ಗಾಂಧೀಜಿ, ಸತ್ಯಾಗ್ರಹ ಮತ್ತು ಸಂವಿಧಾನದ ವಿರುದ್ಧ ಮಾತಾಡಿದ ಸಂಸದ ವಿರುದ್ಧ ಶಿವಮೊಗ್ಗದಲ್ಲಿ ಮಾನವ ಸರಪಳಿ

ಶಿವಮೊಗ್ಗ ಲೈವ್.ಕಾಂ | SHIMOGA | 7 ಫೆಬ್ರವರಿ 2020 ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನದ ಕುರಿತು ಅವಹೇಳನ ಮಾಡಿದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಯಿತು. ಶಿವಮೊಗ್ಗ ಉತ್ತರ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಹಾವೀರ ಸರ್ಕಲ್’ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಂಸದ ಸ್ಥಾನದಿಂದ ಅನಂತಕುಮಾರ್ ಹೆಗಡೆ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಮಹಾತ್ಮ ಗಾಂಧೀಜಿ ಮತ್ತು ಅವರ ಸತ್ಯಾಗ್ರಹವನ್ನು ಸಂಸದ ಅನಂತ ಕುಮಾರ್ … Read more

ತುಂಗಾ ಹೊಸ ಸೇತುವೆ ಮೇಲೆ ಬಸ್, ಬೈಕ್ ಡಿಕ್ಕಿ, ಒಬ್ಬ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ, ಹೇಗಾಯ್ತು ಗೊತ್ತಾ ಅಪಘಾತ?

ಶಿವಮೊಗ್ಗ ಲೈವ್.ಕಾಂ | SHIMOGA | 7 ಫೆಬ್ರವರಿ 2020 ಶಿವಮೊಗ್ಗ ನಗರದ ತುಂಗಾ ಸೇತುವೆ ಮೇಲೆ ಬೈಕ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿದೆ. ಓತಿಘಟ್ಟದ ರವಿ (44) ಮೃತರು. ರವಿ ಅವರ ಸಂಬಂಧಿ ಯೋಗೇಶ್ ಎಂಬವವರು ಗಾಯಗೊಂಡಿದ್ದಾರೆ. ಅವರ ತೊಡೆಯ ಭಾಗಕ್ಕೆ ಗಯವಾಗಿದೆ. ಯೋಗೇಶ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಎಸ್ಆರ್’ಟಿಸಿ ಬಸ್ ಶಿವಮೊಗ್ಗದ ಬಸ್ ನಿಲ್ದಾಣದ ಕಡೆಗೆ ತೆರಳುತ್ತಿತ್ತು. ರವಿ ಮತ್ತು ಯೋಗೇಶ್ … Read more

ಶಿವಮೊಗ್ಗದಲ್ಲಿ ಇದೇ ಮೊದಲು, ಕ್ಲಿಕ್ ಮಾಡಿದರೆ ಸಮಸ್ಯೆ ಕ್ಲಿಯರ್, ಇದೊಂದು ನಂಬರ್ ಇದ್ರೆ ಪ್ರಾಬ್ಲಂಗಳು ಪರಿಹಾರ, ಏನಿದು ಗೊತ್ತಾ?

