (Python) ಸ್ನೇಕ್‌ ಕಿರಣ್‌ ರಕ್ಷಿಸಿದ್ದಾರೆ. ಇಲ್ಲಿನ ಸರ್ಕರಿ ಶಾಲೆ ಹಿಂಭಾಗದ ರೋಟರಿ ಭವನದ ಸಮೀಪ ರಸ್ತೆಯಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ನೇಕ್‌ ಕಿರಣ್‌ ತಡರಾತ್ರಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ರಕ್ಷಿಸಿದ್ದಾರೆ. 10 ಅಡಿ ಉದ್ದ, ಸುಮಾರು 28 ಕೆ.ಜಿ ತೂಗುತ್ತಿತ್ತು ಎಂದು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಹೆಬ್ಬಾವನ್ನು ಕಾಡಿಗೆ ಬಿಡಲಾಯಿತು. ಇದನ್ನೂ ಓದಿ ⇒ ಶಿವಮೊಗ್ಗ … Read more

ಶಿವಮೊಗ್ಗ ನಗರದ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗುತ್ತೆ ವಿದ್ಯುತ್?

power cut mescom ELECTRICITY

SHIMOGA, 13 AUGUST 2024 : ಮಂಡ್ಲಿ ವಿದ್ಯುತ್‌ ವಿತರಣಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ (Maintenance) ಕಾಮಗಾರಿ ಹಿನ್ನೆಲೆ ಆ.14ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್‌ವರೆಗೆ, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ … Read more

ಶಿವಮೊಗ್ಗದಲ್ಲಿ ಮಹಿಳೆ ಸೇರಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

Doddapete-Police-raid-on-Lodge-in-Shimoga.

SHIMOGA, 13 AUGUST 2024 : ವಿಷ ಸೇವಿಸಿ ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಓ.ಟಿ.ರಸ್ತೆಯ ವಿಜಯಾ ಗ್ಯಾರೇಜ್‌ ಸಮೀಪ ಮನೆಯಲ್ಲಿ ಘಟನೆ ಸಂಭವಿಸಿದೆ. ಭುವನೇಶ್ವರಿ, ಅವರ ಸಹೋದರ ಮಾರುತಿ ಮತ್ತು ಮಗ ದರ್ಶನ್‌ ಮೃತರು. ಇವರು ಸೋಮವಾರವೆ ವಿಷ ಸೇವಿಸಿದ್ದಾರೆ ಎಂದ ಶಂಕಿಸಲಾಗಿದೆ. ಸಂಬಂಧಿಕರು ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಹಾಗಾಗಿ ಇವತ್ತು ಮನೆ ಬಳಿ ಬಂದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ ⇒ ಪುರದಾಳು ರಸ್ತೆಯಲ್ಲಿ ಅಪಘಾತ, … Read more

ಶಿವಮೊಗ್ಗದಲ್ಲಿ ಎರಡು ದಿನ ಚರಕೋತ್ಸವ, ತಿನಿಸು, ಕೈಮಗ್ಗ ಉತ್ಪನ್ನ ಪ್ರದರ್ಶನ, ಮಾರಾಟ, ತರಬೇತಿ

Charakotsava-in-Shimoga-on-independence-day

SHIMOGA, 13 AUGUST 2024 :‌ ಸ್ವಾತಂತ್ರ್ಯದ (Independence) ನಡಿಗೆ ಪರಿಸರದ ಕಡೆಗೆ ಕಲ್ಪನೆಯಡಿ 78ನೇ ಸ್ವಾತಂತ್ರ್ಯ ಉತ್ಸವವನ್ನು ವಿಭಿನ್ನ ಹಾಗೂ ವಿಶಿಷ್ಟವಾಗಿ ಆಚರಿಸಲು ರಾಜ್ಯದಲ್ಲೇ ಮೊದಲ ಬಾರಿಗೆ ಚರಕೋತ್ಸವವನ್ನು ಆ.14 ಮತ್ತು 15ರಂದು ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಳಿವು ಸಂಸ್ಥೆಯ ಮುಖ್ಯಸ್ಥೆ ಸೀಮಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರತ್ಕಲ್‌ನ ಕರ್ನಾಟಕದ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಪ್ರಾಧ್ಯಾಪಕ ಡಾ. ಎಸ್. ಶ್ರೀಕುಮಾ‌ರ್, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಡಾ. ಎಚ್‌. … Read more

ಶಿವಮೊಗ್ಗ ಒಕ್ಕಲಿಗರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಯಾರೆಲ್ಲ ಗೆದ್ದಿದ್ದಾರೆ?

vokkaliga-sanga-election-ramesh-hegde-and-chetan.

