ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಪ್ರತಿಯೊಬ್ಬರ ತಪಾಸಣೆಗೆ ಎರಡು ಕಡೆ ಚೆಕ್‌ಪೋಸ್ಟ್

130720 Checkpost Near Holehonnuru Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020 ಕರೋನ ಸೋಂಕು ತಡೆಗೆ ಬೆಂಗಳೂರು ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯ ಜನರು, ಬೆಂಗಳೂರನಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಹೀಗೆ, ಜಿಲ್ಲೆಯೊಳಗೆ ಬರುತ್ತಿರುವ ತಪಾಸಣೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಎರಡು ಕಡೆ ಚಿಕ್ ಪೋಸ್ಟ್ ಸ್ಥಾಪನೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಎರಡು ಮಾರ್ಗದಲ್ಲೂ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಬೆಂಗಳೂರಿನಿಂದ ತರಿಕೆರೆ ಮಾರ್ಗವಾಗಿ ಬರುವವರ ತಪಾಸಣೆಗೆ, ಭದ್ರಾವತಿಯ ಕಾರೆಹಳ್ಳಿಯಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ. ಇನ್ನು … Read more

ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ ಮೂರು ಗಂಟೆಯಿಂದ ಸ್ವಯಂ ಪ್ರೇರಿತ ಬಂದ್

270420 Gandhi Bazaar Reopen After Corona Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020 ಕರೋನ ಸೋಂಕು ಹರಡುವುದನ್ನು ತಡೆಯಲು ಗಾಂಧಿ ಬಜಾರ್‍ನ ವರ್ತಕರು ಇನ್ಮುಂದೆ ಮಧ್ಯಾಹ್ನ ಮೂರು ಗಂಟೆಗೆ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಅದೆ ರೀತಿ ಇತರೆಡೆಯು ವರ್ತಕರು ಸ್ವಯಂ ಪ್ರೇರಿತ ಬಂದ್ ಮಾಡಲು ನಿರ್ಧರಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸೋಂಕಿತರ ಸಂಖ್ಯೆ  ಹೆಚ್ಚಳ ಮತ್ತು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರೋನ ನಿಯಂತ್ರಣಕ್ಕಾಗಿ ನಗರದ ವಿವಿಧೆಡೆಯ ವರ್ತಕರು ಮಧ್ಯಾಹ್ನ ಮೂರು ಗಂಟೆಗೆ ವ್ಯಾಪಾರ, ವಹಿವಾಟು … Read more

ತೀರ್ಥಹಳ್ಳಿಯಲ್ಲಿ ಮತ್ತೊಂದು ಕರೋನ ಪಾಸಿಟಿವ್, ರಸ್ತೆ ಸೀಲ್ ಡೌನ್

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಜುಲೈ 2020 ಬೆಂಗಳೂರಿನಿಂದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಬಡಾವಣೆಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಯಲ್ಲಿ ಬಡಾವಣೆಯ 7ನೇ ಅಡ್ಡರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಪತ್ನಿಯ ಹೆರಿಗೆ ಸಲುವಾಗಿ ಮೂರು ದಿನದ ಹಿಂದೆ ಇವರು ಬೆಂಗಳೂರಿನಿಂದ ಬಂದಿದ್ದರು ಎಂದು ಹೇಳಲಾಗುತ್ತಿದೆ. ಸೊಪ್ಪುಗುಡ್ಡೆಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಆರೋಗ್ಯ ತಪಾಸಣೆ ನಡೆಸಲಾಗಿದೆ. ಸ್ವ್ಯಾಬ್ ಟೆಸ್ಟ್ ಬಳಿಕ ಇವರಲ್ಲಿ ಸೋಂಕು ಇರುವುದು ದೃಢವಾಗಿದೆ. ತಕ್ಷಣ ಇವರನ್ನು … Read more

ಶಿವಮೊಗ್ಗದಲ್ಲಿ ಭಾನುವಾರ ಮತ್ತಷ್ಟು ಕಡೆ ಸೀಲ್ ಡೌನ್, ಒಟ್ಟು ಕಂಟೈನ್ಮೆಂಟ್ ಜೋನ್ಗಳೆಷ್ಟು? ಎಷ್ಟು ತೆರವಾಗಿವೆ?

