ಶಿವಮೊಗ್ಗದಲ್ಲಿ ನೂರರ ಗಡಿ ದಾಟಿದ ಕರೋನ ಸೋಂಕಿತರ ಸಂಖ್ಯೆ, ಇವತ್ತು ಏಳು ಮಂದಿಗೆ ಪಾಸಿಟಿವ್, ಮೂವರು ಐಸಿಯುಗೆ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ಇವತ್ತು ಏಳು ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಪಿ7265 – 19 ವರ್ಷದ ಪುರುಷ ಪಿ7266 – 25 ವರ್ಷದ ಮಹಿಳೆ ಪಿ7267 – 63 ವರ್ಷದ ಪುರುಷ ಪಿ7268 – 3 ವರ್ಷದ ಗಂಡು ಮಗು ಪಿ7269 – 28 ವರ್ಷದ ಪುರುಷ ಪಿ7270 – 78 … Read more

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್, ಕಾರಣವೇನು? ಪರ್ಯಾಯ ಮಾರ್ಗವೇನು?

Agumbe Ghat 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಆಗುಂಬೆ ಘಾಟಿಯಲ್ಲಿ 12 ಟನ್‍ಗಿಂತಲೂ ಅಧಿಕ ತೂಕದ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಜೋರು ಮಳೆಯಾಗುತ್ತಿರುವ ಕಾರಣ ಭಾರೀ ವಾಹನ ಸಂಚಾರನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಎಷ್ಟು ದಿನ ನಿಷೇಧ? ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಒಂದು ವೇಳೆ ಭಾರೀ ವಾಹನಗಳು ಘಾಟಿಯಲ್ಲಿ ಸಂಚರಿಸಿದರೆ, ಧರೆ ಕುಸಿಯುವ ಸಾಧ್ಯತೆ ಇದೆ. ಇದರಿಂದ ಇತರೆ ವಾಹನಗಳ ಸಂಚಾರವು ಕಷ್ಟವಾಗಲಿದೆ. ಹಾಗಾಗಿ 12 ಟನ್‍ಗಿಂತಲೂ … Read more

ಮಾನ್ಸೂನ್ ಟೈಮಲ್ಲಿ ಮರಳುಗಾರಿಗೆ ಬಂದ್, ತಪ್ಪಿದರೆ ದಂಡ ಫಿಕ್ಸ್, ಈ ವರ್ಷ ಸೀಜ್ ಆದ ವಾಹನವೆಷ್ಟು? ವಸೂಲಾದ ಫೈನ್ ಎಷ್ಟು?

160620 Sand Mining Meeting 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಜಿಲ್ಲೆಯಲ್ಲಿ ಮಾನ್ಸೂನ್ ಮುಗಿಯುವ ತನಕ ಮರಳುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾ‍ರ್, ಮರಳು ಗಣಿಗಾರಿಕೆಯನ್ನು ಜೂನ್ 6ರಿಂದ ಮಾನ್ಸೂನ್ ಮುಕ್ತಾಯವಾಗುವ ತನಕ ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸ್ಟಾಕ್‍ಯಾರ್ಡ್‍ಗಳಲ್ಲಿರುವ ಮರಳನ್ನು ನಿಗದಿತ ಕಾಲಮಿತಿಯ ಒಳಗಾಗಿ ಸಾಗಾಣಿಕೆ ಮಾಡಲು ಅವಕಾಶ … Read more

ಸಕೆಂಡ್ ಪಿಯು ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್, ಎಲ್ಲಾ ಪರೀಕ್ಷಾ ಕೇಂದ್ರದಲ್ಲೂ ಆರೋಗ್ಯ ಇಲಾಖೆ ಸಿಬ್ಬಂದಿ, ಇನ್ನೂ ಏನೆಲ್ಲ ವ್ಯವಸ್ಥೆಯಾಗಿದೆ?

DC Office 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧಿಕಾರಿ ಶಿವಕುಮಾರ್, ಜೂನ್ 18ರಂದು ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಎಲ್ಲಾ 33 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ದೇಹದ ತಾಪಮಾನ ಪರೀಕ್ಷಿಸಲು ತಲಾ ಎರಡು ಥರ್ಮಲ್ ಸ್ಕ್ಯಾನರ್ ಒದಗಿಸಬೇಕು ಎಂದರು. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ … Read more

ಕಂಟೈನ್ಮೆಂಟ್ ವಲಯದಲ್ಲಿ ಕ್ವಾರಂಟೈನ್ ಉಲ್ಲಂಘಿಸಿದರೆ ಕೇಸ್, ಮಾಸ್ಕ್ ಹಾಕದಿದ್ದರೆ ಡಿಸಿ ಆಫೀಸ್‌ಗೆ ಎಂಟ್ರಿ ಇಲ್ಲ

130620 Vinobangara Seal Down 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಕಂಟೈನ್‍ಮೆಂಟ್ ವಲಯ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿರುವ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲೆಯಲ್ಲಿ 10 ಕಂಟೈನ್‍ಮೆಂಟ್ ವಲಯಗಳನ್ನು ಈಗಾಗಲೇ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿನ … Read more