SHIMOGA, 13 AUGUST 2024 :‌ ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ತಡರಾತ್ರಿ ಫಲಿತಾಂಶ (Result) ಪ್ರಕಟಿಸಲಾಯಿತು. 21 ನಿರ್ದೇಶಕರ ಸ್ಥಾನಕ್ಕೆ 29 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. 4137 ಮತದಾರರ ಪೈಕಿ ಭಾನುವಾರು ನಡೆದ ಮತದಾನದಲ್ಲಿ 2599 ಮತದಾರರು ಹಕ್ಕು ಚಲಾಯಿಸಿದ್ದರು. ಸೋಮವಾರ ಒಕ್ಕಲಿಗರ ಸಂಘದ ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಬ್ಯಾಲೆಟ್‌ ಪೇಪರ್‌ ಆಗಿದ್ದರಿಂದ ತಡರಾತ್ರಿವರೆಗೆ ಎಣಿಕೆ ನಡೆಯಿತು. ಇದನ್ನೂ ಓದಿ … Read more

ಶಿವಮೊಗ್ಗಕ್ಕೆ ಎರಡು ಚಿನ್ನ, ಎರಡು ಬೆಳ್ಳಿ, ಮೂರು ಕಂಚಿನ ಪದಕ

Taekwondo

SHIMOGA, 13 AUGUST 2024 :‌ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು 7 ಪದಕ (Medal) ಪಡೆದಿದ್ದಾರೆ ಎಂದು ಟೇಕ್ವಾಂಡೋ (Taekwondo) ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಆ‌ರ್.ಮೀನಾಕ್ಷಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಟೇಕ್ವಾಂಡೋ ಅಸೋಸಿಯೇಷನ್‌ ಕಾರ್ಯದರ್ಶಿ ಸಿ.ಎ.ಶಶಿವರ್ಧನ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ 41ನೇ ರಾಜ್ಯಮಟ್ಟದ ಟೇಕ್ವಾಂಡೋ ಅಧಿಕೃತ ಚಾಂಪಿಯನ್‌ಶಿಪ್‌ನಲ್ಲಿ ಜಿಲ್ಲೆಯ 18 ಮಕ್ಕಳು ಭಾಗವಹಿಸಿದ್ದರು. ತಲಾ ಎರಡು ಚಿನ್ನ ಮತ್ತು ಬೆಳ್ಳಿ ಹಾಗೂ 3 ಕಂಚಿನ ಪದಕ ಗೆದ್ದಿದ್ದಾರೆ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಒಳ ಹರಿವು ಇವತ್ತು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

linganamakki-dam-back-water

DAM LEVEL, 13 AUGUST 2024 :‌ ಮಲೆನಾಡು ಭಾಗದಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಹಾಗಾಗಿ ಮೂರು ಪ್ರಮುಖ ಜಲಾಶಯಗಳ ಒಳ ಮತ್ತು ಹೊರ ಹರಿವು ಇಳಿಕೆಯಾಗಿದೆ. ಇದನ್ನೂ ಓದಿ ⇒ ಗಾಜನೂರು ತುಂಗಾ ಜಲಾಶಯದಲ್ಲಿ ತಪ್ಪಿದ ದುರಂತ, ತುಂಡಾಗುವ ಹಂತದಲ್ಲಿದೆ ಗೇಟ್‌ ರೋಪ್‌ ಇದನ್ನೂ ಓದಿ ⇒ ಸಕ್ರೆಬೈಲಿನ ಸಲಗಕ್ಕೆ ಆನೆ ದಿನದಂದು ನಾಮಕರಣ, ಏನಂತ ಹೆಸರಿಡಲಾಯ್ತು?

ಸಾಲ ವಸೂಲಿಗೆ ಮಹಿಳೆಯರ ಮನೆಗೆ ಹೋಗಿ ಕೂರುವ ಸಿಬ್ಬಂದಿ, ಖಡಕ್‌ ಸೂಚನೆ ನೀಡುವಂತೆ ಏಕಾಂಗಿ ಹೋರಾಟ

Shashikumar-Gowda-protest-against-micro-finance.