BH Road Shivappanayaka Statue 1

ಶಿವಮೊಗ್ಗ ಲೈವ್.ಕಾಂ | SHIMOGA | 06 ಫೆಬ್ರವರಿ 2020 ರಾತ್ರಿ ಎಲ್ಲರು ಗಾಢ ನಿದ್ರೆಯಲ್ಲಿದ್ದಾಗಲೇ ವೆಂಕಟೇಶ್ ಅವರಿಗೆ ಉಸಿರಾಟದ ಸಮಸ್ಯೆ ಶುರುವಾಗಿದ್ದು. ಪಕ್ಕದಲ್ಲಿ ಮಲಗಿದ್ದ ಪತ್ನಿ ಎಚ್ಚರವಾಗಿ ದಿಗಿಲುಗೊಂಡರು. ಮನೆಯಲ್ಲಿದ್ದವರನ್ನೆಲ್ಲ ಎಬ್ಬಿಸಿದರು. ಯಾರಿಗೂ ಏನು ಮಾಡಬೇಕು ಗೊತ್ತಾಗುತ್ತಿಲ್ಲ. ಅಕ್ಕಪಕ್ಕದ ಮನೆಯವರು ನೆರವಿಗೆ ಬಂದರು. ಆಂಬುಲೆನ್ಸ್’ಗೆ ಫೋನ್ ಮಾಡಿದರೆ ಸರ್ಕಾರಿ ಆಂಬುಲೆನ್ಸ್’ಗಳು 20 ನಿಮಿಷ, 10 ನಿಮಿಷ ಅನ್ನುತ್ತಿದ್ದಾರೆ. ಖಾಸಗಿ ಆಂಬುಲೆನ್ಸ್’ಗೆ ಫೋನ್ ಮಾಡೋಕೆ ಯಾರ ಬಳಿಯೂ ನಂಬರ್ ಇಲ್ಲ. ಸ್ಕೂಲ್ ಬೆಲ್ ಹೊಡೆಯುವ ಟೈಮ್ ಹತ್ತಿರವಾಗ್ತಿದೆ. … Read more

ತೀರ್ಥಹಳ್ಳಿ ತಾಲೂಕು ಕಚೇರಿ ಮುಂದೆ ಯುವ ಮುಖಂಡನ ಏಕಾಂಗಿ ಹೋರಾಟ

060220 Thirthahalli Youth Leader Protest 1

ಶಿವಮೊಗ್ಗ ಲೈವ್.ಕಾಂ | SHIMOGA | 6 ಫೆಬ್ರವರಿ 2020 ಮನೆ ಬಾಗಿಲಿಗೆ ಅಕ್ರಮ ಮದ್ಯ ಪೂರೈಕೆಯಾಗಿ ಮಾರಾಟವಾಗುತ್ತಿದ್ದು ಅಬಕಾರಿ ಇಲಾಖೆ ತಡೆಯುತ್ತಿಲ್ಲ ಹಳ್ಳಿಯಲ್ಲಿ ಸಾರ್ವಜನಿಕವಾಗಿ ನೆಮ್ಮದಿ ವಾತಾವರಣ ಹಾಳಾಗಿದೆ ಎಂದು ಆರೋಪಿಸಿ ತೀರ್ಥಹಳ್ಳಿ ತಾಲೂಕು ಕಚೇರಿ ಮುಂಭಾಗ ಯುವ ಮುಖಂಡ ಕೆಳಕೆರೆ ಪೂರ್ಣೇಶ್ ಏಕಾಂಗಿಯಾಗಿ ಧರಣಿ ನಡೆಸಿದರು. ಅಕ್ರಮ ಮದ್ಯ ಮಾರಾಟ ನಿಲ್ಲಿಸಿ, ಆರೋಪಿಗಳನ್ನು ಬಂಧಿಸುವರೆಗೆ ಹೋರಾಟ ಎಂಬ ಘೋಷಣೆಗಳ ಭಿತ್ತಿ ಪತ್ರ ಹಿಡಿದು ಪೂರ್ಣೇಶ ಧರಣಿ ಸತ್ಯಾಗ್ರಹ ಕೈಗೊಂಡರು. ಮಾನವ ಹಕ್ಕುಗಳ ಹೋರಾಟಗಾರ್ತಿ ಗಾಯತ್ರಿ … Read more