ರೈತರು ಕೂಲಿ ಮಾಡುವಂತಹ ಪರಿಸ್ಥಿತಿ ಬರುತ್ತೆ, ಡಿಸಿ ಆಫೀಸ್ ಮುಂದೆ ಕಿಸಾನ್ ಸೆಲ್ ಆಕ್ರೋಶ

160620 Congres Kisan Cell Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸಮಿತಿ ಕಿಸಾನ್ ಸೆಲ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಿಸಾನ್ ಸೆಲ್ ಕಾರ್ಯಕರ್ತರು ರಾಜ್ಯ ಸರ್ಕಾರದ ನಡೆ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಬಂಡವಾಳಶಾಹಿಗಳ ಪರವಾಗಿ ನಿಂತಿದೆ. ರೈತರು ಜಮೀನು ಮಾಡಿಕೊಂಡು ಕೂಲಿ ಮಾಡುವಂತಹ ಪರಿಸ್ಥಿತಿ ಎದುರಾಗುತ್ತದೆ. ಆದ್ದರಿಂದ ಈ … Read more

ಸ್ಮಾರ್ಟ್ ಸಿಟಿ ಸಲಹಾ ಸಮಿತಿ ಗೊಂದಲ, ಸಂಸದ ರಾಘವೇಂದ್ರಗೆ ಕಾಂಗ್ರೆಸ್, ಜೆಡಿಎಸ್ ಕಾರ್ಪೊರೇಟರ್‌ಗಳ ಮನವಿ

160620 Congress Corporators Meet MP in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಗೆ ಒಳಪಡದ ವಾರ್ಡ್‍ಗಳ ಕಾರ್ಪೊರೇಟರ್‍ಗಳನ್ನು ಸಲಹಾ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿಕೊಂಡಿರುವುದಕ್ಕೆ, ಮಹಾನಗರ ಪಾಲಿಕೆಯ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ವಿರೋಧಿಸಿದ್ದಾರೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ. 35 ವಾರ್ಡ್‍ಗಳ ಪೈಕಿ 11 ವಾರ್ಡ್‍ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಐದು ಮಂದಿ ಸಲಹಾ ಸಮಿತಿಯನ್ನು ರಚಿಸಲಾಗಿದೆ. ಆದರೆ ಶಿವಮೊಗ್ಗದಲ್ಲಿ … Read more

ಜೂನ್ 15ರ ಕರೋನ ರಿಪೋರ್ಟ್ | ಶಿವಮೊಗ್ಗದಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚಳ, ಈಗೆಷ್ಟು ಸೋಂಕಿತರಿದ್ದಾರೆ? ಇನ್ನೆಷ್ಟು ರಿಪೋರ್ಟ್ ಬರಬೇಕಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 16 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 94 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 54 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 15ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 150 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more

ಶಿವಮೊಗ್ಗದಲ್ಲಿ ಮತ್ತೆ ಮೂವರಿಗೆ ಕರೋನ, ಪ್ರಮೈರಿ ಕಾಂಟ್ಯಾಕ್ಟ್‌ಗಳಿಂದ ಸೋಂಕು, ಒಂದೇ ದಿನ ಹತ್ತು ಮಂದಿ ಗುಣಮುಖ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ಮೂವರಿಗೆ ಕರೋನ ಸೋಂಕು ತಗುಲಿದೆ. ಇದು ಜನರಲ್ಲಿ ಆತಂಕ ಹೆಚ್ಚಿಸಿದ್ದರೆ, ಹತ್ತು ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಸಮಾಧಾನಕರ ಸಂಗತಿಯಾಗಿದೆ. ಯಾರಿಗೆಲ್ಲ ಕರೋನ ಸೋಂಕು ಕಾಣಿಸಿಕೊಂಡಿದೆ? ಪಿ7211 – 45 ವರ್ಷದ ಪುರುಷ – ಪಿ5823 ಸಂಪರ್ಕದಿಂದ ಸೋಂಕು ಪಿ7212 – 50 ವರ್ಷದ ಪುರುಷ – ಪಿ5824 ಸಂಪರ್ಕದಿಂದ ಸೋಂಕು ಪಿ7213  – 26 ವರ್ಷದ ಪುರುಷ … Read more

ಶಿವಮೊಗ್ಗದಲ್ಲಿ ಮತ್ತೆರಡು ಕರೋನ ಪಾಸಿಟಿವ್ ಕೇಸ್, ಯಾರಿಗೆಲ್ಲ ಸೋಂಕು ತಗುಲಿದೆ? ಎಲ್ಲಿಂದ ಹಿಂತಿರುಗಿದ್ದರು?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2020 ಶಿವಮೊಗ್ಗದಲ್ಲಿ ಮತ್ತೆರಡು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. ಯಾರಿಗೆಲ್ಲ ಸೊಂಕು ತಗುಲಿದೆ? ಪಿ6858 – 25 ವರ್ಷದ ಪುರುಷ ಪಿ6859 – 26 ವರ್ಷದ ಮಹಿಳೆ ಒಬ್ಬರಿಗೆ ಡೆಲ್ಲಿ ನಂಟು, ಮತ್ತೊಬ್ಬರು ಬೆಂಗಳೂರು ಇವತ್ತು ಸೋಂಕು ತಗುಲಿರುವ ಇಬ್ಬರ ಪೈಕಿ ಪಿ6858 ಅವರು ದೆಹಲಿಯಿಂದ ಹಿಂತಿರುಗಿದ್ದಾರೆ. ಇನ್ನು ಪಿ6859 ಅವರು ಬೆಂಗಳೂರಿನಿಂದ ಬಂದಿದ್ದರು. ಇವರಲ್ಲಿ ಸೋಂಕು ಕಾಣಿಸಿಕೊಂಡ … Read more