SHIMOGA, 13 AUGUST 2024 : ಮೈಕ್ರೋ ಫೈನಾನ್ಸ್‌ಗಳು (Micro Finance) ಜಿಲ್ಲೆಯ ಬಡ ಮಹಿಳೆಯರನ್ನು ಶೋಷಣೆ ಮಾಡುತ್ತಿವೆ. ಈ ಹಿನ್ನೆಲೆ ಮೈಕ್ರೋ ಫೈನಾನ್ಸ್‌ಗಳ ಸಭೆ ಕರೆದು ಅವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾ‌ರ್ ಗೌಡ ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್‌ಗಳಿವೆ. ಈ ಪೈಕಿ ಬಹುತೇಕ ಸಂಸ್ಥೆಗಳು ಆರ್‌ಬಿಐನ ನಿಯಮ ಪಾಲಿಸದೆ ಮನಬಂದಂತೆ ಕಾರ್ಯ ನಿರ್ವಹಿಸುತ್ತಿವೆ. ಬಡ ಮಹಿಳೆಯರಿಗೆ ಸಾಲ ನೀಡಿದ ನಂತರ … Read more

ಗಾಜನೂರು ತುಂಗಾ ಜಲಾಶಯದಲ್ಲಿ ತಪ್ಪಿದ ದುರಂತ, ತುಂಡಾಗುವ ಹಂತದಲ್ಲಿದೆ ಗೇಟ್‌ ರೋಪ್‌

Gajanuru-Dam-gate-8-rope-to-cut

SHIMOGA, 13 AUGUST 2024 : ತುಂಗಭದ್ರ ಜಲಾಶಯದ ಗೇಟ್‌ (Crust Gate) ಮುರಿದು ಭಾರಿ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದು ರೈತರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ ಡ್ಯಾಮ್‌ಗಳ ಸುರಕ್ಷತೆ ಕುರಿತು ಪ್ರಶ್ನೆಗಳು ಮೂಡಿವೆ. ಈ ಮಧ್ಯೆ ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದ 8ನೇ ಗೇಟ್‌ನ ರೋಪ್‌ ತುಂಡಾಗುವ ಹಂತದಲ್ಲಿದೆ. ಇದರ ಫೋಟೊಗಳು ಶಿವಮೊಗ್ಗ ಲೈವ್.ಕಾಂಗೆ ಲಭ್ಯವಾಗಿದೆ. ಗಾಜನೂರಿನ ತುಂಗಾ ಜಲಾಶಯ ಮೂರುವರೆ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಸರಿಯಾದ ಒಂದೆರಡು ಮಳೆಗೆ ಜಲಾಶಯ … Read more

ಸಕ್ರೆಬೈಲಿನ ಸಲಗಕ್ಕೆ ಆನೆ ದಿನದಂದು ನಾಮಕರಣ, ಏನಂತ ಹೆಸರಿಡಲಾಯ್ತು?

sakrebyle-elephant-named-after-ashwathama

SHIMOGA, 13 AUGUST 2024 : ವಿಶ್ವ ಆನೆ ದಿನಾಚರಣೆ ಶುಭ ಸಂದರ್ಭದಲ್ಲಿ ಶಿವಮೊಗ್ಗ ಸಕ್ರೇಬೈಲು ಆನೆ ಬಿಡಾರದಲ್ಲಿ (Camp) ಸಲಗವೊಂದಕ್ಕೆ ಶಾಸ್ರೋಕ್ತವಾಗಿ ನಾಮಕರಣ ಮಾಡಲಾಯಿತು. 2023ನೇ ನವೆಂಬ‌ರ್ 16ರಂದು ಮೂಡಿಗೆರೆ ತಾಲೂಕು ಆಲ್ಲೂರು ಅರಣ್ಯ ವ್ಯಾಪ್ತಿಯಲ್ಲಿ ಸೆರೆ ಸಿಕ್ಕ ಕಾಡಾನೆಯನ್ನು ಶಿಬಿರದಲ್ಲಿ ಪಳಗಿಸಲಾಗಿತ್ತು. ಅಲ್ಪಾವಧಿಯಲ್ಲೆ ಈ ಸಲಗ ಶಿಬಿರದ ಮೆಚ್ಚಿನ ಊರಾನೆಯಾಗಿ ಬದಲಾಗಿದೆ. ಮಾವುತರು ಮತ್ತು ಕಾವಾಡಿಗಳಿಗೆ ವಿಧೇಯನಾಗಿದ್ದ ಸಲಗಕ್ಕೆ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಅಧಿ ಕಾರಿಗಳು ‘ಅಶ್ವತ್ಥಾಮ’ ಹೆಸರಿಟ್ಟರು. ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ … Read more