ವಿಧಾನ ಪರಿಷತ್ ಮಾಜಿ ಸದಸ್ಯ ಮಾದಪ್ಪ ನಿಧನ, ಶಿವಮೊಗ್ಗ ಗಾಂಧಿನಗರದ ಮನೆಯಲ್ಲಿ ಅಂತಿಮ ದರ್ಶನ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA | 5 ಫೆಬ್ರವರಿ 2020 ಸ್ವಾತಂತ್ರ್ಯ ಹೋರಾಟಗಾರ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಮಾದಪ್ಪ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜಿ.ಮಾದಪ್ಪ (90) ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಗಾಂಧಿ ನಗರದಲ್ಲಿರುವ ಮಾದಪ್ಪ ಅವರ ಮನೆಯಲ್ಲಿ ಇವತ್ತು ಮಧ್ಯಾಹ್ನ 2 ಗಂಟೆಯಿಂದ ನಾಳೆ ಬೆಳಗ್ಗೆ 10 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಹೊನ್ನಾಳಿ ತಾಲೂಕಿನಲ್ಲಿರುವ ಮಾದಪ್ಪ ಅವರ ಯರೆಹಳ್ಳಿಯಲ್ಲಿ ಅಂತಿಮ ಸಂಸ್ಕಾರ … Read more

‘ಮಧು ಬಂಗಾರಪ್ಪ, ಶಾರದಾ ಪೂರ್ಯಾನಾಯ್ಕ್ ಅವರು ಕಾಂಗ್ರೆಸ್ ಸೇರುವುದಿದ್ದರೆ ಸ್ವಾಗತ’

Madhu Bangarappa 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಫೆಬ್ರವರಿ 2020 ಮಾಜಿ ಶಾಸಕರಾದ ಮಧು ಬಂಗಾರಪ್ಪ ಮತ್ತು ಶಾರದಾ ಪೂರ್ಯಾನಾಯ್ಕ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ತಮಗೆ ಮಾಹಿತಿ ಇಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಮಧು ಬಂಗಾರಪ್ಪ ಮತ್ತು ಶಾರದಾ ಪೂರ್ಯಾನಾಯ್ಕ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದರು. ಮಧು ಬಂಗಾರಪ್ಪ ಮತ್ತು ಶಾರದಾ ಪೂರ್ಯಾನಾಯ್ಕ್ ಅವರು ನಮ್ಮ ಪಕ್ಷಕ್ಕೆ ಸೇರಲಿದ್ದಾರೆ ಅನ್ನುವ ವರದಿಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. … Read more

ನವುಲೆ ಸ್ಟೇಡಿಯಂನಲ್ಲಿ ಮಧ್ಯಪ್ರದೇಶ ಟೀಂನ ಬೆವರಿಳಿಸಿದ ಕರ್ನಾಟಕದ ಬ್ಯಾಟ್ಸ್’ಮನ್, ಸೀಸನ್’ನ ಮೊದಲ ಸೆಂಚುರಿ ದಾಖಲು

040220 Ranji Match Cricket 1

ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020 ಕರ್ನಾಟಕ ಮತ್ತು ಮಧ್ಯಪ್ರದೇಶ ನಡುವೆ ಶಿವಮೊಗ್ಗದ ನವುಲೆಯಲ್ಲಿ ನಡೆಯುತ್ತಿರುವ ರಣಜಿ ಕ್ರಿಕೆಟ್’ನ ಮೊದಲ ದಿನದ ಆಟ ಮುಗಿದಿದೆ. ದಿನದ ಅಂತ್ಯಕ್ಕೆ ಕರ್ನಾಟಕ ತಂಡ ಮೂರು ವಿಕೆಟ್ ನಷ್ಟಕ್ಕೆ 233 ರನ್ ಸ್ಕೋರ್ ಮಾಡಿದೆ. ಸೀಸನ್’ನ ಮೊದಲ ಸೆಂಚುರಿ ಕರ್ನಾಟಕ ತಂಡಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಊಟದ ವಿರಾಮಕ್ಕೆ ಮೊದಲು ಎರಡು ವಿಕೆಟ್ ಪತನವಾಗಿತ್ತು.  ಸಂಜೆ ಟೀ ಬ್ರೇಕ್ ವೇಳೆಗೆ ಮೂರನೇ ವಿಕೆಟ್ ಕಳೆದುಕೊಂಡಿತ್ತು. ಈ ನಡುವೆ … Read more

