ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೊಬ್ಬ ಮಹಿಳೆಗೆ ಕೆಎಫ್‌ಡಿ ಪಾಸಿಟಿವ್

KFD Van By VDL Lab in Shimoga Mangana Kayale 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 30 ಮೇ 2020 ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೆ ಒಬ್ಬರಿಗೆ ಮಂಗನ ಕಾಯಿಲೆ (ಕೆಎಫ್‌ಡಿ) ಪಾಸಿಟಿವ್ ಬಂದಿದೆ. ಕರೋನ ಆಘಾತದ ನಡುವೆ ತಾಲೂಕಿನಲ್ಲಿ ದಿನೇ ದಿನೇ ಕೆಎಫ್ಡಿ ಭೀತಿಯು ಹೆಚ್ಚಾಗುತ್ತಿದೆ. ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 45 ವರ್ಷದ ಮಹಿಳೆಯೊಬ್ಬರಿಗೆ ಕೆಎಫ್‌ಡಿ ಸೋಂಕು ದೃಢಪಟ್ಟಿದೆ. ಕೂಡಲೇ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಈತನಕ 141 ಮಂದಿಗೆ ಕೆಎಫ್‌ಡಿ ಸೋಂಕು ತಗುಲಿದೆ.   ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ … Read more

ಮನೆಗೆ ಬಂದು 4 ಗಂಟೆ ಕಳೆಯೋದರಲ್ಲಿ ಬಂತು ಕರೋನ ಪರೀಕ್ಷೆಯ ರಿಪೋರ್ಟ್, ಏನಿತ್ತು ವರದಿಯಲ್ಲಿ? ಮುಂದೇನಾಯ್ತು?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020 ಹೊರ ರಾಜ್ಯದಿಂದ ಬಂದು ಕ್ವಾರಂಟೈನ್‍ ಅವಧಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಂತೆ ಮಹಿಳೆಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಆರಂಭಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 35 ವರ್ಷದ ಮಹಿಳೆಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಇವರನ್ನು ಪೇಷೆಂಟ್ ನಂಬರ್ 2583 ಎಂದು ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಗುರುತಿಸಲಾಗಿದೆ. ಕ್ವಾರಂಟೈನ್ ಪೂರ್ಣಗೊಳಿಸಿ ಮನೆಗೆ ಹೋಗಿದ್ದರು ಪಿ2583 ಅವರು ನವದೆಹಲಿಯಿಂದ ಹಿಂತಿರುಗಿದ್ದರು. … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಮಹಿಳೆಗೆ ಕರೋನ ಪಾಸಿಟಿವ್, ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ಶುರು

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020 ಶಿವಮೊಗ್ಗದಲ್ಲಿ ಮತ್ತೊಂದು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದೆಹಲಿಯಿಂದ ಶಿವಮೊಗ್ಗಕ್ಕೆ ಬಂದಿರುವ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ನವದೆಹಲಿಯಿಂದ ಹಿಂತಿರುಗಿರುವ 35 ವರ್ಷದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಇವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಈ ಮಹಿಳೆಯನ್ನು ಪೇಷೆಂಟ್ ನಂಬರ್ 2583 ಎಂದು ಗುರುತಿಸಲಾಗಿದೆ. ಒಟ್ಟು 35 ಸೋಂಕಿತರು, 7 ಮಂದಿ ಡಿಸ್ಚಾರ್ಜ್ ಹೊಸ ಪ್ರಕರಣದಿಂದಾಗಿ ಶಿವಮೊಗ್ಗದಲ್ಲಿ ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. … Read more

ಕರೋನದಿಂದ ಗುಣಮುಖರಾದ ಮೂವರಿಗೆ ಆಸ್ಪತ್ರೆಯಿಂದ ಬಿಡುಗಡೆ, ಯಾರಿವರು? ಯಾವ ತಾಲೂಕಿಗೆ ಸೇರಿದವರು?

290520 Corona Discharge in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020 ಕರೋನದಿಂದ ಗುಣಮುಖರಾದ ಮತ್ತೆ ಮೂವರನ್ನು ಇವತ್ತು ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ಚಪ್ಪಾಳೆ ಮೂಲಕ ಮೂವರನ್ನು ಡಿಸ್ಚಾರ್ಜ್ ಮಾಡಿ, ಬೀಳ್ಕೊಟ್ಟರು. ಯಾರಿವರು? ಎಲ್ಲಿಯವರು? ಗುಜರಾತ್ ರಾಜ್ಯದ ಅಹಮದಾಬಾದ್‍ನಿಂದ ಬಂದಿದ್ದ ಎಂಟು ಮಂದಿಗೆ ಸೋಂಕು ತಗುಲಿತ್ತು. ಈ ಪೈಕಿ ಮೂವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಪೇಷೆಂಟ್ ನಂಬರ್ 811, 812 ಮತ್ತು 814 ಇವತ್ತು ಬಿಡುಗಡೆಯಾಗಿದ್ದಾರೆ. ಇವರ ಪೈಕಿ ಇಬ್ಬರು ಶಿಕಾರಿಪುರ … Read more