260620 Channappa Layout Seal Down 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾದಂತೆ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆಯಲ್ಲೂ ಏರಿಕೆ ಆಗಿದೆ. ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಭಾನುವಾರ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ. ಚನ್ನಪ್ಪ ಲೇಔಟ್ ಮೊದಲ ಅಡ್ಡರಸ್ತೆ, ಶರಾವತಿ ನಗರ ಎ ಬ್ಲಾಕ್‍ನ 6ನೇ ಕ್ರಾಸ್, ಹೊಸಮನೆ 1ನೇ ಕ್ರಾಸ್ ಸೇರಿದಂತೆ ವಿವಿಧೆಡೆ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಈ ಕಂಟೈನ್ಮೆಂಟ್ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 56 ಮಂದಿಗೆ ಕರೋನ ಪಾಸಿಟಿವ್, 500ರ ಗಡಿ ದಾಟಿದ ಸೋಂಕಿತರ ಸಂಖ್ಯೆ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2020 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 56 ಮಂದಿಗೆ ಕರೋನ ಪಾಸಿಟಿವ್ ದೃಢವಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ. ಇವತ್ತು ಬಿಡುಗಡೆಯಾಗಿರುವ ಜಿಲ್ಲಾ ಹೆಲ್ತ್ ಬುಲೆಟಿನ್ ಪ್ರಕಾರ, ಶಿವಮೊಗ್ಗ ಜಿಲ್ಲೆಯಲ್ಲಿ 56 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 541ಕ್ಕೆ ಏರಿಕೆ ಆಗಿದೆ. 170 ಸ್ಯಾಂಪಲ್ ಸಂಗ್ರಹ ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ 20,845 … Read more

ಶಿವಮೊಗ್ಗದಲ್ಲಿ ಭಾನುವಾರದ ಕರ್ಫ್ಯೂ, ಇವತ್ತು ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ಯಾವ್ಯಾವ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ?

120720 Sunday Curfew in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2020 ಕರೋನ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಸೂಚನೆ ಹಿನ್ನೆಲೆ ಶಿವಮೊಗ್ಗದಲ್ಲಿ ಎರಡನೇ ಭಾನುವಾರ ಕರ್ಫ್ಯೂ ಘೋಷಿಸಲಾಗಿದೆ. ಇವತ್ತು ಬೆಳಗ್ಗೆಯಿಂದಲು ಕರ್ಫ್ಯೂಗೆ ಜನ ಸ್ಪಂದನೆ ವ್ಯಕ್ತವಾಗಿದೆ. ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ಅಶೋಕ ಸರ್ಕಲ್ : ಸದಾ ಜನ ಮತ್ತು ವಾಹನ ದಟ್ಟಣೆ ಇರುವ ಸರ್ಕಲ್ ಇದು. ಕಳೆದ ಭಾನುವಾರದ ಹಾಗೆ ಇವತ್ತು ಕೂಡ ಬಸ್ಸುಗಳು ರಸ್ತೆಗಿಳಿದಿರಲಿಲ್ಲ. ವಾಹನ ಸಂಖ್ಯೆಯೂ ವಿರಳವಾಗಿತ್ತು. ಬಸ್ ನಿಲ್ದಾಣದ ಮುಂದಿನ ಅಂಗಡಿಗಳು, ಹೊಟೇಲ್‍ಗಳು … Read more