MRS ಸರ್ಕಲ್’ನಲ್ಲಿರುವ ಡಬಲ್ ಟ್ಯಾಂಕ್ ಕೆಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020 ಶಿವಮೊಗ್ಗದ MRS ಸರ್ಕಲ್’ನಲ್ಲಿ ಡಬಲ್ ಟ್ಯಾಂಕ್’ನಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಟ್ಯಾಂಕ್ ಕೆಳಗಿನ ಮರದ ರೆಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗಣೇಶಪ್ಪ (58) ಎಂದು ಗುರುತಿಸಲಾಗಿದೆ. ಕುಡಿಯುವ ನೀರು ಮತ್ತು ಒಳಚರಂಡಿ ಅಭಿವೃದ್ಧಿ ನಿಗಮದ ಗುತ್ತಿಗೆ ನೌಕರನಾಗಿದ್ದ ಗಣೇಶಪ್ಪ, ಎಂದಿನಂತೆ ಇವತ್ತು ಕೆಲಸಕ್ಕೆ ಆಗಮಿಸಿದ್ದರು. ಬೆಳಗ್ಗೆ ಟ್ಯಾಂಕ್’ನಿಂದ ನೀರಿ ಬಿಟ್ಟು, ಅಲ್ಲಿಯೇ ಇದ್ದರು. ಮಧ್ಯಾಹ್ನದ ವೇಳೆಗೆ ಅತ್ಯಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ … Read more

ಪೌರತ್ವ ಕಾಯ್ದೆಗೆ ತೀವ್ರ ವಿರೋಧ, ಶಿವಮೊಗ್ಗದಲ್ಲಿ ಇವತ್ತು ಅಹೋರಾತ್ರಿ ಧರಣಿ ಸತ್ಯಾಗ್ರಹ

040220 CAA Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020 ಪೌರತ್ವ ಕಾಯ್ದೆ, NRC ಮತ್ತು NPR ವಿರೋಧಿಸಿ ಶಿವಮೊಗ್ಗದಲ್ಲಿ ಇವತ್ತು ಆಹೋರಾತ್ರಿ ಧರಣಿ ನಡೆಯಲಿದೆ. ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭವಾಗಿದ್ದು, ರಾತ್ರಿ ಇಡೀ ಮುಂದುವರೆಯಲಿದೆ. ನಗರದ ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶಿವಮೊಗ್ಗದ ಜಾಯಿಂಟ್ ಆಕ್ಷನ್ ಕಮಿಟಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಮಹಿಳೆಯರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಅಹೋರಾತ್ರಿ ಧರಣಿ ನಡೆಯುವ ಹಿನ್ನೆಲೆ ಮತ್ತು ಯಾವುದೇ ಆಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಶಿವಮೊಗ್ಗ … Read more

ಆಯನೂರು ಬಳಿ ರಸ್ತೆ ಅಪಘಾತ, ಕ್ಯಾಂಟರ್, ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020 ಆಯನೂರು ಬಳಿ ಕ್ಯಾಂಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಬಳಿಯ ಚೆನ್ನಹಳ್ಳಿ ಕ್ರಾಸ್’ನಲ್ಲಿ ಘಟನೆ ಸಂಭವಿಸಿದೆ. ಬೈಕ್ ಸವಾರ ಮೋಹನ್ ಕುಮಾರ್ (46) ಸ್ಥಳದಲ್ಲೆ ಮೃತರಾಗಿದ್ದಾರೆ. ಮೋಹನ್ ಕುಮಾರ್ ಅವರು ಆಯನೂರು ಸಮೀಪದ ಚಾಮುಂಡಿಪುರ ನಿವಾಸಿ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ … Read more