ಲಕ್ಷ ಕೋಟಿ ಪ್ಯಾಕೇಜ್, ಶಿವಮೊಗ್ಗದಲ್ಲಿ ಯಾರಿಗೆ ಸಿಕ್ಕಿದೆ ಪರಿಹಾರ? ರಸ್ತೆಗಿಳಿದು ಪರಿಶೀಲನೆ ಆರಂಭಿಸಿದ ಕಾಂಗ್ರೆಸ್

290520 Congress Survey On Government Packages 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020 ಕರೋನ ಲಾಕ್‌ಡೌನ್‌ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಹಲವು ಉದ್ಯಮ ಮತ್ತು ಅಸಂಘಟಿತ ಕಾರ್ಮಿಕರಿಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋಟಿ ಕೋಟಿಯ ಪ್ಯಾಕೇಜುಗಳನ್ನು ಘೋಷಿಸಿವೆ. ಆದರೆ ಈ ಪ್ಯಾಕೇಜುಗಳು ಸಾಮಾನ್ಯ ಜನರಿಗೆ ತಲುಪಿಲ್ಲ ಎಂಬ ಆರೋಪವಿದೆ. ಇದರ ಪರಿಶೀಲನೆಗಾಗಿ ಜಿಲ್ಲಾ ಕಾಂಗ್ರೆಸ್ ಬೀದಿಗಿಳಿದಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದ ನಿಯೋಗ, ಶಿವಮೊಗ್ಗ ನಗರದ ವಿವಿಧೆಡೆ ಸಂಚರಿಸಿ, ಜನರೊಂದಿಗೆ ಚರ್ಚೆ ನಡೆಸುತ್ತಿದೆ. ಪರಿಹಾರ ಬಂದಿರುವ … Read more

ಇನ್ಮೂಂದೆ 7 ದಿನವಷ್ಟೆ ಸಾಂಸ್ಥಿಕ ಕ್ವಾರಂಟೈನ್, ಯಾವ್ಯಾವ ರಾಜ್ಯದಿಂದ ಬಂದವ್ರಿಗೆ ಸಾಂಸ್ಥಿಕ ಕ್ವಾರಂಟೈನ್, ಯಾರಿಗೆಲ್ಲ ಮನೆ ಕ್ವಾರಂಟೈನ್?

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020 ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಬಂದಿರುವವರು 7ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ಪೂರ್ಣಗೊಳಿಸಿದರೆ ಅವರನ್ನು ಬಿಡುಗಡೆಗೊಳಿಸಿ ಹೋಂ ಕ್ವಾರೆಂಟೈನ್‍ಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಈ ಸೂಚನೆ ನೀಡಿದರು. ಇದುವರೆಗೆ ಹೊರ ರಾಜ್ಯಗಳಿಂದ ಬಂದವರಿಗೆ 14ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ವಿಧಿಸಲಾಗುತ್ತಿದ್ದು, ಹೊಸ ಮಾರ್ಗಸೂಚಿ ಪ್ರಕಾರ ಇದನ್ನು 7ದಿನಗಳಿಗೆ ಇಳಿಸಲಾಗಿದೆ. … Read more

ಕರೋನ ಸಂಕಷ್ಟ ಕಾಲದಲ್ಲೂ ರಾಜ್ಯದಲ್ಲಿ ಹಣ ಲೂಟಿ, ಪರಿಹಾರ ತಲುಪಿದೆಯಾ ಅಂತಾ ಕಾಂಗ್ರೆಸ್‌ನಿಂದ ಸರ್ವೇ

H-S-Sundaresh-Congress-President

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಮೇ 2020 ಕರೋನ ಬಂದ ಸಂಕಷ್ಟ ಕಾಲದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಇನ್ನು, ರಾಜ್ಯ ಸರ್ಕಾರ ಕರೋನ ಪರೀಕ್ಷೆಗೆ ಬಳಕೆ ಮಾಡುವ ಪಿಪಿಇ ಕಿಟ್‍ಗಳು, ಸ್ಯಾನಿಟೈಸರ್, ವೆಂಟಿಲೇಟರ್‍ಗಳ ಖರೀದಿಯಲ್ಲಿ ಭಾರಿ ದೊಡ್ಡ ಭ್ರಷ್ಟಾಚಾರವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಎಸ್.ಸುಂದರೇಶ್, ವಲಸೆ ಕಾರ್ಮಿಕರನ್ನು ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಈ ಕುರಿತು ಸುಪ್ರೀಂ ಕೋರ್ಟ್ ಕೂಡ … Read more