ಶಿವಮೊಗ್ಗದಲ್ಲಿ 400ರ ಗಡಿ ದಾಟಿದ ಕರೋನ ಸೋಂಕಿತರ ಸಂಖ್ಯೆ, ಇವತ್ತೆಷ್ಟು ಮಂದಿಗೆ ಪಾಸಿಟಿವ್ ಬಂದಿದೆ ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಅಟ್ಟಹಾಸ ಮುಂದುವರೆದಿದೆ. ಇವತ್ತು 26 ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 400ರ ಗಡಿ ದಾಟಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಸಾವಿನ ಸಂಖ್ಯೆ ಏಳಕ್ಕೆ ಏರಿಕೆ ಕರೋನ ಸೋಂಕು ತಗುಲಿ ಶಿವಮೊಗ್ಗದಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗಿದೆ. ಈವರೆಗೂ ನಾಲ್ಕು ಸೋಂಕಿತರಷ್ಟೇ ಮೃತರಾಗಿದ್ದಾರೆ ಎಂದು ಪ್ರತಿದಿನದ ರಿಪೋರ್ಟ್‍ನಲ್ಲಿ ತೋರಿಸಲಾಗುತ್ತಿತ್ತು. ಆದರೆ ಇವತ್ತಿನ ರಿಪೋರ್ಟ್‍ನಲ್ಲಿ ಏಳು ಮಂದ … Read more

ಶಿವಮೊಗ್ಗ ಜಯನಗರದಲ್ಲಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಆಡಿಟರ್ ನೇಣು ಬಿಗಿದು ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಪ್ರೇಮ ವೈಫಲ್ಯದ ಹಿನ್ನೆಲೆ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ ಒಂದರ ಆಡಿಟರ್‌ ಒಬ್ಬರು ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್‌ (24) ಆತ್ಮಹತ್ಯೆ ಮಾಡಿಕೊಂಡವರು. ಶಿವಮೊಗ್ಗದ ಜಯನಗರದಲ್ಲಿ ಬಾಡಿಗೆ ರೂಂ ಮಾಡಿಕೊಂಡು ವಾಸವಾಗಿದ್ದ ಸಚಿನ್‌, ಅದೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತ ಪ್ರೇಮಿಸುತ್ತಿದ್ದ ಯುವತಿಗೆ ಇತ್ತೀಚೆಗಷ್ಟೇ ಮದುವೆಯಾಗಿತ್ತು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಸಚಿನ್‌, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪೋಷಕರು ದೂರಿನಲ್ಲಿ … Read more

‘ಆತ್ಮ ನಿರ್ಭರ ಭಾರತ ಪ್ಯಾಕೇಜ್ನಲ್ಲಿ ಶಿವಮೊಗ್ಗಕ್ಕೆ ಈಗಾಗಲೇ 107 ಕೋಟಿ ರೂ. ಪರಿಹಾರ’

110720 BY Raghavendra press meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಕೋವಿಡ್ 19 ಲಾಕ್‍ ಡೌನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜ್‍ನ ಪರಿಹಾರ ಈಗಾಗಲೇ ಶೇ.70ರಷ್ಟು ಫಲಾನುಭವಿಗಳಿಗೆ ತಲುಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನ ಪರಿಹಾರದ ಮೊತ್ತ  ಶೇ.70ರಷ್ಟು ಫಲಾನುಭವಿಗಳಿಗೆ ತಲುಪಿದೆ. ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಕೇಂದ್ರದ ಪರಿಹಾರದಿಂದ ಲಾಭ ಪಡೆದುಕೊಂಡಿವೆ ಎಂದು … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಕರೋನ ಸೋಂಕಿತ ವೃದ್ಧೆ ಸಾವು

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ ಮೃತರಾದವರ ಸಂಖ್ಯೆ ೯ಕ್ಕೆ ಏರಿಕೆಯಾಗಿದೆ. ಉಸಿರಾಟದ ತೊಂದರೆಯಿಂದ ಸಾವು ಕರೋನಾ ಸೋಂಕಿಗೆ ತುತ್ತಾಗಿದ್ದ ೯೦ ವರ್ಷದ ವೃದ್ಧೆಗೆ ರಾತ್ರಿ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವೆಂಟಿಲೇಟರ್ ವ್ಯವಸ್ಥೆ ಮಾಡಿದರೂ ಚೇತರಿಸಿಕೊಳ್ಳದೆ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವಾರದ ಹಿಂದೆ ಆಸ್ಪತ್ರೆಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ವೃದ್ಧೆಯನ್ನು … Read more