ಶಿವಮೊಗ್ಗದ ಟೆಕ್ನಿಕಲ್ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ, 3 ದಿನ ಆನ್‌ಲೈನ್‌ ವರ್ಕ್‌ಶಾಪ್, ಇವತ್ತೇ ರಿಜಿಸ್ಟರ್ ಮಾಡಿಕೊಳ್ಳಿ

220320 Shimoga City in Janata Curfew 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಮೇ 2020 ಜಗತ್ತಿನ ಪ್ರತಿಷ್ಠಿತ ಟ್ರೇನಿಂಗ್ ಸಂಸ್ಥೆ NIIT ಶಿವಮೊಗ್ಗದ ಟೆಕ್ನಿಕಲ್ ವಿದ್ಯಾರ್ಥಿಗಳಿಗೆ ಮೂರು ದಿನದ ಆನ್‍ಲೈನ್‍ ವರ್ಕ್‍ಶಾಪ್ ಆಯೋಜಿಸಿದೆ. ಈ ಕಾರ್ಯಗಾರವು ಉಚಿತವಾಗಿದ್ದು, ಆಸಕ್ತರು ಈ ಕೂಡಲೆ ಹೆಸರು ನೊಂದಾಯಿಸಬೇಕು ಎಂದು ಸಂಸ್ಥೆ ತಿಳಿಸಿದೆ. ಟ್ರೇನಿಂಗ್‍ನಲ್ಲಿ ಏನೆಲ್ಲ ಇರುತ್ತೆ? ಮೂರು ದಿನದ ಉಚಿತ ಆನ್‍ಲೈನ್ ವರ್ಕ್‍ಶಾಪ್‍ನಲ್ಲಿ ಐಟಿ ಪ್ರೋಗ್ರಾಂ, ಡೇಟಾ ಅನಾಲಿಟಿಕ್ಸ್ ಪ್ರೊಗ್ರಾಂ ಕುರಿತು ಮಾಹಿತಿ ಸಿಗಲಿದೆ. ಎಕ್ಸ್‌ಪರ್ಟ್‍ಗಳಿಂದಲೇ ಕೋಚಿಂಗ್ ಸುಮಾರು 2000 ಕಂಪನಿಗಳ ಸಹಭಾಗಿತ್ವದಲ್ಲಿ … Read more

ಬೆಳ್ಳಂಬೆಳಗ್ಗೆ ನೆಹರೂ ಸ್ಟೇಡಿಯಂಗೆ ಸಂಸದ ರಾಘವೇಂದ್ರ, ಜಿಲ್ಲಾಧಿಕಾರಿ ಭೇಟಿ

280520 MP visit Nehru Stadium 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಮೇ 2020 ಸ್ಮಾರ್ಟ್ ಸಿಟಿ ಯೋಜನೆ ಅಡಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಕ್ರೀಡಾಂಗಣದ ಸುತ್ತಲು ಸಂಚರಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಮತ್ತು ಶೀಘ್ರ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವು ಕ್ರೀಡಾಸಕ್ತರು, ಕ್ರೀಡಾಪಟುಗಳು ಈ ವೇಳೆ ಉಪಸ್ಥಿತರಿದ್ದರು.   ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 … Read more

ನರಸೀಪುರದ ನಾಟಿ ವೈದ್ಯ ನಾರಾಯಣಮೂರ್ತಿ ಮನೆಗೆ ಸಚಿವ, ಶಾಸಕರ ಭೇಟಿ, ಏನೆಲ್ಲ ಚರ್ಚೆಯಾಯ್ತು? ಔಷಧಿ ಯಾವಾಗ ಸಿಗುತ್ತೆ?

280520 Narasipura Nati Vaidya Narayanamurthy 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 ಮೇ 2020 ನರಸೀಪುರದ ನಾಟಿ ವೈದ್ಯ ನಾರಾಯಣಮೂರ್ತಿ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದ್ದರು. ಜನರಿಗೆ ಔಷಧಿ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಇಲ್ಲಿಗೆ ಬರುವವರಿಗೆ ಯಾರೂ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಮೇಘಾಲಯದ ಸಚಿವರಿಗೆ ಔಷಧ ಲಾಕ್‍ಡೌನ್ ಸಂದರ್ಭದ ಮೇಘಾಲಯ ರಾಜ್ಯದ ಸಚಿವರೊಬ್ಬರು ಔಷಧ ಬೇಕು ಎಂದು ತಿಳಿಸಿದ್ದರು. … Read more